Gearing up to welcome Sankranti 2025 amid skyrocketing prices

Sankranti 2025 ಗಗನಕ್ಕೇರಿದ ಬೆಲೆಗಳ ನಡುವೆ ಸಂಕ್ರಾಂತಿ ಸ್ವಾಗತಿಸಲು ಸಿದ್ಧತೆ

ದೊಡ್ಡಬಳ್ಳಾಪುರ Sankranti 2025: ನಾಳೆಯ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಜನತೆ ಸಿದ್ದರಾಗುತ್ತಿದ್ದಾರೆ.

ತಾಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ದುಪ್ಪಟ್ಟು ಮಳೆ ಆಗಿದೆ. ಆದರೆ ಅಗತ್ಯ ಧಾನ್ಯಗಳ, ಹೂ ಹಣ್ಣುಗಳ ಗಗನಕ್ಕೇರಿರುವ ಬೆಲೆಗಳ ನಡುವೆ ಸಂಕ್ರಾಂತಿ ಹಬ್ಬವನ್ನು ಸ್ವಾಗತಿಸಬೇಕಿದೆ.

ದಿನೇ ದಿನೇ ಕೃಷಿಯಿಂದ ವಿಮುಖವಾಗುತ್ತಿರುವ ಇಂದಿನ ದಿನಗಳಲ್ಲಿ ಹಿಂದಿನ ಸಂಭ್ರಮಾಚರಣೆ ಇಲ್ಲದಿದ್ದರೂ, ಹಬ್ಬದ ಆಚರಣೆಗೆ ಸಿದ್ಧತೆಗಳು ನಡೆಯುತ್ತಿವೆ.

ಕೆ.ಜಿ ಕಡಲೇಕಾಯಿ 100 ರಿಂದ 130ರೂ, ಎಳ್ಳು ಬೆಲ್ಲ ಕೆಜಿಗೆ 200 ರೂ. ಗೆಣಸು 50ರೂ. ಕಬ್ಬು ಜಳವೆಗೆ 60 ರಿಂದ 80 ರೂ. ಅವರೇಕಾಯಿ ಕೆ.ಜಿಗೆ 120 ರೂ ಇದ್ದು ಬೆಲೆಗಳು ಹಬ್ಬಕ್ಕಾಗಿ ಹೆಚ್ಚಿವೆ.

Sankranti 2025 ಗಗನಕ್ಕೇರಿದ ಬೆಲೆಗಳ ನಡುವೆ ಸಂಕ್ರಾಂತಿ ಸ್ವಾಗತಿಸಲು ಸಿದ್ಧತೆ

ಬೆಲೆ ಏರಿಕೆಯ ನಡುವೆಯೇ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಕಬ್ಬು, ಗೆಣಸು, ಕಡಲೇಕಾಯಿಗಳ ಮಾರಾಟ ಭರದಿಂದ ಸಾಗಿತ್ತು.

ಸಂಕ್ರಾಂತಿ ಹಬ್ಬಕ್ಕೆ ಅಗತ್ಯವೆನಿಸಿದ ಅಕ್ಕಿ, ಬೇಳೆ, ಧಾನ್ಯಗಳ ಬೆಲೆಯೊಂದಿಗೆ ಹೂವು ಹಣ್ಣಿನ ಬೆಲೆಗಳು ಸಹ ಗಗನಕ್ಕೇರಿವೆ.

ಕಾಕಡ ಕೆ.ಜಿಗೆ 600 ರಿಂದ 700ರೂ ಕನಕಾಂಬರ ಕೆ.ಜಿಗೆ 1600 ರಿಂದ 2000ರೂ ಇದ್ದರೆ ಶಾಮಂತಿಗೆ, ಗುಲಾಬಿ, ಸೇವಂತಿಗೆ ಮೊದಲಾದ ಹೂವಿನ ಬೆಲೆಗಳು 300 ರವರೆಗೂ ಇವೆ. ತರಕಾರಿಗಳ ಬೆಲೆಗಳು ಸಾಧಾರಣವಾಗಿವೆ.

ಇದನ್ನೂ ಓದಿ: Darshan: ಗನ್ ಪರವಾನಗಿ ರದ್ದು..! ನಟ ದರ್ಶನ್‌ಗೆ ತೊಂದರೆಯಾದ್ರೆ ಹೊಣೆ ಯಾರು..?

ತಾಲೂಕಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಬ್ಬು ಬೆಳೆಯುವುದೇ ಕಡಿಮೆಯಾಗಿದ್ದು, ಕಬ್ಬನ್ನು ಹೊರಗಿನಿಂದ ತಂದು ಮಾರಾಟ ಮಾಡಲಾಗುತ್ತಿದೆ.

Sankranti 2025 ಗಗನಕ್ಕೇರಿದ ಬೆಲೆಗಳ ನಡುವೆ ಸಂಕ್ರಾಂತಿ ಸ್ವಾಗತಿಸಲು ಸಿದ್ಧತೆ

ಬೆಲೆಗಳ ಹೆಚ್ಚಳದ ನಡುವೆಯೂ ಸಂಕ್ರಾಂತಿ ಹಬ್ಬಕ್ಕಾಗಿ (Sankranti 2025) ಎಷ್ಟಾದರೂ ಸರಿ, ಹಬ್ಬ ಮಾಡಲೇ ಬೇಕೆಂದು ನಾಗರಿಕರು ಕೊಂಡು ಹೊಯ್ಯುತ್ತಿದ್ದ ದೃಶ್ಯ ಸಾಮಾನ್ಯವಾಗಿದೆ.

ನಗರೀಕರಣದ ಪ್ರಭಾವವಿರುವ ಹಲವಾರು ಗ್ರಾಮೀಣ ಪ್ರದೇಶದಲ್ಲಿ ಸುಗ್ಗಿ ಸಂಭ್ರಮ ಕಳೆದುಕೊಳ್ಳುತ್ತಿದ್ದಂತೆ ಭಾಸವಾಗುತ್ತಿತ್ತು.

ರಾಸುಗಳ ಸಂಖ್ಯೆ ಇಳಿಮುಖ

ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಸಂಕ್ರಾಂತಿಯಂದು ಪ್ರತಿ ವರ್ಷದಂತೆ ಈ ಬಾರಿಯೂ ಕಾಟಿಮರಾಯನ ಹಬ್ಬದ ಆಚರಿಸಲು ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ.

ರೈತರು ತಮ್ಮ ರಾಸುಗಳಿಗೆ ವಿಶೇಷ ಪೂಜೆ ಸಲ್ಲಿಸುವ, ಕಾಟಿಮರಾಯನಿಗೆ ಹರಕೆ ತೀರಿಸುವ, ಕಿಚ್ಚು ಹಾಯಿಸುವ ಅಚರಣೆಗಳು ಸಂಕ್ರಾಂತಿಯಂದು ನಡೆಯಲಿವೆ. ಆದರೆ ದಶಕಗಳ ಹಿಂದೆ ಮನೆ ಮನೆಯಲ್ಲಿಯೂ ಇದ್ದ ರಾಸುಗಳ ಸಂಖ್ಯೆ, ಈಗ ಊರೆಲ್ಲ ಹುಡುಕಿದರೂ ಎರಡು ಮೂರು ಜೊತೆ ದನಗಳು ಎನ್ನುವಂತಾಗಿದೆ.

Sankranti 2025 ಗಗನಕ್ಕೇರಿದ ಬೆಲೆಗಳ ನಡುವೆ ಸಂಕ್ರಾಂತಿ ಸ್ವಾಗತಿಸಲು ಸಿದ್ಧತೆ

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!