139 people including Anant Nag, Balakrishna were honored with Padma Award

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ನವದೆಹಲಿ (Padma Award): ಕೇಂದ್ರ ಸರ್ಕಾರ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವಗಳೆಂದೇ ಮನ್ನಣೆ ಗಳಿಸಿರುವ ಪದ್ದ ಪ್ರಶಸ್ತಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಹಿರಿಯ ನಟ ಅನಂತ್ ನಾಗ್ ಸೇರಿ ಕರ್ನಾಟಕದ ಒಂಬತ್ತು ಸಾಧಕರು ಭಾಜನರಾಗಿದ್ದಾರೆ.

ಲಕ್ಷ್ಮೀನಾರಾಯಣ ಸುಬ್ರಮಣಿಯಂ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದ್ದರೆ, ಎ.ಸೂರ್ಯಪ್ರಕಾಶ್ ಮತ್ತು ಹಿರಿಯ ನಟ ಅನಂತನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಸಿಕ್ಕಿದೆ.

ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ(ಕಲೆ), ಹಾಸನ್ ರಘು(ಕಲೆ), ಪ್ರಶಾಂತ್ ಪ್ರಕಾಶ್(ವಾಣಿಜ್ಯ ಮತ್ತು ಉದ್ಯಮ) ರಿಖಿ ಗ್ಯಾನ್ ಕೇಜ್(ಕಲೆ), ವೆಂಕಪ್ಪ ಅಂಬಾಜಿ ಸುಗತೇಕರ್(ಕಲೆ) ಮತ್ತು ವಿಜಯಲಕ್ಷ್ಮೀ ದೇಶಮನೆ(ವೈದ್ಯಕೀಯ) ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ.

ಈ ಬಾರಿ ಒಟ್ಟು 139 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದ್ದು, ಇದರಲ್ಲಿ ಏಳು ಮಂದಿಗೆ ಪದ್ಮವಿಭೂಷಣ, 19 ಮಂದಿಗೆ ಪದ್ಮಭೂಷಣ ಮತ್ತು 113 ಮಂದಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. 23 ಮಂದಿ ಮಹಿಳೆಯರು, 10 ಮಂದಿ ವಿದೇಶಿಯರು ಹಾಗೂ 1 ಮಂದಿಗೆ ಮರಣೋತ್ತರವಾಗಿ ಪ್ರಶಸ್ತಿ ಘೋಷಿಸಲಾಗಿದೆ. ಈ ಬಾರಿಯೂ ಪ್ರಶಸ್ತಿ ನೀಡುವಲ್ಲಿ ಎಲೆಮರೆಯ ಕಾಯಿಗಳಿಗೇ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಕ್ರೀಡೆಯಲ್ಲಿ ಪಿ.ಆರ್.ಶ್ರೀಜೇಶ್ ಅವರಿಗೆ ಪದ್ಮಭೂಷಣ ನೀಡಿರುವುದು ವಿಶೇಷ. ಉಳಿದಂತೆ ಇದೇ ವಿಭಾಗದಲ್ಲಿ ಹರ್ಯಾಣದ ಹರ್ವೀಂದರ್ ಸಿಂಗ್, ಕೇರಳದ ಇನ್ವಿಲಪ್ಟಿಲ್ ಮಣಿ ವಿಜಯನ್, ತಮಿಳುನಾಡಿನ ಆರ್.ಅಶ್ವಿನ್, ಉತ್ತರ ಪ್ರದೇಶದ ಸತ್ಯಪಾಲ್ ಸಿಂಗ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ.

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಜೆ,ಎಸ್. ಖೇಹರ್, ಸುಜುಕಿ ಮುಖ್ಯಸ್ಥ ಒಸಾಮು ಸುಜುಕಿ, ಜಾನಪದ ಗಾಯಕಿ ದಿವಂಗತ ಶಾರದಾಸಿನ್ಹಾಮತ್ತು ಮಾಜಿ ಕ್ರಿಕೆಟಿಗಆರ್.ಅಶ್ವಿನ್‌ಸೇರಿದಂತೆ 139 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

ಭಾರತಕ್ಕೆ ಮಾರುತಿ ಸುಝುಕಿ ಕಾರು ಪರಿಚಯಿಸಿದ ಜಪಾನ್ ಉದ್ಯಮಿ ಒಸಾಮು ಸುಜುಕಿ, ಮಲಯಾಳಂ ಸಾಹಿತ್ಯದ ದಂತಕಥೆ ಎಂಟಿವಾಸುದೇವನ್‌ ನಾಯರ್‌ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ.

ಪ್ರಧಾನಮಂತ್ರಿಯವರ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷರಾಗಿದ್ದ ಬಿಬೇಕ್‌ ದೆಬ್ರಾಯ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ / ಶಿವಸೇನೆಯ ಘಟಾನುಘಟಿ ಮನೋಹ‌ರ್ ಜೋಶಿ, ಗಜಲ್ ಗಾಯಕ ಪಂಕಜ್ ಉಧಾಸ್, ಖ್ಯಾತ ನಟ ಅನಂತ ನಾಗ್, ನಟಿ ಶೋಭನಾ, ಹಿಂದೂ ಫೈರ್‌ಬ್ರಾಂಡ್ ನಾಯಕಿ ಸಾದ್ವಿ ಋತಾಂಬರಾ, ನಟ ಅಜಿತ್ ಕುಮಾರ್ ಸೇರಿದಂತೆ 19 ಮಂದಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗಿದೆ.

ತೆಲುಗು ಸೂಪರ್‌ಸ್ಟಾ‌ರ್ ನಂದಮೂರಿ ಬಾಲ ಕೃಷ್ಣ, ಎಸ್ ಬಿಐ ಮಾಜಿ ಅಧ್ಯಕ್ಷೆ ಅರುಂಧತಿ ಭಟ್ಟಾಚಾರ್ಯ, ಸಂಗೀತಗಾರ ರಿಕ್ಕಿ ಕೇಜ್, ರಾಮಮಂದಿರ ಶಿಲ್ಪಿಚಂದ್ರಕಾಂತ ಸೋಂಪುರ ಆವರಿಗೆ ಪದ್ಮಶ್ರೀ ಸಂದಿದೆ.

ಕನ್ನಡಿಗರ ಅಭಿಯಾನ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ ಭಾಜನರಾಗಿರುವ ಮೇರು ನಟನಿಗೆ ಪದ್ಮ ಶ್ರೀ ಗೌರವ ಇದುವರೆಗೂ ನಿಲುಕದ ಪದಕ ವಾಗಿತ್ತು.

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮುಂತಾದ ಅವರಿಗೆ ದಶಕದ ಹಿಂದೆಯೇ ಪದ್ಮ ಶ್ರೀ ಪುರಸ್ಕಾರ ಸಿಕ್ಕಿತ್ತು. ಇದರಿಂದ ಬೇಸರಗೊಂಡಿದ್ದ ಕನ್ನಡ ಚಿತ್ರ ಪ್ರೇಮಿಗಳು ಅನಂತ್ ನಾಗ್ ಅವರಿಗೆ ಪದ್ಮ ಗೌರವ ಕೊಡಲೇಬೇಕೆಂದು ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಿದ್ದರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ್ದ ಅನಂತ್ ನಾಗ್, ತಮ್ಮ ಹೆಸರಿನಲ್ಲಿ ಪ್ರಶಸ್ತಿ ಗಾಗಿ ಯಾರೂ ಅಭಿಯಾನ ನಡೆಸಬಾರದು ಎಂದು ಮನವು ಮಾಡಿದ್ದರು.

ಚಿತ್ರೋದ್ಯಮದ ಅನೇಕ ಕಿರಿಯರಿಗೆ ಪದ್ಮಶ್ರೀ ಸಿಕ್ಕಿರುವ ಹಿನ್ನೆಲೆಯಲ್ಲಿ ಅನಂತ್ ನಾಗ್ ಈ ಹಂತ ದಲ್ಲಿ ಪ್ರಶಸ್ತಿ ಸ್ವೀಕರಿಸಬಾರದು ಎಂಬ ಮಾತುಗಳೂ ಕೇಳಿ ಬಂದಿದ್ದವು. ಈ ಆಕ್ರೋಶ ಸಹಜವೂ ಆಗಿತ್ತು. ಮೇರು ಗಾಯಕಿ ಎಸ್. ಜಾನಕಿ ಅವರು ಇಂಥದ್ದೇ ಸನ್ನಿವೇಶದಲ್ಲಿ ಕೆಲ ವರ್ಷಗಳ ಹಿಂದೆ ಪದ್ಮ ಪುರಸ್ಕಾರ ವನ್ನು ನಿರಾಕರಿಸಿದ್ದರು.

ಇದೀಗ ಕೇಂದ್ರ ಸರಕಾರ ಅನಂತ್ ಅವರನ್ನು ನೇರವಾಗಿ ಪದ್ಮಭೂಷಣ ಪುರಸ್ಕಾರಕ್ಕೆ ಆಯ್ಕೆ ಮಾಡುವ ಮೂಲಕ ಈ ವಿವೇಚನಾಯುಕ್ತ ನಿರ್ಧಾರ ತೆಗೆದುಕೊಂಡಿದೆ. ಈ ಮೂಲಕ ಅನಂತ್ ಮತ್ತವರ ಸಹಜ ನಟನೆಯ ಅಭಿಮಾನಿಗಳ ಭಾವನೆಗಳನ್ನು ಗೌರವಿಸಿದೆ.

ರಾಜಕೀಯ

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ..!

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ..!

"ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (BDCC Bank) ಚುನಾವಣೆಯಲ್ಲಿ ದೊಡ್ಡಬಳ್ಳಾಪುರದ ಚುಂಚೇಗೌಡ, ಎಂ.ಗೋವಿಂದ ರಾಜು, ರಮೇಶ್ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ".

[ccc_my_favorite_select_button post_id="117123"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!