Sri Siddarameshwar created a miracle through Kayak

ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು: ಬಸವರಾಜ ಬೊಮ್ಮಾಯಿ

ಬೆಂಗಳೂರು: ಶರಣ ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು. ಕಾಯಕ ಮಾಡುವವರಿಗೆ ಯಾವತ್ತೂ ಬಡತನ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನೊಳಂಬ ಲಿಂಗಾಯತ ಸಂಘ ಏರ್ಪಡಿಸಿದ್ದ ಶ್ರೀ ಗುರು ಸಿದ್ದರಾಮೇಶ್ವರರ 852ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಸಾಹಿತ್ಯಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ನಮ್ಮದು ದಿವ್ಯ ಪರಂಪರೆ ಹೊಂದಿರುವ ಸಮಾಜ, 12ನೇ ಶತಮಾನದಲ್ಲಿ ಹಲವಾರು ಶರಣರನ್ನು ಸೃಷ್ಟಿಸಿದ ಶ್ರೇಷ್ಠ ಕ್ರಾಂತಿಯಲ್ಲಿ ವಿಭಿನ್ನರಾದವರು ಶ್ರೀ ಸಿದ್ದರಾಮೇಶ್ವರ ಶರಣರು, ಬಸವಣ್ಣನವರ ಕಾಯಕ ತತ್ಬವನ್ನು ಪಾಲಿಸಿದ್ದರು ಎಂದು ಹೇಳಿದರು.

ಶ್ರೀ ಸಿದ್ದರಾಮೇಶ್ವರರು ಬಾಲ್ಯದಲ್ಲಿಯೇ ವಯಸ್ಸಿಗೆ ಮೀರಿ ಜ್ಞಾನ ಮತ್ತು ನಡವಳಿಕೆ ಮೂಲಕ ಪವಾಡಪುರುಷರಾಗುವ ಎಲ್ಲ ಗುಣ ಹೊಂದಿದ್ಸರು. ಅವರು ಶ್ರೀಶೈಲ ಮಲ್ಲಿಮಾರ್ಜುನನ ಆಶೀರ್ವಾದ ಪಡೆದವರು.

ಮಲ್ಲಿಕಾರ್ಜುನ ಭಿಕ್ಷೆಗೆ ಬಂದಾಗ ಇವರು ಭಿಕ್ಷೆ ನೀಡದಿದ್ದಾಗ ಮಲ್ಲಿಕಾರ್ಜುನ ಕಾಣೆಯಾದಾಗ ಶ್ರೀಶೈಲಕ್ಕೆ ತೆರಳಿ ಅಲ್ಲಿಯೇ ತಪಸ್ಸು ಮಾಡಿ ಶ್ರಿಶೈಲ ಮಲ್ಲಿಕಾರ್ಜುನನ್ನು ಒಲಿಸಿಕೊಳ್ಳುತ್ತಾರೆ. ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು ಶ್ರೀ ಸಿದ್ದರಾಮೇಶ್ವರರು ಎಂದರು.

ಬಸವಣ್ಣನವರು ಕಾಯಕೇ ಕೈಲಾಸ ಎಂದರು. ಕಾಯಕ ಪೂಜೆಗಿಂತ ದೊಡ್ಡದು. ಭಗವಂತ ಎದುರು ಬಂದರೂ ನಿಮ್ಮ ಕಾಯಕ ನಿಲ್ಲಿಸಬೇಡ ಎಂದು ಬಸವಣ್ಣನರು ಹೇಳಿದ್ದರು.

ಅಂತಹ ಅದಮ್ಯ ಕಾಯಕದ ಮೂಲಕ ಪವಾಡ ಮಾಡಿದವರು ಶ್ರೀ ಸಿದ್ದರಾಮೇಶ್ವರರು. ಸೊಲ್ಲಾಪುರದಲ್ಲಿ ಬರಗಾಲ ಬಂದಾಗ ನಾಲ್ಕು ಸಾವಿರ ಶರಣರನ್ನು ಸೇರಿಸಿ ಕೆರೆ ಕಟ್ಟಿಸಿದರು. ಅದರಲ್ಲಿ ಇಂದಿಗೂ ನೀರಿದೆ ಎಂದು ಹೇಳಿದರು.

ಕಾಯಕ ಎಂದರೆ ಹೊಟ್ಟೆಪಾಡಿಗಾಗಿ ಅಲ್ಲ. ಕಾಯಕ ಅಂದರೆ ಪರಿಪೂರ್ಣತೆ. ಆ ಸಂದರ್ಭದಲ್ಲಿ ರೈತರಿಗೆ ನೀರು, ನೀರಾವರಿ ಮಹತ್ವ ಹೇಳಿಕೊಟ್ಟವರು, ಮಣ್ಣಿನ ಮಹತ್ವ, ಬದುಕಿನ ಜೀವಾಳ ಎನ್ನುವುದನ್ನು ತೋರಿಸಿದರು ಶ್ರೀ ಸಿದ್ದರಾಮೇಶ್ವರರು. ನೊಳಂಬ ಸಮಾಜದಲ್ಲಿ ಕಾಯಕ ಎನ್ನುವುದು ರಕ್ತಗತವಾಗಿ ಬಂದಿದೆ.

ಕಾಯಕ ಸಮಾಜಕ್ಕೆ ಎಂದೂ ಬಡತನ, ದುಖ ಬರುವುದಿಲ್ಲ. ಕಷ್ಟಗಳನ್ನು ಮೆಟ್ಟಿ ನಿಲ್ಲುವ ಶಕ್ತಿ ನೊಳಂಬ ಸಮುದಾಯಕ್ಕೆ ಇದೆ ಎಂದು ಹೇಳಿದರು.

ಮಾಧುಸ್ವಾಮಿ ಕಾರ್ಯ ಶ್ಲಾಘನೆ

ನಾನು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಮಾಜಿ ಸಂಸದ ಬಸವರಾಜು ಅವರ ಜೊತೆ ಎರಡು ದಶಕಗಳ ಕಾಲ ಕೆಲಸ ಮಾಡುವ ಅವಕಾಶ ಪಡೆದಿದ್ದೆ. ಸಣ್ಣ ನಿರಾವರಿ ಇಲಾಖೆಯಲ್ಲಿ ದೊಡ್ಡ ಸಾಧನೆ ಮಾಡಿರುವುದು ಮಾಧುಸ್ವಾಮಿಯವರು. ಅವರು ಬಹಳ ಅದ್ಬುತವಾದ ಕೆಲಸಗಳನ್ನು ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ‌ ಜಿಲ್ಲೆಗಳಲ್ಲಿ ಅವರು ಮಾಡಿರುವ ಕಾರ್ಯಗಳು ಶ್ಲಾಘನೀಯ.

ಚಿಕ್ಕನಾಯಕನಹಳ್ಳಿಯ ದೊಡ್ಡ ನಾಯಕ ಮಾಧುಸ್ವಾಮಿಯವರು, ಮಾಜಿ ಸಂಸದ ಬಸವರಾಜು ಅವರು ಹೇಮಾವತಿ ನೀರಿಗಾಗಿ ನಿರಂತರ ಹೋರಾಟ ಮಾಡಿದ್ದಾರೆ‌. ನೊಳಂಬರ ನಾಡಿನಲ್ಲಿ ನೀರಾವರಿ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಕೆರೆ ತುಂಬಿಸುವ ಕೆಲಸ ಮಾಡಿದೆ.

ಗೋರೂರು ಹೆಬ್ಬೂರು ಏತ ನೀರಾವರಿ ಯೋಜನೆ 30 ವರ್ಷದಿಂದ ನೆನೆಗುದಿಗೆ ಬಿದ್ದಿತ್ತು. ಹದಿನೆಂಟು ತಿಂಗಳಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಂಡು, ಪರಮಪೂಜ್ಯ ಶ್ರೀ ಶಿವಕುಮಾರಸ್ವಾಮಿ ಹಾಗೂ ಬಾಲಗಂಗಾಧರ ನಾಥ ಸ್ವಾಮೀಜಿ ಅವರ ಕೈಯಿಂದ ಉದ್ಘಾಟನೆ ಮಾಡಿಸಿದೆ.

ನೀರಾವರಿ ಸಚಿವನಾಗಿ ಸುಮಾರು ಏಳೂವರೆ ಲಕ್ಷ ಎಕರೆ ಜಮೀನು ನೀರಾವರಿ ಮಾಡಿದ ಸಂತೃಪ್ತಿ ಇದೆ ಎಂದರು.
ಶರಣರ ಸಾಹಿತ್ಯ ಮತ್ತು ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕಿದೆ. ಇತ್ತೀಚೆಗೆ ಪಾಶ್ಚಾತ್ಯ ಸಂಸ್ಕೃತಿ ಅನುಕರಣೆ ಹೆಚ್ಚಾಗಿದೆ.

ನಾಗರಿಕತೆ ಮತ್ತು ಸಂಸ್ಕೃತಿ ಬೇರೆ ಬೇರೆ ಇದನ್ನು ಅರ್ಥ ಮಾಡಿಕೊಂಡು ನಮ್ಮ ಸಂಸ್ಕೃತಿ ಉಳಿಸಿಕೊಂಡು ಹೋಗಬೇಕು. ಈ ಮೂಲಕ ಶ್ರೀ ಸಿದ್ದರಾಮೇಶ್ವರ ಜಯಂತಿ ಆಯೋಜನೆ ಮಾಡಿರುವುದಕ್ಕೆ ಸಾರ್ಥಕವಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಂಗ ಸ್ವಾಮೀಜಿ, ಅರಸೀಕರೆಯ ಜ್ಞಾನಪ್ರಭು ಸ್ವಾಮೀಜಿ , ಶಿವಶಂಕರ ಶಿವಯೋಗಿ ಮಹಾ ಸ್ವಾಮಿಗಳು, ಮಾಜಿ ಸಚಿವರಾದ ಜೆ.ಸಿ. ಮಾಧುಸ್ವಾಮಿ, ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಸಿ.ಟಿ. ರವಿ, ನಿವೃತ್ತ ಡಿಜಿಪಿ ಶಂಕರ ಬಿದರಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!