Faction clash in BJP.. High voltage meeting tomorrow

BJP; ಬಿಜೆಪಿಯಲ್ಲಿ ತಾರಕಕ್ಕೇರಿದ ಬಣ ಬಡಿದಾಟ.. ನಾಳೆ ಹೈವೋಲ್ಟೇಜ್ ಸಭೆ: ವಿಜಯೇಂದ್ರ ಹೇಳಿದ್ದಿಷ್ಟು| Video

ಬೆಂಗಳೂರು: ಹೊನ್ನವಾರದಲ್ಲಿ ಗೋವಿನ ರುಂಡ ಕತ್ತರಿಸಿ, ಅಮಾನುಷವಾಗಿ ನಡೆದುಕೊಂಡಿದ್ದಾರೆ. ಸರ್ಕಾರದ ಮೇಲೆ ಜನ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಗೋವಿನ ಕೆಚ್ಚಲು ಕೂಯ್ದಿದ್ದಾರೆ. ಪ್ರತಿಯೊಬ್ಬರೂ ತಲೆ ತಗ್ಗಿಸೋ ಘಟನೆ ಇಷ್ಟೊಂದು ನಡೆದರು ಕಾನೂನು ಸುವ್ಯವಸ್ಥೆ ಸರಿಯಾಗಿದೆ ಅಂತ ಬಿಂಬಿಸೋ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ.

ಹಿಂದೂ ವಿರೋಧಿ ಶಕ್ತಿ ರಾಜ್ಯದಲ್ಲಿ ತಾಂಡವ ಆಡ್ತಿದೆ. ಇವರೆಲ್ಲರಿಗೆ ಕಾನೂನಿನ‌ ಬಗ್ಗೆಯಾಗಲಿ ಪೋಲೀಸರ ಬಗ್ಗೆಯಾಗಲಿ ಭಯನೆ ಇಲ್ಲ. ಗೃಹಸಚಿವರು, ಸಿಎಂ ಎಚ್ಚೆತ್ತುಕೊಳ್ಳಬೇಕು.

ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣವಾಗಿ ಹದಗೆಟ್ಟೆದೆ ಅಂತ ಹೇಳಿದರು.

ವಿಜಯೇಂದ್ರ ವಿರುದ್ಧ ಯತ್ನಾಳ್ ಆಂಡ್ ಟೀಮ್ ವಾಗ್ದಾಳಿ ವಿಚಾರ

ಟಾರ್ಗೆಟ್ ಮಾಡೋರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ. ಯತ್ನಾಳ್ ಇರಲಿ, ಯಾರೇ ಆಗಲಿ ನಾನು ತಲೆ‌ಕೆಡಿಸಿಕೊಳ್ಳಲ್ಲ. ನಾನು ಕೆಲಸ ಮಾಡಲು ಬಂದಿದ್ದೇನೆ, ಕೆಲಸ ಮಾಡಿಕೊಂಡು ಹೋಗುತ್ತೇನೆ. ಕೆಲಸ ಇಲ್ಲದವರ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗುವುದಿಲ್ಲ ಅಂತ ಹೇಳಿದರು

ನಾಳೆ ಬಿಜೆಪಿ ಕಚೇರಿಯಲ್ಲಿ ಸರಣಿ ಸಭೆ

ನಾಳೆ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್, ಪೊನ್ನು ರಾಧಾ ಕೃಷ್ಣ, ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಬರುತ್ತಿದ್ದಾರೆ. ಬಿಜೆಪಿ ಕಚೇರಿಯಲ್ಲಿ 3 ಗಂಟೆಗೆ ಚುನಾಯಿತ ಸದಸ್ಯರು, ಸಂಸದರು, ಶಾಸಕರ ಜೊತೆ ಸಭೆ ಕರೆದಿದ್ದಾರೆ.

ಅಲ್ಲಿ ಎಲ್ಲರ ಅಭಿಪ್ರಾಯ ಪಡೆಯುತ್ತಾರೆ. 4 ಗಂಟೆಗೆ ಸಂಘಟನಾ ಪರ್ವ, ಜಿಲ್ಲಾ ಅಧ್ಯಕ್ಷರ ಚುನಾವಣೆ ಬಗ್ಗೆ ಸಭೆ ಇದೆ.. ರಾಜ್ಯಾಧ್ಯಕ್ಷರ ಚುನಾವಣೆ ಚರ್ಚೆ ಆಗುತ್ತೆ. ಚುನಾವಣೆ ಆಫೀಸರ್ ಸಭೆ ಕೂಡ ನಡೆಯುತ್ತೆ ತದನಂತರ 7 ಗಂಟೆಗೆ ಕೋರ್ ಕಮಿಟಿ ಸಭೆ ನಡೆಯುತ್ತೆ.

ನಾಳೆಯ ಸಭೆಯಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ, ರಾಜ್ಯಾಧ್ಯಕ್ಷ ಬಗ್ಗೆ ಚರ್ಚೆ ನಡೆಯುತ್ತದೆ ಅಂತ ಮಾಹಿತಿ ನೀಡಿದರು

ಯತ್ನಾಳ್ ವಿರುದ್ದ ಕ್ರಮ

ಯಾರು ಕ್ರಮ ಕೈಗೊಳ್ಳಬೇಕೋ ಅವರು ತೆಗೆದುಕೊಳ್ಳುತ್ತಾರೆ.. ಫೆಬ್ರವರಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಇದೆ. ಪಕ್ಷದ ಇವತ್ತಿನ ಬೆಳವಣಿಗೆಗಳ ಬಗ್ಗೆ ನಿಮ್ಮ (ಖಾಸಗಿ ಚಾನಲ್) ಹಾಗೂ ಕಾರ್ಯಕರ್ತರ ನೋವು ಇದೆ.

ಅ ನೋವು ಏನು ಅಂತ ಅರ್ಥ ಆಗುತ್ತೆ. ಇದೆಲ್ಲದಕ್ಕೂ ಶೀಘ್ರದಲ್ಲೇ ಇತೀಶ್ರೀ ಹಾಡೋ ಕೆಲಸ ಹೈಕಮಾಂಡ್ ಮಾಡುತ್ತದೆ ಅಂತ ಹೇಳಿದರು

ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ

ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಈ ರೀತಿ ಘಟನೆಗಳು ನಡೆಯುತ್ತಿವೆ. ವಿಜಯಪುರದಲ್ಲಿ ಯಾವ ರೀತಿ ತಳಿಸಿದ್ದಾರೆ ಅಂತ ನೋಡುತ್ತಿದ್ದೇವೆ ರಾಜ್ಯ ಸರ್ಕಾರ ಯಾವ ರೀತಿ ವರ್ತಿಸುತ್ತಿದೆ ಈ ರೀತಿ ನಡೆದುಕೊಂಡವರನ್ನು ಕೂಡಲೇ ಬಂಧನ ಮಾಡಬೇಕು ಅಂತ ಆಗ್ರಹಿಸಿದರು.

ಮುಡಾ ವಿಚಾರದಲ್ಲಿ ನಡೆದ ಘಟನೆ ಬಳಿಕ. ಕಾಂಗ್ರೆಸ್ ನಲ್ಲೇ ಸಿಎಂ ಆಗೋಕೆ ನಡೆಯುತ್ತಿರೋ ಗುದ್ದಾಟ ನಾವು ನೋಡ್ತಿದ್ದೇವೆ. ಇದರ ನಡುವೆ ಬಿಜೆಪಿ, ಜೆಡಿಎಸ್ ಪಕ್ಷದ ಶಾಸಕರನ್ನ ಅವರ ಪಕ್ಷಕ್ಕೆ ಸೇರಿಸಿಕೊಂಡು ಏನು ಮಾಡುತ್ತಾರೆ ಅಂತ ಪ್ರಶ್ನೆ ಮಾಡಿದರು

ಮೊದಲು ಅಭಿವೃದ್ಧಿ ಮಾಡಲಿ. ಕಾನೂನು ಸುವ್ಯವಸ್ಥೆ ಸರಿಪಡಿಸಲಿ. ಅವರಲ್ಲಿ ಇರೋ ಶಾಸಕರನ್ನ ಮೊದಲು ಉಳಿಸಿಕೊಳ್ಳಲಿ. ಬಿಜೆಪಿ, ಜೆಡಿಎಸ್ ಪಕ್ಷದವರನ್ನ ಆಮೇಲೆ ಕರೆದುಕೊಳ್ಳಲಿ ಅಂತ ಹೇಳಿದರು

ರಾಜಕೀಯ

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

"ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ (ಡಿ.ಕೆ. ಶಿವಕುಮಾರ್) ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ" ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ (D.K. Suresh) ಅವರು ತಿಳಿಸಿದರು.

[ccc_my_favorite_select_button post_id="119818"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!