Sri Siddarameshwar created a miracle through Kayak

ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು: ಬಸವರಾಜ ಬೊಮ್ಮಾಯಿ

ಬೆಂಗಳೂರು: ಶರಣ ಶ್ರೀ ಸಿದ್ದರಾಮೇಶ್ವರರು ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು. ಕಾಯಕ ಮಾಡುವವರಿಗೆ ಯಾವತ್ತೂ ಬಡತನ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನೊಳಂಬ ಲಿಂಗಾಯತ ಸಂಘ ಏರ್ಪಡಿಸಿದ್ದ ಶ್ರೀ ಗುರು ಸಿದ್ದರಾಮೇಶ್ವರರ 852ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಸಾಹಿತ್ಯಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ನಮ್ಮದು ದಿವ್ಯ ಪರಂಪರೆ ಹೊಂದಿರುವ ಸಮಾಜ, 12ನೇ ಶತಮಾನದಲ್ಲಿ ಹಲವಾರು ಶರಣರನ್ನು ಸೃಷ್ಟಿಸಿದ ಶ್ರೇಷ್ಠ ಕ್ರಾಂತಿಯಲ್ಲಿ ವಿಭಿನ್ನರಾದವರು ಶ್ರೀ ಸಿದ್ದರಾಮೇಶ್ವರ ಶರಣರು, ಬಸವಣ್ಣನವರ ಕಾಯಕ ತತ್ಬವನ್ನು ಪಾಲಿಸಿದ್ದರು ಎಂದು ಹೇಳಿದರು.

ಶ್ರೀ ಸಿದ್ದರಾಮೇಶ್ವರರು ಬಾಲ್ಯದಲ್ಲಿಯೇ ವಯಸ್ಸಿಗೆ ಮೀರಿ ಜ್ಞಾನ ಮತ್ತು ನಡವಳಿಕೆ ಮೂಲಕ ಪವಾಡಪುರುಷರಾಗುವ ಎಲ್ಲ ಗುಣ ಹೊಂದಿದ್ಸರು. ಅವರು ಶ್ರೀಶೈಲ ಮಲ್ಲಿಮಾರ್ಜುನನ ಆಶೀರ್ವಾದ ಪಡೆದವರು.

ಮಲ್ಲಿಕಾರ್ಜುನ ಭಿಕ್ಷೆಗೆ ಬಂದಾಗ ಇವರು ಭಿಕ್ಷೆ ನೀಡದಿದ್ದಾಗ ಮಲ್ಲಿಕಾರ್ಜುನ ಕಾಣೆಯಾದಾಗ ಶ್ರೀಶೈಲಕ್ಕೆ ತೆರಳಿ ಅಲ್ಲಿಯೇ ತಪಸ್ಸು ಮಾಡಿ ಶ್ರಿಶೈಲ ಮಲ್ಲಿಕಾರ್ಜುನನ್ನು ಒಲಿಸಿಕೊಳ್ಳುತ್ತಾರೆ. ಕಾಯಕದ ಮೂಲಕ ಪವಾಡ ಸೃಷ್ಠಿಸಿದವರು ಶ್ರೀ ಸಿದ್ದರಾಮೇಶ್ವರರು ಎಂದರು.

ಬಸವಣ್ಣನವರು ಕಾಯಕೇ ಕೈಲಾಸ ಎಂದರು. ಕಾಯಕ ಪೂಜೆಗಿಂತ ದೊಡ್ಡದು. ಭಗವಂತ ಎದುರು ಬಂದರೂ ನಿಮ್ಮ ಕಾಯಕ ನಿಲ್ಲಿಸಬೇಡ ಎಂದು ಬಸವಣ್ಣನರು ಹೇಳಿದ್ದರು.

ಅಂತಹ ಅದಮ್ಯ ಕಾಯಕದ ಮೂಲಕ ಪವಾಡ ಮಾಡಿದವರು ಶ್ರೀ ಸಿದ್ದರಾಮೇಶ್ವರರು. ಸೊಲ್ಲಾಪುರದಲ್ಲಿ ಬರಗಾಲ ಬಂದಾಗ ನಾಲ್ಕು ಸಾವಿರ ಶರಣರನ್ನು ಸೇರಿಸಿ ಕೆರೆ ಕಟ್ಟಿಸಿದರು. ಅದರಲ್ಲಿ ಇಂದಿಗೂ ನೀರಿದೆ ಎಂದು ಹೇಳಿದರು.

ಕಾಯಕ ಎಂದರೆ ಹೊಟ್ಟೆಪಾಡಿಗಾಗಿ ಅಲ್ಲ. ಕಾಯಕ ಅಂದರೆ ಪರಿಪೂರ್ಣತೆ. ಆ ಸಂದರ್ಭದಲ್ಲಿ ರೈತರಿಗೆ ನೀರು, ನೀರಾವರಿ ಮಹತ್ವ ಹೇಳಿಕೊಟ್ಟವರು, ಮಣ್ಣಿನ ಮಹತ್ವ, ಬದುಕಿನ ಜೀವಾಳ ಎನ್ನುವುದನ್ನು ತೋರಿಸಿದರು ಶ್ರೀ ಸಿದ್ದರಾಮೇಶ್ವರರು. ನೊಳಂಬ ಸಮಾಜದಲ್ಲಿ ಕಾಯಕ ಎನ್ನುವುದು ರಕ್ತಗತವಾಗಿ ಬಂದಿದೆ.

ಕಾಯಕ ಸಮಾಜಕ್ಕೆ ಎಂದೂ ಬಡತನ, ದುಖ ಬರುವುದಿಲ್ಲ. ಕಷ್ಟಗಳನ್ನು ಮೆಟ್ಟಿ ನಿಲ್ಲುವ ಶಕ್ತಿ ನೊಳಂಬ ಸಮುದಾಯಕ್ಕೆ ಇದೆ ಎಂದು ಹೇಳಿದರು.

ಮಾಧುಸ್ವಾಮಿ ಕಾರ್ಯ ಶ್ಲಾಘನೆ

ನಾನು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಮಾಜಿ ಸಂಸದ ಬಸವರಾಜು ಅವರ ಜೊತೆ ಎರಡು ದಶಕಗಳ ಕಾಲ ಕೆಲಸ ಮಾಡುವ ಅವಕಾಶ ಪಡೆದಿದ್ದೆ. ಸಣ್ಣ ನಿರಾವರಿ ಇಲಾಖೆಯಲ್ಲಿ ದೊಡ್ಡ ಸಾಧನೆ ಮಾಡಿರುವುದು ಮಾಧುಸ್ವಾಮಿಯವರು. ಅವರು ಬಹಳ ಅದ್ಬುತವಾದ ಕೆಲಸಗಳನ್ನು ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ‌ ಜಿಲ್ಲೆಗಳಲ್ಲಿ ಅವರು ಮಾಡಿರುವ ಕಾರ್ಯಗಳು ಶ್ಲಾಘನೀಯ.

ಚಿಕ್ಕನಾಯಕನಹಳ್ಳಿಯ ದೊಡ್ಡ ನಾಯಕ ಮಾಧುಸ್ವಾಮಿಯವರು, ಮಾಜಿ ಸಂಸದ ಬಸವರಾಜು ಅವರು ಹೇಮಾವತಿ ನೀರಿಗಾಗಿ ನಿರಂತರ ಹೋರಾಟ ಮಾಡಿದ್ದಾರೆ‌. ನೊಳಂಬರ ನಾಡಿನಲ್ಲಿ ನೀರಾವರಿ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಕೆರೆ ತುಂಬಿಸುವ ಕೆಲಸ ಮಾಡಿದೆ.

ಗೋರೂರು ಹೆಬ್ಬೂರು ಏತ ನೀರಾವರಿ ಯೋಜನೆ 30 ವರ್ಷದಿಂದ ನೆನೆಗುದಿಗೆ ಬಿದ್ದಿತ್ತು. ಹದಿನೆಂಟು ತಿಂಗಳಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಂಡು, ಪರಮಪೂಜ್ಯ ಶ್ರೀ ಶಿವಕುಮಾರಸ್ವಾಮಿ ಹಾಗೂ ಬಾಲಗಂಗಾಧರ ನಾಥ ಸ್ವಾಮೀಜಿ ಅವರ ಕೈಯಿಂದ ಉದ್ಘಾಟನೆ ಮಾಡಿಸಿದೆ.

ನೀರಾವರಿ ಸಚಿವನಾಗಿ ಸುಮಾರು ಏಳೂವರೆ ಲಕ್ಷ ಎಕರೆ ಜಮೀನು ನೀರಾವರಿ ಮಾಡಿದ ಸಂತೃಪ್ತಿ ಇದೆ ಎಂದರು.
ಶರಣರ ಸಾಹಿತ್ಯ ಮತ್ತು ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕಿದೆ. ಇತ್ತೀಚೆಗೆ ಪಾಶ್ಚಾತ್ಯ ಸಂಸ್ಕೃತಿ ಅನುಕರಣೆ ಹೆಚ್ಚಾಗಿದೆ.

ನಾಗರಿಕತೆ ಮತ್ತು ಸಂಸ್ಕೃತಿ ಬೇರೆ ಬೇರೆ ಇದನ್ನು ಅರ್ಥ ಮಾಡಿಕೊಂಡು ನಮ್ಮ ಸಂಸ್ಕೃತಿ ಉಳಿಸಿಕೊಂಡು ಹೋಗಬೇಕು. ಈ ಮೂಲಕ ಶ್ರೀ ಸಿದ್ದರಾಮೇಶ್ವರ ಜಯಂತಿ ಆಯೋಜನೆ ಮಾಡಿರುವುದಕ್ಕೆ ಸಾರ್ಥಕವಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಂಗ ಸ್ವಾಮೀಜಿ, ಅರಸೀಕರೆಯ ಜ್ಞಾನಪ್ರಭು ಸ್ವಾಮೀಜಿ , ಶಿವಶಂಕರ ಶಿವಯೋಗಿ ಮಹಾ ಸ್ವಾಮಿಗಳು, ಮಾಜಿ ಸಚಿವರಾದ ಜೆ.ಸಿ. ಮಾಧುಸ್ವಾಮಿ, ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಸಿ.ಟಿ. ರವಿ, ನಿವೃತ್ತ ಡಿಜಿಪಿ ಶಂಕರ ಬಿದರಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

ರಾಜಕೀಯ

ದೆಹಲಿ ತೀರ್ಪು: ಸೋತ ಕೇಜ್ರಿವಾಲ್, ಕಾಂಗ್ರೆಸ್ಗೆ ಮುಖಭಂಗ.. BJP ಅಧಿಕಾರಕ್ಕೆ

ದೆಹಲಿ ತೀರ್ಪು: ಸೋತ ಕೇಜ್ರಿವಾಲ್, ಕಾಂಗ್ರೆಸ್ಗೆ ಮುಖಭಂಗ.. BJP ಅಧಿಕಾರಕ್ಕೆ

ಇದರೊಂದಿಗೆ ಕಳೆದ ಹತ್ತು ವರ್ಷಗಳ ಹಿಂದೆ ಕ್ಲೀನ್ ಇಮೇಜ್ ನೊಂದಿಗೆ ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿದೆ. AAP

[ccc_my_favorite_select_button post_id="102437"]
ಬಾಶೆಟ್ಟಿಹಳ್ಳಿ ಕೆರೆ ಗೋಡೆಯ ಮೇಲೆ ಬಣ್ಣಬಣ್ಣದ ಚಿತ್ತಾರ..!:  WWF ಇಂಡಿಯಾ ಸಂಸ್ಥೆಯಿಂದ ಪರಿಸರ ಮಾಹಿತಿ..

ಬಾಶೆಟ್ಟಿಹಳ್ಳಿ ಕೆರೆ ಗೋಡೆಯ ಮೇಲೆ ಬಣ್ಣಬಣ್ಣದ ಚಿತ್ತಾರ..!: WWF ಇಂಡಿಯಾ ಸಂಸ್ಥೆಯಿಂದ ಪರಿಸರ

ಕೆರೆಗೆ ಬರುವವರಿಗೆ ಮತ್ತು ಹಾದು ಹೋಗುವವರಿಗೆ ಕೆರೆಯ ಸಂರಕ್ಷಣಾ ಮಹತ್ವ ತಿಳಿಸುವ ಉದ್ದೇಶದಿಂದ, ಕೆರೆಯ ಜೀವವೈವಿದ್ಯತೆ, ಕೆರೆಗಳ ಮಹತ್ವ, ಕೆರೆಗಳಿಗೆ ಇರುವ ತೊಂದರೆಗಳು ಮತ್ತು ಚಿಟ್ಟೆಗಳ ಬಗ್ಗೆ WWF

[ccc_my_favorite_select_button post_id="102448"]
ಭಾರತೀಯರಿಗೆ ಅವಮಾನ: ಯುಎಸ್ ಪ್ರವಾಸ ರದ್ದುಗೊಳಿಸಿ.. ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಭಾರತೀಯರಿಗೆ ಅವಮಾನ: ಯುಎಸ್ ಪ್ರವಾಸ ರದ್ದುಗೊಳಿಸಿ.. ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಅಲ್ಲದೆ ಬಿಜೆಪಿಯ ಐಟಿ ಸೆಲ್ ಭಾರತೀಯರ ಕೈಕೋಳ ಮತ್ತು ಸರಪಳಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅದಾನಿಯನ್ನು ಬಹುಪಾಲುಗಳಿಂದ ರಕ್ಷಿಸಲು ಮೋದಿಗೆ ಸಹಾಯ ಮಾಡಿದರೆ ಅದು ಸಹ ಭಾರತೀಯರನ್ನು ಅಪಹಾಸ್ಯ ಮಾಡುತ್ತದೆ ಎಂದಿರುವ ಟ್ವಿಟ್ಗೆ ಉತ್ತರ ನೀಡಿ,

[ccc_my_favorite_select_button post_id="102440"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Doddaballapura: ಅಣ್ಣ ಸಾವನಪ್ಪಿದ್ದ ಮರದ ಬಳಿಯಲ್ಲೇ ತಮ್ಮ ಆತ್ಮಹತ್ಯೆ..!

Doddaballapura: ಅಣ್ಣ ಸಾವನಪ್ಪಿದ್ದ ಮರದ ಬಳಿಯಲ್ಲೇ ತಮ್ಮ ಆತ್ಮಹತ್ಯೆ..!

ಆತ್ಮಹತ್ಯೆಗೂ ಮುನ್ನಾ ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. Suicide

[ccc_my_favorite_select_button post_id="102462"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಜನ್ಮದಿನದ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸೆಲೆಬ್ರಿಟಿಗಳಿಗೆ ದರ್ಶನ್ ಸಂದೇಶ ನೀಡಿದ್ದಾರೆ. ಇದೇ ವೇಳೆ ಹಲವ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. Darshan

[ccc_my_favorite_select_button post_id="102428"]
error: Content is protected !!