HD Kumaraswamy Proposes Advanced EV and Automotive Tech Centre in Bengaluru

Bengaluru: ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ; ಉನ್ನತ ಅಧಿಕಾರಿಗಳ ಜತೆ ಹೆಚ್‌ಡಿ ಕುಮಾರಸ್ವಾಮಿ ಚರ್ಚೆ

ಮಾನೇಸರ್ (ಹರಿಯಾಣ): ಬೆಂಗಳೂರು (Bengaluru) ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ -ಐಕ್ಯಾಟ್ ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ.

ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The International Centre for Automotive Technology) ನ ಎರಡು ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು; ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನದ ನೆಲೆವೀಡಾದ ಬೆಂಗಳೂರಿನಲ್ಲಿ ಇದರ ಮೂರನೇ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಐಕ್ಯಾಟ್ ನ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಅಲ್ಲದೆ; ದಕ್ಷಿಣದಲ್ಲಿಯೇ ಅತ್ಯಂತ ಆಯಕಟ್ಟಿನ ಹಾಗೂ ವ್ಯೂಹಾತ್ಮಕ ನಗರವೂ ಆಗಿರುವ ಬೆಂಗಳೂರಿನಲ್ಲಿ ಐಕ್ಯಾಟ್ ನ ಹೊಸ ಕೇಂದ್ರ ಬರುವುದು ಅತ್ಯಗತ್ಯವಾಗಿದೆ. ನಾವೀನ್ಯತೆ, ಆವಿಷ್ಕಾರ ಹಾಗೂ ಉದ್ಯಮಶೀಲತೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ.

ಅಟೋಮೊಬೈಲ್ ಕ್ಷೇತ್ರದ ಹಬ್ ಆಗಿಯೂ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಸ್ಥಾಪನೆ ಬಗ್ಗೆ ಕೇಂದ್ರದ ನಿರ್ದೇಶಕ ಸೌರಭ್ ದಲೇಲ ಅವರೊಂದಿಗೆ ಚರ್ಚಿಸಿದರು.

ಬೆಂಗಳೂರಿನಲ್ಲಿ ಆದಷ್ಟು ಬೇಗ ಐಕ್ಯಾಟ್ ಕೇಂದ್ರ ಆರಂಭ ಮಾಡುವ ಬಗ್ಗೆ ಪ್ರಕ್ರಿಯೆಗಳನ್ನು ಆರಂಭ ಮಾಡುವುದಾಗಿ ಅಧಿಕಾರಿಗಳು ಸಚಿವರಿಗೆ ಸ್ಪಷ್ಟ ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಸ್ಥಾಪನೆ ಆಗಲಿರುವ ಈ ಕೇಂದ್ರವು ಎಲೆಕ್ಟ್ರಿಕ್ ವಾಹನ (ಇವಿ) ತಂತ್ರಜ್ಞಾನ, ಸಾಫ್ಟ್‌ವೇರ್ ನಿಯಂತ್ರಿತ ವಾಹನಗಳು (ಎಸ್‌ಡಿವಿಗಳು), ಸ್ವಾಯತ್ತ ವ್ಯವಸ್ಥೆಗಳು ಮತ್ತು ದತ್ತಾಂಶ ಸುರಕ್ಷತೆಯಲ್ಲಿ ಐಕ್ಯಾಟ್ ಕೇಂದ್ರವು ನಿರ್ಣಾಯಕವಾಗಿ ಕೆಲಸ ಮಾಡುತ್ತದೆ.

ಅಲ್ಲದೆ, ಈ ಕೇಂದ್ರವು ಬೆಂಗಳೂರಿನಲ್ಲಿ ಸ್ಥಾಪನೆ ಆಗುವುದರಿಂದ ಕರ್ನಾಟಕದ ಜತೆಗೆ ಅದರ ಅಕ್ಕಪಕ್ಕದ ರಾಜ್ಯಗಳಲ್ಲಿಯೂ ಅಟೋಮೊಬೈಲ್ ಆವಿಷ್ಕಾರಕ್ಕೆ ಭಾರೀ ಪ್ರಮಾಣದ ಉತ್ತೇಜನ ದೊರೆಯಲಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಸ್ಥಾಪನೆಗೆ ಕೇಂದ್ರದ ಬೃಹತ್ ಕೈಗಾರಿಕೆ ಸಚಿವಾಲಯದಿಂದ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಹಾಗೂ ಅದೇ ರೀತಿ ಕರ್ನಾಟಕ ಸರ್ಕಾರದಿಂದ ಸಿಗಬೇಕಿರುವ ಅನುಕೂಲಗಳನ್ನು ಒದಗಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಸಚಿವರು ಐಕ್ಯಾಟ್ ನಿರ್ದೇಶಕರಿಗೆ ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಐಕ್ಯಾಟ್ ನ ಮೂರನೇ ಕೇಂದ್ರ ಬಂದರೆ ಅಟೋಮೊಬೈಲ್ ಕ್ಷೇತ್ರಕ್ಕೆ ಮಾತ್ರವಷ್ಟೇ ಅಲ್ಲದೆ, ರಕ್ಷಣೆ ಮತ್ತು ರೇಲ್ವೆ ಕ್ಷೇತ್ರಗಳಿಗೂ ಹೆಚ್ಚು ಉಪಯೋಗ ಆಗುತ್ತದೆ, ಹೊಸ ಅವಕಾಶದ ಬಾಗಿಲುಗಳನ್ನು ತೆರೆಯುತ್ತದೆ. ಅಟೋಮೊಬೈಲ್ ತಂತ್ರಜ್ಞಾನದ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಸಚಿವರು ಹೇಳಿದರು.

ಐಕ್ಯಾಟ್ 3ನೇ ಕೇಂದ್ರ; ಏನಿದರ ವೈಶಿಷ್ಟ್ಯಗಳು?

ಐಕ್ಯಾಟ್ 3ನೇ ಕೇಂದ್ರ ಕೇಂದ್ರ ಕೇವಲ ಒಂದು ತಂತ್ರಜ್ಞಾನ ಆಧಾರಿತ ಕೇಂದ್ರವಷ್ಟೇ ಆಗಿರದೆ, ಒಟ್ಟಾರೆ ಆರ್ಥಿಕತೆ ಮೇಲೆ ಪ್ರತಿಕೂಲಕರ ಪ್ರಭಾವ ಬೀರುತ್ತದೆ.

  • •ಸುಧಾರಿತ ಎಲೆಕ್ಟ್ರಿಕ್ ತಂತ್ರಜ್ಞಾನ ಅಭಿವೃದ್ಧಿ ಮತ್ತು ಮಾಪನಾಂಕ ನಿರ್ಣಯದ ಪ್ರಯೋಗಾಲಯಗಳನ್ನು ಹೊಂದಿರುತ್ತದೆ.
  • •ಎಲೆಕ್ಟ್ರಾನಿಕ್ ನಿಯಂತ್ರಿತ ವ್ಯವಸ್ಥೆ (ECU) ಹಾಗೂ ಸೆನ್ಸಾರ್ ತಂತ್ರಜ್ಞಾನ ಅಭಿವೃದ್ಧಿ ವ್ಯವಸ್ಥೆ ಹೊಂದಿರುತ್ತದೆ.
  • •ಸೈಬರ್ ಸುರಕ್ಷತೆ ಲ್ಯಾಬ್‌ಗಳು ಮತ್ತು ಅತ್ಯಾಧುನಿಕ ಚಾಲನಾ ನೆರವು ವ್ಯವಸ್ಥೆ (ADAS) ಸಂಶೋಧನೆ ವ್ಯವಸ್ಥೆ ಹೊಂದಿರುತ್ತದೆ.
  • •ಸಂಪರ್ಕಿತ ಮತ್ತು ಸ್ವಾಯತ್ತ ಇಲ್ಲವೇ ಏಕೀಕೃತ ನಿಯಂತ್ರಣ ವ್ಯವಸ್ಥೆಯುಳ್ಳ ವಾಹನ ತಂತ್ರಜ್ಞಾನಗಳಿಗೆ ಸೌಲಭ್ಯಗಳನ್ನು ಹೊಂದಿರುತ್ತದೆ.
  • •ಸಾಫ್ಟ್‌ವೇರ್ ಆಧಾರಿತ ಅಥವಾ ನಿಯಂತ್ರಿತ ವಾಹನಗಳ (SDVs) ಸಾಫ್ಟ್‌ವೇರ್ ಪರೀಕ್ಷೆ ಮತ್ತು ಅಭಿವೃದ್ಧಿಯನ್ನು ಮಾಡುತ್ತದೆ.
  • •ಮಹತ್ವದ್ದಾದ ಆಟೋಮೋಟಿವ್ ದತ್ತಾಂಶವನ್ನು ಸುರಕ್ಷಿತವಾಗಿ ಕಾಪಾಡುವ ವ್ಯವಸ್ಥೆಯನ್ನು ಹೊಂದಿರುತ್ತದೆ.

ಸಚಿವರ ಕನಸು ನನಸು

ಪ್ರಧಾನಿಗಳ ಆತ್ಮನಿರ್ಭರ್ ಭಾರತ್ ಹಾಗೂ ಮೆಕ್ ಇಂಡಿಯಾ ಮೂಲಕ ವಿಕಸಿತ ಭಾರತ ಕನಸು ಸಾಕಾರಕ್ಕೆ ಐಕ್ಯಾಟ್ ನ ಎರಡು ಕೇಂದ್ರಗಳ ಕೊಡುಗೆ ದೊಡ್ಡದು. ಅದೇ ರೀತಿ ಬೆಂಗಳೂರಿನಲ್ಲಿ ಮೂರನೇ ಅತಿದೊಡ್ಡ ಕೇಂದ್ರ ಸ್ಥಾಪನೆಯಾದರೆ ರಾಜ್ಯಕ್ಕೆ ಹೆಚ್ಚು ಅನುಕೂಲ ಆಗುವುದು ಮಾತ್ರವಲ್ಲದೆ, ದಕ್ಷಿಣದ ರಾಜ್ಯಗಳಲ್ಲಿ ಆಟೋಮೊಟೀವ್ ತಂತ್ರಜ್ಞಾನದ ಬೃಹತ್ ಕ್ರಾಂತಿಯೇ ಆಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಎರಡೂ ಕೇಂದ್ರಗಳಿಗೆ ಭೇಟಿ, ಪರಿಶೀಲನೆ

ಸೋಮವಾರ ಇಡೀ ದಿನ ಐಕ್ಯಾಟ್ ಕೇಂದ್ರಗಳ ವಿವಿಧ ವಿಭಾಗಳಿಗೆ ಭೇಟಿ ನೀಡಿದ ಸಚಿವ ಕುಮಾರಸ್ವಾಮಿ ಅವರು; ಅಲ್ಲಿರುವ ಎಲ್ಲಾ ಸುಧಾರಿತ ತಾಂತ್ರಿಕ ಸೌಲಭಗಳನ್ನು ಖುದ್ದು ವೀಕ್ಷಿಸಿದರು. ಅಲ್ಲದೆ, ವಾಹನಗಳ ಸುರಕ್ಷತಾ ಸೌಲಭ್ಯಗಳನ್ನು ಅವರು ಪರಿಶೀಲಿಸಿದರು.

ಅದಕ್ಕೂ ಮೊದಲು ಅಧಿಕಾರಿಗಳ ಸಭೆ ನಡೆಸಿದ ಸಚಿವರು; ಐಕ್ಯಾಟ್ ಕೇಂದ್ರದಲ್ಲಿನ ಚಟುವಟಿಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಆ ನಂತರ ಇಡೀ ಕೇಂದ್ರದ ಪ್ರಯೋಗಾಲಯಗಳು, ಅಪಘಾತ ಪರೀಕ್ಷೆ ಪ್ರಯೋಗಾಲಯಗಳು, ಪ್ರತಿಧ್ವನಿ ಅಧ್ಯಯನ ಕೇಂದ್ರಗಳು ಹಾಗೂ ಇಂಧನ ಹರಿವಿನ ಪರೀಕ್ಷಾ ಕಾರ್ಯವಿಧಾನಗಳನ್ನು ಸಚಿವರು ಪರಿಶೀಲನೆ ವೀಕ್ಷಿಸಿದರು.

ಈ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವರು, ಭಾರತದ ವಾಹನಗಳ ಉತ್ಕೃಷ್ಟತೆಗೆ ಐಕ್ಯಾಟ್ ಕೇಂದ್ರ ಅತಿದೊಡ್ಡ ಕೊಡುಗೆ ನೀಡುತ್ತಿದೆ. ಆವಿಷ್ಕಾರ, ನಾವೀನ್ಯತೆ ಕ್ಷೇತ್ರಗಳಿಗೆ ಇದು ಹೆಚ್ಚು ಆದ್ಯತೆ ಕೊಡುತ್ತಿದೆ.

ಇಲ್ಲಿಗೆ ಬಂದಿರುವುದು ನನಗೆ ಬಹಳ ಸಂತೋಷ ತಂದಿದೆ. ಇಲ್ಲಿನ ಸುಧಾರಿತ ಪ್ರಯೋಗಾಲಯಗಳು ಮತ್ತು ಪರೀಕ್ಷಾ ಮೂಲಸೌಕರ್ಯಗಳನ್ನು ಒಳಗೊಂಡಂತೆ ICAT ನ ಅತ್ಯಾಧುನಿಕ ಸೌಲಭ್ಯಗಳು ಆಟೋಮೋಟಿವ್ ನಾವೀನ್ಯತೆಯಲ್ಲಿ ಭಾರತದ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿವೆ ಎಂದು ಸಚಿವರು ಹೇಳಿದರು.

ಇದೇ ವೇಳೆ ಸಚಿವರು ಅತ್ಯಾಧುನಿಕ ಐಟಿ ಆಟೋಮ್ಯಾಟಿವ್ ಕೇಂದ್ರಕ್ಕೆ ಅಡಿಗಲ್ಲು ಹಾಕಿದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!