Murderer who killed love.. Death sentences

ಪ್ರೀತಿ ಕೊಂದ ಕೊಲೆಗಾತಿಗೆ.. ಮರಣದಂಡನೆ..!

ತಿರುವನಂತಪುರಂ: ಕನ್ನಡದಲ್ಲಿ ಖ್ಯಾತ ನಟ ರವಿಚಂದ್ರನ್ ಮತ್ತು ಕಾಮಿನಿ ನಟನೆಯ ಯುಗಪುರುಷ ಸಿನಿಮಾ ಬಹುತೇಕರಿಗೆ ನೆನಪಿದೆ.

ಆ ಚಿತ್ರದಲ್ಲಿ ನಟಿ ಕಾಮಿನಿ ಆಕೆಯ ಪ್ರೀತಿಸಿ ಮದುವೆಯಾದ ರಾಮಕೃಷ್ಣ ಅವರನ್ನು ಆಸ್ತಿಯ ಆಸೆಗೆ ಹತ್ಯೆ ಮಾಡಿದಂತೆ, ಸೇನಾಧಿಕಾರಿಯೊಂದಿಗೆ ಮದುವೆಯಾಗಲು ಮನಸಾರೆ ಪ್ರೀತಿಸಿದ ಯುವಕನ ವಿಷ ಉಣಿಸಿ ಕೊಂದ ಪ್ರೇಯಸಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ.

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆ ರಾಮವರ್ಮಂಚಿರದ ಗ್ರೀಷ್ಮಾಗೆ (24 ವರ್ಷ) ಪ್ರೇಮಿ ಶರೋನ್ ರಾಜ್‌ ಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪದಡಿ ನೆಯ್ಯಟ್ಟಿಂಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೋಮವಾರ ಮರಣದಂಡನೆ ಶಿಕ್ಷೆ ವಿಧಿಸಿದೆ.

ನ್ಯಾಯಾಧೀಶರಾದ ಎ.ಎಂ. ಬಶೀರ್ ಅವರು, ಇದು ಅಪರೂಪದ ಪ್ರಕರಣವಾಗಿದೆ. ಪೂರ್ವನಿಯೋಜಿತ ಸಂಚು ನಡೆಸಿ ಕೊಲೆ ಮಾಡಲಾಗಿದೆ. ಅಪರಾಧಿ ಯಾವುದೇ ವಿನಾಯಿತಿಗೆ ಅರ್ಹಳಲ್ಲ. ಅಪರಾಧಿಯ ವಯಸ್ಸು-ಶೈಕ್ಷಣಿಕ ಅರ್ಹತೆ ಯಾವುದನ್ನೂ ಶಿಕ್ಷೆ ವಿಧಿಸುವ ವಿಚಾರದಲ್ಲಿ ಪರಿಗಣಿಸಲಾಗದು.

ಯುವತಿ ಪ್ರೀತಿಯ ಪಾವಿತ್ರ್ಯವನ್ನು ಹಾಳುಗೆಡವಿದ್ದಾಳೆ. ಆಕೆ ನಡೆಸಿದ ಅಪರಾಧ ಕೃತ್ಯ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುವಂತದ್ದಾಗಿದೆ. ಹಾಗಾಗಿ ಅಪರಾಧಿಗೆ ಮರಣದಂಡನೆಯೇ ಸರಿಯಾದ ಶಿಕ್ಷೆಯಾಗಿದೆ ಎಂದು ತೀರ್ಪು ಪ್ರಕಟಿಸಿದರು.

ತೀರ್ಪು ಆಲಿಸಲು ಶರೋನ್ ಪೋಷಕರನ್ನೂ ನ್ಯಾಯಾಲಯ ಕರೆಸಿತ್ತು. ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಪೋಷಕರು ಕಣ್ಣೀರಾದರು.

ವಿಷವುಣಿಸಿ ಹತ್ಯೆ, ಬಳಿಕ ಸಾಕ್ಷ್ಯ ನಾಶ ಸೇರಿ ಎಲ್ಲಾ ಆರೋಪಗಳಲ್ಲಿಯೂ ಗ್ರೀಷ್ಮಾ ತಪ್ಪಿತಸ್ಥಳು ಎಂದು ನ್ಯಾಯಾಲಯ ಈ ಮೊದಲೇ ಘೋಷಿಸಿತ್ತು. ಸಾಕ್ಷ್ಯ ನಾಶ ಮಾಡಿದ್ದಕ್ಕಾಗಿ ಗ್ರೀಷ್ಮಾಳ ಚಿಕ್ಕಪ್ಪ ನಿರ್ಮಲಕುಮಾರನ್ ನಾಯರ್‌ಗೂ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಸಾಕ್ಷ್ಯಾಧಾರ ಕೊರತೆ ಕಾರಣ ಗ್ರೀಷ್ಮಾ ತಾಯಿ ಸಿಂಧುವನ್ನು ಈ ಹಿಂದೆಯೇ ಆರೋಪ ಮುಕ್ತಗೊಳಿಸಲಾಗಿದೆ.

ಸಿಂಧು ಖುಲಾಸೆಗೊಂಡಿರುವುದಕ್ಕೆ ಅಸಮಾಧಾನಗೊಂಡಿರುವ ಶರೋನ್ ಪೋಷಕರು, ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.

2022ರ ಶರೋನ್ ರಾಜ್ ಹತ್ಯೆ ಪ್ರಕರಣ

ಬಿಎಸ್‌ಸಿ ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಮತ್ತು ಗ್ರೀಷ್ಮಾ ಮಧ್ಯೆ 2021ರಲ್ಲಿ ಪ್ರೀತಿಯಾಗಿತ್ತು.

ಬಳಿಕ ನಾಗರಕೋಯಿಲ್‌ ಸೇನಾಧಿಕಾರಿ ಜತೆ ಮದುವೆ ಪ್ರಸ್ತಾಪ ಬಂದಾಗ ಗ್ರೀಷ್ಮಾ, ಆವರೆಗೂ ಪ್ರೀತಿಸಿದ್ದ ಶರೋನನ್ನು ದೂರ ಮಾಡಿಕೊಳ್ಳಲು ಸಂಚು ರೂಪಿಸಿದಳು.

ಆನಾರೋಗ್ಯದಿಂದ 2022ರ ಅ.14ರಂದು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಶರೋನ್‌ಗೆ ಗ್ರೀಷ್ಠಾ, ಆಯುರ್ವೇದ ಔಷಧಕ್ಕೆ ಕಳೆನಾಶಕ ಪ್ಯಾರಾಕ್ವಾಟ್ ಡೈಕ್ಲೋರೈಡ್ ಮಿಶ್ರಣ ಮಾಡಿ ಕುಡಿಸಿ ಸಾವಿಗೆ ಕಾರಣಳಾಗಿದ್ದಳು ಎಂದು ವರದಿಯಾಗಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!