Will the dignity of the journalism profession be preserved if the news is twisted?: CMSiddaramaiah Garam

ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ?: ಸಿಎಂ ಸಿದ್ದರಾಮಯ್ಯ ಗರಂ

ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಎಚ್ಚರಿಕೆ ನೀಡಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ

ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದರು.

ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು.

ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದರು.

ಕಾಂಗ್ರೆಸ್ ಸಂವಿಧಾನದ ಪರವಾಗಿದೆ

ಗಾಂಧೀಜಿ, ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ನ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನಾರೋಗ್ಯ ನಿಮಿತ್ತ ರಾಹುಲ್ ಗಾಂಧಿ ಗೈರು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು.

ಸಂಸದೆ ಪ್ರಿಯಾಂಕ ಗಾಂಧಿ,
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಆಗಮಿಸಲಿದ್ದಾರೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!