News update: Saif Ali Khan knife stabbing case

News update: ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಪ್ರಕರಣ

ನವದೆಹಲಿ, (News update): ಇಂದು ಬೆಳಗಿನ ಜಾವ ಸುಮಾರು 2.30 ಕ್ಕೆ ದುಷ್ಕರ್ಮಿಯಿಂದ ಇರಿತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್​ ಖ್ಯಾತ ನಟ ಸೈಫ್ ಅಲಿ ಖಾನ್ (SaifAliKhan) ಆರೋಗ್ಯ ಸ್ಥಿರವಾಗಿದೆ.

ಡಾಕ್ಟರ್ ಉತ್ತಮಣಿ ಹೇಳಿದ್ ಇಷ್ಟು

ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಆಪರೇಷನ್ ಗಳು ನಡೆಸಲಾಗಿದೆ. ಪ್ರಸ್ತುತ ಮಾಹಿತಿ ಅನ್ವಯ​ ನಟ ಸೈಫ್ ಅಲಿ ಖಾನ್ ಆರೋಗ್ಯ ಸ್ಥಿರವಾಗಿದ್ದು, ಐಸಿಯುನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಸಿಓಓ ಡಾ ಉತ್ತಮಣಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸೈಫ್ ಅವರಿಗೆ ಚಾಕು ಇರಿತದ ಒಟ್ಟು 6 ಗಾಯಗಳಾಗಿದ್ದು ಅದರಲ್ಲಿ ಎರಡು ಚಿಕ್ಕ ಪ್ರಮಾಣದವು, ಎರಡು ಮಧ್ಯಂತರ ಮತ್ತು ಉಳಿದೆರಡು ಆಳವಾದ ಗಾಯಗಳು, ಅವರ ಬೆನ್ನಿಂದ ಸುಮಾರು ಎರಡೂವರೆ ಇಂಚು ಉದ್ದವಿರುವ ಚಾಕುವಿನ ತುಂಡನ್ನು ಸರ್ಜರಿ ಮೂಲಕ ತೆಗೆಯಲಾಗಿದೆ ಎಂದು ವೈದ್ಯ ಹೇಳಿದ್ದಾರೆ.

ಶಂಕಿತನ ಫೋಟೋ ಬಿಡುಗಡೆ

ಇದರ ಬೆನ್ನಲ್ಲೇ ಬಾಲಿವುಡ್ ನಟ ಸೈಫ್ ಅಲಿ ಖಾನ್​ ಅವರ ಮನೆಗೆ ನುಗ್ಗಿ, ಚಾಕು ಇರಿದ ಪ್ರಕರಣದಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳನ್ನು ಮುಂಬೈ ಪೊಲೀಸರು ಗುರುತಿಸಿದ್ದಾರೆ. ಆ ಪೈಕಿ ಓರ್ವ ಶಂಕಿತನ ಫೋಟೋ ಮುಂಬೈ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ವೈರಲ್ ಆಗಿದೆ. ಸೈಫ್ ಕುಟುಂಬ ವಾಸವಾಗಿರುವ ಅಪಾರ್ಟ್​ಮೆಂಟ್​ನ ಮೆಟ್ಟಿಲುಗಳನ್ನು ಹತ್ತಿ ಬರುವಾಗ ಸಿಸಿಟಿವಿಯಲ್ಲಿ ಶಂಕಿತನ ವಿಡಿಯೋ ಸೆರೆಯಾಗಿದೆ.

ಶಂಕಿತ ವ್ಯಕ್ತಿಯು ಟಿ-ಶರ್ಟ್​ ಮತ್ತು ಜೀನ್ಸ್ ಧರಿಸಿದ್ದಾನೆ. ಆತ ಯಾರು? ಆತನ ಉದ್ದೇಶ ಏನಾಗಿತ್ತು ಎಂಬಿತ್ಯಾದಿ ವಿಚಾರಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದರೋಡೆಕೋರರು ನುಗ್ಗಿದ್ದನ್ನು ಮೊದಲು ನೋಡಿದ್ದು ಸೈಫ್​ ಮನೆಯ ಕೆಲಸದವರು. ಕೂಡಲೇ ಅವರು ಸೈಫ್​ ಅಲಿ ಖಾನ್​ ಅವರನ್ನು ಎಚ್ಚರಿಸಿದರು.

ಈ ವೇಳೆ ಆಕ್ರಮಣ ಮಾಡಿದ ದರೋಡೆಕೋರನು ಸೈಫ್ ಅಲಿ ಖಾನ್​ಗೆ 6 ಬಾರಿ ಚಾಕುವಿನಿಂದ ತಿವಿದಿದ್ದಾನೆ. ಬೆನ್ನು, ಕುತ್ತಿಗೆ, ಕೈ ಮುಂತಾದ ಭಾಗಗಳಿಗೆ ಗಾಯಗೊಳಿಸಿದ್ದಾನೆ. ಕೂಡಲೇ ಸೈಫ್ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆಟೋದಲ್ಲಿ ಆಸ್ಪತ್ರೆಗೆ..!

ಚಾಕು ಇರಿತದಿಂದ ಗಂಭೀರ ಗಾಯಗೊಂಡಿದ್ದ ಬಾಲಿವುಡ್ ನಟ ಸೈಫ್ ಆಲಿ ಖಾನ್ ಅವರನ್ನು ಪುತ್ರ ಆಟೋದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅವರ ಬಳಿ ಐಷಾರಾಮಿ ಕಾರುಗಳು ಇದ್ದರೂ ನಟನನ್ನು ಆಟೋದಲ್ಲಿ ಕರೆದೊಯ್ದಿದ್ದು ಯಾಕೆ ಎಂಬ ಪ್ರಶ್ನೆ ಎದ್ದಿದೆ.

ಹೌದು. ಸ್ಟಾರ್ ಹೀರೋ ಆಗಿರುವ ಸೈಫ್ ಬಳಿ ಹಲವು ಐಷಾರಾಮಿ ಕಾರುಗಳು ಇವೆ. ಆದರೆ ಈ ಘಟನೆ ವೇಳೆ ತಂದೆಯನ್ನು ಆಸ್ಪತ್ರೆಗೆ ಸೇರಿಸಲು ಅವರ ಪುತ್ರ ಕಾರಿನ ಬದಲು ಆಟೋ ಬಳಸಿದ್ದಾರೆ.

ಅಪರಿಚಿತನ ದಾಳಿಯಿಂದ ರಕ್ತದ ಮಡುವಿನಲ್ಲಿದ್ದ ತಂದೆಯನ್ನು ನೋಡಿ ಪುತ್ರ ಇಬ್ರಾಹಿಂ ಶಾಕ್ ಆಗಿದ್ದಾರೆ. ತಕ್ಷಣ ಅವರು ಕಾರಿನಲ್ಲಿ ತಂದೆಯನ್ನು ಆಸ್ಪತ್ರೆಯಿಂದ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದರು. ಆದರೆ ಯಾವ ಕಾರುಗಳೂ ಸಿದ್ಧವಿರಲಿಲ್ಲ ಎನ್ನಲಾಗಿದೆ.

ಇನ್ನು ಕಾರಿಗೆ ಕಾಯುತ್ತಿದ್ದಾಗ ಇನ್ನೇನೋ ಅನಾಹುತ ಸಂಭವಿಸಬಹುದು ಎಂದು ಅರಿತ ಇಬ್ರಾಹಿಂ, ಮನೆಯ ಹೊರಗಡೆ ತೆರಳಿ ಆಟೋದಲ್ಲಿ ಕರೆದುಕೊಂಡು ಹೋಗಿದ್ದಾರೆ.

ಸೈಫ್ ಅಲಿ ಖಾನ್ ವಾಸವಿರುವ ಸದ್ಗುರು ಶರಣ್ ಅಪಾರ್ಟ್‌ಮೆಂಟ್ ನಿಂದ ಲೀಲಾವತಿ ಆಸ್ಪತ್ರೆ ಕೇವಲ 1.6 ಕಿ.ಮೀ. ದೂರದಲ್ಲಿದೆ. ಹೀಗಾಗಿ ಸರಿಯಾದ ಸಮಯಕ್ಕೆ ಆಟೋ ಸಿಕ್ಕಿದ್ದರಿಂದ ಅವರು ಆಸ್ಪತ್ರೆ ಸೇರಲು ಸಹಕಾರಿ ಆಯಿತು.

ಸದ್ಯ ಸೈಫ್ ಅವರಿಗೆ ಸರ್ಜರಿ ಪೂರ್ಣಗೊಂಡಿದ್ದು, ಚೇತರಿಸಿಕೊಳ್ಳುತ್ತಿದ್ದು, ಪ್ರಕರಣದ ಬಗ್ಗೆ ಮುಂಬೈ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!