Bad news every day, crime booming: HD Kumaraswamy worries

ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ: ಹೆಚ್.ಡಿ.ಕುಮಾರಸ್ವಾಮಿ ಕಳವಳ

ಬೆಂಗಳೂರು: ಸಮಾಜದಲ್ಲಿ ಮಾನವೀಯ ಮೌಲ್ಯಗಳು ನಶಿಸುತ್ತಿದ್ದು ಸಂತರು ಮತ್ತು ಶರಣರ ಮಾರ್ಗದರ್ಶನದಲ್ಲಿ ಅವೆಲ್ಲವೂ ಪುನರುದ್ಧಾರ ಆಗಬೇಕಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಪ್ರತಿಪಾದಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಶ್ರೀ ಗುರು ಸಿದ್ಧರಾಮೇಶ್ವರರ 852ನೇ ಜಯಂತಿ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರತಿದಿನವೂ ಕೆಟ್ಟ ಸುದ್ದಿಗಳು, ಅಪರಾಧಗಳು ವಿಜೃಂಭಿಸುತ್ತಿವೆ. ಅವೆಲ್ಲವನ್ನೂ ಮಾಧ್ಯಮಗಳಲ್ಲಿ ಕಂಡರೆ ಕಳವಳವಾಗುತ್ತಿದೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಸಂತರು, ಶರಣರೇ ದಾರಿ ತೋರಬೇಕು ಎಂದರು.

ವಿಶ್ವದ ಮುಂದುವರೆದ ರಾಷ್ಟ್ರಗಳಿಗೆ ಸರಿಸಮನಾಗಿ ನಮ್ಮ ದೇಶ ಮುಂದುವರಿಯುತ್ತಿದೆ. ದೇಶದಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಪಡೆದಿದ್ದೇವೆ. ಹಳ್ಳಿಗಳಿಗೆ ರಸ್ತೆ, ವಿದ್ಯುತ್ ಎಲ್ಲವೂ ಬಂದಿದೆ. ಇಂಥ ಯಾವ ಅನುಕೂಲಗಳು ಇಲ್ಲದೇ ಇದ್ದಾಗ ಅನ್ಯೋನ್ಯವಾಗಿ, ನೆಮ್ಮದಿಯಾಗಿ ಇದ್ದೆವು. ಎಲ್ಲವೂ ಬಂದ ಮೇಲೆ ಇದ್ದ ಎಲ್ಲವನ್ನೂ ಕಳೆದುಕೊಳ್ಳುತ್ತಿದ್ದೇವೆ. ಇದು ಬಹಳ ದುಃಖಕರ ಎಂದು ಸಚಿವರು ಹೇಳಿದರು.

ಉತ್ತರ ಕರ್ನಾಟಕದಲ್ಲಿ ನಾಲ್ಕು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗನೇ ತಂದೆಯನ್ನು ಕೊಳ್ಳುವಂತ ಪರಿಸ್ಥಿತಿ. ಆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರೆ ಅವರ ಪರಿಸ್ಥಿತಿ ಎಲ್ಲಿಗೆ ಬಂದಿರಬಹುದು? ಸಮಾಜದ ಒಳಿತಿಗಾಗಿ ಅಕ್ಕಮಹಾದೇವಿ, ಬಸವಣ್ಣನವರ ಹೇಳಿದ ಜೀವನದ ಆದರ್ಶಗಳನ್ನು ನಾವೆಲ್ಲಾ ಮುಂದುವರೆಸಿಕೊಂಡು ಹೋಗಬೇಕಿದೆ ಎಂದು ಸಚಿವರು ಪ್ರತಿಪಾದಿಸಿದರು.

12ನೇ ಶತಮಾನದಲ್ಲಿ ಶರಣರು ಕಾಯಕದ ಸಂದೇಶ ಕೊಟ್ಟಿದ್ದಾರೆ. ಸಮಾಜದ ಒಗ್ಗೂಡುವಿಕೆಯನ್ನು ಸರಿಪಡಿಸುವ ಬಗ್ಗೆ ಬಸವಣ್ಣನವರ ಆದರ್ಶಗಳ ಬಗ್ಗೆ ಶರಣರು ಹೇಳಿರುವ ಸಂದೇಶ ಇಂದಿಗೂ ಎಂದೆಂದಿಗೂ ಪ್ರಸ್ತುತ ಎಂದು ಸಚಿವರು ಒತ್ತಿ ಹೇಳಿದರು.

ನಾವ್ಯಾರು ನಡೆ ನುಡಿಗಳಲ್ಲಿ ಪರಿಶುದ್ಧವಾಗಿದ್ದೇವೆ ಎನ್ನುವ ಬಗ್ಗೆ ಆಲೋಚನೆ ಮಾಡಬೇಕು. ಶರಣರ ನುಡಿಯಲ್ಲಿ ನಾವು ಸ್ವಲ್ಪವಾದರೂ ಅಳವಡಿಸಿಕೊಂಡರೆ ಶರಣರಿಗೆ ಗೌರವ ಕೊಟ್ಟಂತಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕೆರಗೋಡು-ರಂಗಾಪುರ ಸುಕ್ಷೇತ್ರಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಗುರುಪರದೇಶಿಕೇಂದ್ರ ಸ್ವಾಮಿಗಳು, ಸಾಣೇಹಳ್ಳಿಯ ಶ್ರೀ ತರಳಬಾಳು ಶಾಖಾಮಠದ ಪರಮಪೂಜ್ಯ ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಕುಪ್ಪೂರು – ತಮ್ಮಡಿಹಳ್ಳಿಯ ವಿರಕ್ತಮಠದ ಅಧ್ಯಕ್ಷರಾದ ಪರಮಪೂಜ್ಯ ಡಾ. ಶ್ರೀ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಚಿವ ಈಶ್ವರ ಖಂಡ್ರೆ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಶಾಸಕ ಜ್ಯೋತಿ ಗಣೇಶ್, ಮಾಜಿ ಶಾಸಕ ಲಿಂಗೇಶ್ ಸೇರಿದಂತೆ ಅನೇಕ ಗಣ್ಯರು ಹಾಗೂ ನೊಳಂಬ ಲಿಂಗಾಯಿತ ಸಂಘದ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಟೌನ್ ಪೊಲೀಸ್ ಠಾಣೆ ಮುಂದೆ ಹಿಂದೂ ಪರ ಕಾರ್ಯಕರ್ತರ ದಿಢೀರ್ ಪ್ರತಿಭಟನೆ..!

ದೊಡ್ಡಬಳ್ಳಾಪುರ: ಟೌನ್ ಪೊಲೀಸ್ ಠಾಣೆ ಮುಂದೆ ಹಿಂದೂ ಪರ ಕಾರ್ಯಕರ್ತರ ದಿಢೀರ್ ಪ್ರತಿಭಟನೆ..!

ನಾಳೆ ನಡೆಯಲಿರುವ ಬೃಹತ್ ಶ್ರೀ ರಾಮ ಶೋಭಾಯಾತ್ರೆಗೆ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ತ್, ಬಜರಂಗಳದ ಕಾರ್ಯಕರ್ತರು ಹಾಗೂ ಹಿಂದೂ ಪರ ಕಾರ್ಯಕರ್ತರು (Hindu activists) ನಗರದ ಪೊಲೀಸ್ ಠಾಣೆ ಮುಂದೆ (Town

[ccc_my_favorite_select_button post_id="120525"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!