R Ashoka: ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ ಎಂಬುದು ಸಿಎಂ ಸಿದ್ದರಾಮಯ್ಯನವರ ಉದ್ದೇಶ: ಆರ್ ಅಶೋಕ

Give justice to the candidates in the case of KAS Prelims Reexamination

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ.

ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ.

ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದರು.

ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು, ಅದನ್ನು ವಕ್ಫ್‌ಗೆ ನೀಡಲು ಪ್ರಯತ್ನ ನಡೆದಿತ್ತು. ಸುಮಾರು 500 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ಲೂಟಿ ಮಾಡಲು ನಕಲಿ ದಾಖಲೆಗಳನ್ನು ಸರ್ಕಾರ ಸೃಷ್ಟಿ ಮಾಡಿತ್ತು. ಅದರ ವಿರುದ್ಧ ಹೋರಾಟ ಮಾಡಿದ ಕರ್ಣ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಹೀಗೆ ಮಾಡಿದ್ದಾರೆ. ಸಚಿವ ಜಮೀರ್‌ ಅಹ್ಮದ್‌ ಹಸು ನೀಡುವುದರಿಂದ ಪರಿಹಾರ ಸಿಗಲ್ಲ. ಇದಕ್ಕೆ ನ್ಯಾಯ ಸಿಗಬೇಕಿದೆ ಎಂದು ಆಗ್ರಹಿಸಿದರು.

ಹಿಂದೂಗಳ ಸಂಖ್ಯೆ ಕಡಿಮೆಯಾಗಿಸುವ ಹುನ್ನಾರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಎರಡು ಮಕ್ಕಳು ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಇದನ್ನೇ ಮುಸ್ಲಿಮರ ಬಳಿ ಹೋಗಿ ಹೇಳಲಿ. ಹಿಂದೂಗಳ ಸಂಖ್ಯೆ ಕಡಿಮೆಯಾಗಲಿ, ಮುಸ್ಲಿಮರ ಸಂಖ್ಯೆ ಹೆಚ್ಚಲಿ ಎಂಬುದು ಅವರ ಉದ್ದೇಶ.

ಒಂದು ಧರ್ಮಕ್ಕೆ ಬೆಣ್ಣೆ, ಮತ್ತೊಂದು ಧರ್ಮಕ್ಕೆ ಸುಣ್ಣ ಹಚ್ಚಲಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲ ಸಮುದಾಯಗಳನ್ನು ಒಂದಾಗಿ ಕೊಂಡೊಯ್ಯಬೇಕು ಎಂದು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಆಡಳಿತ ನೆಲ ಕಚ್ಚಿದೆ. ಅಭಿವೃದ್ಧಿ ಕಾರ್ಯವನ್ನು ಟಾರ್ಚ್‌ ಹಾಕಿ ಹುಡುಕಬೇಕಿದೆ. ಸಿಎಂ ಕುರ್ಚಿ ಖಾಲಿ ಇಲ್ಲವೆಂದು ಸಿದ್ದರಾಮಯ್ಯ ಸಾವಿರ ಬಾರಿ ಹೇಳಿದ್ದಾರೆ. ಎಲ್ಲೇ ಹೋದರೂ ಅದನ್ನೇ ಮಾತಾಡುತ್ತಿದ್ದಾರೆ.

ಎಲ್ಲ ನಾಯಕರು ಪವರ್‌ ಪಾಲಿಟಿಕ್ಸ್‌ನಲ್ಲಿ ಮುಳುಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಮಂಡ್ಯಕ್ಕೆ ಹೋಗಿ ಅಧಿಕಾರ ಕೊಡಿ ಎಂದು ಜನರ ಮುಂದೆ ಹೇಳಿದ್ದರು. ಈಗ ಶಾಸಕರ ಮುಂದೆ ಹೋಗಿ ಅಂಗಲಾಚುತ್ತಿದ್ದಾರೆ. ಇವರ ಕಥೆ ಕತ್ತಲಲ್ಲಿ ಕರಡಿಯನ್ನು ಹುಡುಕುವಂತಾಗಿದೆ. ಈ ಪವರ್‌ ಶೇರಿಂಗ್‌ ಎಲ್ಲಿ ನಡೆದಿದೆ ಎಂದು ಜನರಿಗೆ ಸ್ಪಷ್ಟವಾಗಿ ತಿಳಿಸಲಿ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಶ್ಲೋಕ ಹೇಳಿದರೆ, ಸಚಿವ ರಾಜಣ್ಣ ಟೀಕೆ ಮಾಡುತ್ತಿದ್ದಾರೆ. ಸಚಿವ ಪರಮೇಶ್ವರ್‌ ಕೂಡ ಕೆಂಡಕಾರಿದ್ದಾರೆ. ಕೆಲವು ಶಾಸಕರು ಮುಂದಿನ ಸಿಎಂ ಶಿವಕುಮಾರ್‌ ಎನ್ನುತ್ತಿದ್ದಾರೆ. ಜನರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಇಂತಹ ಪಾಪಿ ಸರ್ಕಾರ ಯಾಕಾದರೂ ಬಂತೋ ಎಂದು ಜನರು ಶಾಪ ಹಾಕುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಬಂದು ಹೋದ ಬಳಿಕವೂ ಈ ಸಮಸ್ಯೆ ನಿವಾರಣೆಯಾಗಲ್ಲ. ಪವರ್‌‌ ಶೇರಿಂಗ್‌ ಬಗ್ಗೆ ಶಾಸಕರಿಗೆ ಸ್ಪಷ್ಟವಾಗಬೇಕಿದೆ. ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರಿಗೆ ಮಾತು ನೀಡಿದೆ. ಅದರ ಬಗ್ಗೆ ಸರಿಯಾಗಿ ತಿಳಿಸಲಿ ಎಂದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]