Faction clash in BJP.. High voltage meeting tomorrow

BJP; ಬಿಜೆಪಿಯಲ್ಲಿ ತಾರಕಕ್ಕೇರಿದ ಬಣ ಬಡಿದಾಟ.. ನಾಳೆ ಹೈವೋಲ್ಟೇಜ್ ಸಭೆ: ವಿಜಯೇಂದ್ರ ಹೇಳಿದ್ದಿಷ್ಟು| Video

ಬೆಂಗಳೂರು: ಹೊನ್ನವಾರದಲ್ಲಿ ಗೋವಿನ ರುಂಡ ಕತ್ತರಿಸಿ, ಅಮಾನುಷವಾಗಿ ನಡೆದುಕೊಂಡಿದ್ದಾರೆ. ಸರ್ಕಾರದ ಮೇಲೆ ಜನ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಗೋವಿನ ಕೆಚ್ಚಲು ಕೂಯ್ದಿದ್ದಾರೆ. ಪ್ರತಿಯೊಬ್ಬರೂ ತಲೆ ತಗ್ಗಿಸೋ ಘಟನೆ ಇಷ್ಟೊಂದು ನಡೆದರು ಕಾನೂನು ಸುವ್ಯವಸ್ಥೆ ಸರಿಯಾಗಿದೆ ಅಂತ ಬಿಂಬಿಸೋ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ.

ಹಿಂದೂ ವಿರೋಧಿ ಶಕ್ತಿ ರಾಜ್ಯದಲ್ಲಿ ತಾಂಡವ ಆಡ್ತಿದೆ. ಇವರೆಲ್ಲರಿಗೆ ಕಾನೂನಿನ‌ ಬಗ್ಗೆಯಾಗಲಿ ಪೋಲೀಸರ ಬಗ್ಗೆಯಾಗಲಿ ಭಯನೆ ಇಲ್ಲ. ಗೃಹಸಚಿವರು, ಸಿಎಂ ಎಚ್ಚೆತ್ತುಕೊಳ್ಳಬೇಕು.

ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣವಾಗಿ ಹದಗೆಟ್ಟೆದೆ ಅಂತ ಹೇಳಿದರು.

ವಿಜಯೇಂದ್ರ ವಿರುದ್ಧ ಯತ್ನಾಳ್ ಆಂಡ್ ಟೀಮ್ ವಾಗ್ದಾಳಿ ವಿಚಾರ

ಟಾರ್ಗೆಟ್ ಮಾಡೋರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ. ಯತ್ನಾಳ್ ಇರಲಿ, ಯಾರೇ ಆಗಲಿ ನಾನು ತಲೆ‌ಕೆಡಿಸಿಕೊಳ್ಳಲ್ಲ. ನಾನು ಕೆಲಸ ಮಾಡಲು ಬಂದಿದ್ದೇನೆ, ಕೆಲಸ ಮಾಡಿಕೊಂಡು ಹೋಗುತ್ತೇನೆ. ಕೆಲಸ ಇಲ್ಲದವರ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗುವುದಿಲ್ಲ ಅಂತ ಹೇಳಿದರು

ನಾಳೆ ಬಿಜೆಪಿ ಕಚೇರಿಯಲ್ಲಿ ಸರಣಿ ಸಭೆ

ನಾಳೆ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್, ಪೊನ್ನು ರಾಧಾ ಕೃಷ್ಣ, ಸಹ ಉಸ್ತುವಾರಿ ಸುಧಾಕರ್ ರೆಡ್ಡಿ ಬರುತ್ತಿದ್ದಾರೆ. ಬಿಜೆಪಿ ಕಚೇರಿಯಲ್ಲಿ 3 ಗಂಟೆಗೆ ಚುನಾಯಿತ ಸದಸ್ಯರು, ಸಂಸದರು, ಶಾಸಕರ ಜೊತೆ ಸಭೆ ಕರೆದಿದ್ದಾರೆ.

ಅಲ್ಲಿ ಎಲ್ಲರ ಅಭಿಪ್ರಾಯ ಪಡೆಯುತ್ತಾರೆ. 4 ಗಂಟೆಗೆ ಸಂಘಟನಾ ಪರ್ವ, ಜಿಲ್ಲಾ ಅಧ್ಯಕ್ಷರ ಚುನಾವಣೆ ಬಗ್ಗೆ ಸಭೆ ಇದೆ.. ರಾಜ್ಯಾಧ್ಯಕ್ಷರ ಚುನಾವಣೆ ಚರ್ಚೆ ಆಗುತ್ತೆ. ಚುನಾವಣೆ ಆಫೀಸರ್ ಸಭೆ ಕೂಡ ನಡೆಯುತ್ತೆ ತದನಂತರ 7 ಗಂಟೆಗೆ ಕೋರ್ ಕಮಿಟಿ ಸಭೆ ನಡೆಯುತ್ತೆ.

ನಾಳೆಯ ಸಭೆಯಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ, ರಾಜ್ಯಾಧ್ಯಕ್ಷ ಬಗ್ಗೆ ಚರ್ಚೆ ನಡೆಯುತ್ತದೆ ಅಂತ ಮಾಹಿತಿ ನೀಡಿದರು

ಯತ್ನಾಳ್ ವಿರುದ್ದ ಕ್ರಮ

ಯಾರು ಕ್ರಮ ಕೈಗೊಳ್ಳಬೇಕೋ ಅವರು ತೆಗೆದುಕೊಳ್ಳುತ್ತಾರೆ.. ಫೆಬ್ರವರಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಇದೆ. ಪಕ್ಷದ ಇವತ್ತಿನ ಬೆಳವಣಿಗೆಗಳ ಬಗ್ಗೆ ನಿಮ್ಮ (ಖಾಸಗಿ ಚಾನಲ್) ಹಾಗೂ ಕಾರ್ಯಕರ್ತರ ನೋವು ಇದೆ.

ಅ ನೋವು ಏನು ಅಂತ ಅರ್ಥ ಆಗುತ್ತೆ. ಇದೆಲ್ಲದಕ್ಕೂ ಶೀಘ್ರದಲ್ಲೇ ಇತೀಶ್ರೀ ಹಾಡೋ ಕೆಲಸ ಹೈಕಮಾಂಡ್ ಮಾಡುತ್ತದೆ ಅಂತ ಹೇಳಿದರು

ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ

ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಈ ರೀತಿ ಘಟನೆಗಳು ನಡೆಯುತ್ತಿವೆ. ವಿಜಯಪುರದಲ್ಲಿ ಯಾವ ರೀತಿ ತಳಿಸಿದ್ದಾರೆ ಅಂತ ನೋಡುತ್ತಿದ್ದೇವೆ ರಾಜ್ಯ ಸರ್ಕಾರ ಯಾವ ರೀತಿ ವರ್ತಿಸುತ್ತಿದೆ ಈ ರೀತಿ ನಡೆದುಕೊಂಡವರನ್ನು ಕೂಡಲೇ ಬಂಧನ ಮಾಡಬೇಕು ಅಂತ ಆಗ್ರಹಿಸಿದರು.

ಮುಡಾ ವಿಚಾರದಲ್ಲಿ ನಡೆದ ಘಟನೆ ಬಳಿಕ. ಕಾಂಗ್ರೆಸ್ ನಲ್ಲೇ ಸಿಎಂ ಆಗೋಕೆ ನಡೆಯುತ್ತಿರೋ ಗುದ್ದಾಟ ನಾವು ನೋಡ್ತಿದ್ದೇವೆ. ಇದರ ನಡುವೆ ಬಿಜೆಪಿ, ಜೆಡಿಎಸ್ ಪಕ್ಷದ ಶಾಸಕರನ್ನ ಅವರ ಪಕ್ಷಕ್ಕೆ ಸೇರಿಸಿಕೊಂಡು ಏನು ಮಾಡುತ್ತಾರೆ ಅಂತ ಪ್ರಶ್ನೆ ಮಾಡಿದರು

ಮೊದಲು ಅಭಿವೃದ್ಧಿ ಮಾಡಲಿ. ಕಾನೂನು ಸುವ್ಯವಸ್ಥೆ ಸರಿಪಡಿಸಲಿ. ಅವರಲ್ಲಿ ಇರೋ ಶಾಸಕರನ್ನ ಮೊದಲು ಉಳಿಸಿಕೊಳ್ಳಲಿ. ಬಿಜೆಪಿ, ಜೆಡಿಎಸ್ ಪಕ್ಷದವರನ್ನ ಆಮೇಲೆ ಕರೆದುಕೊಳ್ಳಲಿ ಅಂತ ಹೇಳಿದರು

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!