Ideal friendship

Daily story| ಹರಿತಲೇಖನಿ ದಿನಕ್ಕೊಂದು ಕಥೆ: ಆದರ್ಶ ಮಿತ್ರಪ್ರೇಮ

Daily story: ಕಂಬನ ತಮಿಳುನಾಡಿನ ಪ್ರತಿಭಾವಂತ ಹಾಗೂ ಸೂಕ್ಷ್ಮದರ್ಶಿ ಮಹಾಕವಿಯಾಗಿದ್ದನು. ಅವನಿಗೆ ಓಟುಕ್ಕುತ್ತನ ಎಂಬ ಹೆಸರಿನ ಮಿತ್ರನಿದ್ದನು. ಅವನೂ ಮಹಾನ ವಿದ್ವಾಂಸನಾಗಿದ್ದನು.

ಕಂಬನನು ರಾಮಾಯಣವನ್ನು ರಚಿಸುತ್ತಿರುವುದರ ಬಗ್ಗೆ ತಿಳಿದಾಗ ಓಟುಕ್ಕುತ್ತರಗೂ ಸ್ಪೂರ್ತಿ ಬಂದು ಅವನೂ ತಮಿಳಿನಲ್ಲಿ ರಾಮಾಯಣ ರಚನೆಯನ್ನು ಆರಂಭಿಸಿದನು. ಇಬ್ಬರ ರಾಮಾಯಣವು ಸ್ವತಂತ್ರವಾಗಿ ಆರಂಭವಾಗಿ ಕಾಲಾನುಸಾರವಾಗಿ ಪೂರ್ಣವಾಯಿತು.

ಕಂಬನನ ರಾಮಾಯಣವು ಜನಪ್ರಿಯವಾಯಿತು. ಕಂಬನನು ತನ್ನ ರಾಮಾಯಣವನ್ನು ಹಾಡಿದರೆ ಶ್ರೋತೃಗಳು ತಲ್ಲೀನರಾಗಿ ವಾಹ್ ವಾಹ್ ಎಂದು ಹೇಳುತ್ತಿದ್ದರು. ಕಂಬನನು ಹೋದಲ್ಲಿ ಅವನ ಆದರ, ಸನ್ಮಾನವಾಗುತ್ತಿತ್ತು. ಎಲ್ಲಕಡೆಯೂ ಅವನ ಜಯಕಾರವಾಗುತ್ತಿತ್ತು.

ಓಟುಕ್ಕುತ್ತರತನ್ನ ರಾಮಾಯಣವನ್ನು ಓದಲು ಕುಳಿತಾಗ ನಗಣ್ಯ ಶ್ರೋತೃಗಳಿರುತ್ತಿದ್ದರು. ಇದರಿಂದಾಗಿ ಓಟುಕ್ಕುತ್ತರನಿರಾಶೆಗೊಳ್ಳುತ್ತಿದ್ದನು. ಅವನಿಗೆ ತನ್ನ ಎಲ್ಲ ಶ್ರಮವೂ ವ್ಯರ್ಥವಾಯಿತು ಎಂದು ಅನಿಸುತ್ತಿತ್ತು.

ತಾನು ಅಪೇಕ್ಷಿತ ರೀತಿಯಲ್ಲಿ ಜೀವಿಸಿ ಮರಣ ಹೊಂದುವೆನು ಎಂದು ವಿಚಾರ ಮಾಡಿ ಮಾಡಿ ಅವನಿಗೆ ಹಿಂಸೆಯಾಗುತ್ತಿತ್ತು. ಅವನ ಜೀವನದಲ್ಲಿ ಎಲ್ಲೆಡೆಯೂ ಅಂಧಕಾರ ಪಸರಿಸಿತು.

ಕೊನೆಗೆ ಒಂದು ದಿನ ಓಟುಕ್ಕುತ್ತರತಾನು ರಚಿಸಿದ ರಾಮಾಯಣವನ್ನು ಸುಟ್ಟು ಆ ರಾಮಾಯಣದ ಬೂದಿಯನ್ನು ಬಳಿದುಕೊಂಡು ಗೋಸಾವಿಯಾಗಬೇಕೆಂದು ನಿರ್ಧರಿಸಿದನು.

ಈ ಕೆಟ್ಟ ವಿಷಯವು ಕಂಬನನ ಕಿವಿಗೆ ಬಿತ್ತು. ಅವನು ಧಾವಿಸಿ ಮಿತ್ರನ ಬಳಿ ಹೋದನು. ಅವನು ನೋಡಿದಾಗ ಓಟುಕ್ಕುತ್ತರತಾನು ರಚಿಸಿದ ರಾಮಾಯಣವನ್ನು ಸುಡುತ್ತಿದ್ದನು.

ಕಂಬನನು ‘ಅರೆ, ಹುಚ್ಚ ಏನು ಮಾಡುತ್ತಿರುವೆ ? ನೀನೇ ರಚಿಸಿರುವ ರಾಮಾಯಣವನ್ನು ಏಕೆ ಸುಡುತ್ತಿರುವೆ ?’ಎಂದು ಕೇಳಿದನು. ಅದಕ್ಕೆ ಓಟುಕ್ಕುತ್ತರ’ನಿನ್ನ ಮುಂದೆ ನಾನು ಒಂದು ಮಿಂಚು ಹುಳುವಾಗಿದ್ದೇನೆ, ನನ್ನ ರಾಮಾಯಣವನ್ನು ಯಾರೂ ಕೇಳುವುದಿಲ್ಲ.

ಅದು ಧೂಳು ಹಿಡಿದು ಬಿದ್ದಿರುವುದಕ್ಕಿಂತಲೂ ಸುಟ್ಟು ಹೋದರೆ ಒಳ್ಳೆಯದು’ಎಂದು ಹೇಳಿದನು. ಕಂಬನನು ಓಟುಕ್ಕುತ್ತರ ಕೈಹಿಡಿದನು. ಆಗ ಓಟುಕ್ಕುತ್ತರ ರಾಮಾಯಣದಲ್ಲಿನ ಬೆಂಕಿಯಿಂದ ಸುಡದೇ ಉಳಿದ ಉತ್ತರಕಾಂಡವನ್ನು ಕಂಬನನು ತೆಗೆದುಕೊಂಡನು.

ಕಂಬನನು ಓಟುಕ್ಕುತ್ತರಗೆ ‘ಹುಚ್ಚ, ನೀನು ನನ್ನ ಮಿತ್ರನಲ್ಲವೇ ! ಈ ಸ್ವಾಹಾಕಾರವನ್ನು ಮಾಡುವ ಮೊದಲು ನನಗೆ ಹೇಳಬೇಕಿತ್ತಲ್ಲವೇ ! ಈಗ ನಾನು ಹೇಳುವುದನ್ನು ಕೇಳು. ನಿನ್ನ ರಾಮಾಯಣವು ಪೂರ್ಣವಾಗಿದೆ.

ನನ್ನ ರಾಮಾಯಣದ ಉತ್ತರಕಾಂಡವು ಪೂರ್ಣವಾಗಬೇಕಿದೆ. ಈಗ ನಾನು ಅದನ್ನು ರಚಿಸುವುದಿಲ್ಲ. ನನ್ನ ರಾಮಾಯಣಕ್ಕೆ ನಿನ್ನ ಈ ಉತ್ತರಕಾಂಡವನ್ನು ಜೋಡಿಸುತ್ತೇನೆ, ಅಂದರೆ ರಾಮಾಯಣವು ಪೂರ್ಣವಾಗುತ್ತದೆ.

ಜನರು ನಮ್ಮಿಬ್ಬರನ್ನೂ ರಾಮಾಯಣ ಕರ್ತರೆಂದು ಗುರುತಿಸುತ್ತಾರೆ!. ಇದು ಮಿತ್ರಪ್ರೇಮದ ಆದರ್ಶವಾಗುವುದು !’ ಎಂದು ಹೇಳಿದನು.

ಆಧಾರ: ಸಾಪ್ತಾಹಿಕ ಜಯ ಹನುಮಾನ (ಕೃಪೆ: ಹಿಂದೂ ಜಾಗೃತಿ)

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!