Coconut Growers Convention in the State

ರಾಜ್ಯದಲ್ಲಿ ತೆಂಗು ಬೆಳೆಗಾರ ಸಮಾವೇಶ; ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ & ಶಿವರಾಜ್ ಸಿಂಗ್ ಚೌಹಾಣ್ ಚರ್ಚೆ

ನವದೆಹಲಿ: ರಾಜ್ಯದ ಕೊಬ್ಬರಿ ಮತ್ತು ಅಡಿಕೆ ಬೆಳೆಗಾರರು ಸೇರಿದಂತೆ ಕೃಷಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HDK) ಅವರು ಮಹತ್ವದ ಮಾತುಕತೆ ನಡೆಸಿದರು.

ತಮ್ಮ ಪುತ್ರರಿಬ್ಬರ ವಿವಾಹಕ್ಕೆ ತಮ್ಮ ಧರ್ಮಪತ್ನಿ ಶ್ರೀಮತಿ ಚೌಹಾಣ್ ಅವರೊಂದಿಗೆ ಮಂಗಳವಾರ ಬೆಳಗ್ಗೆ ಬೃಹತ್ ಕೈಗಾರಿಕೆ ಸಚಿವಾಲಯಕ್ಕೆ ಆಗಮಿಸಿ ಸಚಿವ ಕುಮಾರಸ್ವಾಮಿ ಅವರಿಗೆ ಆಮಂತ್ರಣ ನೀಡಿದರು ಕೃಷಿ ಸಚಿವರು.

ಇದೇ ವೇಳೆ ಸಚಿವರಿಬ್ಬರು ಕರ್ನಾಟಕ ಸೇರಿದಂತೆ ರಾಷ್ಟ್ರದ ಕೃಷಿ ಕ್ಷೇತ್ರದ ಆಗುಹೋಗುಗಳು, ರೈತರ ಕುಂದುಕೊರತೆಗಳ ಬಗ್ಗೆ ಮಾತುಕತೆ ನಡೆಸಿದರು.

ಕುಮಾರಸ್ವಾಮಿ ಅಭಿನಂದನೆ

ಅಡಿಕೆಗೆ ಬರುತ್ತಿರುವ ರೋಗಗಳ ಪರಿಹಾರಕ್ಕೆ ₹67 ಕೋಟಿಗಳನ್ನು ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡಲಾಗುವುದು ಎಂದು ಚೌಹಾಣ್ ಅವರು ಘೋಷಣೆ ಮಾಡಿದ್ದು, ಆ ಬಗ್ಗೆ ಕುಮಾರಸ್ವಾಮಿ ಕೃಷಿ ಸಚಿವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಅಗತ್ಯ ಮಾರುಕಟ್ಟೆ ಸೌಲಭ್ಯದ ಕೊರತೆ ಹಾಗೂ ಬೆಳೆ ತೆಗೆಯುವ ಬಗ್ಗೆ ಸವಾಲು ಎದುರಿಸುವ ರೈತರಿಗೆ ಸಹಾಯ ಹಸ್ತದ ಬೇಕಿದೆ. ಈ ನಿಟ್ಟಿನಲ್ಲಿ ತಾವು ನೀಡಿರುವ ಭರವಸೆ ರೈತರಲ್ಲಿ ಹರ್ಷ ಮೂಡಿಸಿದೆ ಎಂದು ಕುಮಾರಸ್ವಾಮಿ ಅವರು ಚೌಹಾಣ್ ಅವರಿಗೆ ಹೇಳಿದರು.

ಕರ್ನಾಟಕದ ತೆಂಗು ಬೆಳೆಗಾರರು ಎದುರಿಸುತ್ತಿರುವ ಕಠಿಣ ಸವಾಲುಗಳ ಬಗ್ಗೆ ಕೃಷಿ ಸಚಿವರ ಗಮನ ಸೆಳೆದ ಕುಮಾರಸ್ವಾಮಿ ಅವರು, ತೆಂಗು ಬೆಳೆಗಾರರ ಸಂಕಷ್ಟ ಪರಿಹಾರ ಮಾಡುವ ನಿಟ್ಟಿನಲ್ಲಿ ತಮ್ಮ ಕಡೆಯಿಂದ ದೊಡ್ಡ ಉಪ ಕ್ರಮ ಆಗಬೇಕಿದೆ. ಈ ನಿಟ್ಟಿನಲ್ಲಿ ತಾವು ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಸಿ ಅವರ ಸಂಕಷ್ಟಗಳಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಸಮಾವೇಶ ನಡೆಸುವ ಕುಮಾರಸ್ವಾಮಿ ಅವರ ಸಲಹೆಗೆ ತಕ್ಷಣವೇ ಸ್ಪಂದಿಸಿದ ಸಚಿವರು; ಇದು ಬಹಳ ಒಳ್ಳೆಯ ಆಲೋಚನೆ. ಬೆಳೆಗಾರರು ತಮ್ಮೆಲ್ಲ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಿ. ಅನಂತರ ಪರಿಹಾರೋಪಾಯಗಳನ್ನು ಕಂಡುಕೊಳ್ಳೋಣ ಎಂದು ಚೌಹಾಣ್ ಅವರು ಉಕ್ಕು ಸಚಿವರಿಗೆ ಹೇಳಿದರು.

ದುಬಾರಿಗೆ ಸಾಗಾಣಿಕೆ ವೆಚ್ಚವೇ ತೆಂಗು ಬೆಳೆಗಾರರಿಗೆ ದೊಡ್ಡ ಸಮಸ್ಯೆ ಆಗಿದೆ. ರೈತನ ಬಹುತೇಕ ಆದಾಯ ಸಾಗಾಣಿಕೆಗೆ ವ್ಯಯವಾಗುತ್ತಿದೆ. ಅವರಿಗೆ ನ್ಯಾಯಯುತ ಬೆಲೆ ಧಕ್ಕಿಸಿಕೊಡುವುದರ ಜೊತೆಗೆ ಸಾಗಾಣಿಕೆ ವ್ಯವಸ್ಥೆಯನ್ನು ರೈತರ ಕೈಗೆಟುಕುವಂತೆ ಮಾಡುವುದು ಅತ್ಯಗತ್ಯವಾಗಿದೆ. ಇದಕ್ಕೆ ಕೃಷಿ ಸಚಿವಾಲಯದ ನೆರವು ಅಗತ್ಯವಿದೆ ಕುಮಾರಸ್ವಾಮಿ ಅವರು ಕೃಷಿ ಸಚಿವರನ್ನು ಕೋರಿದರು. ಈ ಮನವಿಗೂ ಕೃಷಿ ಸಚಿವರು ಸ್ಪಂದಿಸಿದರು.

ಕೃಷಿ ಉತ್ಪನ್ನಗಳ ಸರಪಳಿಯಿಂದ ಮಧ್ಯವರ್ತಿಗಳನ್ನು ಸಂಪೂರ್ಣವಾಗಿ ತೊಡೆದುಹಾಕುವ ಅಗತ್ಯತೆಯ ಬಗ್ಗೆಯೂ ಇಬ್ಬರೂ ಸಚಿವರು ಚರ್ಚೆ ನಡೆಸಿದರು.

ಕೃಷಿ ಉತ್ಪನ್ನಗಳ ಮಾರಾಟದಲ್ಲಿ ದಲ್ಲಾಳಿಗಳ ಉಪಟಳ ಮೆರೆ ಮೀರಿದೆ. ಕೇಂದ್ರ ಸರ್ಕಾರದಿಂದ ಎಷ್ಟೇ ಅನುಕೂಲರ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ರೈತರ ಸಂಕಷ್ಟ ಬಗೆಹರಿದಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಉತ್ತಮ ಬೆಲೆ ಖಾತರಿ ಜತೆಗೆ, ಬೆಳೆಗಳ ಅತ್ಯುತ್ತಮ ದಾಸ್ತಾನು ಖಾತರಿಯನ್ನು ರೈತರಿಗೆ ಕೊಡಬೇಕಿದೆ ಎಂಬ ಬಗ್ಗೆ ಸಚಿವರಿಬ್ಬರೂ ಚರ್ಚಿಸಿದರು.

ಫಲಾನುಭವಿಗಳಿಗೆ ಹಣ ನೇರ ವರ್ಗಾವಣೆ (ಡಿಬಿಟಿ) ಮೂಲಕ ರಸಗೊಬ್ಬರ ಸಬ್ಸಿಡಿಯನ್ನು ಸಕಾಲಕ್ಕೆ ತಲುಪಿಸುವ ಮಹತ್ವವನ್ನು ಕುಮಾರಸ್ವಾಮಿ ಅವರು ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಅಲ್ಲದೆ; ವಿಳಂಬವಿಲ್ಲದೆ ಇತರೆ ಸಹಾಯಧನವನ್ನು ನೇರವಾಗಿ ರೈತರಿಗೆ ತಲುಪಿಸುವುದು, ಅಧಿಕಾರಶಾಹಿಯ ಅನಗತ್ಯ ಹಸ್ತಕ್ಷೇಪದಿಂದ ಅವರನ್ನು ರಕ್ಷಿಸುವುದು ಸೇರಿದಂತೆ ಹಲವಾರು ಪ್ರಮುಖ ಅಂಶಗಳ ಬಗ್ಗೆ ಕುಮಾರಸ್ವಾಮಿ ಅವರು ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ರಾಜಕೀಯ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ನಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್.ಎಮ್. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="119997"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!