Sadhvi Harsha Richaria tearfully announced her departure from the Mahakumbha Mela

ಕಣ್ಣೀರಿಡುತ್ತಲೇ ಮಹಾಕುಂಭ ಮೇಳ ತೊರೆಯುವುದಾಗಿ ಘೋಷಿಸಿದ ಸಾಧ್ವಿ ಹರ್ಷಾ ರಿಚಾರಿಯಾ..!| Video Harsha Richaria

ಪ್ರಯಾಗರಾಜ್: 2025 ರ ಮಹಾಕುಂಭ ಮೇಳದಲ್ಲಿ ತನ್ನ ವೇಷಭೂಷಣದಿಂದ ಗಮನ ಸೆಳೆದಿದ್ದ ಸಾಧ್ವಿ ಹರ್ಷಾ ರಿಚಾರಿಯಾ (Harsha Richaria) ಅವರು ಕಣ್ಣೀರಿಟ್ಟಿದ್ದು, ಕುಂಭಮೇಳವನ್ನು ಅರ್ಧದಲ್ಲೇ ತೊರೆಯುವುದಾಗಿ ಘೋಷಿಸಿದ್ದಾರೆ.

ಸಾಧ್ವಿ ಹರ್ಷಾ ರಿಚಾರಿಯಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್‌ಗಳು ಹಾಗೂ ನೆಗೆಟಿವ್ ಕಮೆಂಟ್‌ಗಳಿಂದಾಗಿ ಅತ್ಯಂತ ಇರುಸು ಮುರಿಸಿಗೆ ಒಳಪಟ್ಟಿದ್ದಾರೆ.

ಇದರಿಂದ ಬೇಸತ್ತಿರುವ ಅವರು ಕುಂಭಮೇಳದಿಂದ ನಿರ್ಗಮಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಟ್ರೋಲರ್‌ಗಳ ಟೀಕೆಗಳಿಂದಾಗಿ ಇಲ್ಲಿಂದ ಹಿಂದಿರುಗಬೇಕಾಗಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಇದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಬಿಕ್ಕಿ ಬಿಕ್ಕಿ ಅಳುವುದು ಕಂಡುಬಂದಿದೆ.

ಟ್ರೋಲಿಗರ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ನಾಚಿಕೆಯಾಗಬೇಕು ಅವರಿಗೆ, ನನ್ನನ್ನು ಕುಂಭಮೇಳದಲ್ಲಿ ಇರಲು ಬಿಡಲಿಲ್ಲ. ನನ್ನದು ಏನೂ ತಪ್ಪಿಲ್ಲದಿದ್ದರೂ ನನ್ನ ಮೇಲೆ ಟೀಕೆ ಮಾಡಿದರು.

ಈಗ ನನಗೆ ಇಲ್ಲಿ ನಿಲ್ಲಲು ಸಾಧ್ಯವಾಗುತ್ತಿಲ್ಲ. ಜೀವನದಲ್ಲೇ ಒಮ್ಮೆ ಬರುವ ಮಹಾಕುಂಭ ಮೇಳವನ್ನು ನನ್ನಿಂದ ಕಸಿದುಕೊಂಡಿದ್ದೀರಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸನಾತನ ಸಂಸ್ಥೆಗೆ ಸೇರಲು ಎಲ್ಲವನ್ನೂ ತ್ಯಾಗ ಮಾಡಬೇಕೇ? ನಾನು ಸಾದ್ವಿ ಸಂತ ಅಥವಾ ಸನ್ಯಾಸಿ ಎಂದೂ ಹೇಳಿಲ್ಲ. ನನಗೆ ದೇವರನ್ನು ಪೂಜಿಸುವುದರಲ್ಲಿ ಒಳ್ಳೆಯ ಅನುಭವ ಸಿಗುತ್ತದೆ. ಆದರೆ ನನ್ನ ಮದುವೆ ಮತ್ತು ಮಕ್ಕಳು ಟ್ರೋಲಿಗರಿಗೆ ದೊಡ್ಡ ಸಮಸ್ಯೆಯಾಗಿಬಿಟ್ಟಿದೆ.

ವೃತ್ತಿಯಿಂದ ವಿರಾಮ ತೆಗೆದುಕೊಂಡು ಧರ್ಮದ ಹಾದಿ ಹಿಡಿಯಲು ನಿರ್ಧರಿಸಿದ್ದೇನೆ. ಪಾಶ್ಚಿಮಾತ್ಯ ಸಂಸ್ಕೃತಿ ಬಿಟ್ಟು ಸನಾತನ ಸಂಸ್ಕೃತಿಗೆ ಬರುವುದು ಅಪರಾಧವೇ ಎಂದು ಪ್ರಶ್ನಿಸಿದರು.

ಈಗ ನಾನು ಇಲ್ಲಿಂದ ಎರಡು-ಮೂರು ದಿನಗಳಲ್ಲಿ ಹೊರಡಬೇಕಾಗಿದೆ. ನಾನು ಒಂದು ತಿಂಗಳ ಕಾಲ ಮಹಾಕುಂಭಕ್ಕೆ ಬಂದಿದ್ದೆ. ಆದರೆ ನನಗೆ ಇಲ್ಲಿ ತುಂಬಾ ಅವಮಾನವಾಗಿದೆ.

ಈಗ ಇಲ್ಲಿಂದ ನಾನು ಉತ್ತರಾಖಂಡಕ್ಕೆ ಹಿಂತಿರುಗುತ್ತೇನೆ. ಅಲ್ಲಿ ನನ್ನ ಮನೆಯೂ ಇದೆ ಎಂದು ತಿಳಿಸಿದರು.

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!