ಮುಂಬೈ: ಭೋಜ್ ಪುರಿ ಸಿನಿರಂಗಕ್ಕೆ ಬರಸಿಡಿಲು ಬಡಿದ್ದು, ಪ್ರಸಿದ್ಧ ಭೋಜ್ ಪುರಿ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ಸುದೀಪ್ ಪಾಂಡೆ (Sudip Pandey) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕುಟುಂಬದ ಆಪ್ತ ಮೂಲದಿಂದ ಬಂದ ಮಾಹಿತಿಯ ಪ್ರಕಾರ, ನಟ ಸುದೀಪ್ ಬುಧವಾರ ಹೃದಯಾಘಾತದಿಂದ ನಿಧನರಾದರು.
30 ರ ಹರೆಯದ ನಟ, ದೀರ್ಘಕಾಲದವರೆಗೆ ಭೋಜ್ಪುರಿ ಚಲನಚಿತ್ರೋದ್ಯಮದಲ್ಲಿ ನಟ ಮತ್ತು ನಿರ್ಮಾಪಕರಾಗಿ ಸಕ್ರಿಯರಾಗಿದ್ದರು ಎಂದು India.com ವರದಿ ಮಾಡಿದೆ.
ಮುಂಬೈನಲ್ಲಿ ಚಿತ್ರೀಕರಣದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಅವರ ಆಕಸ್ಮಿಕ ನಿಧನ ಭೋಜರಿ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.
ನಟನೆ, ನಿರ್ಮಾಣದ ಜೊತೆ ರಾಜಕೀಯದಲ್ಲೂ ಸಕ್ರಿಯರಾಗಿದ್ದರು. ಇತ್ತೀಚೆಗೆ ಸಿನಿಮಾ ನಿರ್ಮಾಣದಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದರು.
ಸುದೀಪ್ ಪಾಂಡೆ ನಿಧನ ವಾರ್ತೆ ಅವರ ಅಭಿಮಾನಿಗಳಿಗೆ ಹಾಗೂ ಭೋಬ್ಬುರಿ ಇಂಡಸ್ಟ್ರಿಗೆ ಬರಸಿಡಿಲು ಬಡಿದಂತೆ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಅವರ ಆತ್ಮಕ್ಕೆ ಶಾಂತಿ ಕೋರಲಾಗುತ್ತಿದೆ.
ಜನವರಿ 5ರಂದು ಸುದೀಪ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಅವರಿಗೆ ಅಭಿಮಾನಿಗಳು ಶುಭಾಶಯ ಕೋರಿದ್ದರು.
ಜನ್ಮದಿನಾಚರಣೆ ಮುಗಿಸಿದ ಬಳಿಕ ಅವರು ಶೂಟಿಂಗ್ನಲ್ಲಿ ತೊಡಗಿಕೊಂಡಿದ್ದರು. ಅವರು ತಮ್ಮ ಮುಂದಿನ ಚಿತ್ರದ ಶೋಟಿಂಗಾಗಿ ಮುಂಬೈಗೆ ಬಂದಿದ್ದರು. ಅವರು ನಟಿಸುವಾಗಲೇ ಹೃದಯಾಘಾತ ಆಗಿದೆ ಎನ್ನಲಾಗಿದೆ.