ಹರಿತಲೇಖನಿ ದಿನಕ್ಕೊಂದು ಕಥೆ: ಆನೆಗೆ ರಕ್ತ ದಾನ

Donate blood to an elephant

Daily story: ಕಾಡಿನಲ್ಲಿ ಗಜರಾಜ, ಹೊಟ್ಟೆಯ ಕೆಳಗೆ ಚೂಪಾದ ಕಲ್ಲು ತರಚಿ ಗಾಯವಾಗಿ ಒಂದು ದೊಡ್ಡ ಆಲದಮರದ ಕೆಳಗೆ ಮಲಗಿತ್ತು. ಗಾಯ ಆದ ಜಾಗದಲ್ಲಿ ರಕ್ತ ಸ್ರಾವ ಆಗುತ್ತಿತ್ತು.

ಅದಕ್ಕೆ ಉಪಚಾರ ಮಾಡಲು ಪಶುವೈದ್ಯರನ್ನು ಕರೆಸಲಾಯಿತು. ಪಶುವೈದ್ಯರು ‘ಆನೆಗೆ ಬಹಳ ರಕ್ತ ಹೋಗಿದೆ. ತಕ್ಷಣ ಪ್ರಾಣಿಗಳು ರಕ್ತ ನೀಡಲು ಮುಂದೆ ಬರಬೇಕು’ ಎಂದರು.

ಗಜರಾಜ ಗಾಯಗೊಂಡ ಸುದ್ದಿ ಕೇಳಿ ಎಲ್ಲಾ ಪ್ರಾಣಿ, ಪಕ್ಷಿ, ಕೀಟಗಳು ಸೇರಿದ್ದವು. ಎಲ್ಲರೂ ತಮ್ಮ ವರ್ಗದಲ್ಲಿ ರಕ್ತ ದಾನ ಮಾಡಲು ಅಭಿಪ್ರಾಯ ಮಂಡಿಸಿದವು.

ಕೀಟಸಂಕುಲದ ಪರವಾಗಿ ಚಿಟ್ಟೆ ತಮಗೆ ಮೊದಲು ರಕ್ತದಾನ ಮಾಡಲು ಅವಕಾಶ ನೀಡಲು ಕೋರಿತು. ಎಲ್ಲಾ ಪ್ರಾಣಿಗಳು ನಗಲು ಪ್ರಾರಂಭಿಸಿದವು. ಬೃಹತ್ ಆಕಾರದ ದೇಹವನ್ನು ಹೊಂದಿರುವ ಗಜರಾಜನಿಗೆ ನಿನ್ನ ರಕ್ತ ಎಲ್ಲಿ ಸಾಲುತ್ತದೆ ಎಂದು ಅಪಹಾಸ್ಯ ಮಾಡಿದವು.

ಪಕ್ಷಿ ಸಂಕುಲದ ಪರವಾಗಿ ಗಿಳಿಯು ರೆಕ್ಕೆಯನ್ನು ರಪ ರಪ ಬಡಿಯುತ್ತಾ ‘ನಾವು ಕೂಡ ಈ ಕಾಡಿನಲ್ಲಿ ಗಜರಾಜನ ಒಡನಾಡಿಗಳು. ಹಾಗಾಗಿ ನಾವೂ ರಕ್ತದಾನ ಮಾಡುತ್ತೇವೆ ಎಂದಿತು. ಮತ್ತೆ ಎಲ್ಲ ಕೆಲವು ಪ್ರಾಣಿಗಳು ನಗಲು ಪ್ರಾರಂಭಿಸಿದವು.

ಗರಿಗಳುಳ್ಳ, ತಕ-ತಕ ಕುಣಿಯುವ, ನಾಟ್ಯ ಪ್ರವೀಣೆ ನವಿಲು ಮತ್ತು ಪ್ರಾಣಿವರ್ಗದಿಂದ ಚಾತುರ್ಯವುಳ್ಳ ನರಿಯು ತನ್ನ ಸೊಂಟವನ್ನು ಸರಿ ಮಾಡಿಕೊಳ್ಳುತ್ತಾ ಎದ್ದು ನಿಂತು, ‘ನಾನು ಎಲ್ಲ ಪ್ರಾಣಿ ವರ್ಗಕ್ಕಿಂತ ಗಾತ್ರದಲ್ಲಿ ಚಿಕ್ಕವರಾದರೂ ಬುದ್ದಿವಂತಿಕೆಯಿಂದ ಶುತ್ರುಗಳ ಎದೆಯಲ್ಲಿ ನಡುಕ ಹುಟ್ಟಿಸಬಲ್ಲೆ. ಹಾಗಾಗಿ ನಾನು ರಕ್ತ ಕೊಡುತ್ತೇನೆ’ ಎಂದು ಜಂಬದ ಮಾತು ಹೇಳಿ ತಕ್ಷಣವೇ ‘ನನ್ನನ್ನು ಯಾರೋ ಕರೆಯುತ್ತಿದ್ದಾರೆ’ ಎಂದು ಹೇಳುತ್ತಾ ಆ ಸ್ಥಳದಿಂದ ಜಾಗ ಖಾಲಿ ಮಾಡಿ ಹೊರಟು ಹೋಯಿತು.

ಹಾಗೆಯೇ ಜೇಡ, ಹದ್ದು, ಕಾಗೆ, ಬಲಿಷ್ಠ ಸಿಂಹ, ಹುಲಿ, ಕಾಡು ಕೋಣ, ಕರಡಿ… ಹೀಗೆ ಇನ್ನೂ ಅನೇಕ ಪ್ರಾಣಿಗಳು ಮುಂದೆ ಬರಲಿಲ್ಲ. ಅದೇ ಸಮಯದಲ್ಲಿ ಅತಿಚಿಕ್ಕ ಇರುವೆಗಳು ದಾರಿಯಲ್ಲಿ ಬರಬರನೇ ಓಡುತ್ತಿದ್ದವು. ಅದನ್ನು ಎಲ್ಲಾ ಪ್ರಾಣಿಗಳು ನೋಡಿದವು.

‘ಎಲ್ಲಿಗೆ ಹೊರಟಿರುವೆ ಇರುವೆ?’ ಎಂದು ಮಾತನಾಡಿಸಿದವು. ಆಗ ಒಂದು ಇರುವೆ ಹೇಳಿತು, ‘ನಮ್ಮ ಗಜರಾಜನಿಗೆ ಚೂಪಾದ ಕಲ್ಲು ತರಚಿ, ಗಾಯವಾಗಿ ರಕ್ತ ಹೋಗುತ್ತಿದೆ. ವೈದ್ಯರು ತಕ್ಷಣ ರಕ್ತ ಕೊಡಿ ಎಂದು ಹೇಳಿದ್ದಾರೆ. ಅದಕ್ಕೆ ನಾವು ರಕ್ತ ಕೊಡಲು ಹೊರಟಿದ್ದೇವೆ’ ಎಂದು ಹೇಳಿ ಅಲ್ಲಿಂದು ಹೊರಟು ವೈದ್ಯರ ಬಳಿ ಹೋಗಿ ‘ನಾನು ಗಜರಾಜನಿಗೆ ರಕ್ತ ಕೊಡುತ್ತನೆ. ನನ್ನ ರಕ್ತ ತಗೆದುಕೊಳ್ಳಿ’ ಎಂದು ಹೇಳಿತು. ಆದರೆ ವೈದ್ಯರು ಇರುವೆಯ ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದರು.

ಅಪಹಾಸ್ಯ ಮಾಡದೆ ‘ಗಜರಾಜನ ಗಾಯಕ್ಕೆ ಹೊಲಿಗೆ ಹಾಕಿ ರಕ್ತ ಹೋಗುವುದು ನಿಂತಿದೆ. ಅದಕ್ಕೆ ನಿನ್ನ ರಕ್ತದ ಅಗತ್ಯ ಇಲ್ಲ’ ಎಂದು ಹೇಳಿದರು. ಆಗ ಕೆಲವು ಪ್ರಾಣಿಗಳು ನಾವು ಮಾತನಾಡುವುದು ಬಿಟ್ಟು ಧೈರ್ಯದಿಂದ ರಕ್ತ ಕೊಡಲು ವೈದ್ಯರ ಹತ್ತಿರ ಹೋಗಲೇ ಇಲ್ಲ ಎನ್ನುವ ತಪ್ಪಿನ ಅರಿವು ಮಾಡಿಕೊಂಡವು.

ಇರುವೆಯ ಸಾಹಸ ಮತ್ತು ಧೈರ್ಯ ಮೆಚ್ಚಿ ಎಲ್ಲಾ ಪ್ರಾಣಿಗಳು ಕೊಂಡಾಡಿದವು.

ಕೃಪೆ: ಬಸವರಾಜ.ರಾ.ಅಗಸರ ( ಸಾಮಾಜಿಕ ಜಾಲತಾಣ)

ರಾಜಕೀಯ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್ ಮಾಡಿಲ್ಲ: ನಿಖಿಲ್ ಕುಮಾರಸ್ವಾಮಿ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್

ಜಾತ್ಯತೀತ ಜನತಾದಳ ಅನ್ನುವುದು ಅದರ ಘೋಷ ವಾಕ್ಯದಲ್ಲೇ ಇದೆ. ನಮ್ಮ ಸಿದ್ದಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವತ್ತಿದ್ರೂ ಜಾತ್ಯತೀತಾನೇ ಜಾತ್ಯಾತೀತವಾಗಿ ಉಳಿಯುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="121129"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!