H.D.K, M.B.Pa Met after a war of words

ಮಾತಿನ ಸಮರದ ಬೆನ್ನಲ್ಲೆ ಭೇಟಿಯಾದ ಹೆಚ್.ಡಿ.ಕೆ, ಎಂ.ಬಿ.ಪಾ

ನವದೆಹಲಿ: ಇತ್ತೀಚಿಗಷ್ಟೆ ಕೈಗಾರಿಕಾ ವಲಯದ ಅಭಿವೃದ್ಧಿ ಕಾರ್ಯಗಳ ಕುರಿತು ರಾಜ್ಯ ಸರ್ಕಾರ ಅಸಹಕಾರ ತೋರಿಸುತ್ತಿದೆ ಎಂಬುದಾಗಿ, ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ನಡೆದಿದ್ದ ಹೆಚ್.ಡಿಕೆ ಮತ್ತು ರಾಜ್ಯ ಸಚಿವ ಎಂ.ಬಿ.ಪಾಟೀಲ್ ಆರೋಪ ಪ್ರತ್ಯಾರೋಪದ ಮಾತನ ಸಮರದ (war of words) ಬೆನ್ನಲ್ಲೇ. ಇಂದು ಒಬ್ಬರು ಸಚಿವರು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ.

ಕರ್ನಾಟಕದ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು ನವದೆಹಲಿಯಲ್ಲಿ ಬುಧವಾರ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ಎಂದು ಆಹ್ವಾನ ನೀಡಿದರು.

ನವದೆಹಲಿಯ ಉಕ್ಕು ಸಚಿವಾಲಯದಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಪಾಟೀಲ್ ಅವರು, ತಾವು ತಪ್ಪದೇ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಹಾಗೂ ಈ ನಿಟ್ಟಿನಲ್ಲಿ ತಮ್ಮ ಸಹಕಾರ ಅಗತ್ಯ ಬೇಕಿದೆ ಎಂದು ಅವರು ಕೋರಿದರು.

ಮಾತಿನ ಸಮರದ ಬೆನ್ನಲ್ಲೆ ಭೇಟಿಯಾದ ಹೆಚ್.ಡಿ.ಕೆ, ಎಂ.ಬಿ.ಪಾ

ಕರ್ನಾಟಕದ ಕೈಗಾರಿಕಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಇಲಾಖೆಯ ನಿರ್ದೇಶಕಿ ಗುಂಜನ್ ಕೃಷ್ಣ ಮತ್ತಿತರರು ಪಾಟೀಲ್ ಅವರ ನಿಯೋಗದಲ್ಲಿದ್ದರು.

ನನಗೆ ರಾಜ್ಯದಿಂದ ಯಾವ ಮನವಿಯೂ ಬಂದಿಲ್ಲ: ಕುಮಾರಸ್ವಾಮಿ

ಇದಕ್ಕೂ ಮುನ್ನ ಅಭಿವೃದ್ಧಿ ಬಗ್ಗೆ ನನಗೆ ರಾಜ್ಯದಿಂದ ಯಾವ ಮನವಿಯೂ ಬಂದಿಲ್ಲ ಎಂದು ಆರೋಪಿಸಿದ್ದ ಹೆಚ್‌ಡಿ ಕುಮಾರಸ್ವಾಮಿ, ಇವರು ಚಂದ್ರಬಾಬು ನಾಯ್ಡು ನೋಡಿ ಕಲಿಯಬೇಕು ಎಂದ ಹರಿಹಾಯ್ದಿದ್ದರು.

ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರಕಾರವು ಕೇಂದ್ರ ಸರಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದರು.

ನವದೆಹಲಿಯ ಉಕ್ಕು ಸಚಿವಾಲಯದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು; ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನ ವಿಚಾರಕ್ಕೆ ರಾಜ್ಯ ಸರಕಾರ ತಮ್ಮ ಜತೆ ಚರ್ಚೆ ಮಾಡಿಲ್ಲ. ನನ್ನ ತವರು ರಾಜ್ಯ ಎನ್ನುವ ಕಾರಣಕ್ಕೆ ನಾನು ಕೆಲಸ ಮಾಡುತ್ತಿದ್ದೇನೆ. ಎಲ್ಲವನ್ನು ಜನರು ಗಮನಿಸುತ್ತಿದ್ದಾರೆ ಎಂದಿದ್ದರು‌‌.

ಕೇಂದ್ರ ಸರಕಾರಕ್ಕೆ ಕರ್ನಾಟಕ ಸರಕಾರ ಸಹಕಾರ ನೀಡುತ್ತಿಲ್ಲ, ಬದಲಿಗೆ ಪ್ರತಿನಿತ್ಯ ಪ್ರಧಾನಿಯನ್ನು ನಿಂದಿಸುವುದೇ ಆಗಿದೆ. ದಿನವೂ ಪ್ರಧಾನಿಯನ್ನು ನಿಂದಿಸಿದರೆ ರಾಜ್ಯ ಅಭಿವೃದ್ಧಿ ಆಗುತ್ತದೆಯೇ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದರು.

ನಾಯ್ಡು ಅವರನ್ನು ನೋಡಿ ಕಲಿಯಲಿ

ವೈಜಾಗ್ ಸ್ಟೀಲ್ ವಿಚಾರವಾಗಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಅನೇಕ ಸಲ ನನ್ನನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಅನೇಕ ಸಲ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದರು.

ಅವರ ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆಷ್ಟು ಬದ್ಧತೆ ಇದೆ ಎಂಬುದನ್ನು ನೋಡಿ ಇವರು ಕಲಿಯಬೇಕು. ರಾಜಕೀಯ ದ್ವೇಷ ಕಾರಣಕ್ಕೆ ರಾಜ್ಯದಲ್ಲಿ ನಾನು ಏನೇ ಮಾಡಲು ಹೋದರೂ ರಾಜ್ಯ ಸರಕಾರ ಅಡ್ಡಿಪಡಿಸುವುದನ್ನೇ ಪರಿಪಾಠ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವರು ಕಟುವಾಗಿ ಟೀಕಿಸಿದ್ದರು.

ರಾಜ್ಯದಿಂದ ಯಾವ ಮನವಿಯೂ ಬಂದಿಲ್ಲ

ಕರ್ನಾಟಕ ಸರಕಾರ ಈ ಕ್ಷಣದವರೆಗೆ ನಾನು ತೆಗೆದುಕೊಳ್ಳುವ ವಿಚಾರವಾಗಿ ಎಷ್ಟು ಆಡಚಣೆ ಮಾಡುತ್ತಿದ್ದಿರಿ ಎಂದು ನೀವೇ ನೋಡುತ್ತಿದ್ದಿರಿ ಎಂದು ಮಾಧ್ಯಮ ವರದಿಗಾರರಿಗೆ ಹೇಳಿದ ಅವರು; ಈ ತನಕ ಕರ್ನಾಟಕದಿಂದ ಒಂದೇ ಒಂದು ಪತ್ರ ಬಂದಿಲ್ಲ. ಏಳು ತಿಂಗಳು ಕಳೆದರೂ ನನ್ನನ್ನು ಯಾರು ಭೇಟಿಯಾಗಿಲ್ಲ.

ನೀವು ಕುದುರೆಮುಖ ಕಂಪನಿಯ ವಿಚಾರದಲ್ಲಿ ರಾಜ್ಯ ಸರಕಾರ ಕೊಟ್ಟ ಕಿರುಕುಳವನ್ನು ನೋಡಿ. ರಾಜ್ಯ ಸರಕಾರ ಕನಿಷ್ಠ ಸೌಜನ್ಯಕ್ಕೆ ಪತ್ರ ಬರೆಯಲಿಲ್ಲ. ಆ ಕಂಪನಿ ಮುಚ್ಚುವ ಹಂತಕ್ಕೆ ಬಂದಿದೆ. ರಾಜ್ಯ ಸರಕಾರದ ತಪ್ಪಿಗೆ ನೂರಾರು ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದ್ದರು.

ಕುದುರೆಮುಖ ಕಂಪನಿಗೆ ಗಣಿ ಇಲ್ಲ ಎನ್ನುವ ಕಾರಣಕ್ಕೆ ದೇವದಾರಿ ಗಣಿ ಯೋಜನೆಗೆ ಹಣಕಾಸು ಅನುಮೋದನೆಗೆ ನಾನು ಹಸಿರು ನಿಶಾನೆ ನೀಡಿದ್ದೆ. ನಾನು ಉಕ್ಕು ಸಚಿವನಾಗಿ ಅಧಿಕಾರ ಸ್ವೀಕಾರ ಮಾಡಿದ ಮೇಲೆ ಮೊತ್ತ ಮೊದಲಿಗೆ ಹಾಕಿದ ಸಹಿ ಅದು. ನಾನೇ ಗಣಿಗಾರಿಕೆಗೆ ಒಪ್ಪಿಗೆ ಕೊಟ್ಟೆ ಎಂದು ರಾಜ್ಯ ಸರಕಾರ ಅಪಪ್ರಚಾರ ಮಾಡಿತು.

ನಿಜಕ್ಕಾದರೆ ದೇವದಾರಿಗೆ ಒಪ್ಪಿಗೆ ನೀಡಿದ್ದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ. ಕೊನೆಗೆ ನಾನು ಉಕ್ಕು ಸಚಿವ ಎನ್ನುವ ಕಾರಣಕ್ಕೆ ಅವರೇ ಕಿರುಕುಳ ನೀಡುತ್ತಿದ್ದಾರೆ. ಹೀಗಾದರೆ ರಾಜ್ಯ ಅಭಿವೃದ್ಧಿ ಆಗುತ್ತದೆಯೇ? ಎಂದು ಅವರು ಪ್ರಶ್ನಿಸಿದ್ದರು.

ಹೀಗಾದರೆ ಕುದುರೆಮುಖ (ಕೆಐಒಸಿಎಲ್) ಹೇಗೆ ಉಳಿಯುತ್ತದೆ. ವೈಜಾಗ್ ಸ್ಟೀಲ್ ನಂತೆ ಮಂಗಳೂರು ಸಮುದ್ರ ದಂಡೆಯಲ್ಲಿರುವ ಕಾರ್ಖಾನೆ ಸಂಕಷ್ಟದಲ್ಲಿದೆ.

ಹೇಗಾದರೂ ಅದನ್ನು ಉಳಿಸಬೇಕು ಎನ್ನುವ ಕಾರಣಕ್ಕೆ ನಾನು ಕುದುರೆಮುಖ ಕಂಪನಿಯನ್ನು ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ (NMDC) ದಲ್ಲಿ ವಿಲೀನ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ ಎಂದ ಅವರು; ಕಾಂಗ್ರೆಸ್ ನವರು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ರಾಜ್ಯವನ್ನು ಲೂಟಿ ಮಾಡಲಿಕ್ಕೆ ಎಂದು ಕಿಡಿಕಾರಿದ್ದರು.

ಇನ್ನು ರಾಜ್ಯವಷ್ಟೇ ಅಲ್ಲ , ಇಡೀ ದೇಶದ ಹೆಮ್ಮೆಯ ಕಂಪನಿ ಆಗಿದ್ದ ಹೆಚ್ ಎಮ್ ಟಿ ಬಗ್ಗೆ ರಾಜ್ಯ ಸರಕಾರ ನಡೆದುಕೊಳ್ಳುತ್ತಿರುವ ರೀತಿಯನ್ನು ಗಮನಿಸಿ. ಈಗ ಹೆಚ್ ಎಮ್ ಟಿ ಜಾಗ ಹೊಡೆಯಲು ಹೊರಟ್ಟಿದ್ದಾರೆ? ಆರಂಭದಲ್ಲಿಯೇ ಕಂಪನಿ ಮೈಸೂರು ಮಹಾರಾಜರಿಂದ ಹಣ ಕೊಟ್ಟು ಭೂಮಿ ಖರೀದಿ ಮಾಡಿದೆ. ಅದಕ್ಕೆ ದಾಖಲೆಗಳು ಇವೆ. ಆ ಕಂಪನಿಗೆ ಜೀವದಾನ ಮಾಡಲು ಹೊರಟರೆ ಅದಕ್ಕೂ ರಾಜ್ಯ ಸರಕಾರ ಕೊಕ್ಕೆ ಹಾಕಲು ಬರುತ್ತಿದೆ. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕುಮಾರಸ್ವಾಮಿ ಅವರು ಆರೋಪಿಸಿದ್ದರು.

ಈಗ ಹೆಚ್ ಎಂಟಿ ಕಾರ್ಖಾನೆಯ ಭೂಮಿಯನ್ನು ವಾಪಸ್ ಪಡೆಯುವ ಬಗ್ಗೆ ರಾಜ್ಯ ಸರಕಾರ ಹೇಳಿಕೆ ನೀಡುತ್ತಿದೆ. ಹಾಗಾದರೆ, ಈ ಮೊದಲೇ ಪರಭಾರೆ ಆಗಿರುವ ಎಲ್ಲಾ ಸ್ವತ್ತುಗಳನ್ನು ಕೂಡ ವಶಕ್ಕೆ ತೆಗೆದುಕೊಳ್ಳಲಿ.

ಕಾರ್ಖಾನೆಯ ಜಾಗದಲ್ಲಿ ದೊಡ್ಡ ದೊಡ್ಡ ಕಟ್ಟಡ ಒತ್ತಿಕೊಂಡಿರುವವರ ಹಿಂದೆ ಯಾರ ಕೈವಾಡ ಇದೆ ಎಂಬುದು ಗೊತ್ತಿದೆ. ಎಲ್ಲವನ್ನು ಜನರ ಮುಂದೆ ಇರಿಸಲಾಗುವುದು ಎಂದು ಅವರು ಹೇಳಿದ್ದರು.

ಕುಮಾರಸ್ವಾಮಿ ಆರೋಪ ನಿರಾಧಾರ: ಎಂ.ಬಿ ಪಾಟೀಲ ತಿರುಗೇಟು

ಎಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ನಾನು ನಮ್ಮ ಉನ್ನತ ಅಧಿಕಾರಿಗಳೊಂದಿಗೆ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ, ಸೆಮಿಕಂಡಕ್ಟರ್ ಸೇರಿದಂತೆ ಕೈಗಾರಿಕಾ ವಲಯದ ಹಲವು ಬೇಡಿಕೆಗಳನ್ನು ಅವರ ಗಮನಕ್ಕೆ ತಂದಿದ್ದೇನೆ.

ಆ ಸಂದರ್ಭದಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಭೇಟಿಯಾಗಿದ್ದೆ. ಹೀಗಾಗಿ ರಾಜ್ಯ ಸರ್ಕಾರ ಅಸಹಕಾರ ತೋರಿಸುತ್ತಿದೆ ಎನ್ನುವುದು ಸರಿಯಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿರುಗೇಟು ನೀಡಿದ್ದರು.

` ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಇವರನ್ನೆಲ್ಲ ಆಹ್ವಾನಿಸಲು ಸದ್ಯದಲ್ಲೇ ನಾನು ದೆಹಲಿಗೆ ಹೋಗುತ್ತಿದ್ದೇನೆ. ಆಗಲೂ ಇದನ್ನೆಲ್ಲ ದಾಖಲೆಗಳ ಸಮೇತ ಕುಮಾರಸ್ವಾಮಿಗೆ ನೆನಪಿಸಲಾಗುವುದು. ನಿರ್ಮಲಾ ಸೀತಾರಾಮನ್ ಮತ್ತು ರಾಜನಾಥ್ ಸಿಂಗ್ ಬಳಿ ಕೂಡ ನಾನು ಹಿಂದೆ ಭೇಟಿಯಾಗಿದ್ದಾಗ ರಾಜ್ಯದ ಬೇಡಿಕೆಗಳ ಬಗ್ಗೆ ಅವರ ಗಮನಕ್ಕೆ ತಂದಿದ್ದೆ’ ಎಂದಿದ್ದಾರೆ.

ಕುಮಾರಸ್ವಾಮಿ ಕೂಡ ಈಗ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅವರು ಕೂಡ ಒಂದು ಹೆಜ್ಜೆ ಮುಂದೆ ಬಂದು ನಮ್ಮ ಮುಖ್ಯಮಂತ್ರಿಗಳನ್ನು ಭೇಟಿ ಮಾಡಬೇಕು. ರಾಜ್ಯಕ್ಕೆ ಉದ್ದಿಮೆಗಳನ್ನು ತಂದರೆ ಅವರಿಗೂ ಒಳ್ಳೆಯ ಹೆಸರು ಬರುತ್ತದೆ.

ಹಿಂದೆ ಭೇಟಿಯಾಗಿದ್ದಾಗ ಸೆಮಿಕಂಡಕ್ಟರ್ ಉದ್ದಿಮೆಗಳು ಮೊದಲು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿದರೂ ಕೊನೆಗೆ ಗುಜರಾತಿಗೆ ಹೋಗುತ್ತಿರುವ ವಿದ್ಯಮಾನದ ಬಗ್ಗೆ ಚರ್ಚಿಸಿದ್ದೆ. ಇದರಲ್ಲಿ ವೈಯಕ್ತಿಕ ಪ್ರತಿಷ್ಠೆ ಇರಬಾರದು ಎಂದು ಅವರು ನುಡಿದಿದ್ದಾರೆ.

ನಾವು ಹಿಂದೆ ಏನೇನು ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದೆವು ಎನ್ನುವ ವಿವರ ನಮ್ಮ ಬಳಿ ಇದೆ. ಆಗಿನ ಭೇಟಿಯಲ್ಲಿ ನಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಆಯುಕ್ತರು ಕೂಡ ಇದ್ದರು. ಕೈಗಾರಿಕಾ ಸಚಿವನಾಗಿ ನಾನು ಅವರ ಬಳಿ ಹೋಗಿದ್ದೆ. ಇದರಲ್ಲಿ ನನ್ನದು ಅನ್ನುವ ಸ್ವಾರ್ಥವೇನೂ ಇಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!