BJP-JDS 25 ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ಗೆ: ಎಂಬಿ ಪಾಟೀಲ

PM to meet soon regarding defence corridor in Bengaluru rural district: M.B. Patil

ಬೆಂಗಳೂರು: ಬಿಜೆಪಿ-ಜೆಡಿಎಸ್ (BJP-JDS) ಕಡೆಯಿಂದ ಸದ್ಯದಲ್ಲೇ 25 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ. ಅವರೆಲ್ಲ ಅಲ್ಲಿ ಬೇಸತ್ತಿದ್ದು, ಬೇಷರತ್ತಾಗಿ ನಮ್ಮೊಂದಿಗೆ ಬರಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಹೇಳಿದ್ದಾರೆ.

ಭಾನುವಾರ ಇಲ್ಲಿ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ಸಿನಲ್ಲಿ ಈಗ 139 ಶಾಸಕರಿದ್ದಾರೆ. ನಮ್ಮಲ್ಲಿ ಒಗ್ಗಟ್ಟಿದೆ. ನಮ್ಮಲ್ಲಿ ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸುತ್ತದೆ. ಹೀಗಿರುವಾಗ ಎಂಬಿ ಪಾಟೀಲ, ಪರಮೇಶ್ವರ ಮತ್ತು ಸತೀಶ ಜಾರಕಿಹೊಳಿ ಅವರದೇನೂ ನಡೆಯುವುದಿಲ್ಲ.

ಇನ್ನೊಂದೆಡೆಯಲ್ಲಿ, ಬಿಜೆಪಿಯಲ್ಲಿ ಯತ್ನಾಳ, ರಮೇಶ ಜಾರಕಿಹೊಳಿ, ವಿಜಯೇಂದ್ರ ಅವರೆಲ್ಲ ಪರಸ್ಪರ ಏಕವಚನದಲ್ಲಿ ಜಗಳವಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಕಡೆಯಿಂದ ಸದ್ಯದಲ್ಲೇ 25 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ. ಅವರೆಲ್ಲ ಅಲ್ಲಿ ಬೇಸತ್ತಿದ್ದು, ಬೇಷರತ್ತಾಗಿ ನಮ್ಮೊಂದಿಗೆ ಬರಲಿದ್ದಾರೆ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ನಾನು ನಮ್ಮ ಉನ್ನತ ಅಧಿಕಾರಿಗಳೊಂದಿಗೆ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ, ಸೆಮಿಕಂಡಕ್ಟರ್ ಸೇರಿದಂತೆ ಕೈಗಾರಿಕಾ ವಲಯದ ಹಲವು ಬೇಡಿಕೆಗಳನ್ನು ಅವರ ಗಮನಕ್ಕೆ ತಂದಿದ್ದೇನೆ.

ಆ ಸಂದರ್ಭದಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಭೇಟಿಯಾಗಿದ್ದೆ. ಹೀಗಾಗಿ ರಾಜ್ಯ ಸರ್ಕಾರ ಅಸಹಕಾರ ತೋರಿಸುತ್ತಿದೆ ಎನ್ನುವುದು ಸರಿಯಿಲ್ಲ.

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಇವರನ್ನೆಲ್ಲ ಆಹ್ವಾನಿಸಲು ಸದ್ಯದಲ್ಲೇ ನಾನು ದೆಹಲಿಗೆ ಹೋಗುತ್ತಿದ್ದೇನೆ. ಆಗಲೂ ಇದನ್ನೆಲ್ಲ ದಾಖಲೆಗಳ ಸಮೇತ ಕುಮಾರಸ್ವಾಮಿಗೆ ನೆನಪಿಸಲಾಗುವುದು.

ನಿರ್ಮಲಾ ಸೀತಾರಾಮನ್ ಮತ್ತು ರಾಜನಾಥ್ ಸಿಂಗ್ ಬಳಿ ಕೂಡ ನಾನು ಹಿಂದೆ ಭೇಟಿಯಾಗಿದ್ದಾಗ ರಾಜ್ಯದ ಬೇಡಿಕೆಗಳ ಬಗ್ಗೆ ಅವರ ಗಮನಕ್ಕೆ ತಂದಿದ್ದೆ’ ಎಂದಿದ್ದಾರೆ.

ಕುಮಾರಸ್ವಾಮಿ ಕೂಡ ಈಗ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅವರು ಕೂಡ ಒಂದು ಹೆಜ್ಜೆ ಮುಂದೆ ಬಂದು ನಮ್ಮ ಮುಖ್ಯಮಂತ್ರಿಗಳನ್ನು ಭೇಟಿ ಮಾಡಬೇಕು. ರಾಜ್ಯಕ್ಕೆ ಉದ್ದಿಮೆಗಳನ್ನು ತಂದರೆ ಅವರಿಗೂ ಒಳ್ಳೆಯ ಹೆಸರು ಬರುತ್ತದೆ.

ಹಿಂದೆ ಭೇಟಿಯಾಗಿದ್ದಾಗ ಸೆಮಿಕಂಡಕ್ಟರ್ ಉದ್ದಿಮೆಗಳು ಮೊದಲು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿದರೂ ಕೊನೆಗೆ ಗುಜರಾತಿಗೆ ಹೋಗುತ್ತಿರುವ ವಿದ್ಯಮಾನದ ಬಗ್ಗೆ ಚರ್ಚಿಸಿದ್ದೆ. ಇದರಲ್ಲಿ ವೈಯಕ್ತಿಕ ಪ್ರತಿಷ್ಠೆ ಇರಬಾರದು ಎಂದು ಅವರು ನುಡಿದಿದ್ದಾರೆ.

ನಾವು ಹಿಂದೆ ಏನೇನು ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದೆವು ಎನ್ನುವ ವಿವರ ನಮ್ಮ ಬಳಿ ಇದೆ. ಆಗಿನ ಭೇಟಿಯಲ್ಲಿ ನಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಆಯುಕ್ತರು ಕೂಡ ಇದ್ದರು. ಕೈಗಾರಿಕಾ ಸಚಿವನಾಗಿ ನಾನು ಅವರ ಬಳಿ ಹೋಗಿದ್ದೆ. ಇದರಲ್ಲಿ ನನ್ನದು ಅನ್ನುವ ಸ್ವಾರ್ಥವೇನೂ ಇಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಪಕ್ಷದಲ್ಲಿ ಶಿಸ್ತು ಇರಬೇಕು

ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಪಕ್ಷದ ಸಮಸ್ಯೆಗಳನ್ನು ಸಾರ್ವಜನಿಕವಾಗಿ ಮಾತನಾಡಬಾರದು ಎನ್ನುವ ಅರ್ಥದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಅವರು ನಮ್ಮ ವಯಸ್ಸಿಗಿಂತ ಹೆಚ್ಚು ಕಾಲ ರಾಜಕಾರಣ ಮಾಡಿರುವ ಹಿರಿಯರು. ಪಕ್ಷದಲ್ಲಿ ಶಿಸ್ತು ಇರಬೇಕು ಎಂದು ಹೇಳಿರುವುದರಲ್ಲಿ ತಪ್ಪೇನೂ ಇಲ್ಲ.

ಯಾರಿಗಾದರೂ ಸಮಸ್ಯೆ ಇದ್ದರೆ ಪಕ್ಷದ ವ್ಯವಸ್ಥೆಯೊಳಗೆ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮುಂತಾದವರ ಜತೆ ಚರ್ಚಿಸಬಹುದು ಎಂದು ಎಂ ಬಿ ಪಾಟೀಲ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ.

ಎರಡನೇ ವಿಮಾನ ನಿಲ್ದಾಣ

ಬೆಂಗಳೂರಿಗೆ ಎರಡನೇ‌ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಸ್ಥಳಗಳ ಆಯ್ಕೆ‌ ನಡೆದಿದ್ದು, ಒಂದೆರಡು ದಿನಗಳಲ್ಲಿ ಮುಖ್ಯಮಂತ್ರಿ ಜತೆ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಪಾಟೀಲ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು..

ರಾಜಕೀಯ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ Gen Z ಶಾಕ್.. ವ್ಯಂಗ್ಯವಾಡಿದ ಪ್ರಕಾಶ್ ರಾಜ್ ಟ್ವೀಟ್ ಇಲ್ಲಿದೆ ನೋಡಿ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ Gen Z ಶಾಕ್.. ವ್ಯಂಗ್ಯವಾಡಿದ ಪ್ರಕಾಶ್ ರಾಜ್

ಜೆನ್-ಝಿ (Gen Z) ಐಕಾನ್ ಎಂದೇ ಬಿಂಬಿತವಾಗುತ್ತಿದ್ದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ (Raghav Chadha) ಅವರಿಗೆ, ಬಿಜೆಪಿ ಸೇರಿದ ಬಳಿಕ ಏಕೋ ಗ್ರಹಗತಿ ಕೆಟ್ಟಿದಂತಿದೆ. ಇದು ವಾಸ್ತವ ಸಂಗತಿಯಾದ್ರೂ, ಕೆಲವರಿಗೆ ಈ ವರದಿ

[ccc_my_favorite_select_button post_id="121370"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]