Give justice to the candidates in the case of KAS Prelims Reexamination

KAS ಪೂರ್ವಭಾವಿ ಮರುಪರೀಕ್ಷೆ ವಿಚಾರದಲ್ಲಿ ಅಭ್ಯರ್ಥಿಗಳಿಗೆ ನ್ಯಾಯ ನೀಡಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ಮತ್ತೊಂದು ಬಾರಿ ಡಿಸೆಂಬರ್ 29 ರಂದು ನಡೆದಿದೆ. ಇದರಲ್ಲಿ ಮತ್ತೊಮ್ಮೆ ಲೋಪದೋಷಗಳು ಕಂಡು ಬಂದಿದ್ದರಿಂದ ವಿಚಲಿತರಾಗಿರುವ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ಮರುಪರೀಕ್ಷೆಯಲ್ಲಿ ಕಂಡು ಬಂದ ಲೋಪದೋಷಗಳ ಬಗ್ಗೆ ಅಭ್ಯರ್ಥಿಗಳು ಪದೇ ಪದೆ ಅಳಲು ತೋಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೂ ಸಹ ಈ ಕುರಿತು ವರದಿ ಮಾಡಿವೆ. ಆದರೆ ಮರುಪರೀಕ್ಷೆ ನಡೆದು ಹದಿನೈದು ದಿನ ಕಳೆದರೂ ಈವರೆಗೆ ಸರ್ಕಾರವಾಗಲೀ, ಆಯೋಗವಾಗಲೀ, ಅಭ್ಯರ್ಥಿಗಳ ಆಕ್ಷೇಪಣೆಗಳಿಗೆ ಉತ್ತರ ನೀಡಿಲ್ಲ. ಲಕ್ಷಾಂತರ ಯುವ ಅಭ್ಯರ್ಥಿಗಳ ಭವಿಷ್ಯ ಡೋಲಾಯಮಾನವಾಗಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.

ಕೆಪಿಎಸ್ಸಿ ಪರೀಕ್ಷೆಯಲ್ಲಾಗಿರುವ ಎಡವಟ್ಟುಗಳು, ಅದರಲ್ಲೂ ಮುಖ್ಯವಾಗಿ ಭಾಷಾಂತರದಲ್ಲಿ ಆಗಿರುವ ಲೋಪದೋಷಗಳ ದುಷ್ಪರಿಣಾಮವನ್ನು ಗ್ರಾಮೀಣ ಭಾಗದ ಯುವಕ ಯುವತಿಯರು ಎದುರಿಸಬೇಕಾಗಿದೆ.

ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಕನ್ನಡ ಮಾಧ್ಯಮದಲ್ಲಿ ಶಾಲಾ, ಕಾಲೇಜು ವಿದ್ಯಾಭ್ಯಾಸ ಮಾಡಿರುವ ಸಾವಿರಾರು ಗ್ರಾಮೀಣ ಅಭ್ಯರ್ಥಿಗಳ ಕನಸು ನುಚ್ಚು ನೂರಾಗಿದೆ.

ಸರ್ಕಾರಿ ಅಧಿಕಾರಿಗಳಾಗಿ ಗ್ರಾಮೀಣ ಭಾಗದ ಜನರ ಸೇವೆ ಮಾಡಬೇಕು ಎಂಬ ಕನಸು ಕಟ್ಟಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವರ್ಷಗಟ್ಟಲೆ ಹಗಲಿರುಳು ಶ್ರಮಪಟ್ಟು ಪರೀಕ್ಷೆಗೆ ತಯಾರಿ ನಡೆಸಿದ ಅಭ್ಯರ್ಥಿಗಳ ಭವಿಷ್ಯ, ಕಾಂಗ್ರೆಸ್ ಸರ್ಕಾರದ ಎಡವಟ್ಟಿನಿಂದ ಕತ್ತಲೆಯಾಗಿದೆ.
ಇಂತಹ ಪರಿಸ್ಥಿತಿಯಲ್ಲಿ ಅಭ್ಯರ್ಥಿಗಳು ಬೇರೆ ದಾರಿ ಇಲ್ಲದೆ ಹೋರಾಟದ ಹಾದಿ ಹಿಡಿದಿದ್ದಾರೆ.

ಸರ್ಕಾರ ಮತ್ತೊಮ್ಮೆ ದೋಷರಹಿತವಾಗಿ ಮರುಪರೀಕ್ಷೆ ನಡೆಸಬೇಕು ಅಥವಾ ಮುಖ್ಯಪರೀಕ್ಷೆಗೆ ಹಾಲಿ ಇರುವ 1:15 ಅನುಪಾತದ ಬದಲು 1:50 ಅನುಪಾತದಲ್ಲಿ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಸರ್ಕಾರ ಅಭ್ಯರ್ಥಿಗಳನ್ನು ಕರೆಸಿ ಮಾತನಾಡಬೇಕಿತ್ತು. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕಿತ್ತು.

ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡುತ್ತೇವೆ, ಪ್ರಾಮಾಣಿಕ ಅಭ್ಯರ್ಥಿಗಳನ್ನು ಕೈ ಬಿಡುವುದಿಲ್ಲ ಎಂದು ಆಶ್ವಾಸನೆ ಕೊಟ್ಟು ಮನವೊಲಿಸಬೇಕಾಗಿತ್ತು. ಆದರೆ ಸರ್ಕಾರ ಇವ್ಯಾವುದನ್ನೂ ಮಾಡಿಲ್ಲ. ಎರಡೆರಡು ಬಾರಿ ಎಡವಟ್ಟು ಮಾಡಿದ್ದರೂ ತಪ್ಪೇ ನಡೆದಿಲ್ಲ ಎನ್ನುವ ಧೋರಣೆಯನ್ನು ಕಾಂಗ್ರೆಸ್ ಸರ್ಕಾರ ತೋರಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಣೆಗಾರಿಕೆಯ ಪ್ರಶ್ನೆ

ಒಂದು ಕಡೆ ಅಭ್ಯರ್ಥಿಗಳ ಭವಿಷ್ಯದ ಪ್ರಶ್ನೆಯಾದರೆ ಮತ್ತೊಂದು ಹೊಣೆಗಾರಿಕೆಯ ಪ್ರಶ್ನೆ. ಎರಡೆರಡು ಬಾರಿ ಪರೀಕ್ಷೆ ನಡೆಸಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ 25 ಕೋಟಿ ರೂಪಾಯಿಗೂ ಹೆಚ್ಚು ಹಣ ವೆಚ್ಚವಾಗಿದೆ. ಆದರೂ ಪರೀಕ್ಷೆ ದೋಷಮುಕ್ತವಾಗಿಲ್ಲವೆಂದರೆ ಇದಕ್ಕೆ ಯಾರು ಹೊಣೆ? ಇದಕ್ಕೆ ಹೊಣೆಯಾದವರ ವಿರುದ್ಧ ಸರ್ಕಾರ ಶಿಸ್ತು ಕ್ರಮ ಜರುಗಿಸಬೇಕಿತ್ತಲ್ಲವೇ? ಇದಕ್ಕೆ ಪ್ರಮುಖ ಕಾರಣರಾದ ಪರೀಕ್ಷಾ ನಿಯಂತ್ರಕರನ್ನು ಮುಂದುವರಿಸಲಾಗಿದೆ.

ಮೊದಲ ಬಾರಿ ಎಡವಟ್ಟಾದ ನಂತರ ಅಕ್ಟೋಬರ್‌ 23 ರಂದು ಅವರಿಗಿಂತ ಹಿರಿಯರಾದ ಅಧಿಕಾರಿಯನ್ನು ಜಂಟಿ ಪರೀಕ್ಷಾ ನಿಯಂತ್ರಕ ಹುದ್ದೆಗೆ ನೇಮಿಸಲಾಗಿತ್ತು. ಅವರು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲಿಲ್ಲ. ನಿನ್ನೆ ಮತ್ತೊಬ್ಬ ಅಧಿಕಾರಿಯನ್ನು ನೇಮಿಸಲಾಗಿದೆ. ಇದು ಸರ್ಕಾರಕ್ಕೆ ಕೆಪಿಎಸ್ಸಿ ನೇಮಕಾತಿ ಬಗ್ಗೆ ಇರುವ ಕಾಳಜಿ ಎಂದು ಆರ್‌.ಅಶೋಕ ಕಿಡಿಕಾರಿದ್ದಾರೆ.

ಒಟ್ಟು 384 ಹುದ್ದೆಗಳ ಪೈಕಿ 40 ಎಸಿ ಹುದ್ದೆ ಇದೆ. ಇದು ಇದುವರೆಗಿನ ಅತಿ ಹೆಚ್ಚು ಎಂಬ ದಾಖಲೆಯಿದೆ. ಆಡಳಿತದ ಆಯಕಟ್ಟಿನ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಪ್ರಕ್ರಿಯೆಯಲ್ಲಿ ಇರಬೇಕಾದ ಗಂಭೀರತೆಯಾಗಲೀ, ಜವಾಬ್ದಾರಿಯಾಗಲೀ, ಈ ಸರ್ಕಾರಕ್ಕೆ ಇದ್ದಂತೆ ಕಾಣುತ್ತಿಲ್ಲ.

ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯ ಒಟ್ಟಾರೆ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರಬೇಕು, ನ್ಯಾಯ ಸಮ್ಮತವಾಗಿರಬೇಕು ಮತ್ತು ಅರ್ಹರಿಗೆ ಮಾತ್ರ ಅವಕಾಶ ಸಿಗುವಂತಿರಬೇಕು ಎನ್ನುವುದು ನಮ್ಮ ಆಗ್ರಹ.

ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶ ಮಾಡಿ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!