Coconut Growers Convention in the State

ರಾಜ್ಯದಲ್ಲಿ ತೆಂಗು ಬೆಳೆಗಾರ ಸಮಾವೇಶ; ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ & ಶಿವರಾಜ್ ಸಿಂಗ್ ಚೌಹಾಣ್ ಚರ್ಚೆ

ನವದೆಹಲಿ: ರಾಜ್ಯದ ಕೊಬ್ಬರಿ ಮತ್ತು ಅಡಿಕೆ ಬೆಳೆಗಾರರು ಸೇರಿದಂತೆ ಕೃಷಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HDK) ಅವರು ಮಹತ್ವದ ಮಾತುಕತೆ ನಡೆಸಿದರು.

ತಮ್ಮ ಪುತ್ರರಿಬ್ಬರ ವಿವಾಹಕ್ಕೆ ತಮ್ಮ ಧರ್ಮಪತ್ನಿ ಶ್ರೀಮತಿ ಚೌಹಾಣ್ ಅವರೊಂದಿಗೆ ಮಂಗಳವಾರ ಬೆಳಗ್ಗೆ ಬೃಹತ್ ಕೈಗಾರಿಕೆ ಸಚಿವಾಲಯಕ್ಕೆ ಆಗಮಿಸಿ ಸಚಿವ ಕುಮಾರಸ್ವಾಮಿ ಅವರಿಗೆ ಆಮಂತ್ರಣ ನೀಡಿದರು ಕೃಷಿ ಸಚಿವರು.

ಇದೇ ವೇಳೆ ಸಚಿವರಿಬ್ಬರು ಕರ್ನಾಟಕ ಸೇರಿದಂತೆ ರಾಷ್ಟ್ರದ ಕೃಷಿ ಕ್ಷೇತ್ರದ ಆಗುಹೋಗುಗಳು, ರೈತರ ಕುಂದುಕೊರತೆಗಳ ಬಗ್ಗೆ ಮಾತುಕತೆ ನಡೆಸಿದರು.

ಕುಮಾರಸ್ವಾಮಿ ಅಭಿನಂದನೆ

ಅಡಿಕೆಗೆ ಬರುತ್ತಿರುವ ರೋಗಗಳ ಪರಿಹಾರಕ್ಕೆ ₹67 ಕೋಟಿಗಳನ್ನು ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡಲಾಗುವುದು ಎಂದು ಚೌಹಾಣ್ ಅವರು ಘೋಷಣೆ ಮಾಡಿದ್ದು, ಆ ಬಗ್ಗೆ ಕುಮಾರಸ್ವಾಮಿ ಕೃಷಿ ಸಚಿವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಅಗತ್ಯ ಮಾರುಕಟ್ಟೆ ಸೌಲಭ್ಯದ ಕೊರತೆ ಹಾಗೂ ಬೆಳೆ ತೆಗೆಯುವ ಬಗ್ಗೆ ಸವಾಲು ಎದುರಿಸುವ ರೈತರಿಗೆ ಸಹಾಯ ಹಸ್ತದ ಬೇಕಿದೆ. ಈ ನಿಟ್ಟಿನಲ್ಲಿ ತಾವು ನೀಡಿರುವ ಭರವಸೆ ರೈತರಲ್ಲಿ ಹರ್ಷ ಮೂಡಿಸಿದೆ ಎಂದು ಕುಮಾರಸ್ವಾಮಿ ಅವರು ಚೌಹಾಣ್ ಅವರಿಗೆ ಹೇಳಿದರು.

ಕರ್ನಾಟಕದ ತೆಂಗು ಬೆಳೆಗಾರರು ಎದುರಿಸುತ್ತಿರುವ ಕಠಿಣ ಸವಾಲುಗಳ ಬಗ್ಗೆ ಕೃಷಿ ಸಚಿವರ ಗಮನ ಸೆಳೆದ ಕುಮಾರಸ್ವಾಮಿ ಅವರು, ತೆಂಗು ಬೆಳೆಗಾರರ ಸಂಕಷ್ಟ ಪರಿಹಾರ ಮಾಡುವ ನಿಟ್ಟಿನಲ್ಲಿ ತಮ್ಮ ಕಡೆಯಿಂದ ದೊಡ್ಡ ಉಪ ಕ್ರಮ ಆಗಬೇಕಿದೆ. ಈ ನಿಟ್ಟಿನಲ್ಲಿ ತಾವು ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಸಿ ಅವರ ಸಂಕಷ್ಟಗಳಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಸಮಾವೇಶ ನಡೆಸುವ ಕುಮಾರಸ್ವಾಮಿ ಅವರ ಸಲಹೆಗೆ ತಕ್ಷಣವೇ ಸ್ಪಂದಿಸಿದ ಸಚಿವರು; ಇದು ಬಹಳ ಒಳ್ಳೆಯ ಆಲೋಚನೆ. ಬೆಳೆಗಾರರು ತಮ್ಮೆಲ್ಲ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಿ. ಅನಂತರ ಪರಿಹಾರೋಪಾಯಗಳನ್ನು ಕಂಡುಕೊಳ್ಳೋಣ ಎಂದು ಚೌಹಾಣ್ ಅವರು ಉಕ್ಕು ಸಚಿವರಿಗೆ ಹೇಳಿದರು.

ದುಬಾರಿಗೆ ಸಾಗಾಣಿಕೆ ವೆಚ್ಚವೇ ತೆಂಗು ಬೆಳೆಗಾರರಿಗೆ ದೊಡ್ಡ ಸಮಸ್ಯೆ ಆಗಿದೆ. ರೈತನ ಬಹುತೇಕ ಆದಾಯ ಸಾಗಾಣಿಕೆಗೆ ವ್ಯಯವಾಗುತ್ತಿದೆ. ಅವರಿಗೆ ನ್ಯಾಯಯುತ ಬೆಲೆ ಧಕ್ಕಿಸಿಕೊಡುವುದರ ಜೊತೆಗೆ ಸಾಗಾಣಿಕೆ ವ್ಯವಸ್ಥೆಯನ್ನು ರೈತರ ಕೈಗೆಟುಕುವಂತೆ ಮಾಡುವುದು ಅತ್ಯಗತ್ಯವಾಗಿದೆ. ಇದಕ್ಕೆ ಕೃಷಿ ಸಚಿವಾಲಯದ ನೆರವು ಅಗತ್ಯವಿದೆ ಕುಮಾರಸ್ವಾಮಿ ಅವರು ಕೃಷಿ ಸಚಿವರನ್ನು ಕೋರಿದರು. ಈ ಮನವಿಗೂ ಕೃಷಿ ಸಚಿವರು ಸ್ಪಂದಿಸಿದರು.

ಕೃಷಿ ಉತ್ಪನ್ನಗಳ ಸರಪಳಿಯಿಂದ ಮಧ್ಯವರ್ತಿಗಳನ್ನು ಸಂಪೂರ್ಣವಾಗಿ ತೊಡೆದುಹಾಕುವ ಅಗತ್ಯತೆಯ ಬಗ್ಗೆಯೂ ಇಬ್ಬರೂ ಸಚಿವರು ಚರ್ಚೆ ನಡೆಸಿದರು.

ಕೃಷಿ ಉತ್ಪನ್ನಗಳ ಮಾರಾಟದಲ್ಲಿ ದಲ್ಲಾಳಿಗಳ ಉಪಟಳ ಮೆರೆ ಮೀರಿದೆ. ಕೇಂದ್ರ ಸರ್ಕಾರದಿಂದ ಎಷ್ಟೇ ಅನುಕೂಲರ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ರೈತರ ಸಂಕಷ್ಟ ಬಗೆಹರಿದಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಉತ್ತಮ ಬೆಲೆ ಖಾತರಿ ಜತೆಗೆ, ಬೆಳೆಗಳ ಅತ್ಯುತ್ತಮ ದಾಸ್ತಾನು ಖಾತರಿಯನ್ನು ರೈತರಿಗೆ ಕೊಡಬೇಕಿದೆ ಎಂಬ ಬಗ್ಗೆ ಸಚಿವರಿಬ್ಬರೂ ಚರ್ಚಿಸಿದರು.

ಫಲಾನುಭವಿಗಳಿಗೆ ಹಣ ನೇರ ವರ್ಗಾವಣೆ (ಡಿಬಿಟಿ) ಮೂಲಕ ರಸಗೊಬ್ಬರ ಸಬ್ಸಿಡಿಯನ್ನು ಸಕಾಲಕ್ಕೆ ತಲುಪಿಸುವ ಮಹತ್ವವನ್ನು ಕುಮಾರಸ್ವಾಮಿ ಅವರು ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಅಲ್ಲದೆ; ವಿಳಂಬವಿಲ್ಲದೆ ಇತರೆ ಸಹಾಯಧನವನ್ನು ನೇರವಾಗಿ ರೈತರಿಗೆ ತಲುಪಿಸುವುದು, ಅಧಿಕಾರಶಾಹಿಯ ಅನಗತ್ಯ ಹಸ್ತಕ್ಷೇಪದಿಂದ ಅವರನ್ನು ರಕ್ಷಿಸುವುದು ಸೇರಿದಂತೆ ಹಲವಾರು ಪ್ರಮುಖ ಅಂಶಗಳ ಬಗ್ಗೆ ಕುಮಾರಸ್ವಾಮಿ ಅವರು ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]