Conflict in BJP.. Congress to power again in 2028; CMSiddaramaiah

ಬಿಜೆಪಿಯಲ್ಲಿ ಕಚ್ಚಾಟ.. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ; ಸಿಎಂ ಸಿದ್ದರಾಮಯ್ಯ| Video

ಚಿತ್ರದುರ್ಗ: ಬಿಜೆಪಿಯಲ್ಲಿ ಎರಡು ಮೂರು, ನಾಲ್ಕು ಗುಂಪುಗಳಿವೆ, ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಳಿಲ್ಲ. ನಾನು ಮತ್ತು ಡಿ.ಕೆ ಶಿವಕುಮಾರ್ ಇಲ್ಲಿಯೇ ಇದ್ದೇವೆ. ನಮ್ಮಲ್ಲಿ ಗುಂಪುಗಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯಲ್ಲಿ ಕಚ್ಚಾಟ ನಡೆದಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ. ಸರ್ಕಾರ ಸುಭದ್ರವಾಗಿದ್ದು, ನಾವು ಐದು ವರ್ಷ ಅಧಿಕಾರ ನಡೆಸಿ 2028 ನಡೆವ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ ಎಂದರು.

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ 2023-24 ರ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಅದೇ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿಯವರು ತಮ್ಮ ಬಜೆಟ್ ನಲ್ಲಿಯೂ ಇದನ್ನು ಪುನರುಚ್ಚರಿಸಿದ್ದರು.

ಬಿಜೆಪಿಯಲ್ಲಿ ಕಚ್ಚಾಟ.. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ; ಸಿಎಂ ಸಿದ್ದರಾಮಯ್ಯ| Video

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿದ್ದರು. ಇಷ್ಟು ವರ್ಷಗಳಾದರೂ ಒಂದು ಪೈಸೆಯೂ ರಾಜ್ಯಕ್ಕೆ ಬಂದಿಲ್ಲ.

ಸರ್ಕಾರ ಅನೇಕ ಬಾರಿ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ನೀಡಿದ್ದು , ಪ್ರಧಾನಿಗಳು, ನಿರ್ಮಲಾ ಸೀತಾರಾಮನ್, ಅಮಿತ್ ಶಾ ಅವರನ್ನೂ ಭೇಟಿ ಮಾಡಲಾಗಿದೆ. ಅವರೇ ಬಜೆಟ್ ನಲ್ಲಿ ಘೋಷಣೆ ಮಾಡಿರುವುದನ್ನು ಕೊಡಿ ಎಂದರೂ ಬಿಡುಗಡೆ ಮಾಡಿಲ್ಲ ಎಂದರು.

ನನ್ನನ್ನೂ ಒಳಗೊಂಡಂತೆ ಉಪಮುಖ್ಯಮಂತ್ರಿಗಳು ಭೇಟಿಯಾಗಿ ಬಂದಿದ್ದೇವೆ. ನಬಾರ್ಡ್ ನಲ್ಲಿ ರಾಜ್ಯಕ್ಕೆ ಬರಬೇಕಾದ ಸಾಲದ ಮೊತ್ತ ಕಡಿತವಾಗಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದಾಗಲೂ ಈ ವಿಷಯವನ್ನು ಪ್ರಸ್ತಾಪಿಸಲಾಯಿತು. ಆದರೆ ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಜೆಟ್ ನಲ್ಲಿಯಾದರೂ ಹಣ ಮೀಸಲಿಟ್ಟು ಬಿಡುಗಡೆ ಮಾಡಲಿ ಎಂದು ಪತ್ರವನ್ನು ಕೇಂದ್ರಕ್ಕೆ ಬರೆದು ಒತ್ತಡ ಹಾಕಲಾಗುತ್ತಿದೆ.

ರೈತರ ಜಮೀನು ಮುಳುಗಡೆಯಾಗದಂತೆ ತಡೆಯಲು ಪ್ರಯತ್ನ

ಹೊಸದುರ್ಗ ತಾಲ್ಲೂಕಿನ ಹಿನ್ನೀರಿನಲ್ಲಿ ರೈತರ ಜಮೀನು ಮುಳುಗಡೆಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮುಳುಗಡೆಯಾಗದ ರೀತಿಯಲ್ಲಿ ತಡೆಯುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವಾಣಿ ವಿಲಾಸ ಸಾಗರ ಅಣೆಕಟ್ಟೆಗೆ 115 ವರ್ಷಗಳ ಇತಿಹಾಸವಿದೆ. ಇಷ್ಟು ವರ್ಷಗಳಲ್ಲಿ ಈ ಅಣೆಕಟ್ಟು ಕೋಡಿ ಬಿದ್ದಿರುವುದು ಮೂರು ಬಾರಿ ಮಾತ್ರ. ಅಂದರೆ 1933, 2022 ಹಾಗೂ ಜನವರಿ 14, 2025 ರಲ್ಲಿ ಕೋಡಿ ಬಿದ್ದಿದೆ.

ಕರ್ನಾಟಕದ ಮೊದಲನೇ ಜಲಾಶಯ ಇದಾಗಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿ ಸಂಪಾಜಮ್ಮಣಿಯವರ ಹೆಸರಿನಲ್ಲಿ ಕಟ್ಟಿಸಿದ್ದು, ವಾಣಿ ವಿಲಾಸ ಸಾಗರ ಎಂದು ಕರೆಯಲಾಗಿದೆ. 1898 ನೇ ಇಸವಿಯಲ್ಲಿ ಪ್ರಾರಂಭವಾಗಿ 1907 ರಲ್ಲಿ ಅಣೆಕಟ್ಟು ನಿರ್ಮಾಣ ಮುಕ್ತಾಯವಾಯಿತು. 30.ಟಿ.ಎಂ.ಸಿ ನೀರು ಶೇಖರಣೆ ಮಾಡುವ ಸಾಮರ್ಥ್ಯವಿರುವ ಅಣೆಕಟ್ಟು 33 ಸಾವಿರ ಎಕರೆಗೆ ನೀರುಣಿಸುತ್ತದೆ ಎಂದು ಸಿಎಂ ವಿವರಿಸಿದರು.

ಈ ಜಿಲ್ಲೆಯ ಅನೇಕ ತಾಲ್ಲೂಕುಗಳು ಬರಪೀಡಿತ ಎಂದು ಆಗ ಹಳೇ ಮೈಸೂರಿನಲ್ಲಿ ರಾಜರ ಪ್ರತಿನಿಧಿಯಾಗಿದ್ದ ಸಂಪಾಜಮ್ಮಣ್ಣಿಯವರು ಈ ಕೆರೆಯನ್ನು ನಿರ್ಮಾಣ ಮಾಡಿದರು. ಈ ಭಾಗದಲ್ಲಿ ಮಳೆ ಕಡಿಮೆಯಿರುವುದರಿಂದ ಅಣೆಕಟ್ಟು ನಿರ್ಮಿಸಿದರೆ ಈ ಭಾಗದ ಜನರಿಗೆ ನೀರು ದೊರೆಯಲಿದೆ ಎಂಬ ಉದ್ದೇಶದಿಂದ ಅವರ ಒಡವೆಗಳನ್ನು ಅಡವಿಟ್ಟು ಸುಮಾರು 45 ಲಕ್ಷ ರೂ.ಗಳನ್ನು ವೆಚ್ಚ ಮಾಡಿದ್ದರು ಎಂದು ತಿಳಿಸಿದರು.

ಸಮೃದ್ಧ ಮಳೆಗಾಗಿ ಪ್ರಾರ್ಥನೆ

ಇಂದು ಗಂಗಾಪೂಜೆಯನ್ನು ಮಾಡಿ ಬಾಗಿನ ಅರ್ಪಿಸಿದ್ದೇವೆ. ಪ್ರತಿ ವರ್ಷವೂ ರೈತರ ಜಮೀನುಗಳಿಗೆ ನೀರು ಸಿಗುವಂತಾಗಲಿ ಒಳ್ಳೆ ಮಳೆ, ಬೆಳೆಯಾಗಿ ಪ್ರತಿ ವರ್ಷವೂ ಕೋಡಿ ಬೀಳುವಂತೆ ಕೆರೆಗೆ ನೀರು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನವಾದರೆ ಪ್ರತಿ ವರ್ಷವೂ ಅಣೆಕಟ್ಟಿಗೆ ನೀರು ಹರಿಯಲಿದೆ ಎಂದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!