News update: Saif Ali Khan knife stabbing case

News update: ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಪ್ರಕರಣ

ನವದೆಹಲಿ, (News update): ಇಂದು ಬೆಳಗಿನ ಜಾವ ಸುಮಾರು 2.30 ಕ್ಕೆ ದುಷ್ಕರ್ಮಿಯಿಂದ ಇರಿತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್​ ಖ್ಯಾತ ನಟ ಸೈಫ್ ಅಲಿ ಖಾನ್ (SaifAliKhan) ಆರೋಗ್ಯ ಸ್ಥಿರವಾಗಿದೆ.

ಡಾಕ್ಟರ್ ಉತ್ತಮಣಿ ಹೇಳಿದ್ ಇಷ್ಟು

ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಆಪರೇಷನ್ ಗಳು ನಡೆಸಲಾಗಿದೆ. ಪ್ರಸ್ತುತ ಮಾಹಿತಿ ಅನ್ವಯ​ ನಟ ಸೈಫ್ ಅಲಿ ಖಾನ್ ಆರೋಗ್ಯ ಸ್ಥಿರವಾಗಿದ್ದು, ಐಸಿಯುನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಸಿಓಓ ಡಾ ಉತ್ತಮಣಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸೈಫ್ ಅವರಿಗೆ ಚಾಕು ಇರಿತದ ಒಟ್ಟು 6 ಗಾಯಗಳಾಗಿದ್ದು ಅದರಲ್ಲಿ ಎರಡು ಚಿಕ್ಕ ಪ್ರಮಾಣದವು, ಎರಡು ಮಧ್ಯಂತರ ಮತ್ತು ಉಳಿದೆರಡು ಆಳವಾದ ಗಾಯಗಳು, ಅವರ ಬೆನ್ನಿಂದ ಸುಮಾರು ಎರಡೂವರೆ ಇಂಚು ಉದ್ದವಿರುವ ಚಾಕುವಿನ ತುಂಡನ್ನು ಸರ್ಜರಿ ಮೂಲಕ ತೆಗೆಯಲಾಗಿದೆ ಎಂದು ವೈದ್ಯ ಹೇಳಿದ್ದಾರೆ.

ಶಂಕಿತನ ಫೋಟೋ ಬಿಡುಗಡೆ

ಇದರ ಬೆನ್ನಲ್ಲೇ ಬಾಲಿವುಡ್ ನಟ ಸೈಫ್ ಅಲಿ ಖಾನ್​ ಅವರ ಮನೆಗೆ ನುಗ್ಗಿ, ಚಾಕು ಇರಿದ ಪ್ರಕರಣದಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳನ್ನು ಮುಂಬೈ ಪೊಲೀಸರು ಗುರುತಿಸಿದ್ದಾರೆ. ಆ ಪೈಕಿ ಓರ್ವ ಶಂಕಿತನ ಫೋಟೋ ಮುಂಬೈ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ವೈರಲ್ ಆಗಿದೆ. ಸೈಫ್ ಕುಟುಂಬ ವಾಸವಾಗಿರುವ ಅಪಾರ್ಟ್​ಮೆಂಟ್​ನ ಮೆಟ್ಟಿಲುಗಳನ್ನು ಹತ್ತಿ ಬರುವಾಗ ಸಿಸಿಟಿವಿಯಲ್ಲಿ ಶಂಕಿತನ ವಿಡಿಯೋ ಸೆರೆಯಾಗಿದೆ.

ಶಂಕಿತ ವ್ಯಕ್ತಿಯು ಟಿ-ಶರ್ಟ್​ ಮತ್ತು ಜೀನ್ಸ್ ಧರಿಸಿದ್ದಾನೆ. ಆತ ಯಾರು? ಆತನ ಉದ್ದೇಶ ಏನಾಗಿತ್ತು ಎಂಬಿತ್ಯಾದಿ ವಿಚಾರಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದರೋಡೆಕೋರರು ನುಗ್ಗಿದ್ದನ್ನು ಮೊದಲು ನೋಡಿದ್ದು ಸೈಫ್​ ಮನೆಯ ಕೆಲಸದವರು. ಕೂಡಲೇ ಅವರು ಸೈಫ್​ ಅಲಿ ಖಾನ್​ ಅವರನ್ನು ಎಚ್ಚರಿಸಿದರು.

ಈ ವೇಳೆ ಆಕ್ರಮಣ ಮಾಡಿದ ದರೋಡೆಕೋರನು ಸೈಫ್ ಅಲಿ ಖಾನ್​ಗೆ 6 ಬಾರಿ ಚಾಕುವಿನಿಂದ ತಿವಿದಿದ್ದಾನೆ. ಬೆನ್ನು, ಕುತ್ತಿಗೆ, ಕೈ ಮುಂತಾದ ಭಾಗಗಳಿಗೆ ಗಾಯಗೊಳಿಸಿದ್ದಾನೆ. ಕೂಡಲೇ ಸೈಫ್ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆಟೋದಲ್ಲಿ ಆಸ್ಪತ್ರೆಗೆ..!

ಚಾಕು ಇರಿತದಿಂದ ಗಂಭೀರ ಗಾಯಗೊಂಡಿದ್ದ ಬಾಲಿವುಡ್ ನಟ ಸೈಫ್ ಆಲಿ ಖಾನ್ ಅವರನ್ನು ಪುತ್ರ ಆಟೋದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅವರ ಬಳಿ ಐಷಾರಾಮಿ ಕಾರುಗಳು ಇದ್ದರೂ ನಟನನ್ನು ಆಟೋದಲ್ಲಿ ಕರೆದೊಯ್ದಿದ್ದು ಯಾಕೆ ಎಂಬ ಪ್ರಶ್ನೆ ಎದ್ದಿದೆ.

ಹೌದು. ಸ್ಟಾರ್ ಹೀರೋ ಆಗಿರುವ ಸೈಫ್ ಬಳಿ ಹಲವು ಐಷಾರಾಮಿ ಕಾರುಗಳು ಇವೆ. ಆದರೆ ಈ ಘಟನೆ ವೇಳೆ ತಂದೆಯನ್ನು ಆಸ್ಪತ್ರೆಗೆ ಸೇರಿಸಲು ಅವರ ಪುತ್ರ ಕಾರಿನ ಬದಲು ಆಟೋ ಬಳಸಿದ್ದಾರೆ.

ಅಪರಿಚಿತನ ದಾಳಿಯಿಂದ ರಕ್ತದ ಮಡುವಿನಲ್ಲಿದ್ದ ತಂದೆಯನ್ನು ನೋಡಿ ಪುತ್ರ ಇಬ್ರಾಹಿಂ ಶಾಕ್ ಆಗಿದ್ದಾರೆ. ತಕ್ಷಣ ಅವರು ಕಾರಿನಲ್ಲಿ ತಂದೆಯನ್ನು ಆಸ್ಪತ್ರೆಯಿಂದ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದರು. ಆದರೆ ಯಾವ ಕಾರುಗಳೂ ಸಿದ್ಧವಿರಲಿಲ್ಲ ಎನ್ನಲಾಗಿದೆ.

ಇನ್ನು ಕಾರಿಗೆ ಕಾಯುತ್ತಿದ್ದಾಗ ಇನ್ನೇನೋ ಅನಾಹುತ ಸಂಭವಿಸಬಹುದು ಎಂದು ಅರಿತ ಇಬ್ರಾಹಿಂ, ಮನೆಯ ಹೊರಗಡೆ ತೆರಳಿ ಆಟೋದಲ್ಲಿ ಕರೆದುಕೊಂಡು ಹೋಗಿದ್ದಾರೆ.

ಸೈಫ್ ಅಲಿ ಖಾನ್ ವಾಸವಿರುವ ಸದ್ಗುರು ಶರಣ್ ಅಪಾರ್ಟ್‌ಮೆಂಟ್ ನಿಂದ ಲೀಲಾವತಿ ಆಸ್ಪತ್ರೆ ಕೇವಲ 1.6 ಕಿ.ಮೀ. ದೂರದಲ್ಲಿದೆ. ಹೀಗಾಗಿ ಸರಿಯಾದ ಸಮಯಕ್ಕೆ ಆಟೋ ಸಿಕ್ಕಿದ್ದರಿಂದ ಅವರು ಆಸ್ಪತ್ರೆ ಸೇರಲು ಸಹಕಾರಿ ಆಯಿತು.

ಸದ್ಯ ಸೈಫ್ ಅವರಿಗೆ ಸರ್ಜರಿ ಪೂರ್ಣಗೊಂಡಿದ್ದು, ಚೇತರಿಸಿಕೊಳ್ಳುತ್ತಿದ್ದು, ಪ್ರಕರಣದ ಬಗ್ಗೆ ಮುಂಬೈ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!