ದೇವನಹಳ್ಳಿಯಲ್ಲಿ 390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ: ಎಂಬಿ ಪಾಟೀಲ| IBC GIGA

390 Crore Rs. Foundation stone laying for investment IBC Giga Factory

ದೇವನಹಳ್ಳಿ: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ (IBC GIGA) ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು.

ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ.

ದೇವನಹಳ್ಳಿಯಲ್ಲಿ 390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ: ಎಂಬಿ ಪಾಟೀಲ| IBC GIGA

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದ್ದು, 300 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ.

ಇಲ್ಲಿ ಉತ್ಪಾದಿಸಲಾಗುವ ಬ್ಯಾಟರಿಗಳ ಪೈಕಿ ಶೇಕಡ 20ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು ಎಂದಿದ್ದಾರೆ.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದ್ದು, ಫಾಕ್ಸ್-ಕಾನ್ ಸಂಸ್ಥೆಯ ಸಮೀಪದಲ್ಲೇ ಇದು ಅಸ್ತಿತ್ವಕ್ಕೆ ಬರಲಿದೆ. ಮುಂದಿನ ಒಂಬತ್ತು ತಿಂಗಳಲ್ಲಿ ಈ ಘಟಕವು ಕಾರ್ಯಾಚರಣೆ ಆರಂಭಿಸಲಿದ್ದು, ಇಲ್ಲೇ ಬ್ಯಾಟರಿಗಳನ್ನು ತಯಾರಿಸಿ, ಇಲ್ಲಿಂದಲೇ ದೇಶ-ವಿದೇಶಗಳಿಗೂ ಕಳಿಸಿ ಕೊಡಲಿದೆ ಎಂದು ಅವರು ಮಾಹಿತಿ ನೀಡಿದರು.

ಸದ್ಯಕ್ಕೆ ಐಬಿಸಿ ಕಂಪನಿಯು ದಕ್ಷಿಣ ಕೊರಿಯಾದಲ್ಲಿ ಸೆಲ್ಸ್ ಉತ್ಪಾದಿಸಿ, ಅವುಗಳನ್ನು ಇಲ್ಲಿಗೆ ತಂದು ಪೂರ್ಣ ಪ್ರಮಾಣದ ಬ್ಯಾಟರಿಗಳನ್ನು ತಯಾರಿಸುತ್ತಿದೆ.

ಈ ಘಟಕ ಕಾರ್ಯಾರಂಭ ಆದ ನಂತರ ಇಲ್ಲೇ ಸೆಲ್ ಗಳ ಉತ್ಪಾದನೆ ಕೂಡ ಆಗಲಿದೆ. ಇದು ದೇಶದಲ್ಲೇ ಮೊದಲ ಸೆಲ್ ಉತ್ಪಾದನಾ ಘಟಕವಾಗಲಿದೆ. ಮುಂಬರುವ ದಿನಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಜತೆಗೆ ಉಳಿದ ವಾಹನಗಳಿಗೂ ಇದು ಬ್ಯಾಟರಿ ಪೂರೈಸಲಿದೆ ಎಂದು ಅವರು ವಿವರಿಸಿದರು.

ಭಾರತದಲ್ಲಿ ಶಿಕ್ಷಣ ಹಾಗೂ ಅಮೆರಿಕದ ಸಿಲಿಕಾನ್ ವ್ಯಾಲಿಯಲ್ಲಿ ತರಬೇತಿ ಪಡೆದ ಯುವ ಉದ್ಯಮಿಗಳು ಐಬಿಸಿ ಕಂಪನಿ ಸ್ಥಾಪಿಸಿ, ಬ್ಯಾಟರಿಗಳ ವಿನ್ಯಾಸ, ಉತ್ಪಾದನೆಗೆ ಆದ್ಯತೆ ಕೊಟ್ಟಿದ್ದಾರೆ. ಹಾಗೆಯೇ ಭಾರತದ ಅಗತ್ಯಕ್ಕೆ ಹೊಂದುವ ಹಾಗೆ ವಿನ್ಯಾಸ ಮಾಡಿರುವುದು ಮೆಚ್ಚುವಂತಹದ್ದು ಎಂದು ಸಚಿವರು ಶ್ಲಾಘಿಸಿದರು

ಇದು ಭಾರತದಲ್ಲಿ ಇಂತಹ ಪ್ರಪ್ರಥಮ ಯೋಜನೆಯಾಗಿದೆ. ಇಲ್ಲಿ ರೆಟ್ರೋಫಿಟ್ ಬ್ಯಾಟರಿಗಳನ್ನು ಕೂಡ ತಯಾರಿಸಲಾಗುವುದು. ಇದರಿಂದ ರಾಜ್ಯದ ಆರ್ಥಿಕತೆಗೆ ಹೊಸ ಬಲ ಬರಲಿದ್ದು, ಚೀನಾದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಎಂದು ಅವರು ವಿವರಿಸಿದ್ದಾರೆ.

ನಾವು ಸುಸ್ಥಿರ, ತಂತ್ರಜ್ಞಾನಾಧಾರಿತ ಮತ್ತು ಎಲ್ಲರನ್ನೂ ಒಳಗೊಳ್ಳುವಂತಹ ಆರ್ಥಿಕತೆಯನ್ನು ಕಟ್ಟುವ ಗುರಿ ಇಟ್ಟುಕೊಂಡಿದ್ದೇವೆ. ಇನ್ನೊಂದೆಡೆಯಲ್ಲಿ, ಹಸಿರು ಇಂಧನ ಬಳಕೆಗೆ ಉತ್ತೇಜನ ಕೊಡುತ್ತಿದ್ದೇವೆ. ಐಬಿಸಿ ಗಿಗಾ ಫ್ಯಾಕ್ಟರಿಯು ಈ ಪರಿವರ್ತನೆಯ ಮೈಲುಗಲ್ಲಾಗಿದೆ. ಇದರಿಂದಾಗಿ ರಾಜ್ಯವು ಇಂಧನ ಕ್ಷೇತ್ರದ ಸಂಶೋಧನೆಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಐಬಿಸಿ ಸಿಇಒ ಪ್ರಿಯದರ್ಶಿ ಪಾಂಡಾ, ಸಿಎಸ್ಒ ಸುಂದರ್ ರಾಮಮೂರ್ತಿ, ಕುನಾಲ್ ಜೈನ್, ಜಾಸ್ ಟೆಕ್ ಅಧ್ಯಕ್ಷ ಜೇಸನ್ ಚುಂಗ್, ಉಪಾಧ್ಯಕ್ಷ ಡ್ಯಾನಿ ಚುಂಗ್, ಮಹಾನಗರ್ ಗ್ಯಾಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಆಶು ಸಿಂಘಾಲ್, ಡೆಪ್ಯುಟಿ ಎಂಡಿ ಸಂಜಯ್ ಶೇಂದೆ ಉಪಸ್ಥಿತರಿದ್ದರು.

ರಾಜಕೀಯ

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಇನ್ನು ಮುಂದೆ ರಾಜಕೀಯ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="121399"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]