BJP-JDS 25 MLAs to Congress: MB Patil

BJP-JDS 25 ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ಗೆ: ಎಂಬಿ ಪಾಟೀಲ

ಬೆಂಗಳೂರು: ಬಿಜೆಪಿ-ಜೆಡಿಎಸ್ (BJP-JDS) ಕಡೆಯಿಂದ ಸದ್ಯದಲ್ಲೇ 25 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ. ಅವರೆಲ್ಲ ಅಲ್ಲಿ ಬೇಸತ್ತಿದ್ದು, ಬೇಷರತ್ತಾಗಿ ನಮ್ಮೊಂದಿಗೆ ಬರಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಹೇಳಿದ್ದಾರೆ.

ಭಾನುವಾರ ಇಲ್ಲಿ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ಸಿನಲ್ಲಿ ಈಗ 139 ಶಾಸಕರಿದ್ದಾರೆ. ನಮ್ಮಲ್ಲಿ ಒಗ್ಗಟ್ಟಿದೆ. ನಮ್ಮಲ್ಲಿ ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸುತ್ತದೆ. ಹೀಗಿರುವಾಗ ಎಂಬಿ ಪಾಟೀಲ, ಪರಮೇಶ್ವರ ಮತ್ತು ಸತೀಶ ಜಾರಕಿಹೊಳಿ ಅವರದೇನೂ ನಡೆಯುವುದಿಲ್ಲ.

ಇನ್ನೊಂದೆಡೆಯಲ್ಲಿ, ಬಿಜೆಪಿಯಲ್ಲಿ ಯತ್ನಾಳ, ರಮೇಶ ಜಾರಕಿಹೊಳಿ, ವಿಜಯೇಂದ್ರ ಅವರೆಲ್ಲ ಪರಸ್ಪರ ಏಕವಚನದಲ್ಲಿ ಜಗಳವಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಕಡೆಯಿಂದ ಸದ್ಯದಲ್ಲೇ 25 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ. ಅವರೆಲ್ಲ ಅಲ್ಲಿ ಬೇಸತ್ತಿದ್ದು, ಬೇಷರತ್ತಾಗಿ ನಮ್ಮೊಂದಿಗೆ ಬರಲಿದ್ದಾರೆ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ನಾನು ನಮ್ಮ ಉನ್ನತ ಅಧಿಕಾರಿಗಳೊಂದಿಗೆ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ, ಸೆಮಿಕಂಡಕ್ಟರ್ ಸೇರಿದಂತೆ ಕೈಗಾರಿಕಾ ವಲಯದ ಹಲವು ಬೇಡಿಕೆಗಳನ್ನು ಅವರ ಗಮನಕ್ಕೆ ತಂದಿದ್ದೇನೆ.

ಆ ಸಂದರ್ಭದಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಭೇಟಿಯಾಗಿದ್ದೆ. ಹೀಗಾಗಿ ರಾಜ್ಯ ಸರ್ಕಾರ ಅಸಹಕಾರ ತೋರಿಸುತ್ತಿದೆ ಎನ್ನುವುದು ಸರಿಯಿಲ್ಲ.

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಇವರನ್ನೆಲ್ಲ ಆಹ್ವಾನಿಸಲು ಸದ್ಯದಲ್ಲೇ ನಾನು ದೆಹಲಿಗೆ ಹೋಗುತ್ತಿದ್ದೇನೆ. ಆಗಲೂ ಇದನ್ನೆಲ್ಲ ದಾಖಲೆಗಳ ಸಮೇತ ಕುಮಾರಸ್ವಾಮಿಗೆ ನೆನಪಿಸಲಾಗುವುದು.

ನಿರ್ಮಲಾ ಸೀತಾರಾಮನ್ ಮತ್ತು ರಾಜನಾಥ್ ಸಿಂಗ್ ಬಳಿ ಕೂಡ ನಾನು ಹಿಂದೆ ಭೇಟಿಯಾಗಿದ್ದಾಗ ರಾಜ್ಯದ ಬೇಡಿಕೆಗಳ ಬಗ್ಗೆ ಅವರ ಗಮನಕ್ಕೆ ತಂದಿದ್ದೆ’ ಎಂದಿದ್ದಾರೆ.

ಕುಮಾರಸ್ವಾಮಿ ಕೂಡ ಈಗ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅವರು ಕೂಡ ಒಂದು ಹೆಜ್ಜೆ ಮುಂದೆ ಬಂದು ನಮ್ಮ ಮುಖ್ಯಮಂತ್ರಿಗಳನ್ನು ಭೇಟಿ ಮಾಡಬೇಕು. ರಾಜ್ಯಕ್ಕೆ ಉದ್ದಿಮೆಗಳನ್ನು ತಂದರೆ ಅವರಿಗೂ ಒಳ್ಳೆಯ ಹೆಸರು ಬರುತ್ತದೆ.

ಹಿಂದೆ ಭೇಟಿಯಾಗಿದ್ದಾಗ ಸೆಮಿಕಂಡಕ್ಟರ್ ಉದ್ದಿಮೆಗಳು ಮೊದಲು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿದರೂ ಕೊನೆಗೆ ಗುಜರಾತಿಗೆ ಹೋಗುತ್ತಿರುವ ವಿದ್ಯಮಾನದ ಬಗ್ಗೆ ಚರ್ಚಿಸಿದ್ದೆ. ಇದರಲ್ಲಿ ವೈಯಕ್ತಿಕ ಪ್ರತಿಷ್ಠೆ ಇರಬಾರದು ಎಂದು ಅವರು ನುಡಿದಿದ್ದಾರೆ.

ನಾವು ಹಿಂದೆ ಏನೇನು ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದೆವು ಎನ್ನುವ ವಿವರ ನಮ್ಮ ಬಳಿ ಇದೆ. ಆಗಿನ ಭೇಟಿಯಲ್ಲಿ ನಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಆಯುಕ್ತರು ಕೂಡ ಇದ್ದರು. ಕೈಗಾರಿಕಾ ಸಚಿವನಾಗಿ ನಾನು ಅವರ ಬಳಿ ಹೋಗಿದ್ದೆ. ಇದರಲ್ಲಿ ನನ್ನದು ಅನ್ನುವ ಸ್ವಾರ್ಥವೇನೂ ಇಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಪಕ್ಷದಲ್ಲಿ ಶಿಸ್ತು ಇರಬೇಕು

ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಪಕ್ಷದ ಸಮಸ್ಯೆಗಳನ್ನು ಸಾರ್ವಜನಿಕವಾಗಿ ಮಾತನಾಡಬಾರದು ಎನ್ನುವ ಅರ್ಥದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಅವರು ನಮ್ಮ ವಯಸ್ಸಿಗಿಂತ ಹೆಚ್ಚು ಕಾಲ ರಾಜಕಾರಣ ಮಾಡಿರುವ ಹಿರಿಯರು. ಪಕ್ಷದಲ್ಲಿ ಶಿಸ್ತು ಇರಬೇಕು ಎಂದು ಹೇಳಿರುವುದರಲ್ಲಿ ತಪ್ಪೇನೂ ಇಲ್ಲ.

ಯಾರಿಗಾದರೂ ಸಮಸ್ಯೆ ಇದ್ದರೆ ಪಕ್ಷದ ವ್ಯವಸ್ಥೆಯೊಳಗೆ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮುಂತಾದವರ ಜತೆ ಚರ್ಚಿಸಬಹುದು ಎಂದು ಎಂ ಬಿ ಪಾಟೀಲ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ.

ಎರಡನೇ ವಿಮಾನ ನಿಲ್ದಾಣ

ಬೆಂಗಳೂರಿಗೆ ಎರಡನೇ‌ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಸ್ಥಳಗಳ ಆಯ್ಕೆ‌ ನಡೆದಿದ್ದು, ಒಂದೆರಡು ದಿನಗಳಲ್ಲಿ ಮುಖ್ಯಮಂತ್ರಿ ಜತೆ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಪಾಟೀಲ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು..

ರಾಜಕೀಯ

ದೆಹಲಿ ತೀರ್ಪು: ಸೋತ ಕೇಜ್ರಿವಾಲ್, ಕಾಂಗ್ರೆಸ್ಗೆ ಮುಖಭಂಗ.. BJP ಅಧಿಕಾರಕ್ಕೆ

ದೆಹಲಿ ತೀರ್ಪು: ಸೋತ ಕೇಜ್ರಿವಾಲ್, ಕಾಂಗ್ರೆಸ್ಗೆ ಮುಖಭಂಗ.. BJP ಅಧಿಕಾರಕ್ಕೆ

ಇದರೊಂದಿಗೆ ಕಳೆದ ಹತ್ತು ವರ್ಷಗಳ ಹಿಂದೆ ಕ್ಲೀನ್ ಇಮೇಜ್ ನೊಂದಿಗೆ ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿದೆ. AAP

[ccc_my_favorite_select_button post_id="102437"]
ಬಾಶೆಟ್ಟಿಹಳ್ಳಿ ಕೆರೆ ಗೋಡೆಯ ಮೇಲೆ ಬಣ್ಣಬಣ್ಣದ ಚಿತ್ತಾರ..!:  WWF ಇಂಡಿಯಾ ಸಂಸ್ಥೆಯಿಂದ ಪರಿಸರ ಮಾಹಿತಿ..

ಬಾಶೆಟ್ಟಿಹಳ್ಳಿ ಕೆರೆ ಗೋಡೆಯ ಮೇಲೆ ಬಣ್ಣಬಣ್ಣದ ಚಿತ್ತಾರ..!: WWF ಇಂಡಿಯಾ ಸಂಸ್ಥೆಯಿಂದ ಪರಿಸರ

ಕೆರೆಗೆ ಬರುವವರಿಗೆ ಮತ್ತು ಹಾದು ಹೋಗುವವರಿಗೆ ಕೆರೆಯ ಸಂರಕ್ಷಣಾ ಮಹತ್ವ ತಿಳಿಸುವ ಉದ್ದೇಶದಿಂದ, ಕೆರೆಯ ಜೀವವೈವಿದ್ಯತೆ, ಕೆರೆಗಳ ಮಹತ್ವ, ಕೆರೆಗಳಿಗೆ ಇರುವ ತೊಂದರೆಗಳು ಮತ್ತು ಚಿಟ್ಟೆಗಳ ಬಗ್ಗೆ WWF

[ccc_my_favorite_select_button post_id="102448"]
ಭಾರತೀಯರಿಗೆ ಅವಮಾನ: ಯುಎಸ್ ಪ್ರವಾಸ ರದ್ದುಗೊಳಿಸಿ.. ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಭಾರತೀಯರಿಗೆ ಅವಮಾನ: ಯುಎಸ್ ಪ್ರವಾಸ ರದ್ದುಗೊಳಿಸಿ.. ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಅಲ್ಲದೆ ಬಿಜೆಪಿಯ ಐಟಿ ಸೆಲ್ ಭಾರತೀಯರ ಕೈಕೋಳ ಮತ್ತು ಸರಪಳಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅದಾನಿಯನ್ನು ಬಹುಪಾಲುಗಳಿಂದ ರಕ್ಷಿಸಲು ಮೋದಿಗೆ ಸಹಾಯ ಮಾಡಿದರೆ ಅದು ಸಹ ಭಾರತೀಯರನ್ನು ಅಪಹಾಸ್ಯ ಮಾಡುತ್ತದೆ ಎಂದಿರುವ ಟ್ವಿಟ್ಗೆ ಉತ್ತರ ನೀಡಿ,

[ccc_my_favorite_select_button post_id="102440"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Doddaballapura: ಅಣ್ಣ ಸಾವನಪ್ಪಿದ್ದ ಮರದ ಬಳಿಯಲ್ಲೇ ತಮ್ಮ ಆತ್ಮಹತ್ಯೆ..!

Doddaballapura: ಅಣ್ಣ ಸಾವನಪ್ಪಿದ್ದ ಮರದ ಬಳಿಯಲ್ಲೇ ತಮ್ಮ ಆತ್ಮಹತ್ಯೆ..!

ಆತ್ಮಹತ್ಯೆಗೂ ಮುನ್ನಾ ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. Suicide

[ccc_my_favorite_select_button post_id="102462"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಜನ್ಮದಿನದ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸೆಲೆಬ್ರಿಟಿಗಳಿಗೆ ದರ್ಶನ್ ಸಂದೇಶ ನೀಡಿದ್ದಾರೆ. ಇದೇ ವೇಳೆ ಹಲವ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. Darshan

[ccc_my_favorite_select_button post_id="102428"]
error: Content is protected !!