ಗ್ರಾಮವಾಸಿಗಳ ಆಸ್ತಿ ನಿಖರತೆಗೆ ಡ್ರೋನ್ ಸಮೀಕ್ಷೆ: ಸಚಿವ ಸಂತೋಷ ಲಾಡ್

Drone survey for villagers' property accuracy: Minister Santosh lad

ಧಾರವಾಡ: ಅನೇಕ ಗ್ರಾಮವಾಸಿಗಳು ಎಷ್ಟೊ ವರ್ಷದಿಂದ ಇದೇ ಜಾಗದಲ್ಲಿದ್ದರೂ ಅವರಲ್ಲಿ ಸರಿಯಾದ ಅಳತೆ ಇಲ್ಲ. ಇದರಿಂದ ವ್ಯಾಜ್ಯ, ಆರ್ಥಿಕ ನಷ್ಟಗಳು ಆಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad) ಹೇಳಿದರು.

ಅವರು ಇಂದು ಬೆಳಿಗ್ಗೆ ಕಲಘಟಗಿ ತಾಲೂಕಿನ ಮಡಕಿಹೊನ್ನಳ್ಳಿ ಗ್ರಾಮದಲ್ಲಿ ಸ್ವಾಮಿತ್ವ ಯೋಜನೆಯಡಿ ಡ್ರೋನ್ ಸರ್ವೆ ಕಾರ್ಯಕ್ಕೆ ಚಾಲನೆ ನೀಡಿ, ಮಾತನಾಡಿದರು.

ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆ ಮೂಲಕ ಎಲ್ಲ 375 ಗ್ರಾಮಗಳನ್ನು ಡ್ರೋನ್ ಮೂಲಕ ಸರ್ವೆ ಮಾಡಿ, ಮಾಲಿಕರಿಗೆ ಅವರ ಅವರ ಆಸ್ತಿಯನ್ನು ನಿಖರವಾಗಿ ಗುರುತಿಸಲಾಗುತ್ತದೆ. ಇದಕ್ಕೆ ಗ್ರಾಮಸ್ಥರ, ಗ್ರಾಮ ಪ್ರತಿನಿಧಿಗಳ ಸಹಕಾರ ಮುಖ್ಯವಾಗಿದೆ.

ಗ್ರಾಮವಾಸಿಗಳ ಸಮಸ್ಯೆ ನಿವಾರಣೆಗೆ ರಾಜ್ಯ ಸರಕಾರ ರಾಜ್ಯದ ಪ್ರತಿ ಗ್ರಾಮವನ್ನು ಸ್ವಾಮಿತ್ವ ಯೋಜನೆಯಡಿ ಸಮಿಕ್ಷೆ ಮಾಡಿ, ಕಾನೂನಾತ್ಮಕವಾಗಿ ಗ್ರಾಮ ನಿವಾಸಿಗಳ ಆಸ್ತಿ ಗುರುತಿಸುವಿಕೆ ಮಾಡಲಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.

ಹೊಸ ಯೋಜನೆ ಆಗಿರುವದರಿಂದ ಪರಸ್ಪರರಲ್ಲಿ ಸಮಸ್ಯೆ ಸಹಜ. ಊರಿನ ಪ್ರಮುಖರು, ಜನಪ್ರತಿನಿಧಿಗಳು ಸಹಕಾರ ನೀಡಿ ಸಮಸ್ಯೆ ಬಗೆ ಹರಿಸಬೇಕು ಎಂದರು.

ಡ್ರೋನ್ ಮೂಲಕ ಏರೀಯಲ್ ಸರ್ವೆ ಮತ್ತು ರೊವರ್ ಸರ್ವೆ ಎರಡನ್ನು ಮಾಡಲಾಗುತ್ತದೆ. ಇದು ಭವಿಷ್ಯತ್ತಿನಲ್ಲಿ ಬಹಳಷ್ಟು ಉಪಯೋಗವಾಗುತ್ತದೆ ಎಂದು ಸಚಿವರು ಹೇಳಿದರು.

ಭೂದಾಖಲೆಗಳ ಇಲಾಖೆಯ ಉಪನಿರ್ದೇಶಕ ಮೋಹನ ಶಿವಣ್ಣವರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರದ ಜಂಟಿ ಯೋಜನೆ ಇದಾಗಿದ್ದು, ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಡ್ರೋನ್ ಮೂಲಕ ಸಮಿಕ್ಷೆ ಮಾಡಿ, ಆಸ್ತಿ ಗುರುತಿಸಲಾಗುತ್ತದೆ.

ಭೂಮಾಪನ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಗ್ರಾಮಕ್ಕೆ ಆಗಮಿಸಿ, ನಿವಾಸಿಗಳ ಆಸ್ತಿ ದಾಖಲಿಸುವ ಕಾರ್ಯಕ್ಕೆ ಮತ್ತು ಗಡಿ ಗುರುತಿಸುವಿಕೆಗೆ ಸಹಕರಿಸಬೇಕು. ದಾಖಲಿಕರಣ ಪೂರ್ವದಲ್ಲಿ ಮಾಲೀಕರಿಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಲು 30 ದಿನಗಳ ಕಾಲವಾಕಾಶ ಇರುತ್ತದೆ. ಎಲ್ಲರೂ ಸಹಕಾರ ನೀಡಬೇಕೆಂದು ವಿನಂತಿಸಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ ವಿರೇಶ ಮುಳಗುಂದಮಠ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ಕಲಘಟಗಿ ಭೂದಾಖಲೆಗಳ ಸಹಾಯಕ ನಿರ್ದೇಶಕ ಮಂಜೇಶ್.

ಮಡಕಿಹೊನ್ನಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಪರ್ವಾಪುರ, ಉಪಾಧ್ಯಕ್ಷೆ ರೇಣುಕಾ ಕುಬಿಹಾಳ, ಸದಸ್ಯರು ಮತ್ತು ಗ್ರಾಮದ ಪ್ರಮುಖರಾದ ಶಿವಪುತ್ರಪ್ಪ ಆಲದಕಟ್ಟಿ, ಮಂಜುನಾಥ ಮರಳ್ಳಿ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಶಂಭುಲಿಂಗ ಹೊಸಮನಿ, ಗ್ರಾಮಲೆಕ್ಕಾಧಿಕಾರಿ ಮಂಜುನಾಥ ಹಾಗೂ ಗ್ರಾಮಸ್ಥರು ಉಪಸ್ಥಿತಿರಿದ್ದರು.

ಧಾರವಾಡ ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆಯ ಅನುಷ್ಟಾನ

ಗ್ರಾಮೀಣ ಪ್ರದೇಶದ ಗ್ರಾಮಠಾಣಾ ವ್ಯಾಪ್ತಿಗೆ ಒಳಪಡುವ ಜನವಸತಿ ಪ್ರದೇಶಗಳಲ್ಲಿನ ಆಸ್ತಿಗಳಿಗೆ ಸಂಬಂಧಿಸಿದಂತೆ ಮಾಲೀಕತ್ವದ ದಾಖಲೆಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ ತಯಾರಿಸುವ ನಿಟ್ಟಿನಲ್ಲಿ ಸ್ವಾಮಿತ್ವ ಯೋಜನೆಯನ್ನು ಕರ್ನಾಟಕ ರಾಜ್ಯದಾದ್ಯಂತ ಜಾರಿಗೊಳಿಸಲಾಗುತ್ತಿದೆ.

ಈ ಯೋಜನೆಯಡಿ ಧಾರವಾಡ ಜಿಲ್ಲೆಯ ಎಲ್ಲ ಗ್ರಾಮೀಣ ಪ್ರದೇಶದ ಗ್ರಾಮಠಾಣಾ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ ಸಂಬಂಧಿಸಿದಂತೆ ಮಾಲೀಕತ್ವದ ದಾಖಲೆಗಳನ್ನು ತಯಾರಿಸುವ ನಿಟ್ಟಿನಲ್ಲಿ, ಪಂಚಾಯತ ರಾಜ್ ಮತ್ತು ಕಂದಾಯ ಇಲಾಖೆಯ ಸಹಭಾಗೀತ್ವದಡಿಯಲ್ಲಿ ಕಲಘಟಗಿ ತಾಲೂಕಿನ ಮಡಕಿಹೊನ್ನಳ್ಳಿ ಗ್ರಾಮದಲ್ಲಿ ಡ್ರೋನ್ ಹಾರಾಟ ಪ್ರಾರಂಭಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಇಂದು ಬೆಳಿಗ್ಗೆ ಚಾಲನೆ ನೀಡಿದರು.

ಸ್ವಾಮಿತ್ವ ಯೋಜನೆ ಮತ್ತು ಪ್ರಯೋಜನ: ಗ್ರಾಮೀಣ ಭಾರತಕ್ಕೆ ಸಮಗ್ರ ಆಸ್ತಿ ಮೌಲ್ಯೀಕರಣ ಪರಿಹಾರವನ್ನು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಗ್ರಾಮಗಳ ಸಮೀಕ್ಷೆ ಮತ್ತು ಗ್ರಾಮ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದೊಂದಿಗೆ ಮ್ಯಾಪಿಂಗ್ ಉಪಕ್ರಮವನ್ನು ಪ್ರಾರಂಭಿಸಿತು. ಅದುವೇ ಸ್ವಾಮಿತ್ವ ಯೋಜನೆಯಾಗಿದೆ.

ಈ ಅದ್ಭುತ ಉಪಕ್ರಮದಡಿಯಲ್ಲಿ ದೇಶದಾದ್ಯಂತ ಲಕ್ಷಾಂತರ ಗ್ರಾಮೀಣ ಆಸ್ತಿ ಮಾಲೀಕರಿಗೆ ಅನುಕೂಲವಾಗುವಂತೆ ಆಧುನಿಕ ಡ್ರೋನ್ ತಂತ್ರಜ್ಞಾನವನ್ನು ಅಭೂತಪೂರ್ವ ಪ್ರಮಾಣದಲ್ಲಿ ಬಳಸಿಕೊಳ್ಳಲಾಗುತ್ತದೆ.

ಏಪ್ರಿಲ್ 24, 2020 ರಂದು ರಾಷ್ಟ್ರೀಯ ಪಂಚಾಯತ್ ದಿನದಂದು ಪ್ರಾರಂಭಿಸಲಾಯಿತು, ಈ ಯೋಜನೆಯನ್ನು ಪಂಚಾಯತ್ ರಾಜ್ ಸಚಿವಾಲಯ ಮುನ್ನಡೆಸಿದೆ.

ಯೋಜನೆಯ ಉದ್ದೇಶ ಮತ್ತು ವ್ಯಾಪ್ತಿ: ಸ್ವಾಮಿತ್ವ ಯೋಜನೆಯ ಪ್ರಾಥಮಿಕ ಉದ್ದೇಶವು ಗ್ರಾಮೀಣ ಭಾರತಕ್ಕೆ ಸಮಗ್ರ ಆಸ್ತಿ ಮೌಲ್ಯೀಕರಣ ಪರಿಹಾರವನ್ನು ಒದಗಿಸುವುದು.

ಸ್ವಾಮಿತ್ವ ಆಸ್ತಿ ಕಾರ್ಡ್‍ಗಳನ್ನು ಸರ್ಕಾರಿ ಅಧಿಕಾರಿಗಳು ಭೂಮಾಲೀಕರಿಗೆ ನೀಡಲಾಗುವುದು, ಆಸ್ತಿ ಮಾಲೀಕತ್ವದ ಮೌಲ್ಯೀಕರಣವನ್ನು ಸುಲಭಗೊಳಿಸುತ್ತದೆ. ಡ್ರೋನ್ ಸರ್ವೇಯಿಂಗ್ ತಂತ್ರಜ್ಞಾನ ಮತ್ತು ನಿರಂತರವಾಗಿ ಕಾರ್ಯನಿರ್ವಹಿಸುವ ರೆಫರೆನ್ಸ್ ಸ್ಟೇಷನ್‍ನ್ನು ಗ್ರಾಮೀಣ ಅಬಾದಿ ಪ್ರದೇಶವನ್ನು ಗುರುತಿಸಲು ಬಳಸಿಕೊಳ್ಳಲಾಗುತ್ತದೆ.

ಯೋಜನೆಯು ಗ್ರಾಮೀಣ ನಿವಾಸಿಗಳಿಗೆ ತಮ್ಮ ಆಸ್ತಿಯನ್ನು ಸಾಲ ಮತ್ತು ಇತರ ಹಣಕಾಸಿನ ಉದ್ದೇಶಗಳಿಗಾಗಿ ಆಸ್ತಿಯಾಗಿ ಬಳಸಲು ಅನುವು ಮಾಡಿಕೊಡುವ ಮೂಲಕ ಆರ್ಥಿಕ ಸ್ಥಿರತೆಯನ್ನು ತರಲು ಗುರಿಯನ್ನು ಹೊಂದಿದೆ.

ಸ್ವಾಮಿತ್ವ ಕಾರ್ಡ್ ಮತ್ತು ಪ್ರಯೋಜನಗಳು

ಸ್ವಾಮಿತ್ವ ಆಸ್ತಿ ಕಾರ್ಡ್‍ಗಳು ಭೂಮಾಲೀಕರಿಗೆ ಅಧಿಕೃತ ದಾಖಲೆಗಳಾಗಿ ಕಾರ್ಯನಿರ್ವಹಿಸುತ್ತವೆ, ಭವಿಷ್ಯದ ಹಣಕಾಸಿನ ವಹಿವಾಟುಗಳು ಮತ್ತು ಆಸ್ತಿ-ಸಂಬಂಧಿತ ವ್ಯವಹಾರಗಳನ್ನು ಸುಗಮಗೊಳಿಸುತ್ತದೆ.

ಈ ಯೋಜನೆಯು ಆಸ್ತಿ ಹಕ್ಕುಗಳು ಮತ್ತು ಮಾಲೀಕತ್ವದ ಬಗ್ಗೆ ಸ್ಪಷ್ಟತೆಯನ್ನು ನೀಡುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಮತ್ತು ಆಸ್ತಿ-ಸಂಬಂಧಿತ ವಿವಾದಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ಆಸ್ತಿ ಮೌಲ್ಯೀಕರಣ ಮತ್ತು ಹಕ್ಕುಗಳು: ನಿಖರವಾದ ಭೂ ದಾಖಲೆಗಳು ಮತ್ತು ಆಸ್ತಿ ಮೌಲ್ಯೀಕರಣದ ಮೂಲಕ, ಭೂಮಿಯನ್ನು ವಶಪಡಿಸಿಕೊಳ್ಳುವ ಅಕ್ರಮ ಪ್ರಯತ್ನಗಳನ್ನು ತಡೆಗಟ್ಟಲು ಮತ್ತು ಗ್ರಾಮೀಣ ಆಸ್ತಿ ಮಾಲೀಕರಿಗೆ ಸರಿಯಾದ ಮಾಲೀಕತ್ವವನ್ನು ಖಚಿತಪಡಿಸಿಕೊಳ್ಳಲು ಯೋಜನೆಯು ಗುರಿಯನ್ನು ಹೊಂದಿದೆ.

ಸರ್ಕಾರಿ ಯೋಜನೆ ಮತ್ತು ಅಭಿವೃದ್ಧಿ: ಸ್ವಾಮಿತ್ವ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲಾದ ಜಿಐಎಸ್ ಮ್ಯಾಪಿಂಗ್ ಮತ್ತು ಸಮೀಕ್ಷೆ ಮೂಲಸೌಕರ್ಯವು ಗ್ರಾಮ ಪಂಚಾಯತ್ ಅಭಿವೃದ್ಧಿ ಯೋಜನೆಗಳು (ಜಿಪಿಡಿಪಿ) ಸೇರಿದಂತೆ ಸ್ಥಳೀಯ ಮಟ್ಟದಲ್ಲಿ ಸರ್ಕಾರಿ ಯೋಜನೆ ಮತ್ತು ಅಭಿವೃದ್ಧಿ ಉಪಕ್ರಮಗಳನ್ನು ಬೆಂಬಲಿಸುತ್ತದೆ.

ಸ್ವಾಮಿತ್ವ ಯೋಜನೆಯ ಮಹತ್ವ

ಗ್ರಾಮೀಣ ಭಾರತದಲ್ಲಿ ಆಸ್ತಿ ಪ್ರಮಾಣೀಕರಣವನ್ನು ಆಧುನೀಕರಿಸುವ ನಿಟ್ಟಿನಲ್ಲಿ ಒಂದು ದೊಡ್ಡ ಹೆಜ್ಜೆ ಸ್ವಾಮಿತ್ವ ಉಪಕ್ರಮವಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸರ್ಕಾರದ ಬೆಂಬಲವನ್ನು ಬಳಸಿಕೊಳ್ಳುವ ಮೂಲಕ, ಯೋಜನೆಯು ಗ್ರಾಮೀಣ ನಿವಾಸಿಗಳನ್ನು ಸಬಲೀಕರಣಗೊಳಿಸಲು, ಆಸ್ತಿ ವಿವಾದಗಳನ್ನು ಪರಿಹರಿಸಲು ಮತ್ತು ಗ್ರಾಮೀಣ ಸಮುದಾಯಗಳಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಅದರ ದೂರಗಾಮಿ ಪರಿಣಾಮ ಮತ್ತು ಮಹತ್ವಾಕಾಂಕ್ಷೆಯ ವ್ಯಾಪ್ತಿಯೊಂದಿಗೆ, ಸ್ವಾಮಿತ್ವ ಯೋಜನೆಯು ಗ್ರಾಮೀಣ ಭಾರತದ ಪ್ರಗತಿ ಮತ್ತು ಸಮೃದ್ಧಿಯ ಹೊಸ ಯುಗವನ್ನು ಸೂಚಿಸುತ್ತದೆ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]