District level 8th Janatadarshan; Acceptance of 200 petitioner..

ಜಿಲ್ಲಾ ಮಟ್ಟದ 8ನೇ ಜನತಾದರ್ಶನ; 200 ಅಹವಾಲು ಸ್ವೀಕಾರ..

ಧಾರವಾಡ: ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ (Santosh lad) ಅವರು ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಜಿಲ್ಲಾ ಮಟ್ಟದ 8ನೇ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು.

ಅವರು ಇಂದು ಬೆಳಿಗ್ಗೆ 11:40 ರಿಂದ ಸಂಜೆ 4:45 ಗಂಟೆವರೆಗೆ ನಿರಂತರವಾಗಿ ಐದು ಗಂಟೆಗಳಿಗೂ ಹೆಚ್ಚು ಕಾಲ ಸಾರ್ವಜನಿಕರ ಸಮಸ್ಯೆಗಳನ್ನು ಪೂರ್ಣವಾಗಿ ಆಲಿಸಿ, ಪರಿಹಾರದ ಭರವಸೆ ನೀಡಿದರು. ಜನತಾ ದರ್ಶನ ಮುಗಿಯುವರೆಗೆ ಸುಮಾರು 5 ಗಂಟೆಗೂ ಹೆಚ್ಚು ಕಾಲ ಸಚಿವರು ನಿಂತುಕೊಂಡೆ ಜನರ ಸಮಸ್ಯೆ ಆಲಿಸಿದ್ದು ಎಲ್ಲರ ಗಮನ ಸೆಳೆಯಿತು.

ಸೆಪ್ಟೆಂಬರ 25, 2023 ರಿಂದ ಜನವರಿ 27, 2025 ರ 14 ತಿಂಗಳ ಅವಧಿಯಲ್ಲಿ ಜಿಲ್ಲಾ ಮಟ್ಟದ ಎಂಟು ಜನತಾ ದರ್ಶನ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಾಜ್ಯದಲ್ಲಿಯೇ ಅತಿ ಹೆಚ್ಚು ಜನತಾ ದರ್ಶನ ಆಯೋಜಿಸಿದ ಏಕೈಕ ಸಚಿವರಾಗಿದ್ದಾರೆ.

ಸಭೆಯುದ್ದಕ್ಕೂ ಸಹನೆಯಿಂದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಸಚಿವರು, ತಪ್ಪು ಕಂಡು ಬಂದಲ್ಲಿ ಅಧಿಕಾರಿಗಳಿಗೆ ಗದರಿಸಿ, ಸರಿಯಾಗಿ ಸಾರ್ವಜನಿಕರ ಸೇವೆ ಮಾಡುವಂತೆ ಎಚ್ಚರಿಸಿದರು.

ತಪ್ಪು ಮಾಹಿತಿ ನೀಡಲು ಪ್ರಯತ್ನಿಸುವ ಹಾಗೂ ಅಧಿಕಾರಿಗಳ ಮೇಲೆ ವಿನಾಕಾರಣ ದೂರು ಹೇಳುವವರೆಗೂ ಸಿಟ್ಟಿನಿಂದ ಸಚಿವರು ಬಿಸಿ ಮುಟ್ಟಿಸುತ್ತಾರೆ. ಜನತಾದರ್ಶನಕ್ಕೆ ತಮ್ಮ ಸಮಸ್ಯೆ ಹೊತ್ತು ಬರುವ ಪ್ರತಿಯೊಬ್ಬರನ್ನು ಸಹನೆಯಿಂದ ವಿಚಾರಿಸಿ, ಸರಕಾರದ ಸಹಾಯದೊಂದಿಗೆ, ಅಗತ್ಯವಿದ್ದಲ್ಲಿ ವೈಯಕ್ತಿಕ ನೆರವು ನೀಡುತ್ತಾರೆ. ಅಹವಾಲು ನೀಡಿದವರು ಪರಿಹಾರದ ಭರವಸೆಯೊಂದಿಗೆ ಮನೆಗೆ ಮರಳುತ್ತಾರೆ.

ಜನತಾದರ್ಶನ ಮುಕ್ತಾಯವಾದ ನಂತರ ಸಚಿವ ಸಂತೋಷ್ ಲಾಡ್ ಅವರು ಮಾತನಾಡಿ, ಜನತಾದರ್ಶನಕ್ಕೆ ಪರಿಹಾರದ ಭರವಸೆಯೊಂದಿಗೆ ಸಾರ್ವಜನಿಕರು ಬಂದಿರುತ್ತಾರೆ. ಅವರಿಗೆ ನಿರಾಸೆ ಮೂಡಿಸದೆ ಸಾಧ್ಯವಾದಷ್ಟು ಸ್ಥಳದಲ್ಲಿ ಅವರ ಸಮಸ್ಯೆ ಪರಿಹರಿಸಬೇಕು. ಅಗತ್ಯವಿದ್ದಲ್ಲಿ ಸರಕಾರಕ್ಕೆ ಶಿಫಾರಸ್ಸು ಮಾಡಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿ ಇಲಾಖೆ ಅಧಿಕಾರಿಗಳು ಸಾರ್ವಜನಿಕ ಕಳಕಳಿ, ಕಾಳಜಿ ಮತ್ತು ಮಾನವೀಯತೆಯಿಂದ ಸಮಸ್ಯೆಗಳನ್ನು, ಅಹವಾಲುಗಳನ್ನು ಆಲಿಸಿದರೆ, ಅರ್ಧ ಪರಿಹಾರ ಸಿಕಷ್ಟು ಅವರು ಖುಷಿಯಾಗುತ್ತಾರೆ. ಸಾರ್ವಜನಿಕರೊಂದಿಗೆ ಉತ್ತಮ ರೀತಿಯಲ್ಲಿ ಸಂವಹನ ಮಾಡಿ ಜನಸ್ನೇಹಿ ಆಡಳಿತ ನೀಡಬೇಕು. ಸರಕಾರದ ಯೋಜನೆ, ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು ಹೇಳಿದರು.

ಇಂದಿನ ಜನತಾದರ್ಶನದಲ್ಲಿ 200 ಅರ್ಜಿ ಸ್ವೀಕಾರ: ಇಂದು ಜರುಗಿದ ಜನತಾದರ್ಶನದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 61, ಮಹಾನಗರ ಪಾಲಿಕೆಗೆ ಸಂಬಂಧಿಸಿದ 33, ಜಿಲ್ಲಾ ಪಂಚಾಯತ ಸಂಬಂಧಿಸಿದ 16 ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ 88 ಅರ್ಜಿಗಳು ಸೇರಿ ಒಟ್ಟು 200 ಅರ್ಜಿಗಳನ್ನು ಸ್ವೀಕರಿಸಲಾಯಿತು. ಪ್ರತಿ ಅರ್ಜಿ ಪರಿಶೀಲಿಸಿ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸಲು ಸಚಿವರು ನಿರ್ದೇಶಿಸಿದರು.

ಜನತಾ ದರ್ಶನದಲ್ಲಿ ಭಾಗವಹಿಸಿದ್ದ ಶಾಸಕ ಎನ್.ಎಚ್.ಕೋನರೆಡ್ಡಿ ಅವರು ಜನರ ಸಮಸ್ಯೆಗಳನ್ನು ಸಚಿವರಿಗೆ ಮನವರಿಕೆ ಮಾಡುವಲ್ಲಿ ಮತ್ತು ಸರಕಾರದ ನಿಯಮಾವಳಿಗಳನ್ನು ಸಾರ್ವಜನಿಕರಿಗೆ ತಿಳಿಸಿ ಹೇಳುವ ಮೂಲಕ ಜನತಾದರ್ಶನ ಯಶಸ್ವಿಗೆ ಸಹಕರಿಸಿದರು.

ಸೆಪ್ಟೆಂಬರ 25, 2023 ರಿಂದ ಆರಂಭವಾದ ಮೊದಲ ಜನತಾ ದರ್ಶನದಲ್ಲಿ 450, 2ನೇ ಜನತಾ ದರ್ಶನದಲ್ಲಿ 197, 3ನೇ ಜನತಾ ದರ್ಶನದಲ್ಲಿ 177, 4 ನೇ ಜನತಾ ದರ್ಶನದಲ್ಲಿ 112, 5ನೇ ಜನತಾ ದರ್ಶನದಲ್ಲಿ 175, 6ನೇ ಜನತಾ ದರ್ಶನದಲ್ಲಿ 131, 7ನೇ ಜನತಾ ದರ್ಶನದಲ್ಲಿ 213 ಮತ್ತು ಇಂದಿನ 8ನೇ ಜನತಾ ದರ್ಶನದಲ್ಲಿ 200 ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಹಿಂದಿನ ಏಳು ಜನತಾ ದರ್ಶನಗಳಲ್ಲಿ ಸ್ವೀಕರಿಸಿದ್ದ ಒಟ್ಟು 1,455 ಅಹವಾಲುಗಳನ್ನು ನಿಯಮಾನುಸಾರ ಇತ್ಯರ್ಥ ಪಡಿಸಲಾಗಿದೆ.

ಇಂದಿನ ಜನತಾ ದರ್ಶನದಲ್ಲಿ ಮುಖ್ಯವಾಗಿ ಮನೆ ನಿರ್ಮಾಣಕ್ಕೆ ಸಹಾಯಧನ, ಪ್ಲಾಟ್ ಹಕ್ಕುಪತ್ರ, ಆರೋಗ್ಯ ಸಹಾಯ, ರಸ್ತೆ ನಿರ್ಮಾಣ, ಉದ್ಯೋಗ ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಕೆ ಆಗಿವೆ.

ಪರಿಶೀಲಿಸಿ ಕ್ರಮವಹಿಸಲು ಜಿಲ್ಲಾಡಳಿತವು ಆಯಾ ಇಲಾಖೆಗಳಿಗೆ ಅಹವಾಲುಗಳನ್ನು ರವಾನಿಸಿ, ಕಾಲಮಿತಿಯಲ್ಲಿ ನಿಯಮಾನುಸಾರ ಸಮಸ್ಯೆ ಇತ್ಯರ್ಥಗೊಳಿಸಿ ವರದಿ ಸಲ್ಲಿಸಲು ಸೂಚಿಸಿದೆ.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾಋಇ ಭುವನೇಶ ಪಾಟೀಲ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಮಹಾನಗರ ಪಾಲಿಕೆ ಆಯುಕ್ತ ರುದ್ದೇಶ ಗಾಳಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ ಅವರು ವೇದಿಕೆಯಲ್ಲಿದ್ದರು.

ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಗ್ರಾಮಗಳ ಸಾರ್ವಜನಿಕರು ಜನತಾ ದರ್ಶನದಲ್ಲಿ ಭಾಗವಹಿಸಿದ್ದರು.

ಸರಕಾರಿ ಸೌಲಭ್ಯ ವಿತರಣೆ

ಇಂದಿನ ಜನತಾ ದರ್ಶನದ ನಂತರ ರೇಷ್ಮೆ ಮತ್ತು ಕಾರ್ಮಿಕ ಇಲಾಖೆಯಿಂದ ಫಲಾನುಭವಿಗಳಿಗೆ ಸರ್ಕಾರದ ಯೋಜನೆಯಡಿ ಸ್ವಉದ್ಯೋಗಕ್ಕಾಗಿ ಉಪಕರಣಗಳನ್ನು ಸಚಿವ ಸಂತೋಷ ಲಾಡ್ ಅವರು ವಿತರಿಸಿದರು.

ಅಳ್ನಾವರ ತಾಲೂಕಿನ ಪೂಜಾ ಶಶಿಕುಮಾರ ಪತಂಗೆ ಅವರಿಗೆ ಹೊಲಿಗೆ ಯಂತ್ರ, ರಾಮದಾಸ ಸುರೇಶ ಜೂಜಗಾರ ಅವರಿಗೆ ಬಡಿಗೆತನ ಉಪಕರಣದ ಕಿಟ್, ಫಕ್ಕೀರಪ್ಪ ಪರಸಪ್ಪ ಸುಳಗೇಕರ ಅವರಿಗೆ ಗೌಂಡಿ ಉಪಕರಣಗಳ ಕಿಟ್ ವಿತರಿಸಲಾಯಿತು. ಹಾಗೂ ಕಲಘಟಗಿ ತಾಲೂಕಿನ ಲಕ್ಷ್ಮೀ ಬಸಪ್ಪ ಹುದ್ದಾರ ಅವರಿಗೆ ಹೊಲಿಗೆ ಯಂತ್ರ, ನಿತ್ಯಾನಂದ ಕಮ್ಮಾರ ಅವರಿಗೆ ಬಡಿಗೆತನ ಉಪಕರಣದ ಕಿಟ್, ಮಲ್ಲಿಕಾರ್ಜುನ ಮಹದೇವ ಬೇಗೂರ ಅವರಿಗೆ ಗೌಂಡಿ ಉಪಕರಣಗಳ ಕಿಟ್ ವಿತರಿಸಲಾಯಿತು.

ಧಾರವಾಡ ಜಿಲ್ಲೆಯ ರೇಷ್ಮೆ ಬೆಳೆಗಾರರಾದ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಗುರುಸಿದ್ದಯ್ಯಾ ವೀರನಗೌಡ ಪಾಟೀಲ ಅವರಿಗೆ ರೂ. 3.375 ಲಕ್ಷ, ಕುಂದಗೋಳ ತಾಲೂಕಿನ ರಟ್ಟಿಗೇರಿ ಗ್ರಾಮದ ಸತ್ಯನಾರಾಯಣ ನಾಗರಾಜ ಕುರಹಟ್ಟಿ ಅವರಿಗೆ ರೂ. 4.05 ಲಕ್ಷ ರೂಪಾಯಿಗಳ ರೇಷ್ಮೆ ಅಭಿವೃದ್ಧಿ ಸಿಲ್ಕ್ ಸಮಗ್ರ ಯೋಜನೆಯ ಸಹಾಯಧನದಡಿ ನಿರ್ಮಿಸಿದ ಪ್ರತ್ಯೇಕ ರೇಷ್ಮೆ ಹುಳು ಸಾಗಾಣಿಕೆ ಮನೆಗೆ ಸಹಾಯಧನ ನೀಡುವ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!