Doddaballapura: Anganwadi worker's accident case

Doddaballapura: ಪೊಲೀಸರಿಗೆ ಸವಾಲಾದ ಅಂಗನವಾಡಿ ಕಾರ್ಯಕರ್ತೆ ಅಪಘಾತ ಪ್ರಕರಣ

ದೊಡ್ಡಬಳ್ಳಾಪುರ, (Doddaballapura): ಅಪರಿಚಿತ ವಾಹನ ಮೇಲರಿದ ಪರಿಣಾಮ (Accident) ಅಂಗನವಾಡಿ ಕಾರ್ಯಕರ್ತೆ ಸಾವನಪ್ಪಿರುವ ಘಟನೆ ತಾಲೂಕಿನ ಗುಂಡಮಗೆರೆ ಹೊಸಹಳ್ಳಿ ನಡುವಿನ ಕೆಇಬಿ ಬಳಿ ಸಂಭವಿಸಿದೆ‌

ಮೃತ ಅಂಗನವಾಡಿ ಕಾರ್ಯಕರ್ತೆಯನ್ನು ಶಾಮಲಾ ದೇವಿ (30 ವರ್ಷ) ಎಂದು ಗುರುತಿಸಲಾಗಿದೆ.

ಹೊಸಹಳ್ಳಿ ಸಮೀಪದ ಉಜ್ಜನಿ ಕಾಲೋನಿಯ ಅಂಗನವಾಡಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಸುತ್ತಿದ್ದ ಶ್ಯಾಮಲ ದೇವಿ ಅವರು ಕಂಟನಕುಂಟೆಯಲ್ಲಿ ವಾಸವಿದ್ದರು.

ಇಂದು ಶನಿವಾರವಾದ ಕಾರಣ ಅಂಗನವಾಡಿಯಲ್ಲಿ ಕರ್ತವ್ಯ ಮುಗಿಸಿ, ಕಂಟನಕುಂಟೆಯ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ, ಗುಂಡಮಗೆರೆ ಹೊಸಹಳ್ಳಿ ನಡುವಿನ ಕೆಇಬಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಈ ವೇಳೆ ನೆಲಕ್ಕೆ ಬಿದ್ದ ಶಾಮಲ ಅವರ ಮೇಲೆ ಹರಿದು ಪರಾರಿಯಾಗಿದೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಶಾಮಲ ಅವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರಿಗೆ ಸವಾಲು

ಘಟನೆ ಕುರಿತು ತನಿಖೆ ಆರಂಭಿಸಿರುವ ಪೊಲೀಸರಿಗೆ ಪರಾರಿಯಾಗಿರುವ ವಾಹನವನ್ನು ಪತ್ತೆ ಹಚ್ಚುವುದು ಸವಾಲಾಗಿ ಪರಿಣಮಿಸಿದೆ.

ಅಪಘಾತ ಸಂಭವಿಸಿದ ವ್ಯಾಪ್ತಿಯಲ್ಲಿ ಸಿಸಿ ಟಿವಿ ಕ್ಯಾಮೆರಾ ಇಲ್ಲದೆ ಇರುವುದು, ಪ್ರತ್ಯಕ್ಷದರ್ಶಿಗಳು ಇಲ್ಲದೆ ಇರುವ ಕಾರಣ ವಾಹನ ಪತ್ತೆ ಮಾಡುವುದು ಸಮಸ್ಯೆಯಾಗಿದೆ ಎನ್ನಲಾಗಿದೆ.

ಈ ಕುರಿತು ತೀವ್ರ ತನಿಖೆ ಕೈಗೊಂಡಿರುವ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ನೇತೃತ್ವದ ಪೊಲೀಸರು ಪರಾರಿಯಾಗಿರುವ ವಾಹನದ ಪತ್ತೆಗೆ ಬಲೆ ಬೀಸಿದ್ದಾರೆ.

ಮೂಲಗಳ ಅನ್ವಯ ಟ್ರಕ್ ಅಪಘಾತ ಮಾಡಿದೆ ಎಂದು ಪೊಲೀಸರು ಶಂಕಿಸಿದ್ದಾರೆಂದು ತಿಳಿದುಬಂದಿದೆ.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!