Daily story A pandit named Sujnani

Daily story| ಹರಿತಲೇಖನಿ ದಿನಕ್ಕೊಂದು ಕಥೆ: ಸುಜ್ಞಾನಿ ಎಂಬ ಪಂಡಿತ

Daily story: ಒಂದೂರಿನಲ್ಲಿ ಒಬ್ಬ ರಾಜನಿದ್ದ. ಅವನ ಆಸ್ಥಾನಕ್ಕೆ ಒಮ್ಮೆ ಸುಜ್ಞಾನಿ ಎಂಬ ಪಂಡಿತ ಬಂದ. ಅವನು ರಾಜನನ್ನು ಕುರಿತು, “ಮಹಾರಾಜರೇ, ನಿಮ್ಮ ಆಸ್ಥಾನದ ಪಂಡಿತರು ಕೇಳಿದ ಯಾವುದೇ ಪ್ರಶ್ನೆಗೆ ತೃಪ್ತಿಕರ ಉತ್ತರ ನೀಡುವೆ. ನಿಮಗೆ ಸರಿ ಎನಿಸಿದರೆ ತಕ್ಕ ಕಾಣಿಕೆ ನೀಡಿರಿ” ಎಂದು ಬೇಡಿಕೊಂಡನು.

ರಾಜನ ಒಪ್ಪಿಗೆಯ ಮೇರೆಗೆ ಸಭೆ ಕರೆಯಲಾಯಿತು. ಒಬ್ಬ ಆಸ್ಥಾನದ ಪಂಡಿತನು ಸುಜ್ಞಾನಿಯನ್ನು ಕುರಿತು. “ಸಕಲ ಮಾನವ, ಪಕ್ಷಿ, ಪ್ರಾಣಿ, ಕ್ರಿಮಿ ಕೀಟಗಳು ಹಾಗೂ ಗಿಡ ಮರಗಳನ್ನು ಕಾಪಾಡುವ ಕರುಣಾಮ ತಾಯಿ ಯಾರು? ಎಂದು ಕೇಳಿದನು. ಸುಜ್ಞಾನಿ ಪಂಡಿತನು.

“ಭೂಮಿ ತಾಯಿ. ಮಾನವನಿಗೆ ಮನೆ ಕಟ್ಟಲು ಕಲ್ಲು – ಮಣ್ಣು, ಕಟ್ಟಿಗೆ ಕೊಡುವವಳು ಭೂಮಿತಾಯಿ. ಜೋಳ – ಗೋಧಿ ಮುಂತಾದ ಆಹಾರ ಧಾನ್ಯ ಬೆಳೆಯುವವಳು ಅವಳು. ಗಿಡಗಳ ಮೂಲಕ ಹಣ್ಣು, ಕಾಯಿ ನೀಡುವಳು. ಹೊಳೆ, ಕೆರೆ, ಸರೋವರ ಮೂಲಕ ನೀರು ಕೊಡುವವಳು ಭೂಮಿ ತಾಯಿಯೇ” ಎಂದು ಉತ್ತರಿಸಿದನು.

ಎರಡನೇಯ ಪಂಡಿತನು, “ಸಕಲ ಜೀವಿಗಳನ್ನು ರಕ್ಷಣೆ ಮಾಡುವ ನಿಜವಾದ ರಾಜನು ಯಾರು” ಎಂದು ಪ್ರಶ್ನಿಸಿದನು. ಸುಜ್ಞಾನಿ ಪಂಡಿತನು “ನಿಜವಾದ ರಾಜನೆಂದರೆ ಮಳೆರಾಜನೆ. ಮಳೆರಾಜನು ಸುರಿಸುವ ಮಳೆ ನೀರಿನಿಂದಲೇ ರೈತ ಆಹಾರ ಧಾನ್ಯ ಬೆಳೆಯುತ್ತಾನೆ.

ಲತೆಗಳು ಹೂ ಕೊಡುವವು. ಗಿಡಗಳು ಹಣ್ಣು ಕೊಡುವವು. ಹೊಳೆ ಕೆರೆಗಳು ನೀರು ಕೊಡುವುದು ಮಳೆ ರಾಜನ ಕೃಪೆಯಿಂದಲೇ. ಈ ರೀತಿಯಲ್ಲಿ ಸಕಲ ಜೀವಿಗಳನ್ನು ರಕ್ಷಿಸುವ ರಾಜನೆಂದರೆ ಮಳೆರಾಜನೆ” ಎಂದು ಉತ್ತರಿಸಿದನು.

ಬೆಳವಣಿಗೆ ಮಾಡುವ ಎರಡು ಮುಖ್ಯ ವಸ್ತುಗಳು ಯಾವುವು?

ಮೂರನೇಯ ಪಂಡಿತನು. “ಮಾನವ ಶರೀರವನ್ನು ಆರೋಗ್ಯಪೂರ್ಣವಾಗಿ ಬೆಳವಣಿಗೆ ಮಾಡುವ ಎರಡು ಮುಖ್ಯ ವಸ್ತುಗಳು ಯಾವುವು?” ಎಂದು ಪ್ರಶ್ನಿಸಿದನು. ಸುಜ್ಞಾನಿ ಪಂಡಿತನು.

“ನಮ್ಮ ಶಾರೀರಿಕ ಆರೋಗ್ಯ ಚೆನ್ನಾಗಿರಲು ಒಳ್ಳೆಯ ಶುಚಿಯಾದ ಆಹಾರ ಹಾಗೂ ಸ್ವಚ್ಛ ನೀರೆ ಬೇಕು. ಅನುಭವಿಗಳು ಇದನ್ನೇ “ಕೂಳು ಕುತ್ತು, ನೀರು ಪಿತ್ತು” ಅಂದಿದ್ದಾರೆ. ಅಂದರೆ ಅಶುದ್ಧ ಆಹಾರ ಹಾಗೂ ಹೊಲಸು ನೀರು ನಮ್ಮ ಶರೀರವನ್ನು ರೋಗಮಾಯ ಮಾಡುತ್ತವೆ.

ಸತ್ವಯುತ ಬಿಸಿ ಬಿಸಿ ಹಿತಮಿತವಾದ ಆಹಾರ ಹಾಗೂ ಪರಿಶುದ್ಧವಾದ ನೀರು ಆರೋಗ್ಯಪೂರ್ಣ ಬೆಳವಣಿಗೆಯ ಎರಡು ಮುಖ್ಯ ವಸ್ತುಗಳಾಗಿವೆ” ಎಂದು ಉತ್ತರಿಸಿದನು.

ನಾಲ್ಕನೇಯ ಆಸ್ಥಾನ ಪಂಡಿತನು, “ನಿಸರ್ಗದಲ್ಲಿ ಜೀವಿಸುವ ಪಕ್ಷಿ, ಪ್ರಾಣಿ, ಮನುಷ್ಯ, ಸಸ್ಯ, ಕ್ರಿಮಿ ಕಿಟಾದಿಗಳು ನಿಜವಾದ ದೇವರು ಯಾರು? ಎಂದು ಕೇಳಿದನು. ಸುಜ್ಞಾನಿಯು, “ಆಹಾರವಿಲ್ಲದೆ – ನೀರಿಲ್ಲದೆ ಯಾವು ಜೀವಿಯು ಬದುಕಲಾರದು. ಆಹಾರ ಧಾನ್ಯಗಳು ಹುಲುಸಾಗಿ ಬೆಳೆಯಲು ಸೂರ್ಯನ ಬಿಸಿಲು, ಬೆಳಕು ಅವಶ್ಯಕ.

ಸೂರ್ಯನ ಪ್ರಖರ ಕಿರಣಗಳಿಂದ ಸಮುದ್ರದ ನೀರು ಕಾಯ್ದು ಉಗಿಯಾಗಿ, ಅದ್ರವಾಗಿ ಮೇಲೆ ಹೋಗುತ್ತದೆ. ಆ ಉಗಿಗೆ ತಂಪು ತಗುಲಿದಾಗ, ಮೋಡಗಳಿಂದ ಮಳೆ ಸುರಿಯುತ್ತದೆ.

ಈ ರೀತಿ ಸುರಿದ ಮಳೆಯಿಂದ ಬೆಳೆಗಳು ಬೆಳೆದು ನಮ್ಮ ಆಹಾರವಾಗಿ ಜೀವಿಸಲು ನೆರವಾಗುತ್ತವೆ. ಮಳೆಯಿಂದ ಪಡೆದ ನೀರು ಕುಡಿಯಲು ಉಪಯೋಗವಾಗುತ್ತದೆ. ಹೀಗೆ ನಮ್ಮನ್ನು ಕಾಪಾಡುವ ನಿಜವಾದ ದೇವರೆಂದರೆ ಸೂರ್ಯದೇವೆನೆ” ಎಂದು ವಿವರಿಸಿದನು.

ಐದನೇ ಪಂಡಿತನು, “ಮನುಷ್ಯ ನಿಜವಾದ ಪ್ರಾಣ ಯಾವುದು? ಎಂದು ಕೇಳಿದನು. ಸುಜ್ಞಾನಿಯು, “ಪ್ರಾಣವೆಂದರೆ ಉಸಿರು. ಉಸಿರಾಟ ನಿಂತರೆ ಮನುಷ್ಯ ಸತ್ತಂತೆಯೇ.

ಆದ್ದರಿಂದ ಮನುಷ್ಯ ನಿಜವಾದ ಪ್ರಾಣ ಎಂದರೆ ಉಸಿರಾಟವೇ ಆಗಿದೆ. ಅನುಲೋಮ – ವಿಲೋಮ ಕ್ರಿಯೆ ಹಾಗೂ ಕಪಾಲಭಾತಿ ಮೊದಲಾದ ಪ್ರಾಣಾಯಾಮ, ಯೋಗ ಕ್ರಿಯೆಗಳು ಆರೋಗ್ಯಪೂರ್ಣ ಜೀವನಕ್ಕೆ ಪಂಚ ಪ್ರಾಣವೆಂದು ತಿಳಿಯಬೇಕು” ಎಂದು ಹೇಳಿದನು.

ರಾಜನೂ, ಆಸ್ಥಾನ ಪಂಡಿತರು ಸುಜ್ಞಾನಿ ಪಂಡಿತನ ವಾಕ್ ಚಾತುರ್ಯವನ್ನು ತುಂಬಾ ಮೆಚ್ಚಿಕೊಂಡರು. ಅವನಿಗೆ ಯೋಗ್ಯ ಕಾಣಿಕೆ ನೀಡಿ ಗೌರವಿಸಿದರು.

ಕೃಪೆ: ಸಾಮಾಜಿಕತಾಣ. (ಲೇಖಕರ ಮಾಹಿತಿ ಲಭ್ಯವಿಲ್ಲ)

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!