Those who distorted DK Shivakumar's statement face legal trouble

KPCC ಅಧ್ಯಕ್ಷ ಸ್ಥಾನ ಮೀಡಿಯಾಗಳು ಕೊಡ್ತಾರ..?: ಡಿಸಿಎಂ ಡಿಕೆ ಶಿವಕುಮಾರ್ ಕೌಂಟರ್ Video ನೋಡಿ

ಬೆಂಗಳೂರು: “ಕೆಪಿಸಿಸಿ (KPCC) ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivarajkumar) ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ.

ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ? ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ” ಎಂದರು.

“ಪಕ್ಷದ ವಿಚಾರದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು.

ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ” ಎಂದು ತಿಳಿಸಿದರು.

ಮಾಧ್ಯಮಗಳ ಮುಂದೆ ಹೇಳಿಕೆಯಿಂದ ಪ್ರಯೋಜನವಿಲ್ಲ

“ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ.

ಇದು ಕೇವಲ ಕಾಂಗ್ರೆಸ್ ಮಾತ್ರವಲ್ಲ. ಬಿಜೆಪಿ, ಜೆಡಿಎಸ್, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾದರೂ ಪಕ್ಷದ ವಿಚಾರವನ್ನು ಆಂತರಿಕವಾಗಿ ಚರ್ಚೆ ಮಾಡಬೇಕು ಎಂದು ಹೇಳುತ್ತೇನೆ.

ನಾನು ಯಾವುದಾದರೂ ಹುದ್ದೆ ಬಯಸಿದರೆ ನೀವು (ಮಾಧ್ಯಮಗಳು) ಆ ಸ್ಥಾನ ನನಗೆ ಕೊಡಿಸುತ್ತೀರಾ? ಅಥವಾ ಈ ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರುತ್ತದೆ” ಎಂದು ಕೇಳಿದರು.

ಯಾರೇ ಇರಲಿ, ಹೋಗಲಿ ಪಕ್ಷ ಇರುತ್ತದೆ

“ಈ ಪಕ್ಷವನ್ನು ಕೇವಲ ಡಿಕೆ ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟು ನಮಗೆ ಅಧಿಕಾರ ನೀಡಿದ್ದಾರೆ.

ಇದನ್ನು ನಾವು ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳುತ್ತೇವೆ. ಇದು ಕಾರ್ಯಕರ್ತರ ಹಾಗೂ ಮತದಾರರ ಪಕ್ಷ. ಇದಕ್ಕೆ ತನ್ನದೇ ಆದ ದೊಡ್ಡ ಇತಿಹಾಸವಿದೆ. ಯಾರೇ ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಈ ಪಕ್ಷಕ್ಕೆ ಇದೆ. ಮಹಾತ್ಮಾ ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಅಧಿಕಾರವನ್ನು ತ್ಯಾಗ ಮಾಡಿದ್ದಾರೆ.

ಅಂಬೇಡ್ಕರ್ ಅವರು ಸಂವಿಧಾನ ಕೊಟ್ಟರು ಅವರು ಯಾವ ಅಧಿಕಾರ ಪಡೆದಿದ್ದಾರೆ? ನಾವು ಅವರನ್ನೆಲ್ಲ ಸ್ಮರಿಸಬೇಕು. ಹೀಗಾಗಿ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಪಕ್ಷ ಬಹಳ ಮುಖ್ಯ ಎಂದು ನಾನು ಬಹಳ ನಮ್ರತೆಯಿಂದ ಮನವಿ ಮಾಡುತ್ತೇನೆ.

ಯಾರಿಗಾದರೂ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಸಧ್ಯಕ್ಕೆ ನಾವು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆಯಲ್ಲಿದ್ದು, ಇದರ ಪರಿಶೀಲನೆಗೆ ಸುರ್ಜೆವಾಲ ಅವರು ಶುಕ್ರವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ನಿಮ್ಮ ಪ್ರಶ್ನೆಗಳು ಏನೇ ಇದ್ದರೂ ಅವರನ್ನು ಕೇಳಿ” ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನೆ ಮಾಡುವುದು ಸರಿಯಲ್ಲ

ಪಕ್ಷದ ಸಂಘಟನೆ ಕುಂಠಿತವಾಗಿದೆ, ಪಕ್ಷಕ್ಕೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿ ಎಂದು ಕೇಳಿದಾಗ, “ಈ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ನಾನಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು.

ಈ ವಿಚಾರವಾಗಿ ಅವರ ಬಳಿ ಕೇಳಿ. ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು” ಎಂದು ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ: ತೀವ್ರವಾದ ರೈತರ ಪ್ರತಿಭಟನೆ.. ಡಿಸಿ ಬರಬೇಕೆಂದು ಪಟ್ಟು, ರಸ್ತೆ ತಡೆಯ ವಾರ್ನಿಂಗ್| Video

ದೊಡ್ಡಬಳ್ಳಾಪುರ: ತೀವ್ರವಾದ ರೈತರ ಪ್ರತಿಭಟನೆ.. ಡಿಸಿ ಬರಬೇಕೆಂದು ಪಟ್ಟು, ರಸ್ತೆ ತಡೆಯ ವಾರ್ನಿಂಗ್|

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಬಿರು ಬಿಸಿಲಿನಲ್ಲಿಯೂ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

[ccc_my_favorite_select_button post_id="120432"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!