ಮೋದಿ ಅವರ ಎದುರು ನಿಂತು ನ್ಯಾಯ ಕೇಳುವ ಕನಿಷ್ಠ ಧೈರ್ಯವೂ BJP ಸಂಸದರಿಗೆ ಇಲ್ಲದೆ ದೆಹಲಿ ಸರ್ಕಾರದ ಗುಲಾಮರಾಗಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ: BJP ನಾಯಕರು ದೆಹಲಿ ಗುಲಾಮರಾಗಿದ್ದಾರೆಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ (BJP) ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾದ್ಯಮ ಪ್ರಕಟಣೆ ನೀಡಿರುವ ಅವರು, ಭಾರತೀಯ ಜನತಾ ಪಕ್ಷದ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಇವರೇ ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಿದ್ದ ರಾಜ್ಯದ ಬಿಜೆಪಿ (BJP) ನಾಯಕರು ಮತ್ತು ಸಂಸದರು ಅನ್ಯಾಯಕೋರ ಕೇಂದ್ರ ಸರ್ಕಾರವನ್ನು ಸಮರ್ಥಿಸುತ್ತಿರುವುದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಮತ್ತು ಅವಮಾನವಾಗಿದೆ.

ಕೇಂದ್ರ ಸರ್ಕಾರ ಇತ್ತೀಚೆಗೆ ರಾಜ್ಯಗಳಿಗೆ ತೆರಿಗೆ ಮತ್ತು ಸುಂಕದ ಪಾಲಿನ ರೂಪದಲ್ಲಿ ಒಟ್ಟು 1,73,030 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ನೀಡಿರುವ ಪಾಲು ಕೇವಲ 6,310 ಕೋಟಿ ರೂಪಾಯಿ.

ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ ಐದರಷ್ಟು ಕನ್ನಡಿಗರಿದ್ದರೂ ದೇಶದ ಜಿಡಿಪಿಯಲ್ಲಿ ಕನ್ನಡಿಗರ ಪಾಲಿನ ಪ್ರಮಾಣ ಶೇಕಡಾ 8.4 ಆಗಿದೆ. ಅತೀ ಹೆಚ್ಚು ಜಿಎಸ್‌ಟಿ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ‍್ಥಾನದಲ್ಲಿದೆ.

ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇಕಡಾ 17ರಷ್ಟು ಹೆಚ್ಚಾಗುತ್ತಿದೆ. ಹೀಗಿದ್ದರೂ ತೆರಿಗೆ ಹಂಚಿಕೆಯಲ್ಲಿ ನಮ್ಮ ಪಾಲು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡುತ್ತಾ ಬರಲಾಗುತ್ತಿದೆ. ಈ ಅನ್ಯಾಯ ಯಾಕೆ.? ಎಂದು ಸಿಎಂ ಪ್ರಶ್ನಿಸಿದ್ದಾರೆ.

13 ಪೈಸೆಯಷ್ಟು ಮಾತ್ರ ವಾಪಸು

2018-19ರಲ್ಲಿ ರೂ. 24.42 ಲಕ್ಷ ಕೋಟಿಗಳಷ್ಟಿದ್ದ ಕೇಂದ್ರದ ಬಜೆಟ್ ಗಾತ್ರ, 2024-25ರಲ್ಲಿ ರೂ.46.28 ಲಕ್ಷ ಕೋಟಿಯಷ್ಟಾಗಿದೆ.

2018-19ರಲ್ಲಿ ಕರ್ನಾಟಕಕ್ಕೆ ನೀಡಿರುವ ತೆರಿಗೆ ಪಾಲು ರೂ.46,288 ಕೋಟಿಗಳಾಗಿದ್ದರೆ, 2024-25ರಲ್ಲಿ ಇದು ರೂ.44,485 ಕೋಟಿ ಮಾತ್ರ.

ಅಂದರೆ ಆರು ವರ್ಷಗಳ ಅವಧಿಯಲ್ಲಿ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ಕರ್ನಾಟಕದ ತೆರಿಗೆ ಪಾಲು 15,299 ರೂಪಾಯಿಗಳಷ್ಟು ಮಾತ್ರ ಹೆಚ್ಚಾಗಿದೆ. ಈ ತೆರಿಗೆ ಪಾಲು ಕನಿಷ್ಠ ಒಂದು ಲಕ್ಷ ಕೋಟಿ ರೂಪಾಯಿಗಳಷ್ಟಾದರೂ ಆಗಬೇಕಿತ್ತಲ್ಲವೇ?

ಕರ್ನಾಟಕದ ಜನತೆ ತೆರಿಗೆ ಮತ್ತು ಸುಂಕದ ಮೂಲಕ ಪ್ರತಿವರ್ಷ ನಾಲ್ಕುವರೆ ಲಕ್ಷ ಕೋಟಿ ರೂಪಾಯಿಗಳನ್ನು ಕೇಂದ್ರದ ಬೊಕ್ಕಸಕ್ಕೆ ನೀಡುತ್ತಿದೆ.

ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ತೆರಿಗೆ ಪಾಲಿನ ರೂಪದಲ್ಲಿ ರೂ.45,000 ಕೋಟಿ ಮತ್ತು ಅನುದಾನವಾಗಿ ರೂ.15,000 ಕೋಟಿ ನೀಡುತ್ತಿದೆ. ಅಂದರೆ ನಾವು ನೀಡುತ್ತಿರುವ ಒಂದು ರೂಪಾಯಿಗೆ ಕೇವಲ 13 ಪೈಸೆಯಷ್ಟು ಮಾತ್ರ ವಾಪಸು ನೀಡುತ್ತಿದೆ.

ಮೋದಿ ಸರ್ಕಾರದ ಗುಲಾಮರಾಗಿದ್ದಾರೆ

ತೆರಿಗೆ ಹಂಚಿಕೆ ಮಾಡುವಾಗಲೂ ‘’ಬಿಮಾರು’’ ರಾಜ್ಯಗಳೆಂಬ ಅಪಖ್ಯಾತಿಗೀಡಾಗಿರುವ ಬಿಹಾರ (ರೂ.17,403 ಕೋಟಿ), ಮಧ್ಯಪ್ರದೇಶ (ರೂ.13,582 ಕೋಟಿ), ರಾಜಸ್ತಾನ (ರೂ.10,426 ಕೋಟಿ) ಮತ್ತು ಉತ್ತರಪ್ರದೇಶಕ್ಕೆ (ರೂ.31,099 ಕೋಟಿ) ತೆರಿಗೆ ಪಾಲನ್ನು ನೀಡಿರುವ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೇವಲ ರೂ.6,310 ಕೋಟಿ ನೀಡಿದೆ.

ಇದು ಉತ್ತಮ ಆಡಳಿತ, ಸುಸ್ಥಿರ ಅಭಿವೃದ್ದಿ ಮತ್ತು ಜಿಎಸ್‌ಟಿ ಸಂಗ್ರಹದಲ್ಲಿ ಮಾಡಿರುವ ಸಾಧನೆಗಾಗಿ ಕರ್ನಾಟಕಕ್ಕೆ ನೀಡಿರುವ ಶಿಕ್ಷೆಯೇ? ಕನ್ನಡಿಗರ ಬೆವರ ಗಳಿಕೆಯ ತೆರಿಗೆ ಹಣ ಭ್ರಷ್ಟ ರಾಜ್ಯಗಳ ಬೊಕ್ಕಸ ತುಂಬಲು ಯಾಕೆ ಬಳಕೆಯಾಗಬೇಕು?

ಹದಿನೈದನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲನ್ನು ಶೇ.4.73ರಿಂದ ಶೇಕಡಾ 3.64ಕ್ಕೆ ಇಳಿಸಿದೆ. ಇದರಿಂದ ಕಳೆದ ಐದು ವರ್ಷಗಳಲ್ಲಿ 79,770 ಕೋಟಿ ರೂಪಾಯಿಯನ್ನು ಕರ್ನಾಟಕ ಕಳೆದುಕೊಂಡಿದೆ.

ಈ ಅನ್ಯಾಯಕ್ಕೆ ಪರಿಹಾರವಾಗಿ ರೂ.5,495 ಕೋಟಿ ವಿಶೇಷ ಅನುದಾನ ನೀಡಬೇಕೆಂಬ ಹಣಕಾಸು ಆಯೋಗದ ಶಿಫಾರಸನ್ನು ಕೂಡಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರಸ್ಕರಿಸಿ ಕರ್ನಾಟಕಕ್ಕೆ ಅನ್ಯಾಯ ಎಸಗಿದ್ದಾರೆ.

ಇದು ಕರ್ನಾಟಕದ ಪ್ರಾಮಾಣಿಕ ತೆರಿಗೆದಾರರಿಗೆ ಮಾಡಿರುವ ಘೋರ ಅನ್ಯಾಯವಲ್ಲವೇ? ಈ ಅನ್ಯಾಯವನ್ನು ಖಂಡಿಸಬೇಕಾಗಿರುವ ರಾಜ್ಯದ ಬಿಜೆಪಿ (BJP) ನಾಯಕರು ನಿರ್ಲಜ್ಜರಾಗಿ ಸಮರ್ಥಿಸುತ್ತಿರುವುದು ಕನ್ನಡಿಗರಿಗೆ ಬಗೆಯುತ್ತಿರುವ ದ್ರೋಹವಾಗಿದೆ.

ಇವರ ಆರ್ಭಟವೇನಿದ್ದರೂ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಲು ಮತ್ತು ಬೀದಿಗಳಲ್ಲಿ ಪರಸ್ಪರ ಕಚ್ಚಾಡಲು ಸೀಮಿತವಾಗಿದೆ ಎಂದು ಸಿಎಂ ಲೇವಡಿ ಮಾಡಿದ್ದಾರೆ.

ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ನಿಂತು ನ್ಯಾಯ ಕೇಳುವ ಕನಿಷ್ಠ ಧೈರ್ಯವೂ ಇಲ್ಲದೆ ದೆಹಲಿ ಸರ್ಕಾರದ ಗುಲಾಮರಾಗಿದ್ದಾರೆ.

ಜನಪ್ರತಿನಿಧಿಗಳು ಜನದ್ರೋಹಿಗಳಾದಾಗ ಅವರನ್ನು ಜನರೇ ವಿಚಾರಿಸಿಕೊಳ್ಳಬೇಕಾಗುತ್ತದೆ. ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಕನ್ನಡಿಗರೆಲ್ಲರೂ ಜಾತಿ, ಧರ್ಮ, ಪಕ್ಷ ಪಂಥಗಳನ್ನು ಮೀರಿ ದನಿ ಎತ್ತಬೇಕಾಗಿದೆ.

ಇಂತಹದ್ದೊಂದು ಸಂಕಲ್ಪವನ್ನು ಸಂಕ್ರಮಣದ ಶುಭದಿನದಂದು ಪ್ರತಿಯೊಬ್ಬ ಕನ್ನಡಿಗರು ಕೈಗೊಂಡು ಕರ್ನಾಟಕವನ್ನು ಅನ್ಯಾಯ ಮತ್ತು ಅವಮಾನದಿಂದ ರಕ್ಷಿಸಬೇಕಾಗಿದೆ ಎಂದಿದ್ದಾರೆ.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!