Keep people like B.S. Anand who are working to improve the lives of farmers in Bamul: MP Dr K Sudhakar

ರೈತರ ಬದುಕನ್ನು ಕಟ್ಟಿಕೊಡುವ ಕೆಲಸ ಮಾಡುತ್ತಿರುವ ಬಿಸಿ ಆನಂದ್ ಅಂತವರನ್ನು ಬಮೂಲ್‌ನಲ್ಲಿ ಉಳಿಸಿಕೊಳ್ಳಿ: ಸಂಸದ Dr K Sudhakar

ದೊಡ್ಡಬಳ್ಳಾಪುರ: ವಿದ್ಯೆಯ ಜೊತೆ ಕೌಶಲ್ಯ ಕೂಡ ಅಗತ್ಯವಾಗಿದ್ದು, ಕೌಶಲ್ಯವಿಲ್ಲದ ಶಿಕ್ಷಣದಿಂದ ಯಾವುದೇ ಪ್ರಯೋಜನವಿಲ್ಲವೆಂದು ಸಂಸದ ಡಾ.ಕೆ.ಸುಧಾಕರ್‌ (Dr K Sudhakar) ಅಭಿಪ್ರಾಯಪಟ್ಟರು.

ಬೆಂಗಳೂರು ಸಹಕಾರ ಹಾಲು ಒಕ್ಕೂಟ, ಬಮುಲ್ ಟ್ರಸ್ಟ್, ದೊಡ್ಡಬಳ್ಳಾಪುರ ಶಿಬಿರ ಕಚೇರಿಯ ಆವರಣದಲ್ಲಿ ಆಯೋಜಿಸಿದ್ದ ದೊಡ್ಡಬಳ್ಳಾಪುರ ಕ್ಷೇತ್ರದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಮತ್ತು ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, ಸಂಘದ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಯಾ ಹುದ್ದೆಗೆ ಅನುಗುಣವಾಗಿ ಕೌಶಲ್ಯವನ್ನು ವಿದ್ಯಾರ್ಥಿಗಳು ಕಲಿಯಬೇಕಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ವಿಶೇಷವಾದ ತರಬೇತಿಯನ್ನು ನೀಡಬೇಕಿದೆ.. ಈ ಕುರಿತು ಸಂಬಂಧಿಸಿದ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಲಾಗಿದೆ.

ಮುಂದಿನ ದಿನಗಳಲ್ಲಿ ಈ ಜಿಲ್ಲೆಯಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವ ನಿರುದ್ಯೋಗಿಗಳಿಗೆ ಕೈಗಾರಿಕೆಗಳ ಉದ್ದಿಮೆದಾರರಿಂದ ವಿಶೇಷ ತರಬೇತಿ ನೀಡಲು ಕ್ರಮವಹಿಸಲಾಗುವುದು. ಬಮೂಲ್ ಸಂಸ್ಥೆ ಕೂಡ ಉದ್ದಿಮೆಯೊಂದಿಗೆ ಕೈಜೋಡಿಸಿದರೆ ಉಪಯೊಗವಾಗಲಿದೆ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಸಣ್ಣಪುಟ್ಟ ಗುರಿಗಳನ್ನು ಕಾಣದೆ, ದೊಡ್ಡಮಟ್ಟದ ಗುರಿಯನ್ನು ಇಟ್ಟುಕೊಂಡು ಅದಕ್ಕೆ ಸಿದ್ದತೆ ನಡೆಸಬೇಕಿದೆ. ನಾವು ರೈತರ ಮಕ್ಕಳಾಗಿ ಇಲ್ಲಿವರೆಗೂ ಬಂದಿದ್ದೇವೆ ಎಂದರೆ ನಿಮಗೂ ಸಾಧ್ಯವಿದೆ ಎಂಬುದನ್ನು ಮನಗಾಣಬೇಕಿದೆ.

ಬಮೂಲ್ ಸಂಸ್ಥೆಯಲ್ಲಿ ಇಂತಹ ಕಾರ್ಯಕ್ರಮವನ್ನು ಪ್ರತಿವರ್ಷ ನಡೆಸುತ್ತಿರುವುದು ಪ್ರಶಂಸನೀಯ ಕಾರ್ಯ. ಬಿಸಿ ಆನಂದ್ ಕುಮಾರ್ ಅವರಂತಹ ಒಳ್ಳೆಯ ಪ್ರತಿನಿಧಿಗಳು, ಗ್ರಾಮೀಣ ಪ್ರದೇಶದ ರೈತರ ಜೊತೆಯಲ್ಲಿಯೇ ಇದ್ದು, ಅವರ ಬದುಕನ್ನು ಕಟ್ಟಿಕೊಡುವಂತಹ ಕೆಲಸ ಮಾಡುವ ಇಂತಹ ಪ್ರತಿನಿಧಿಗಳನ್ನು ಉಳಿಸಿ, ಸಹಕಾರ ನೀಡಬೇಕಾಗುತ್ತದೆ.

ಯಾರು‌ ನಿಮ್ಮ ಜೊತೆಯಲ್ಲಿ ಹಗಲಿರುಳು ಶ್ರೇಯೋಭಿಲಾಷಿಯಾಗಿ ಕೆಲಸ ಮಾಡ್ತಾರೆ ಇಂತಹ ಪ್ರತಿನಿಧಿಗಳು ಉಳಿಸಬೇಕಾಗುತ್ತದೆ. ಬಹುಶಃ ಮುಂದಿನ ದಿನಗಳಲ್ಲಿ ಬಮೂಲ್ ಚುನಾವಣೆ ನಡೆಯಲಿದೆ.

ರಾಜ್ಯ ಸರ್ಕಾರದ ವಿರುದ್ಧ ಬೇಸರ

ರಾಜ್ಯಾದ್ಯಂತ ಸಹಕಾರ ಕ್ಷೇತ್ರಕ್ಕೆ, ಅದರಲ್ಲಿಯೂ ಕೆಎಂಎಫ್ಗೆ ಚುನಾವಣೆ ನಡೆಯಬೇಕಿತ್ತು. ಆದರೆ ಪ್ರಜಾಪ್ರಭುತ್ವದ ಬಗ್ಗೆ ಪದೇ ಪದೇ ಮಾತಾಡುವವರು, ಸಂವಿಧಾನಕ್ಕೆ ಗೌರವ ಕೊಡಬೇಕು ಎಂದು ಪದೇ ಪದೇ ಹೇಳುವವರು ಅಂತಹ ಸರ್ಕಾರದಲ್ಲಿ ಒಂದು ವರ್ಷ ಮೀರಿದರು, ಇನ್ನೂ ಇರ್ತಕ್ಕಂತವರೇ ಅಧಿಕಾರದಲ್ಲಿ ಮುಂದುವರಿಸುವುದು ಸರಿಯಲ್ಲ ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಎಂದರು.

ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮಾತನಾಡಿ, ಯುವ ಸಮುದಾಯ ತಂದೆತಾಯಂದಿರ ವೃದ್ಯಾಪ್ಯದಲ್ಲಿ ನಾನಿದ್ದೀನಿ ಎಂದು‌ ಹೆಗಲಾಗಬೇಕಿದೆ. ತಂದೆತಾಯಂದಿರುವ ಮಕ್ಕಳ ಸಂತೀಷಕ್ಕಾಗಿ, ಅವರ ಜೀವನ ರೂಪಿಸಲು ಅವರ ಸಂತೋಷವನ್ನು ಬದಿಗಿಟ್ಟು ಶ್ರಮಿಸುತ್ತಾರೆ. ಆದರೆ ಕಾಲೇಜು ಮೆಟ್ಟಿಲೇರುವ ಯುವ ಸಮುದಾಯ ಪ್ರೀತಿ ಪ್ರೇಮದ ಹೆಸರಲ್ಲಿ ಹೆತ್ತವರ ಕಣ್ಣೀರು ಹಾಕಿಸುತ್ತಿದ್ದಾರೆ.

ಯುವಕರಾಗಲಿ, ಯುವತಿಯರಾಗಲಿ ನಾ ಕೇಳಿಕೊಳ್ಳುವುದು ಒಂದೇ, ನೀವು 100ಕ್ಕೆ 100 ಮಾರ್ಕ್ಸ್ ತಗಿಯದಿದ್ದರು ಪರ್ವಾಗಿಲ್ಲ.. ಆದರೆ ಹೆತ್ತವರ ಕಣ್ಣೀರು ಹಾಕಿಸಬೇಡಿ.

ಎಸ್‌ಎಲ್‌ಸಿ, ಪಿಯುಸಿ ವ್ಯಾಸಂಗ ಮಾಡ್ತಾ ಇರುವ ಮಕ್ಕಳು, 10 ವರ್ಷಗಳ ಕಾಲ ಕಷ್ಟಪಟ್ಟು ಓದಿದರೆ ಮುಂದಿನ 70 ವರ್ಷ ಕಾಲ್ ಮೇಲೆ ಕಾಲು ಹಾಕಿಕೊಂಡು ನೆಮ್ಮದಿಯಿಂದ ಇರ್ತಿರ ಎಂಬುದನ್ನು ಅರಿತುಕೊಳ್ಳಬೇಕಿದೆ. ಇಲ್ಲವಾದರೆ ಗಾರ್ಮೆಂಟ್ಸಲ್ ಕೆಲಸ ಮಾಡಬೇಕಾಗುತ್ತದೆ ಎಂಬ ಅರಿವಿರಲಿ.

ಹೆತ್ತವರಾದ ನಾವುಗಳು ಮಕ್ಕಳನ್ನು ಕಾಲೇಜು ಮೆಟ್ಟಿಲು ಹತ್ತಿಸಿದರೆ, ಮಕ್ಕಳು ಹೆತ್ತವರನ್ನು ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿಸುತ್ತಿದ್ದಾರೆ.. ದಯವಿಟ್ಟು ರೈತರ ಮಕ್ಕಳು ತಪ್ಪುದಾರಿಗೆ ಸಾಗದೆ ದೇಶವನ್ನು ಕಟ್ಟುವ ಕಾರ್ಯ ಮಾಡಬೇಕಿದೆ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಹಾಲು ಒಕ್ಕೂಟದ ಅಧ್ಯಕ್ಷ ರಾಜ್ ಕುಮಾರ್, ಉಪಾಧ್ಯಕ್ಷ ಮಂಜುನಾಥ್, ಶಾಸಕ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಮುಖಂಡರಾದ ಕುರುಬಗೆರೆ ನರಸಿಂಹಯ್ಯ, ಬಿಸಿ ನಾರಾಯಣಸ್ವಾಮಿ,
ನ್ಯಾಯವಾದಿ ಅಂಜನಗೌಡ, ರಂಗಪ್ಪ, ನರಸಿಂಹಮೂರ್ತಿ, ಟಿ.ವಿ.ಲಕ್ಷ್ಮೀನಾರಾಯಣ್ ಸೇರಿದಂತೆ ಅನೇಕ ಮುಖಂಡರಿದ್ದರು‌.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]