Deputy Lokayukta B.Veerappa speed officials are distracted..!

ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಸ್ಪೀಡ್ ಗೆ ಅಧಿಕಾರಿಗಳು ತಬ್ಬಿಬ್ಬು..! ಫೋಟೋಗಳನ್ನು ನೋಡಿ| B Veerappa

ಬಳ್ಳಾರಿ: ಜಿಲ್ಲಾ ಪ್ರವಾಸದಲ್ಲಿದ್ದ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಬಳ್ಳಾರಿ ನಗರದ ಮಯೂರ ಹೋಟೆಲ್ ಹಿಂಭಾಗದ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ನಿಲಯಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ-02 ಗೆ ಭೇಟಿ ನೀಡಿದ ಉಪ ಲೋಕಾಯುಕ್ತರು ಅಡುಗೆ ಕೋಣೆ, ಆಹಾರ ದಾಸ್ತಾನು ಕೋಣೆ, ವಿದ್ಯಾರ್ಥಿಗಳ ವಸತಿ ಗೃಹ ಪರಿಶೀಲಿಸಿದರು.

ಅಧಿಕಾರಿಗಳು, ವಾರ್ಡನ್, ಅಡುಗೆದಾರರು ಮತ್ತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಸ್ಪೀಡ್ ಗೆ ಅಧಿಕಾರಿಗಳು ತಬ್ಬಿಬ್ಬು..! ಫೋಟೋಗಳನ್ನು ನೋಡಿ| B Veerappa

ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಮರ್ಪಕ ವ್ಯವಸ್ಥೆ ಮಾಡಬೇಕು. ಕಾಲಕಾಲಕ್ಕೆ ವಸತಿ ನಿಲಯಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಸರ್ಕಾರಿ ಮೆಟ್ರಿಕ್‌ಪೂರ್ವ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಮಕ್ಕಳ ಜೊತೆ ಸಂವಾದ ನಡೆಸಿ, ಗುಣಮಟ್ಟದ ಹಾಲು ವಿತರಣೆ ಮಾಡುತ್ತಾರೆಯೇ, ಊಟ ಚೆನ್ನಾಗಿರುತ್ತದೆಯೇ, ಸ್ನಾನ ಹಾಗೂ ಶೌಚಾಲಯದ ಕೊಠಡಿಗಳು ಸ್ವಚ್ಛವಾಗಿವೆಯೇ, ಬಿಸಿ ನೀರು ಬರುತ್ತಿದೆಯೇ, ರಾತ್ರಿ ವೇಳೆ ಸೊಳ್ಳೆಗಳ ಕಾಟವಿದೆಯೇ ಎಂದೆಲ್ಲ ವಿಚಾರಿಸಿ ಮಾಹಿತಿ ಪಡೆದುಕೊಂಡರು.

ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಸ್ಪೀಡ್ ಗೆ ಅಧಿಕಾರಿಗಳು ತಬ್ಬಿಬ್ಬು..! ಫೋಟೋಗಳನ್ನು ನೋಡಿ| B Veerappa

ವಸತಿ ನಿಲಯಗಳಲ್ಲಿ ದೇಶದ ಮಹಾನುಭಾವರ ಕೈನಿಂದ ಬಿಡಿಸಿದ ಚಿತ್ರಗಳನ್ನು ವಿರೂಪಗೊಳಿಸುವಂತಿಲ್ಲ. ಅವರಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ನಿಲಯದ ಪಾಲಕರಿಗೆ ತಿಳಿಸಿದರು.

ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಸ್ಪೀಡ್ ಗೆ ಅಧಿಕಾರಿಗಳು ತಬ್ಬಿಬ್ಬು..! ಫೋಟೋಗಳನ್ನು ನೋಡಿ| B Veerappa

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು, ನಮಗೆ ಮಲಗಲು ಬೆಡ್ ವ್ಯವಸ್ಥೆ ಇಲ್ಲ. ಸ್ನಾನಕ್ಕೆ ಬಿಸಿ ನೀರು ಇಲ್ಲ. ಸಾರು ನೀರಿನಂತಿರುತ್ತದೆ, ವೇಳಾಪಟ್ಟಿಯಂತೆ ಅಡುಗೆ ಮಾಡುವುದಿಲ್ಲ, ರಾತ್ರಿಯಾದರೆ ಅನಧೀಕೃತ ವ್ಯಕ್ತಿಗಳು ಬರುತ್ತಾರೆ, ಗಲಾಟೆ ಮಾಡುತ್ತಾರೆ, ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ.

ವಾರ್ಡನ್ ವಿದ್ಯಾರ್ಥಿ ನಿಲಯಕ್ಕೆ ವಾರದಲ್ಲಿ ಒಮ್ಮೆ ಬರುತ್ತಾರೆ. ಬಟ್ಟೆ ತೊಳೆಯುವ ಸ್ಥಳದಲ್ಲಿ ಗಲೀಜು ತುಂಬುತ್ತದೆ. ಕೆಲವು ಸೌಲಭ್ಯಗಳನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಸಮಸ್ಯೆಗಳ ಪಟ್ಟಿಯನ್ನು ತೆರೆದಿಟ್ಟರು.

ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಸ್ಪೀಡ್ ಗೆ ಅಧಿಕಾರಿಗಳು ತಬ್ಬಿಬ್ಬು..! ಫೋಟೋಗಳನ್ನು ನೋಡಿ| B Veerappa

ಅಲ್ಲಿನ ವಸತಿ ನಿಲಯಗಳ ಕೋಣೆ, ಆಹಾರ ದಾಸ್ತಾನು ಗಮನಿಸಿ ಅಸಮಧಾನ ವ್ಯಕ್ತಪಡಿಸಿದ ಉಪ ಲೋಕಾಯುಕ್ತರು, ರಾಜ್ಯ ಸರ್ಕಾರವು ವಸತಿ ನಿಲಯದ ವಿದ್ಯಾರ್ಥಿಗಳಿಗಾಗಿಯೇ ಲಕ್ಷಾಂತರ ರೂ. ಖರ್ಚು ಮಾಡುತ್ತಿದೆ.

ಮಕ್ಕಳಿಗೆ ಊಟ, ವಸತಿ, ರಕ್ಷಣೆ ಸೇರಿದಂತೆ ಮೂಲಭೂತ ಸೌಕರ್ಯಗಳು ಒದಗಿಸಲು ಏನು ಸಮಸ್ಯೆಯಾಗುತ್ತಿದೆ ಎಂದು ನಿಲಯದ ನಿಲಯಪಾಲಕರ ಅಮಾನತ್ತಿಗೆ ಸೂಚಿಸಿದರು.

ಈ ವೇಳೆ ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ್, ಸಹಾಯಕ ನಿಬಂಧಕರಾದ ಶುಭವೀರ್ ಜೈನ್.ಬಿ., ಉಪ ನಿಬಂಧಕರಾದ ಅರವಿಂದ.ಎನ್.ವಿ., ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ., ಡಿವೈಎಸ್ಪಿ ವಸಂತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ಮುಂತಾದ ಅಧಿಕಾರಿಗಳು ಇದ್ದರು.

ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಸ್ಪೀಡ್ ಗೆ ಅಧಿಕಾರಿಗಳು ತಬ್ಬಿಬ್ಬು..! ಫೋಟೋಗಳನ್ನು ನೋಡಿ| B Veerappa

ರಾಜಕೀಯ

ಮೋದಿ ಮೇಲೆ ಟ್ರಂಪ್ ಹಿಡಿತ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಮೋದಿ ಮೇಲೆ ಟ್ರಂಪ್ ಹಿಡಿತ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಮಂಗಳವಾರವಷ್ಟೆ ಕೇಂದ್ರ ಸರ್ಕಾರದ ವೈಪಲ್ಯಗಳು, ಅಮೇರಿಕಾ ಜೊತೆ ಒಪ್ಪಂದದಿಂದ ಭಾರತದ ಮೇಲೆ ಉಂಟಾಗ ಬಹುದಾದ ಪರಿಣಾಮಗಳ ಕುರಿತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ (AKhilesh yadhav), ಮೋದಿ ಸರ್ಕಾರದ ಕುರಿತು ಹರಿಹಾಯ್ದಿದ್ದ ಬೆನ್ನಲ್ಲೇ,

[ccc_my_favorite_select_button post_id="119331"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!