Fake grama one plague report in Doddaballapur.. Officers in the field

ದೊಡ್ಡಬಳ್ಳಾಪುರದಲ್ಲಿ ನಕಲಿ Grama one ಹಾವಳಿ ವರದಿ.‌. ಫೀಲ್ಡಿಗಿಳಿದ ಅಧಿಕಾರಿಗಳು

ದೊಡ್ಡಬಳ್ಳಾಪುರ: ನಕಲಿ Grama one ಹಾವಳಿ ಹಿನ್ನೆಲೆಯಲ್ಲಿ ಗ್ರಾಮ ಒನ್ ಅಧಿಕಾರಿಗಳು ಬೆಳ್ಳಂಬೆಳಗ್ಗೆಯೇ ದೊಡ್ಡಬಳ್ಳಾಪುರಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Grama one ಜಿಲ್ಲಾ ವ್ಯವಸ್ಥಾಪಕ ಪ್ರೇಮ್ ಕುಮಾರ್ ಹಾಗೂ ಕೋ ಆರ್ಡಿನೇಟರ್ ಸ್ವಾಮಿ ನೇತೃತ್ವದ ತಂಡ ನಕಲಿ ಗ್ರಾಮ ಒನ್ ಕೇಂದ್ರಗಳ ಪರಿಶೀಲನೆ ಕಾರ್ಯ ನಡೆಸಿದರು.

ತಹಶೀಲ್ದಾರ್ ಅನುಮತಿ ಪಡೆದು, ನಗರದ ಪ್ರಮುಖ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಕಾರ್ಯ ಆರಂಭಿಸಿದರು, ಐಡಿ ದುರುಪಯೋಗ, Grama one ಅಲ್ಲದಿದ್ದರು ಗ್ರಾಮ ಒನ್ ಹೆಸರಲ್ಲಿ ಕೇಂದ್ರ ಸ್ಥಾಪನೆ, ಬೇರೆ ತಾಲೂಕಿನ ಐಡಿ ದುರ್ಬಳಕೆ ಮುಂತಾದ ಆರೋಪಗಳ ಕುರಿತು ತನಿಖೆ ನಡೆಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ Grama one ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕ ಪ್ರೇಮ್ ಕುಮಾರ್, ಗ್ರಾಮ ಒನ್ ಹೆಸರಲ್ಲಿ ನಕಲಿ ಕೇಂದ್ರಗಳಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಯಿತು.

ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಮುಂತಾದ ಯಾವುದೇ ದೂರುಗಳಿದ್ದರೆ ಸಾರ್ವಜನಿಕರು ನೇರವಾಗಿ ದೂರು ನೀಡಬಹುದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಕಲಿ Grama one ಕೇಂದ್ರಕ್ಕೆ ಅವಕಾಶವಿಲ್ಲ. ಆ ರೀತಿ ಕಂಡುಬಂದಲ್ಲಿ ನೇರವಾಗಿ ದೂರು ನೀಡಬಹುದಾಗಿದ್ದು, ಕೂಡಲೇ ಕಾನೂನು ಕ್ರಮಕೈಗೊಳ್ಳಲಾಗುವುದು.

ಅಲ್ಲದೆ ಗ್ರಾಮ ಒನ್ ಕೇಂದ್ರಗಳಿಗೆ ತೊಂದರೆಯಾಗದಂತೆ ಮತ್ತೊಂದು ಕೇಂದ್ರ ತೆರೆಯಲು ನಿರ್ದಿಷ್ಟ ದೂರವನ್ನು ಪಾಲಿಸುವುದು ಕಡ್ಡಾಯವಾಗಿದೆ.

ಇಂದು ನಡೆಸಲಾದ ಪರಿಶೀಲನೆಯಲ್ಲಿ ಯಾವುದೇ ಐಡಿ ಬದಲಾವಣೆ ಕುರಿತು ಕಂಡು ಬಂದಿಲ್ಲ.. ಆದಾಗ್ಯೂ ಹಲವು ಕೇಂದ್ರಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಪ್ರೇಮ್ ಕುಮಾರ್ ತಿಳಿಸಿದ್ದಾರೆ.

ಹರಿತಲೇಖನಿ ವರದಿ

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗ್ರಾಮ್ ಒನ್ (Grama one) ಅಗಿದ್ದು, ಸರ್ಕಾರದ ಎಲ್ಲಾ ಸೇವೆಗಳು ಒಂದೇ ಸೂರಿನಡಿ ಸಾರ್ವಜನಿಕರಿಗೆ ತಲುಪಿಸುವ ದೇಸೆಯಲ್ಲಿ ಗ್ರಾಮೀಣ ಭಾಗದಲ್ಲಿ ಗ್ರಾಮ್ ಒನ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ.

ಈ ಕೇಂದ್ರಗಳ ಮೂಲಕ ಗ್ರಾಮ ಮಟ್ಟದಲ್ಲಿ ನಾಗರಿಕರು / ಹಿರಿಯ ನಾಗರಿಕರು / ಮಹಿಳೆಯರು, ವಿಶೇಷಚೇತನರು ತಮ್ಮ ಗ್ರಾಮದಲ್ಲಿಯೇ ಸರ್ಕಾರದ ನಾಗರಿಕ ಸೇವೆಗಳನ್ನು ಪಡೆಯಬಹುದು.

ಆದರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಕಲಿ ಗ್ರಾಮ ಒನ್ ಹಾವಳಿ ಆರಂಭವಾಗಿದ್ದು, ಲಕ್ಷಾಂತರ ರೂ ಬಂಡವಾಳ ಹೂಡಿ ಗ್ರಾಮ ಒನ್ ಕೇಂದ್ರ ತೆರೆದಿರುವ ಯುವಕ, ಯುವತಿಯರನ್ನು ಸಂಕಷ್ಟಕ್ಕೆ ದೂಡಿದೆ ಎಂಬದು ಆರೋಪವಾಗಿತ್ತು.

ದೊಡ್ಡಬಳ್ಳಾಪುರ ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಕೆಲ ಸೈಬರ್ ಸೆಂಟರ್ ಗಳು, ಹಳದಿ ಬಣ್ಣ ಬಳೆದುಕೊಂಡು ಗ್ರಾಮ ಒನ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿ ಗ್ರಾಹಕರನ್ನು ವಂಚಿಸುತ್ತಿವೆ ಎಂಬ ಆಕ್ರೋಶ ವ್ಯಕ್ತವಾಗಿತ್ತು.

ಈ ಕೇಂದ್ರಗಳಲ್ಲಿ ಐಕೆವೈಸಿ ಹೊರತು ಪಡಿಸಿ ಇತರೆ ಎಲ್ಲಾ ಗ್ರಾಮ ಒನ್ ಸೌಲಭ್ಯ ನೀಡಲಾಗುತ್ತಿದೆ. ಅಲ್ಲದೆ ಇತರೆ ತಾಲೂಕಿನ ಗ್ರಾಮ ಒನ್ ಐಡಿ ಬಳಸುವ ಮೂಲಕ, ಉಚಿತ ಸೌಲಭ್ಯಕ್ಕೂ ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ.

ಇದರಿಂದಾಗಿ ಲಕ್ಷಾಂತರ ರೂ ಹಣ ಹೂಡಿಕೆ ಮಾಡಿರುವ ನಿರುದ್ಯೋಗಿ ಯುವಕರು ಗ್ರಾಮ ಒನ್ ಕೇಂದ್ರಗಳನ್ನು ಮುಚ್ಚಬೇಕಾದ ಅನಿವಾರ್ಯತೆ ಎದುರಾಗಿದೆ.

ಕೂಡಲೇ ಅಧಿಕಾರಿಗಳು ಹೆಚ್ಚೆತ್ತು, ಸಾರ್ವಜನಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ನಕಲಿ ಗ್ರಾಮ ಒನ್ ಕೇಂದ್ರಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!