HD Kumaraswamy Proposes Advanced EV and Automotive Tech Centre in Bengaluru

Bengaluru: ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ; ಉನ್ನತ ಅಧಿಕಾರಿಗಳ ಜತೆ ಹೆಚ್‌ಡಿ ಕುಮಾರಸ್ವಾಮಿ ಚರ್ಚೆ

ಮಾನೇಸರ್ (ಹರಿಯಾಣ): ಬೆಂಗಳೂರು (Bengaluru) ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ -ಐಕ್ಯಾಟ್ ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ.

ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The International Centre for Automotive Technology) ನ ಎರಡು ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು; ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನದ ನೆಲೆವೀಡಾದ ಬೆಂಗಳೂರಿನಲ್ಲಿ ಇದರ ಮೂರನೇ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಐಕ್ಯಾಟ್ ನ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಅಲ್ಲದೆ; ದಕ್ಷಿಣದಲ್ಲಿಯೇ ಅತ್ಯಂತ ಆಯಕಟ್ಟಿನ ಹಾಗೂ ವ್ಯೂಹಾತ್ಮಕ ನಗರವೂ ಆಗಿರುವ ಬೆಂಗಳೂರಿನಲ್ಲಿ ಐಕ್ಯಾಟ್ ನ ಹೊಸ ಕೇಂದ್ರ ಬರುವುದು ಅತ್ಯಗತ್ಯವಾಗಿದೆ. ನಾವೀನ್ಯತೆ, ಆವಿಷ್ಕಾರ ಹಾಗೂ ಉದ್ಯಮಶೀಲತೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ.

ಅಟೋಮೊಬೈಲ್ ಕ್ಷೇತ್ರದ ಹಬ್ ಆಗಿಯೂ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಸ್ಥಾಪನೆ ಬಗ್ಗೆ ಕೇಂದ್ರದ ನಿರ್ದೇಶಕ ಸೌರಭ್ ದಲೇಲ ಅವರೊಂದಿಗೆ ಚರ್ಚಿಸಿದರು.

ಬೆಂಗಳೂರಿನಲ್ಲಿ ಆದಷ್ಟು ಬೇಗ ಐಕ್ಯಾಟ್ ಕೇಂದ್ರ ಆರಂಭ ಮಾಡುವ ಬಗ್ಗೆ ಪ್ರಕ್ರಿಯೆಗಳನ್ನು ಆರಂಭ ಮಾಡುವುದಾಗಿ ಅಧಿಕಾರಿಗಳು ಸಚಿವರಿಗೆ ಸ್ಪಷ್ಟ ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಸ್ಥಾಪನೆ ಆಗಲಿರುವ ಈ ಕೇಂದ್ರವು ಎಲೆಕ್ಟ್ರಿಕ್ ವಾಹನ (ಇವಿ) ತಂತ್ರಜ್ಞಾನ, ಸಾಫ್ಟ್‌ವೇರ್ ನಿಯಂತ್ರಿತ ವಾಹನಗಳು (ಎಸ್‌ಡಿವಿಗಳು), ಸ್ವಾಯತ್ತ ವ್ಯವಸ್ಥೆಗಳು ಮತ್ತು ದತ್ತಾಂಶ ಸುರಕ್ಷತೆಯಲ್ಲಿ ಐಕ್ಯಾಟ್ ಕೇಂದ್ರವು ನಿರ್ಣಾಯಕವಾಗಿ ಕೆಲಸ ಮಾಡುತ್ತದೆ.

ಅಲ್ಲದೆ, ಈ ಕೇಂದ್ರವು ಬೆಂಗಳೂರಿನಲ್ಲಿ ಸ್ಥಾಪನೆ ಆಗುವುದರಿಂದ ಕರ್ನಾಟಕದ ಜತೆಗೆ ಅದರ ಅಕ್ಕಪಕ್ಕದ ರಾಜ್ಯಗಳಲ್ಲಿಯೂ ಅಟೋಮೊಬೈಲ್ ಆವಿಷ್ಕಾರಕ್ಕೆ ಭಾರೀ ಪ್ರಮಾಣದ ಉತ್ತೇಜನ ದೊರೆಯಲಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಸ್ಥಾಪನೆಗೆ ಕೇಂದ್ರದ ಬೃಹತ್ ಕೈಗಾರಿಕೆ ಸಚಿವಾಲಯದಿಂದ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಹಾಗೂ ಅದೇ ರೀತಿ ಕರ್ನಾಟಕ ಸರ್ಕಾರದಿಂದ ಸಿಗಬೇಕಿರುವ ಅನುಕೂಲಗಳನ್ನು ಒದಗಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಸಚಿವರು ಐಕ್ಯಾಟ್ ನಿರ್ದೇಶಕರಿಗೆ ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಐಕ್ಯಾಟ್ ನ ಮೂರನೇ ಕೇಂದ್ರ ಬಂದರೆ ಅಟೋಮೊಬೈಲ್ ಕ್ಷೇತ್ರಕ್ಕೆ ಮಾತ್ರವಷ್ಟೇ ಅಲ್ಲದೆ, ರಕ್ಷಣೆ ಮತ್ತು ರೇಲ್ವೆ ಕ್ಷೇತ್ರಗಳಿಗೂ ಹೆಚ್ಚು ಉಪಯೋಗ ಆಗುತ್ತದೆ, ಹೊಸ ಅವಕಾಶದ ಬಾಗಿಲುಗಳನ್ನು ತೆರೆಯುತ್ತದೆ. ಅಟೋಮೊಬೈಲ್ ತಂತ್ರಜ್ಞಾನದ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಸಚಿವರು ಹೇಳಿದರು.

ಐಕ್ಯಾಟ್ 3ನೇ ಕೇಂದ್ರ; ಏನಿದರ ವೈಶಿಷ್ಟ್ಯಗಳು?

ಐಕ್ಯಾಟ್ 3ನೇ ಕೇಂದ್ರ ಕೇಂದ್ರ ಕೇವಲ ಒಂದು ತಂತ್ರಜ್ಞಾನ ಆಧಾರಿತ ಕೇಂದ್ರವಷ್ಟೇ ಆಗಿರದೆ, ಒಟ್ಟಾರೆ ಆರ್ಥಿಕತೆ ಮೇಲೆ ಪ್ರತಿಕೂಲಕರ ಪ್ರಭಾವ ಬೀರುತ್ತದೆ.

  • •ಸುಧಾರಿತ ಎಲೆಕ್ಟ್ರಿಕ್ ತಂತ್ರಜ್ಞಾನ ಅಭಿವೃದ್ಧಿ ಮತ್ತು ಮಾಪನಾಂಕ ನಿರ್ಣಯದ ಪ್ರಯೋಗಾಲಯಗಳನ್ನು ಹೊಂದಿರುತ್ತದೆ.
  • •ಎಲೆಕ್ಟ್ರಾನಿಕ್ ನಿಯಂತ್ರಿತ ವ್ಯವಸ್ಥೆ (ECU) ಹಾಗೂ ಸೆನ್ಸಾರ್ ತಂತ್ರಜ್ಞಾನ ಅಭಿವೃದ್ಧಿ ವ್ಯವಸ್ಥೆ ಹೊಂದಿರುತ್ತದೆ.
  • •ಸೈಬರ್ ಸುರಕ್ಷತೆ ಲ್ಯಾಬ್‌ಗಳು ಮತ್ತು ಅತ್ಯಾಧುನಿಕ ಚಾಲನಾ ನೆರವು ವ್ಯವಸ್ಥೆ (ADAS) ಸಂಶೋಧನೆ ವ್ಯವಸ್ಥೆ ಹೊಂದಿರುತ್ತದೆ.
  • •ಸಂಪರ್ಕಿತ ಮತ್ತು ಸ್ವಾಯತ್ತ ಇಲ್ಲವೇ ಏಕೀಕೃತ ನಿಯಂತ್ರಣ ವ್ಯವಸ್ಥೆಯುಳ್ಳ ವಾಹನ ತಂತ್ರಜ್ಞಾನಗಳಿಗೆ ಸೌಲಭ್ಯಗಳನ್ನು ಹೊಂದಿರುತ್ತದೆ.
  • •ಸಾಫ್ಟ್‌ವೇರ್ ಆಧಾರಿತ ಅಥವಾ ನಿಯಂತ್ರಿತ ವಾಹನಗಳ (SDVs) ಸಾಫ್ಟ್‌ವೇರ್ ಪರೀಕ್ಷೆ ಮತ್ತು ಅಭಿವೃದ್ಧಿಯನ್ನು ಮಾಡುತ್ತದೆ.
  • •ಮಹತ್ವದ್ದಾದ ಆಟೋಮೋಟಿವ್ ದತ್ತಾಂಶವನ್ನು ಸುರಕ್ಷಿತವಾಗಿ ಕಾಪಾಡುವ ವ್ಯವಸ್ಥೆಯನ್ನು ಹೊಂದಿರುತ್ತದೆ.

ಸಚಿವರ ಕನಸು ನನಸು

ಪ್ರಧಾನಿಗಳ ಆತ್ಮನಿರ್ಭರ್ ಭಾರತ್ ಹಾಗೂ ಮೆಕ್ ಇಂಡಿಯಾ ಮೂಲಕ ವಿಕಸಿತ ಭಾರತ ಕನಸು ಸಾಕಾರಕ್ಕೆ ಐಕ್ಯಾಟ್ ನ ಎರಡು ಕೇಂದ್ರಗಳ ಕೊಡುಗೆ ದೊಡ್ಡದು. ಅದೇ ರೀತಿ ಬೆಂಗಳೂರಿನಲ್ಲಿ ಮೂರನೇ ಅತಿದೊಡ್ಡ ಕೇಂದ್ರ ಸ್ಥಾಪನೆಯಾದರೆ ರಾಜ್ಯಕ್ಕೆ ಹೆಚ್ಚು ಅನುಕೂಲ ಆಗುವುದು ಮಾತ್ರವಲ್ಲದೆ, ದಕ್ಷಿಣದ ರಾಜ್ಯಗಳಲ್ಲಿ ಆಟೋಮೊಟೀವ್ ತಂತ್ರಜ್ಞಾನದ ಬೃಹತ್ ಕ್ರಾಂತಿಯೇ ಆಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಎರಡೂ ಕೇಂದ್ರಗಳಿಗೆ ಭೇಟಿ, ಪರಿಶೀಲನೆ

ಸೋಮವಾರ ಇಡೀ ದಿನ ಐಕ್ಯಾಟ್ ಕೇಂದ್ರಗಳ ವಿವಿಧ ವಿಭಾಗಳಿಗೆ ಭೇಟಿ ನೀಡಿದ ಸಚಿವ ಕುಮಾರಸ್ವಾಮಿ ಅವರು; ಅಲ್ಲಿರುವ ಎಲ್ಲಾ ಸುಧಾರಿತ ತಾಂತ್ರಿಕ ಸೌಲಭಗಳನ್ನು ಖುದ್ದು ವೀಕ್ಷಿಸಿದರು. ಅಲ್ಲದೆ, ವಾಹನಗಳ ಸುರಕ್ಷತಾ ಸೌಲಭ್ಯಗಳನ್ನು ಅವರು ಪರಿಶೀಲಿಸಿದರು.

ಅದಕ್ಕೂ ಮೊದಲು ಅಧಿಕಾರಿಗಳ ಸಭೆ ನಡೆಸಿದ ಸಚಿವರು; ಐಕ್ಯಾಟ್ ಕೇಂದ್ರದಲ್ಲಿನ ಚಟುವಟಿಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಆ ನಂತರ ಇಡೀ ಕೇಂದ್ರದ ಪ್ರಯೋಗಾಲಯಗಳು, ಅಪಘಾತ ಪರೀಕ್ಷೆ ಪ್ರಯೋಗಾಲಯಗಳು, ಪ್ರತಿಧ್ವನಿ ಅಧ್ಯಯನ ಕೇಂದ್ರಗಳು ಹಾಗೂ ಇಂಧನ ಹರಿವಿನ ಪರೀಕ್ಷಾ ಕಾರ್ಯವಿಧಾನಗಳನ್ನು ಸಚಿವರು ಪರಿಶೀಲನೆ ವೀಕ್ಷಿಸಿದರು.

ಈ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವರು, ಭಾರತದ ವಾಹನಗಳ ಉತ್ಕೃಷ್ಟತೆಗೆ ಐಕ್ಯಾಟ್ ಕೇಂದ್ರ ಅತಿದೊಡ್ಡ ಕೊಡುಗೆ ನೀಡುತ್ತಿದೆ. ಆವಿಷ್ಕಾರ, ನಾವೀನ್ಯತೆ ಕ್ಷೇತ್ರಗಳಿಗೆ ಇದು ಹೆಚ್ಚು ಆದ್ಯತೆ ಕೊಡುತ್ತಿದೆ.

ಇಲ್ಲಿಗೆ ಬಂದಿರುವುದು ನನಗೆ ಬಹಳ ಸಂತೋಷ ತಂದಿದೆ. ಇಲ್ಲಿನ ಸುಧಾರಿತ ಪ್ರಯೋಗಾಲಯಗಳು ಮತ್ತು ಪರೀಕ್ಷಾ ಮೂಲಸೌಕರ್ಯಗಳನ್ನು ಒಳಗೊಂಡಂತೆ ICAT ನ ಅತ್ಯಾಧುನಿಕ ಸೌಲಭ್ಯಗಳು ಆಟೋಮೋಟಿವ್ ನಾವೀನ್ಯತೆಯಲ್ಲಿ ಭಾರತದ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿವೆ ಎಂದು ಸಚಿವರು ಹೇಳಿದರು.

ಇದೇ ವೇಳೆ ಸಚಿವರು ಅತ್ಯಾಧುನಿಕ ಐಟಿ ಆಟೋಮ್ಯಾಟಿವ್ ಕೇಂದ್ರಕ್ಕೆ ಅಡಿಗಲ್ಲು ಹಾಕಿದರು.

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!