ಚಿಕ್ಕಬಳ್ಳಾಪುರ (Accident): ಕೆರೆ ಕಟ್ಟೆಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಯುವ ಪತ್ರಕರ್ತ ಭರತ್ (34 ವರ್ಷ) ಸಾವನಪ್ಪಿದ್ದಾರೆ.
ಗುಡಿಬಂಡೆ ಪಟ್ಟಣದಿಂದ ಬಾಗೇಪಲ್ಲಿ ಗೆ ತೆರಳುತ್ತಿದ್ದ ವೇಳೆ ಗುಡಿಬಂಡೆ ತಾಲೂಕಿನ ಮಾಚಹಳ್ಳಿ ಕೆರೆ ಏರಿ ಮೇಲೆ ಕಾರು ನಿಯಂತ್ರಣ ತಪ್ಪಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.
ಘಟನೆಯ ವೇಳೆ ಕಾರಿನಲ್ಲಿನ ಏರ್ ಬ್ಯಾಗ್ ಓಪನ್ ಆದರೂ ಜೀವ ಉಳಿಸಲು ಸಾಧ್ಯವಾಗಿಲ್ಲ.
ಬೆಂಗಳೂರಿನಲ್ಲಿ ವಾಸವಿದ್ದ ಗುಡಿಬಂಡೆ ಪಟ್ಟಣ ಮೂಲದ ಜಿ ಎಸ್ ಭರತ್. ಬೆಂಗಳೂರಿನ ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇತ್ತೀಚೆಗೆ ಬೆಳಗಾವಿ ಅಧಿವೇಶನದಲ್ಲಿ ವರದಿಗಾರಿಕೆ ಮಾಡಿದ್ದ ಕ್ರಿಯಾಶೀಲ ಪತ್ರಕರ್ತ ಎಂದು ಭರತ್ ಹೆಸರು ಪಡೆದಿದ್ದರು.
ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.