Sadhvi Harsha Richaria tearfully announced her departure from the Mahakumbha Mela

ಕಣ್ಣೀರಿಡುತ್ತಲೇ ಮಹಾಕುಂಭ ಮೇಳ ತೊರೆಯುವುದಾಗಿ ಘೋಷಿಸಿದ ಸಾಧ್ವಿ ಹರ್ಷಾ ರಿಚಾರಿಯಾ..!| Video Harsha Richaria

ಪ್ರಯಾಗರಾಜ್: 2025 ರ ಮಹಾಕುಂಭ ಮೇಳದಲ್ಲಿ ತನ್ನ ವೇಷಭೂಷಣದಿಂದ ಗಮನ ಸೆಳೆದಿದ್ದ ಸಾಧ್ವಿ ಹರ್ಷಾ ರಿಚಾರಿಯಾ (Harsha Richaria) ಅವರು ಕಣ್ಣೀರಿಟ್ಟಿದ್ದು, ಕುಂಭಮೇಳವನ್ನು ಅರ್ಧದಲ್ಲೇ ತೊರೆಯುವುದಾಗಿ ಘೋಷಿಸಿದ್ದಾರೆ.

ಸಾಧ್ವಿ ಹರ್ಷಾ ರಿಚಾರಿಯಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್‌ಗಳು ಹಾಗೂ ನೆಗೆಟಿವ್ ಕಮೆಂಟ್‌ಗಳಿಂದಾಗಿ ಅತ್ಯಂತ ಇರುಸು ಮುರಿಸಿಗೆ ಒಳಪಟ್ಟಿದ್ದಾರೆ.

ಇದರಿಂದ ಬೇಸತ್ತಿರುವ ಅವರು ಕುಂಭಮೇಳದಿಂದ ನಿರ್ಗಮಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಟ್ರೋಲರ್‌ಗಳ ಟೀಕೆಗಳಿಂದಾಗಿ ಇಲ್ಲಿಂದ ಹಿಂದಿರುಗಬೇಕಾಗಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಇದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಬಿಕ್ಕಿ ಬಿಕ್ಕಿ ಅಳುವುದು ಕಂಡುಬಂದಿದೆ.

ಟ್ರೋಲಿಗರ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ನಾಚಿಕೆಯಾಗಬೇಕು ಅವರಿಗೆ, ನನ್ನನ್ನು ಕುಂಭಮೇಳದಲ್ಲಿ ಇರಲು ಬಿಡಲಿಲ್ಲ. ನನ್ನದು ಏನೂ ತಪ್ಪಿಲ್ಲದಿದ್ದರೂ ನನ್ನ ಮೇಲೆ ಟೀಕೆ ಮಾಡಿದರು.

ಈಗ ನನಗೆ ಇಲ್ಲಿ ನಿಲ್ಲಲು ಸಾಧ್ಯವಾಗುತ್ತಿಲ್ಲ. ಜೀವನದಲ್ಲೇ ಒಮ್ಮೆ ಬರುವ ಮಹಾಕುಂಭ ಮೇಳವನ್ನು ನನ್ನಿಂದ ಕಸಿದುಕೊಂಡಿದ್ದೀರಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸನಾತನ ಸಂಸ್ಥೆಗೆ ಸೇರಲು ಎಲ್ಲವನ್ನೂ ತ್ಯಾಗ ಮಾಡಬೇಕೇ? ನಾನು ಸಾದ್ವಿ ಸಂತ ಅಥವಾ ಸನ್ಯಾಸಿ ಎಂದೂ ಹೇಳಿಲ್ಲ. ನನಗೆ ದೇವರನ್ನು ಪೂಜಿಸುವುದರಲ್ಲಿ ಒಳ್ಳೆಯ ಅನುಭವ ಸಿಗುತ್ತದೆ. ಆದರೆ ನನ್ನ ಮದುವೆ ಮತ್ತು ಮಕ್ಕಳು ಟ್ರೋಲಿಗರಿಗೆ ದೊಡ್ಡ ಸಮಸ್ಯೆಯಾಗಿಬಿಟ್ಟಿದೆ.

ವೃತ್ತಿಯಿಂದ ವಿರಾಮ ತೆಗೆದುಕೊಂಡು ಧರ್ಮದ ಹಾದಿ ಹಿಡಿಯಲು ನಿರ್ಧರಿಸಿದ್ದೇನೆ. ಪಾಶ್ಚಿಮಾತ್ಯ ಸಂಸ್ಕೃತಿ ಬಿಟ್ಟು ಸನಾತನ ಸಂಸ್ಕೃತಿಗೆ ಬರುವುದು ಅಪರಾಧವೇ ಎಂದು ಪ್ರಶ್ನಿಸಿದರು.

ಈಗ ನಾನು ಇಲ್ಲಿಂದ ಎರಡು-ಮೂರು ದಿನಗಳಲ್ಲಿ ಹೊರಡಬೇಕಾಗಿದೆ. ನಾನು ಒಂದು ತಿಂಗಳ ಕಾಲ ಮಹಾಕುಂಭಕ್ಕೆ ಬಂದಿದ್ದೆ. ಆದರೆ ನನಗೆ ಇಲ್ಲಿ ತುಂಬಾ ಅವಮಾನವಾಗಿದೆ.

ಈಗ ಇಲ್ಲಿಂದ ನಾನು ಉತ್ತರಾಖಂಡಕ್ಕೆ ಹಿಂತಿರುಗುತ್ತೇನೆ. ಅಲ್ಲಿ ನನ್ನ ಮನೆಯೂ ಇದೆ ಎಂದು ತಿಳಿಸಿದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!