Gearing up to welcome Sankranti 2025 amid skyrocketing prices

Sankranti 2025 ಗಗನಕ್ಕೇರಿದ ಬೆಲೆಗಳ ನಡುವೆ ಸಂಕ್ರಾಂತಿ ಸ್ವಾಗತಿಸಲು ಸಿದ್ಧತೆ

ದೊಡ್ಡಬಳ್ಳಾಪುರ Sankranti 2025: ನಾಳೆಯ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಜನತೆ ಸಿದ್ದರಾಗುತ್ತಿದ್ದಾರೆ.

ತಾಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ದುಪ್ಪಟ್ಟು ಮಳೆ ಆಗಿದೆ. ಆದರೆ ಅಗತ್ಯ ಧಾನ್ಯಗಳ, ಹೂ ಹಣ್ಣುಗಳ ಗಗನಕ್ಕೇರಿರುವ ಬೆಲೆಗಳ ನಡುವೆ ಸಂಕ್ರಾಂತಿ ಹಬ್ಬವನ್ನು ಸ್ವಾಗತಿಸಬೇಕಿದೆ.

ದಿನೇ ದಿನೇ ಕೃಷಿಯಿಂದ ವಿಮುಖವಾಗುತ್ತಿರುವ ಇಂದಿನ ದಿನಗಳಲ್ಲಿ ಹಿಂದಿನ ಸಂಭ್ರಮಾಚರಣೆ ಇಲ್ಲದಿದ್ದರೂ, ಹಬ್ಬದ ಆಚರಣೆಗೆ ಸಿದ್ಧತೆಗಳು ನಡೆಯುತ್ತಿವೆ.

ಕೆ.ಜಿ ಕಡಲೇಕಾಯಿ 100 ರಿಂದ 130ರೂ, ಎಳ್ಳು ಬೆಲ್ಲ ಕೆಜಿಗೆ 200 ರೂ. ಗೆಣಸು 50ರೂ. ಕಬ್ಬು ಜಳವೆಗೆ 60 ರಿಂದ 80 ರೂ. ಅವರೇಕಾಯಿ ಕೆ.ಜಿಗೆ 120 ರೂ ಇದ್ದು ಬೆಲೆಗಳು ಹಬ್ಬಕ್ಕಾಗಿ ಹೆಚ್ಚಿವೆ.

ಬೆಲೆ ಏರಿಕೆಯ ನಡುವೆಯೇ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಕಬ್ಬು, ಗೆಣಸು, ಕಡಲೇಕಾಯಿಗಳ ಮಾರಾಟ ಭರದಿಂದ ಸಾಗಿತ್ತು.

ಸಂಕ್ರಾಂತಿ ಹಬ್ಬಕ್ಕೆ ಅಗತ್ಯವೆನಿಸಿದ ಅಕ್ಕಿ, ಬೇಳೆ, ಧಾನ್ಯಗಳ ಬೆಲೆಯೊಂದಿಗೆ ಹೂವು ಹಣ್ಣಿನ ಬೆಲೆಗಳು ಸಹ ಗಗನಕ್ಕೇರಿವೆ.

ಕಾಕಡ ಕೆ.ಜಿಗೆ 600 ರಿಂದ 700ರೂ ಕನಕಾಂಬರ ಕೆ.ಜಿಗೆ 1600 ರಿಂದ 2000ರೂ ಇದ್ದರೆ ಶಾಮಂತಿಗೆ, ಗುಲಾಬಿ, ಸೇವಂತಿಗೆ ಮೊದಲಾದ ಹೂವಿನ ಬೆಲೆಗಳು 300 ರವರೆಗೂ ಇವೆ. ತರಕಾರಿಗಳ ಬೆಲೆಗಳು ಸಾಧಾರಣವಾಗಿವೆ.

ಇದನ್ನೂ ಓದಿ: Darshan: ಗನ್ ಪರವಾನಗಿ ರದ್ದು..! ನಟ ದರ್ಶನ್‌ಗೆ ತೊಂದರೆಯಾದ್ರೆ ಹೊಣೆ ಯಾರು..?

ತಾಲೂಕಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಬ್ಬು ಬೆಳೆಯುವುದೇ ಕಡಿಮೆಯಾಗಿದ್ದು, ಕಬ್ಬನ್ನು ಹೊರಗಿನಿಂದ ತಂದು ಮಾರಾಟ ಮಾಡಲಾಗುತ್ತಿದೆ.

ಬೆಲೆಗಳ ಹೆಚ್ಚಳದ ನಡುವೆಯೂ ಸಂಕ್ರಾಂತಿ ಹಬ್ಬಕ್ಕಾಗಿ (Sankranti 2025) ಎಷ್ಟಾದರೂ ಸರಿ, ಹಬ್ಬ ಮಾಡಲೇ ಬೇಕೆಂದು ನಾಗರಿಕರು ಕೊಂಡು ಹೊಯ್ಯುತ್ತಿದ್ದ ದೃಶ್ಯ ಸಾಮಾನ್ಯವಾಗಿದೆ.

ನಗರೀಕರಣದ ಪ್ರಭಾವವಿರುವ ಹಲವಾರು ಗ್ರಾಮೀಣ ಪ್ರದೇಶದಲ್ಲಿ ಸುಗ್ಗಿ ಸಂಭ್ರಮ ಕಳೆದುಕೊಳ್ಳುತ್ತಿದ್ದಂತೆ ಭಾಸವಾಗುತ್ತಿತ್ತು.

ರಾಸುಗಳ ಸಂಖ್ಯೆ ಇಳಿಮುಖ

ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಸಂಕ್ರಾಂತಿಯಂದು ಪ್ರತಿ ವರ್ಷದಂತೆ ಈ ಬಾರಿಯೂ ಕಾಟಿಮರಾಯನ ಹಬ್ಬದ ಆಚರಿಸಲು ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ.

ರೈತರು ತಮ್ಮ ರಾಸುಗಳಿಗೆ ವಿಶೇಷ ಪೂಜೆ ಸಲ್ಲಿಸುವ, ಕಾಟಿಮರಾಯನಿಗೆ ಹರಕೆ ತೀರಿಸುವ, ಕಿಚ್ಚು ಹಾಯಿಸುವ ಅಚರಣೆಗಳು ಸಂಕ್ರಾಂತಿಯಂದು ನಡೆಯಲಿವೆ. ಆದರೆ ದಶಕಗಳ ಹಿಂದೆ ಮನೆ ಮನೆಯಲ್ಲಿಯೂ ಇದ್ದ ರಾಸುಗಳ ಸಂಖ್ಯೆ, ಈಗ ಊರೆಲ್ಲ ಹುಡುಕಿದರೂ ಎರಡು ಮೂರು ಜೊತೆ ದನಗಳು ಎನ್ನುವಂತಾಗಿದೆ.

ರಾಜಕೀಯ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎಷ್ಟೇ ಗ್ಯಾರಂಟಿಗಳನ್ನು ಕೊಟ್ಟರೂ ನಮಗೆ ತೊಂದರೆ ಇಲ್ಲ; ಪ್ರತಿಪಕ್ಷ ನಾಯಕ ಆರ್‌.ಅಶೋಕ

ಗ್ಯಾರಂಟಿಗಳಿಗೆ ಈ ಹಣವನ್ನು ಬಳಸಿದರೂ ಇನ್ನೂ ಹಣ ಉಳಿಯುತ್ತದೆ. ಗ್ಯಾರಂಟಿಗೆ ಹಣ ಕೊಡಬೇಡಿ ಎಂದು ಹೇಳುತ್ತಿಲ್ಲ. ಆರ್. ಅಶೋಕ (R. Ashoka)

[ccc_my_favorite_select_button post_id="112891"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!