Case back; See what pro-Kannada fighters said..!

ಕೇಸ್ ವಾಪಾಸ್; ಕನ್ನಡಪರ ಹೋರಾಟಗಾರರು ಹೇಳಿದ್ದು ಏನು ನೋಡಿ..!

ಬೆಂಗಳೂರು (Case back): ಸೋಮವಾರ ಸಂಜೆ ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಉದ್ಘಾಟಿಸಿದರು.

ಇದೇ ವೇಳೆ ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್ ಪಡೆಯಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಈ ಕುರಿತು ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ನಿರ್ಣಯವನ್ನು ಪ್ರಶಂಸೆ ವ್ಯಕ್ತಪಡಿಸಿದ್ದು, ನಾಡಿನ ಪ್ರತಿಯೊಬ್ಬ ಹೋರಾಟಗಾರನ ಮೇಲಿನ ಪ್ರಕರಣ ಹಿಂಪಡೆಯುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ‌.

ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಬಿಎಸ್ ಚಂದ್ರಶೇಖರ್, ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಎ ನಂಜಪ್ಪ ಮಾತನಾಡಿ, ನಾಡು ನುಡಿಗಾಗಿ ಹೋರಾಡಿ ಪ್ರಕರಣ ದಾಖಲಿಸಿಕೊಂಡು ಕೋರ್ಟಿಗೆ ಅಲೆಯುತ್ತಿರುವ ಹೋರಾಟಗಾರರ ಪರ ರಾಜ್ಯ ಸರ್ಕಾರ ಪ್ರಶಂಸನೀಯ ನಿರ್ಧಾರ ಮಾಡಿದೆ ಎಂದಿದ್ದಾರೆ.

ಕನ್ನಡದ ಅಸ್ಮಿತೆಯ ಉಳಿವಿಗೆ ಬರುವವರು ಚಿಲ್ಲರೆ ಅಂಗಡಿ ನಡೆಸುವವರು, ಚಿಕ್ಕ ಹೋಟೆಲ್ ನಡೆಸುವವರು, ಆಟೋ, ವ್ಯಾನ್ ಚಾಲಕರುಗಳು ಹೆಚ್ಚಾಗಿ ಭಾಗವಹಿಸುತ್ತಾರೆ. ಇವೆರೆಲ್ಲ ದೊಡ್ಡ ದೊಡ್ಡ ಕುಟುಂಬದಿಂದ ಬಂದವರಲ್ಲ. ಬಡ ಕುಟುಂಬದಿಂದ ಬಂದವರು. ಆದರೆ ಇವರಲ್ಲಿ ಕನ್ನಡ ನಾಡು, ನುಡಿ ಉಳಿವಿಗಾಗಿ ಹೋರಾಟದ ಮನೋಭಾವದ ಹೆಚ್ಚಿರುತ್ತದೆ.

ಈ ರೀತಿ ಭುವನೇಶ್ವರಿ ತಾಯಿಯ ಸೇವೆಗೆಂದು ಬಂದ ನಂತರ ಹೋರಾಟದಲ್ಲಿ ಪಾಲ್ಗೊಂಡು ಅನೇಕ ಕೇಸುಗಳನ್ನು ದಾಖಲಿಸಿಕೊಂಡು, ಬಂಧನಕ್ಕೆ ಒಳಗಾಗಿ, ಕೋರ್ಟು ಕಚೇರಿ ಅಲೆಯುವಂತಾಗಿ ಬಡ ಹೋರಾಟಗಾರನ ಜೀವನ ನಿರ್ವಹಣೆಗೆ ತೊಡಕಾಗುತ್ತಿದ್ದು, ಹೋರಾಟದ ಮನೋಭಾವದ ಮೇಲೆ ಪರಿಣಾಮ ಬೀರುತ್ತಿದೆ. ಆದರೆ ಈ ಹೋರಾಟಗಾರರಿಗೆ ಅನೇಕ ವಕೀಲರು ನೆರವಾಗಿದ್ದು, ಅವರ ಪಾತ್ರ ಅಪಾರವಾಗಿದೆ.

ಇದನ್ನು ಮನಗಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಪ್ರಕರಣ ಹಿಂಪಡೆಯಲು ಮುಂದಾಗಿರುವುದು ಪ್ರಶಂಸನೀಯ.

ಕನ್ನಡಕ್ಕೆ ಸಿದ್ದ ರಾಮಯ್ಯ

ರಾಜಕೀಯ ಆರೋಪ ಪ್ರತ್ಯಾರೋಪ ಏನೆ ಇರಲಿ, ಕನ್ನಡದ ವಿಚಾರ ಬಂದಾಗ ಮುಖ್ಯಮಂತ್ರಿಗಳು ಕನ್ನಡಕ್ಕೆ ಸಿದ್ದ ರಾಮಯ್ಯ ಎಂದೇ ಪ್ರಶಂಸೆ ವ್ಯಕ್ತಪಡಿಸಬಹುದಾಗಿದೆ.

ನಗರಕ್ಕೆ ಸೀಮಿತವಾಗದಿರಲಿ

ಆದರೆ ಈ ಘೋಷಣೆ ಕೇವಲ ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗದ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಆದೇಶ ನೀಡಿ, ಹಳ್ಳಿಯಲ್ಲಿ ಕನ್ನಡದ ಸೇವೆಗಾಗಿ ಕೇಸ್ ದಾಖಲಿಸಿಕೊಂಡ ಸಾಮಾನ್ಯ ಹೋರಾಟಗಾರನ ಪ್ರಕರಣ ಹಿಂಪಡೆಯುವಂತಾಗಬೇಕು.

ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕಿದೆ, ಮುಖ್ಯಮಂತ್ರಿಗಳ ಆದೇಶ ಕೇವಲ ಮಾಧ್ಯಮಗಳ ಹೇಳಿಕೆಗೆ ಸೀಮಿತವಾಗದೆ ತ್ವರಿತವಾಗಿ ಕಾರ್ಯ ರೂಪಕ್ಕೆ ತರಲಿ ಎಂದು ಒತ್ತಾಯಿಸಿದ್ದಾರೆ‌.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!