Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

Farmer Satish Babu, who was expecting a good crop, was distraught as miscreants sprayed the flower plants with herbicide

ಚಿಕ್ಕಬಳ್ಳಾಪುರ; ಇನ್ನೇನು 15 ದಿನಗಳಲ್ಲಿ ಕಟಾವಿಗೆ ಬರಲಿದ್ದ ಸೇವಂತಿ ಹೂ ತೋಟಕ್ಕೆ ದುಷ್ಕರ್ಮಿಗಳು ಕಳೆನಾಶಕ. (Herbicide) ಸಿಂಪಡಿಸಿದ ಪರಿಣಾಮ ಗಿಡಗಳು ಒಣಗಿದ ಘಟನೆ ತಾಲ್ಲೂಕಿನ ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ.

ಹೊಸಹುಡ್ಯ ಗ್ರಾಮದ ರೈತ ಸತೀಶ್ ಬಾಬು ಎಂಬುವರ ತೋಟದಲ್ಲಿಯೇ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು ತೋಟಕ್ಕೆ ಭೇಟಿ ನೀಡಿದ್ದ ಮಾಧ್ಯಮದವರ ಮುಂದೆ ರೈತ ತಮ್ಮ ಅಳಲು ತೋಡಿಕೊಂಡಿದ್ದಾರೆ.

ರೈತ ಸತೀಶ್ ಬಾಬು ಅರ್ಧ ಎಕರೆಯಲ್ಲಿ ಬೆಳೆದಿದ್ದ ಸುಮಾರು 3 ಸಾವಿರ ಸೇವಂತಿಗೆ ಗಿಡಗಳಿಗೆ ಕಳೆದ ಸೋಮವಾರ ಔಷಧಿ ಸಿಂಪಡಣೆ ಮಾಡಿದ್ದರು.

ಇದಾದ ಬಳಿಕ, ಕಳೆದ ಎರಡ್ಮೂರು ದಿನಗಳ ಹಿಂದೆ ಯಾರೋ ದುಷ್ಕರ್ಮಿಗಳು ಹೂವಿನ ಗಿಡಗಳಿಗೆ ಕಳೆನಾಶಕ (Herbicide) ಸಿಂಪಡಣೆ ಮಾಡಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತ ಸತೀಶ್ ಬಾಬು ಕಂಗಾಲಾಗಿದ್ದಾರೆ.

ಕಳೆನಾಶಕ ಸಿಂಪಡಣೆಯಿಂದ ಗಿಡಗಳ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿದ್ದು, ಕೆಲ ಗಿಡಗಳು ಸಂಪೂರ್ಣ ಒಣಗಿ ಹೋಗಿವೆ.

ಇನ್ನೇನು 15 ದಿನಗಳಲ್ಲಿ ಹೂವು ಬಿಡಬೇಕಿದ್ದ ಗಿಡಗಳು ಒಣಗುವ ಹಂತಕ್ಕೆ ತಲುಪಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ಬೆಳೆ ಬೆಳೆದಿದ್ದ ರೈತ ಆತಂಕದಲ್ಲಿದ್ದಾನೆ.

ಈ ಕುರಿತು ಮಾತನಾಡಿದ ರೈತ ಸತೀಶ್ ಬಾಬು, ಕಳೆದ ಬಾರಿ 1 ಎಕರೆಯಲ್ಲಿ ಇದೇ ಸೇವಂತಿ ಬೆಳೆ ಬೆಳೆದಿದ್ದೆ. ಸುಮಾರು 1ಲಕ್ಷ ರೂಗಳ ಆದಾಯ ಬಂದಿತ್ತು. ಆದರೆ, ಈ ಬಾರಿ ಯಾರೋ ದುಷ್ಕರ್ಮಿಗಳು ಕಳೆನಾಶಕ ಸಿಂಪಡಣೆ ಮಾಡಿದ್ದಾರೆ. ಇದರಿಂದ ಬೆಳೆ ಹಾಳಾಗಿದೆ. ಗಿಡಗಳು ಬಾಡುತ್ತಿವೆ.

ಕಳೆನಾಶಕ ಸಿಂಪಡಣೆಯಾದರೆ ಗಿಡಗಳು ಹೂ ಬಿಡುವುದಿಲ್ಲ. ಇದರಿಂದಾಗಿ ನಾವು ನಷ್ಟದ ಭೀತಿಯಲ್ಲಿದ್ದೇವೆ. ರೈತರಿಗೆ ರೈತರೇ ವಿರೋಧಿಗಳಾಗುತ್ತಿರುವುದು ನೋವಿನ ಸಂಗತಿಯಾಗಿದೆ.

ಹೊಟ್ಟೆ ಬಟ್ಟೆ ಕಟ್ಟಿ ಕೃಷಿಯಲ್ಲಿ ತೊಡಗುವ ನಮ್ಮಂತಹ ಬಡಪಾಯಿಗಳಿಗೆ ಇದು ಆಘಾತ ತರುವ ವಿಚಾರ. ಇಂತಹವರ ವಿರುದ್ಧ ಪೊಲೀಸರು, ತೋಟಗಾರಿಕೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಸಂಕಷ್ಟಕ್ಕೆ ಸಿಲುಕುವ ನೊಂದ ರೈತಾಪಿಗಳಿಗೆ ತೋಟಗಾರಿಕೆ ಇಲಾಖೆ ಸೂಕ್ತ ಪರಿಹಾರ ಕೊಡಬೇಕು ಎಂದು ಅಳಲು ತೋಡಿಕೊಂಡರು.

ಏನೇ ಆಗಲಿ ಗ್ರಾಮೀಣ ಪ್ರದೇಶದಲ್ಲಿ ಕೃಷಿಯ ಮೇಲೆ ಸೇಡು ತೀರಿಸಿಕೊಳ್ಳುವ ಸಂಗತಿಗಳು ಹೆಚ್ಚಾಗಿಯೇ ನಡೆಯುತ್ತಿದ್ದು, ಇದು ನಿಲ್ಲಬೇಕಿದೆ.

ಬೆವರು ಹರಿಸಿ ದುಡಿಯುವ ರೈತರ ಬೆಳೆಗಳಿಗೆ ಸರಿಯಾದ ಮಾರುಕಟ್ಟೆ ಮತ್ತು ಬೆಲೆ ದೊರೆಯಬೇಕಿದೆ, ಇಂತಹ ಅನಿರೀಕ್ಷಿತ ಘಟನೆಗಳಿಗೆ ಸಿಕ್ಕಿ ತೊಳಲಾಡುವ ರೈತರ ನೆರವಿಗೆ ಕೂಡಲೇ ಸರ್ಕಾರ ಬರಬೇಕಿದೆ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!