Keep people like B.S. Anand who are working to improve the lives of farmers in Bamul: MP Dr K Sudhakar

ರೈತರ ಬದುಕನ್ನು ಕಟ್ಟಿಕೊಡುವ ಕೆಲಸ ಮಾಡುತ್ತಿರುವ ಬಿಸಿ ಆನಂದ್ ಅಂತವರನ್ನು ಬಮೂಲ್‌ನಲ್ಲಿ ಉಳಿಸಿಕೊಳ್ಳಿ: ಸಂಸದ Dr K Sudhakar

ದೊಡ್ಡಬಳ್ಳಾಪುರ: ವಿದ್ಯೆಯ ಜೊತೆ ಕೌಶಲ್ಯ ಕೂಡ ಅಗತ್ಯವಾಗಿದ್ದು, ಕೌಶಲ್ಯವಿಲ್ಲದ ಶಿಕ್ಷಣದಿಂದ ಯಾವುದೇ ಪ್ರಯೋಜನವಿಲ್ಲವೆಂದು ಸಂಸದ ಡಾ.ಕೆ.ಸುಧಾಕರ್‌ (Dr K Sudhakar) ಅಭಿಪ್ರಾಯಪಟ್ಟರು.

ಬೆಂಗಳೂರು ಸಹಕಾರ ಹಾಲು ಒಕ್ಕೂಟ, ಬಮುಲ್ ಟ್ರಸ್ಟ್, ದೊಡ್ಡಬಳ್ಳಾಪುರ ಶಿಬಿರ ಕಚೇರಿಯ ಆವರಣದಲ್ಲಿ ಆಯೋಜಿಸಿದ್ದ ದೊಡ್ಡಬಳ್ಳಾಪುರ ಕ್ಷೇತ್ರದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಮತ್ತು ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, ಸಂಘದ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಯಾ ಹುದ್ದೆಗೆ ಅನುಗುಣವಾಗಿ ಕೌಶಲ್ಯವನ್ನು ವಿದ್ಯಾರ್ಥಿಗಳು ಕಲಿಯಬೇಕಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ವಿಶೇಷವಾದ ತರಬೇತಿಯನ್ನು ನೀಡಬೇಕಿದೆ.. ಈ ಕುರಿತು ಸಂಬಂಧಿಸಿದ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಲಾಗಿದೆ.

ಮುಂದಿನ ದಿನಗಳಲ್ಲಿ ಈ ಜಿಲ್ಲೆಯಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವ ನಿರುದ್ಯೋಗಿಗಳಿಗೆ ಕೈಗಾರಿಕೆಗಳ ಉದ್ದಿಮೆದಾರರಿಂದ ವಿಶೇಷ ತರಬೇತಿ ನೀಡಲು ಕ್ರಮವಹಿಸಲಾಗುವುದು. ಬಮೂಲ್ ಸಂಸ್ಥೆ ಕೂಡ ಉದ್ದಿಮೆಯೊಂದಿಗೆ ಕೈಜೋಡಿಸಿದರೆ ಉಪಯೊಗವಾಗಲಿದೆ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಸಣ್ಣಪುಟ್ಟ ಗುರಿಗಳನ್ನು ಕಾಣದೆ, ದೊಡ್ಡಮಟ್ಟದ ಗುರಿಯನ್ನು ಇಟ್ಟುಕೊಂಡು ಅದಕ್ಕೆ ಸಿದ್ದತೆ ನಡೆಸಬೇಕಿದೆ. ನಾವು ರೈತರ ಮಕ್ಕಳಾಗಿ ಇಲ್ಲಿವರೆಗೂ ಬಂದಿದ್ದೇವೆ ಎಂದರೆ ನಿಮಗೂ ಸಾಧ್ಯವಿದೆ ಎಂಬುದನ್ನು ಮನಗಾಣಬೇಕಿದೆ.

ಬಮೂಲ್ ಸಂಸ್ಥೆಯಲ್ಲಿ ಇಂತಹ ಕಾರ್ಯಕ್ರಮವನ್ನು ಪ್ರತಿವರ್ಷ ನಡೆಸುತ್ತಿರುವುದು ಪ್ರಶಂಸನೀಯ ಕಾರ್ಯ. ಬಿಸಿ ಆನಂದ್ ಕುಮಾರ್ ಅವರಂತಹ ಒಳ್ಳೆಯ ಪ್ರತಿನಿಧಿಗಳು, ಗ್ರಾಮೀಣ ಪ್ರದೇಶದ ರೈತರ ಜೊತೆಯಲ್ಲಿಯೇ ಇದ್ದು, ಅವರ ಬದುಕನ್ನು ಕಟ್ಟಿಕೊಡುವಂತಹ ಕೆಲಸ ಮಾಡುವ ಇಂತಹ ಪ್ರತಿನಿಧಿಗಳನ್ನು ಉಳಿಸಿ, ಸಹಕಾರ ನೀಡಬೇಕಾಗುತ್ತದೆ.

ಯಾರು‌ ನಿಮ್ಮ ಜೊತೆಯಲ್ಲಿ ಹಗಲಿರುಳು ಶ್ರೇಯೋಭಿಲಾಷಿಯಾಗಿ ಕೆಲಸ ಮಾಡ್ತಾರೆ ಇಂತಹ ಪ್ರತಿನಿಧಿಗಳು ಉಳಿಸಬೇಕಾಗುತ್ತದೆ. ಬಹುಶಃ ಮುಂದಿನ ದಿನಗಳಲ್ಲಿ ಬಮೂಲ್ ಚುನಾವಣೆ ನಡೆಯಲಿದೆ.

ರಾಜ್ಯ ಸರ್ಕಾರದ ವಿರುದ್ಧ ಬೇಸರ

ರಾಜ್ಯಾದ್ಯಂತ ಸಹಕಾರ ಕ್ಷೇತ್ರಕ್ಕೆ, ಅದರಲ್ಲಿಯೂ ಕೆಎಂಎಫ್ಗೆ ಚುನಾವಣೆ ನಡೆಯಬೇಕಿತ್ತು. ಆದರೆ ಪ್ರಜಾಪ್ರಭುತ್ವದ ಬಗ್ಗೆ ಪದೇ ಪದೇ ಮಾತಾಡುವವರು, ಸಂವಿಧಾನಕ್ಕೆ ಗೌರವ ಕೊಡಬೇಕು ಎಂದು ಪದೇ ಪದೇ ಹೇಳುವವರು ಅಂತಹ ಸರ್ಕಾರದಲ್ಲಿ ಒಂದು ವರ್ಷ ಮೀರಿದರು, ಇನ್ನೂ ಇರ್ತಕ್ಕಂತವರೇ ಅಧಿಕಾರದಲ್ಲಿ ಮುಂದುವರಿಸುವುದು ಸರಿಯಲ್ಲ ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಎಂದರು.

ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮಾತನಾಡಿ, ಯುವ ಸಮುದಾಯ ತಂದೆತಾಯಂದಿರ ವೃದ್ಯಾಪ್ಯದಲ್ಲಿ ನಾನಿದ್ದೀನಿ ಎಂದು‌ ಹೆಗಲಾಗಬೇಕಿದೆ. ತಂದೆತಾಯಂದಿರುವ ಮಕ್ಕಳ ಸಂತೀಷಕ್ಕಾಗಿ, ಅವರ ಜೀವನ ರೂಪಿಸಲು ಅವರ ಸಂತೋಷವನ್ನು ಬದಿಗಿಟ್ಟು ಶ್ರಮಿಸುತ್ತಾರೆ. ಆದರೆ ಕಾಲೇಜು ಮೆಟ್ಟಿಲೇರುವ ಯುವ ಸಮುದಾಯ ಪ್ರೀತಿ ಪ್ರೇಮದ ಹೆಸರಲ್ಲಿ ಹೆತ್ತವರ ಕಣ್ಣೀರು ಹಾಕಿಸುತ್ತಿದ್ದಾರೆ.

ಯುವಕರಾಗಲಿ, ಯುವತಿಯರಾಗಲಿ ನಾ ಕೇಳಿಕೊಳ್ಳುವುದು ಒಂದೇ, ನೀವು 100ಕ್ಕೆ 100 ಮಾರ್ಕ್ಸ್ ತಗಿಯದಿದ್ದರು ಪರ್ವಾಗಿಲ್ಲ.. ಆದರೆ ಹೆತ್ತವರ ಕಣ್ಣೀರು ಹಾಕಿಸಬೇಡಿ.

ಎಸ್‌ಎಲ್‌ಸಿ, ಪಿಯುಸಿ ವ್ಯಾಸಂಗ ಮಾಡ್ತಾ ಇರುವ ಮಕ್ಕಳು, 10 ವರ್ಷಗಳ ಕಾಲ ಕಷ್ಟಪಟ್ಟು ಓದಿದರೆ ಮುಂದಿನ 70 ವರ್ಷ ಕಾಲ್ ಮೇಲೆ ಕಾಲು ಹಾಕಿಕೊಂಡು ನೆಮ್ಮದಿಯಿಂದ ಇರ್ತಿರ ಎಂಬುದನ್ನು ಅರಿತುಕೊಳ್ಳಬೇಕಿದೆ. ಇಲ್ಲವಾದರೆ ಗಾರ್ಮೆಂಟ್ಸಲ್ ಕೆಲಸ ಮಾಡಬೇಕಾಗುತ್ತದೆ ಎಂಬ ಅರಿವಿರಲಿ.

ಹೆತ್ತವರಾದ ನಾವುಗಳು ಮಕ್ಕಳನ್ನು ಕಾಲೇಜು ಮೆಟ್ಟಿಲು ಹತ್ತಿಸಿದರೆ, ಮಕ್ಕಳು ಹೆತ್ತವರನ್ನು ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿಸುತ್ತಿದ್ದಾರೆ.. ದಯವಿಟ್ಟು ರೈತರ ಮಕ್ಕಳು ತಪ್ಪುದಾರಿಗೆ ಸಾಗದೆ ದೇಶವನ್ನು ಕಟ್ಟುವ ಕಾರ್ಯ ಮಾಡಬೇಕಿದೆ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಹಾಲು ಒಕ್ಕೂಟದ ಅಧ್ಯಕ್ಷ ರಾಜ್ ಕುಮಾರ್, ಉಪಾಧ್ಯಕ್ಷ ಮಂಜುನಾಥ್, ಶಾಸಕ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಮುಖಂಡರಾದ ಕುರುಬಗೆರೆ ನರಸಿಂಹಯ್ಯ, ಬಿಸಿ ನಾರಾಯಣಸ್ವಾಮಿ,
ನ್ಯಾಯವಾದಿ ಅಂಜನಗೌಡ, ರಂಗಪ್ಪ, ನರಸಿಂಹಮೂರ್ತಿ, ಟಿ.ವಿ.ಲಕ್ಷ್ಮೀನಾರಾಯಣ್ ಸೇರಿದಂತೆ ಅನೇಕ ಮುಖಂಡರಿದ್ದರು‌.

ರಾಜಕೀಯ

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ:

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ; ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="115331"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!