Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

Farmer Satish Babu, who was expecting a good crop, was distraught as miscreants sprayed the flower plants with herbicide

ಚಿಕ್ಕಬಳ್ಳಾಪುರ; ಇನ್ನೇನು 15 ದಿನಗಳಲ್ಲಿ ಕಟಾವಿಗೆ ಬರಲಿದ್ದ ಸೇವಂತಿ ಹೂ ತೋಟಕ್ಕೆ ದುಷ್ಕರ್ಮಿಗಳು ಕಳೆನಾಶಕ. (Herbicide) ಸಿಂಪಡಿಸಿದ ಪರಿಣಾಮ ಗಿಡಗಳು ಒಣಗಿದ ಘಟನೆ ತಾಲ್ಲೂಕಿನ ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ.

ಹೊಸಹುಡ್ಯ ಗ್ರಾಮದ ರೈತ ಸತೀಶ್ ಬಾಬು ಎಂಬುವರ ತೋಟದಲ್ಲಿಯೇ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು ತೋಟಕ್ಕೆ ಭೇಟಿ ನೀಡಿದ್ದ ಮಾಧ್ಯಮದವರ ಮುಂದೆ ರೈತ ತಮ್ಮ ಅಳಲು ತೋಡಿಕೊಂಡಿದ್ದಾರೆ.

ರೈತ ಸತೀಶ್ ಬಾಬು ಅರ್ಧ ಎಕರೆಯಲ್ಲಿ ಬೆಳೆದಿದ್ದ ಸುಮಾರು 3 ಸಾವಿರ ಸೇವಂತಿಗೆ ಗಿಡಗಳಿಗೆ ಕಳೆದ ಸೋಮವಾರ ಔಷಧಿ ಸಿಂಪಡಣೆ ಮಾಡಿದ್ದರು.

ಇದಾದ ಬಳಿಕ, ಕಳೆದ ಎರಡ್ಮೂರು ದಿನಗಳ ಹಿಂದೆ ಯಾರೋ ದುಷ್ಕರ್ಮಿಗಳು ಹೂವಿನ ಗಿಡಗಳಿಗೆ ಕಳೆನಾಶಕ (Herbicide) ಸಿಂಪಡಣೆ ಮಾಡಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತ ಸತೀಶ್ ಬಾಬು ಕಂಗಾಲಾಗಿದ್ದಾರೆ.

ಕಳೆನಾಶಕ ಸಿಂಪಡಣೆಯಿಂದ ಗಿಡಗಳ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿದ್ದು, ಕೆಲ ಗಿಡಗಳು ಸಂಪೂರ್ಣ ಒಣಗಿ ಹೋಗಿವೆ.

ಇನ್ನೇನು 15 ದಿನಗಳಲ್ಲಿ ಹೂವು ಬಿಡಬೇಕಿದ್ದ ಗಿಡಗಳು ಒಣಗುವ ಹಂತಕ್ಕೆ ತಲುಪಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ಬೆಳೆ ಬೆಳೆದಿದ್ದ ರೈತ ಆತಂಕದಲ್ಲಿದ್ದಾನೆ.

ಈ ಕುರಿತು ಮಾತನಾಡಿದ ರೈತ ಸತೀಶ್ ಬಾಬು, ಕಳೆದ ಬಾರಿ 1 ಎಕರೆಯಲ್ಲಿ ಇದೇ ಸೇವಂತಿ ಬೆಳೆ ಬೆಳೆದಿದ್ದೆ. ಸುಮಾರು 1ಲಕ್ಷ ರೂಗಳ ಆದಾಯ ಬಂದಿತ್ತು. ಆದರೆ, ಈ ಬಾರಿ ಯಾರೋ ದುಷ್ಕರ್ಮಿಗಳು ಕಳೆನಾಶಕ ಸಿಂಪಡಣೆ ಮಾಡಿದ್ದಾರೆ. ಇದರಿಂದ ಬೆಳೆ ಹಾಳಾಗಿದೆ. ಗಿಡಗಳು ಬಾಡುತ್ತಿವೆ.

ಕಳೆನಾಶಕ ಸಿಂಪಡಣೆಯಾದರೆ ಗಿಡಗಳು ಹೂ ಬಿಡುವುದಿಲ್ಲ. ಇದರಿಂದಾಗಿ ನಾವು ನಷ್ಟದ ಭೀತಿಯಲ್ಲಿದ್ದೇವೆ. ರೈತರಿಗೆ ರೈತರೇ ವಿರೋಧಿಗಳಾಗುತ್ತಿರುವುದು ನೋವಿನ ಸಂಗತಿಯಾಗಿದೆ.

ಹೊಟ್ಟೆ ಬಟ್ಟೆ ಕಟ್ಟಿ ಕೃಷಿಯಲ್ಲಿ ತೊಡಗುವ ನಮ್ಮಂತಹ ಬಡಪಾಯಿಗಳಿಗೆ ಇದು ಆಘಾತ ತರುವ ವಿಚಾರ. ಇಂತಹವರ ವಿರುದ್ಧ ಪೊಲೀಸರು, ತೋಟಗಾರಿಕೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಸಂಕಷ್ಟಕ್ಕೆ ಸಿಲುಕುವ ನೊಂದ ರೈತಾಪಿಗಳಿಗೆ ತೋಟಗಾರಿಕೆ ಇಲಾಖೆ ಸೂಕ್ತ ಪರಿಹಾರ ಕೊಡಬೇಕು ಎಂದು ಅಳಲು ತೋಡಿಕೊಂಡರು.

ಏನೇ ಆಗಲಿ ಗ್ರಾಮೀಣ ಪ್ರದೇಶದಲ್ಲಿ ಕೃಷಿಯ ಮೇಲೆ ಸೇಡು ತೀರಿಸಿಕೊಳ್ಳುವ ಸಂಗತಿಗಳು ಹೆಚ್ಚಾಗಿಯೇ ನಡೆಯುತ್ತಿದ್ದು, ಇದು ನಿಲ್ಲಬೇಕಿದೆ.

ಬೆವರು ಹರಿಸಿ ದುಡಿಯುವ ರೈತರ ಬೆಳೆಗಳಿಗೆ ಸರಿಯಾದ ಮಾರುಕಟ್ಟೆ ಮತ್ತು ಬೆಲೆ ದೊರೆಯಬೇಕಿದೆ, ಇಂತಹ ಅನಿರೀಕ್ಷಿತ ಘಟನೆಗಳಿಗೆ ಸಿಕ್ಕಿ ತೊಳಲಾಡುವ ರೈತರ ನೆರವಿಗೆ ಕೂಡಲೇ ಸರ್ಕಾರ ಬರಬೇಕಿದೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]