Coconut Growers Convention in the State

ರಾಜ್ಯದಲ್ಲಿ ತೆಂಗು ಬೆಳೆಗಾರ ಸಮಾವೇಶ; ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ & ಶಿವರಾಜ್ ಸಿಂಗ್ ಚೌಹಾಣ್ ಚರ್ಚೆ

ನವದೆಹಲಿ: ರಾಜ್ಯದ ಕೊಬ್ಬರಿ ಮತ್ತು ಅಡಿಕೆ ಬೆಳೆಗಾರರು ಸೇರಿದಂತೆ ಕೃಷಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HDK) ಅವರು ಮಹತ್ವದ ಮಾತುಕತೆ ನಡೆಸಿದರು.

ತಮ್ಮ ಪುತ್ರರಿಬ್ಬರ ವಿವಾಹಕ್ಕೆ ತಮ್ಮ ಧರ್ಮಪತ್ನಿ ಶ್ರೀಮತಿ ಚೌಹಾಣ್ ಅವರೊಂದಿಗೆ ಮಂಗಳವಾರ ಬೆಳಗ್ಗೆ ಬೃಹತ್ ಕೈಗಾರಿಕೆ ಸಚಿವಾಲಯಕ್ಕೆ ಆಗಮಿಸಿ ಸಚಿವ ಕುಮಾರಸ್ವಾಮಿ ಅವರಿಗೆ ಆಮಂತ್ರಣ ನೀಡಿದರು ಕೃಷಿ ಸಚಿವರು.

ಇದೇ ವೇಳೆ ಸಚಿವರಿಬ್ಬರು ಕರ್ನಾಟಕ ಸೇರಿದಂತೆ ರಾಷ್ಟ್ರದ ಕೃಷಿ ಕ್ಷೇತ್ರದ ಆಗುಹೋಗುಗಳು, ರೈತರ ಕುಂದುಕೊರತೆಗಳ ಬಗ್ಗೆ ಮಾತುಕತೆ ನಡೆಸಿದರು.

ಕುಮಾರಸ್ವಾಮಿ ಅಭಿನಂದನೆ

ಅಡಿಕೆಗೆ ಬರುತ್ತಿರುವ ರೋಗಗಳ ಪರಿಹಾರಕ್ಕೆ ₹67 ಕೋಟಿಗಳನ್ನು ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡಲಾಗುವುದು ಎಂದು ಚೌಹಾಣ್ ಅವರು ಘೋಷಣೆ ಮಾಡಿದ್ದು, ಆ ಬಗ್ಗೆ ಕುಮಾರಸ್ವಾಮಿ ಕೃಷಿ ಸಚಿವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಅಗತ್ಯ ಮಾರುಕಟ್ಟೆ ಸೌಲಭ್ಯದ ಕೊರತೆ ಹಾಗೂ ಬೆಳೆ ತೆಗೆಯುವ ಬಗ್ಗೆ ಸವಾಲು ಎದುರಿಸುವ ರೈತರಿಗೆ ಸಹಾಯ ಹಸ್ತದ ಬೇಕಿದೆ. ಈ ನಿಟ್ಟಿನಲ್ಲಿ ತಾವು ನೀಡಿರುವ ಭರವಸೆ ರೈತರಲ್ಲಿ ಹರ್ಷ ಮೂಡಿಸಿದೆ ಎಂದು ಕುಮಾರಸ್ವಾಮಿ ಅವರು ಚೌಹಾಣ್ ಅವರಿಗೆ ಹೇಳಿದರು.

ಕರ್ನಾಟಕದ ತೆಂಗು ಬೆಳೆಗಾರರು ಎದುರಿಸುತ್ತಿರುವ ಕಠಿಣ ಸವಾಲುಗಳ ಬಗ್ಗೆ ಕೃಷಿ ಸಚಿವರ ಗಮನ ಸೆಳೆದ ಕುಮಾರಸ್ವಾಮಿ ಅವರು, ತೆಂಗು ಬೆಳೆಗಾರರ ಸಂಕಷ್ಟ ಪರಿಹಾರ ಮಾಡುವ ನಿಟ್ಟಿನಲ್ಲಿ ತಮ್ಮ ಕಡೆಯಿಂದ ದೊಡ್ಡ ಉಪ ಕ್ರಮ ಆಗಬೇಕಿದೆ. ಈ ನಿಟ್ಟಿನಲ್ಲಿ ತಾವು ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಸಿ ಅವರ ಸಂಕಷ್ಟಗಳಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಸಮಾವೇಶ ನಡೆಸುವ ಕುಮಾರಸ್ವಾಮಿ ಅವರ ಸಲಹೆಗೆ ತಕ್ಷಣವೇ ಸ್ಪಂದಿಸಿದ ಸಚಿವರು; ಇದು ಬಹಳ ಒಳ್ಳೆಯ ಆಲೋಚನೆ. ಬೆಳೆಗಾರರು ತಮ್ಮೆಲ್ಲ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಿ. ಅನಂತರ ಪರಿಹಾರೋಪಾಯಗಳನ್ನು ಕಂಡುಕೊಳ್ಳೋಣ ಎಂದು ಚೌಹಾಣ್ ಅವರು ಉಕ್ಕು ಸಚಿವರಿಗೆ ಹೇಳಿದರು.

ದುಬಾರಿಗೆ ಸಾಗಾಣಿಕೆ ವೆಚ್ಚವೇ ತೆಂಗು ಬೆಳೆಗಾರರಿಗೆ ದೊಡ್ಡ ಸಮಸ್ಯೆ ಆಗಿದೆ. ರೈತನ ಬಹುತೇಕ ಆದಾಯ ಸಾಗಾಣಿಕೆಗೆ ವ್ಯಯವಾಗುತ್ತಿದೆ. ಅವರಿಗೆ ನ್ಯಾಯಯುತ ಬೆಲೆ ಧಕ್ಕಿಸಿಕೊಡುವುದರ ಜೊತೆಗೆ ಸಾಗಾಣಿಕೆ ವ್ಯವಸ್ಥೆಯನ್ನು ರೈತರ ಕೈಗೆಟುಕುವಂತೆ ಮಾಡುವುದು ಅತ್ಯಗತ್ಯವಾಗಿದೆ. ಇದಕ್ಕೆ ಕೃಷಿ ಸಚಿವಾಲಯದ ನೆರವು ಅಗತ್ಯವಿದೆ ಕುಮಾರಸ್ವಾಮಿ ಅವರು ಕೃಷಿ ಸಚಿವರನ್ನು ಕೋರಿದರು. ಈ ಮನವಿಗೂ ಕೃಷಿ ಸಚಿವರು ಸ್ಪಂದಿಸಿದರು.

ಕೃಷಿ ಉತ್ಪನ್ನಗಳ ಸರಪಳಿಯಿಂದ ಮಧ್ಯವರ್ತಿಗಳನ್ನು ಸಂಪೂರ್ಣವಾಗಿ ತೊಡೆದುಹಾಕುವ ಅಗತ್ಯತೆಯ ಬಗ್ಗೆಯೂ ಇಬ್ಬರೂ ಸಚಿವರು ಚರ್ಚೆ ನಡೆಸಿದರು.

ಕೃಷಿ ಉತ್ಪನ್ನಗಳ ಮಾರಾಟದಲ್ಲಿ ದಲ್ಲಾಳಿಗಳ ಉಪಟಳ ಮೆರೆ ಮೀರಿದೆ. ಕೇಂದ್ರ ಸರ್ಕಾರದಿಂದ ಎಷ್ಟೇ ಅನುಕೂಲರ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ರೈತರ ಸಂಕಷ್ಟ ಬಗೆಹರಿದಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಉತ್ತಮ ಬೆಲೆ ಖಾತರಿ ಜತೆಗೆ, ಬೆಳೆಗಳ ಅತ್ಯುತ್ತಮ ದಾಸ್ತಾನು ಖಾತರಿಯನ್ನು ರೈತರಿಗೆ ಕೊಡಬೇಕಿದೆ ಎಂಬ ಬಗ್ಗೆ ಸಚಿವರಿಬ್ಬರೂ ಚರ್ಚಿಸಿದರು.

ಫಲಾನುಭವಿಗಳಿಗೆ ಹಣ ನೇರ ವರ್ಗಾವಣೆ (ಡಿಬಿಟಿ) ಮೂಲಕ ರಸಗೊಬ್ಬರ ಸಬ್ಸಿಡಿಯನ್ನು ಸಕಾಲಕ್ಕೆ ತಲುಪಿಸುವ ಮಹತ್ವವನ್ನು ಕುಮಾರಸ್ವಾಮಿ ಅವರು ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಅಲ್ಲದೆ; ವಿಳಂಬವಿಲ್ಲದೆ ಇತರೆ ಸಹಾಯಧನವನ್ನು ನೇರವಾಗಿ ರೈತರಿಗೆ ತಲುಪಿಸುವುದು, ಅಧಿಕಾರಶಾಹಿಯ ಅನಗತ್ಯ ಹಸ್ತಕ್ಷೇಪದಿಂದ ಅವರನ್ನು ರಕ್ಷಿಸುವುದು ಸೇರಿದಂತೆ ಹಲವಾರು ಪ್ರಮುಖ ಅಂಶಗಳ ಬಗ್ಗೆ ಕುಮಾರಸ್ವಾಮಿ ಅವರು ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.

[ccc_my_favorite_select_button post_id="119667"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!