Doddaballapura: Govt school children trek on Makali Hill

Doddaballapura: ಸರ್ಕಾರಿ ಶಾಲಾ ಮಕ್ಕಳಿಗೆ ಮಾಕಳಿ ಬೆಟ್ಟದಲ್ಲಿ ಚಾರಣ.. ಎರಡು ದಿನಗಳ ಪರಿಸರ ಪಾಠ

ದೊಡ್ಡಬಳ್ಳಾಪುರ (Doddaballapura): ಯುವ ಸಂಚಲನ ಚಾರಿಟೆಬಲ್ ಟ್ರಸ್ಟ್, ಐ.ಆರ್.ಡಿ ಹಾಗೂ ಟಿ.ಡಿ.ಯು ಸಂಸ್ಥೆ ಸಹಯೋಗದಲ್ಲಿ ತಾಲೂಕಿನ ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ತಮ್ಮ ಸುತ್ತಮುತ್ತಲಿನ ಮುತ್ತಲಿನ ನೈಸರ್ಗಿಕ ಸಂಪನ್ಮೂಲ ಪರಿಚಯಿಸುವ ಹಾಗೂ ಅವುಗಳ ವೈಜ್ಞಾನಿಕ ಮಾಹಿತಿ ತಿಳಿಸುವ ‘ಚಾರಣದೊಂದಿಗೆ ಪರಿಸರ ಮಾಹಿತಿ’ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಎರಡು ದಿನಗಳ ಈ ಚಾರಣದಲ್ಲಿ ಭಾಗವಹಿಸಿದ್ದ ದೊಡ್ಡಬಳ್ಳಾಪುರ ವಲಯ ಅರಣ್ಯ ಸಂರಕ್ಷಣ ಅಧಿಕಾರಿ ಕೃಷ್ಣಗೌಡ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ಬೇಸಿಗೆಯಲ್ಲಿ ಕಾಡು, ಬೆಟ್ಟಗಳಿಗೆ ಬೆಂಕಿ ಬೀಳುತ್ತಿರುವುದು ಮಾನವ ನಿರ್ಮಿತವಾಗಿದೆ. ಇದರ ಬಗ್ಗೆ ಮಕ್ಕಳು ಇಂದಿನಿಂದಲೇ ಅರಿವು ಬೆಳೆಸಿಕೊಳ್ಳಬೇಕು.

ಕಾಡಿಗೆ ಬೆಂಕಿ ಬೀಳುವುದರಿಂದ ಆಗುವ ಪರಿಸರದ ಹಾನಿ ಯಾರಿಂದಲೂ ಸರಿಪಡಿಸಲು ಸಾಧ್ಯವಿಲ್ಲ. ಅಪಾರ ಪ್ರಮಾಣದ ಸಸ್ಯ ಸಂಪತ್ತು, ಜೀವಸಂಕುಲ ನಾಶವಾಗುತ್ತದೆ. ಈ ಪರಿಸರ ನಷ್ಟದ ಬಗ್ಗೆ ಈಗಿನಿಂದಲೇ ತಿಳಿವಳಿಕೆ ಮೂಡಿಸಬೇಕು.

ನಾಲ್ಕು ಗೋಡೆ ನಡುವೆ ಕುಳಿತು ಪರಿಸರ ಪ್ರಾಮುಖ್ಯತೆ ಪಾಠ ಹೇಳುವುದಕ್ಕಿಂತಲೂ ಚಾರಣದೊಂದಿಗೆ ಪ್ರಾಯೋಗಿಕವಾಗಿ ತಿಳಿಸುವ ಮಾಹಿತಿ ಜೀವನದುದ್ದಕ್ಕೂ ಮನಸ್ಸಿನಲ್ಲಿ ಉಳಿಯಲಿದೆ ಎಂದರು.

ಬೆಟ್ಟದ ಚಾರಣ ನುಡುವೆ ವಿದ್ಯಾರ್ಥಿಗಳು ಸಂಗ್ರಹಿಸಿದ್ದ ಹೂವು, ಎಲೆ, ಹುಲ್ಲು, ಕಾಯಿ ಕುರಿತು ಮಾಹಿತಿ ನೀಡಿದ ಟಿ.ಡಿ.ಯು ಉಪನ್ಯಾಸಕ ಡಾ.ಅಬ್ದುಲ್ ಕರೀಂ, ಪರಿಸರದಲ್ಲಿ ಯಾವುದೂ ವ್ಯರ್ಥವಲ್ಲ. ಯಾವುದೂ ಅನಗತ್ಯ ಎನ್ನುವುದು ಇಲ್ಲ. ಎಲ್ಲಕ್ಕೂ ಒಂದೊಂದು ರೀತಿ ಮಹತ್ವ ಇದ್ದೇ ಇರುತ್ತದೆ.

ವಿದ್ಯಾರ್ಥಿ ಜೀವನದಲ್ಲಿ ನಮಗೆ ರೀತಿ ಕಾಡಿನಲ್ಲಿ ಸುತ್ತಾಡುವ ಅವಕಾಶ ಸಿಗುತ್ತಿರಲಿಲ್ಲ. ಇಂದಿನ ಮಕ್ಕಳಿಗೆ ಈ ರೀತಿಯ ಅವಕಾಶವಿದ್ದರೂ ಉತ್ತಮ ಅರಣ್ಯ ಉಳಿದಿಲ್ಲ. ಅವುಗಳನ್ನು ಉಳಿಸಿಕೊಳ್ಳಬೇಕು ಎಂದು ಪಾಠ ಹೇಳುವುದಕ್ಕಿಂತಲೂ ಈಗ ಉಳಿದಿರುವ ಅಲ್ಪಸ್ವಲ್ಪ ಕಾಡು, ಬೆಟ್ಟ ತೋರಿಸಿ ಇವುಗಳನ್ನು ಉಳಿಸಿಕೊಳ್ಳುವ ಕಡೆಗೆ ವಹಿಸಬೇಕಿರುವ ಮಹತ್ವ ತಿಳಿಸಬೇಕು ಎಂದರು.

ಎ.ಆ‌ರ್.ಡಿ ಸಂಸ್ಥೆ ಮಾನವಶಾಸ್ತ್ರಜ್ಞ ಡಾ.ರೊಮೈನ್ ಸಿಮೆನೆಲ್ ಅವರು ಹಾರ, ಆಟಿಕೆ ತಯಾರಿಕೆ, ಸಸ್ಯಗಳೊಂದಿಗೆ ಸಂಗೀತವನ್ನು ಅನ್ವೇಷಿಸುವುದು ಸಸ್ಯಗಳ ಬಣ್ಣ, ಸಸ್ಯಗಳ ಔಷಧೀಯ ಉಪಯೋಗ ಕುರಿತು ಮಕ್ಕಳಿಗೆ ‘ನಲಿ ಕಲಿ’ ಪ್ರಯೋಗದೊಂದಿಗೆ ಬೆಟ್ಟದ ತಪ್ಪಲಿನ ಕಿರುಚಲು ಕಾಡಿನ ಮಹತ್ವದ ಬಗ್ಗೆ ತಿಳಿಸಿದರು.

‘ಚಾರಣದೊಂದಿಗೆ ಪರಿಸರ ಮಾಹಿತಿ’ ಉದ್ದೇಶ ಕುರಿತು ಮಾಹಿತಿ ನೀಡಿದ ಯುವ ಸಂಚಲನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಚಿದಾನಂದಮೂರ್ತಿ ಮಾಹಿತಿ ನೀಡಿ, ಪರಿಸರದೊಂದಿಗೆ ಬೆರೆತಷ್ಟು ಅದರ ಮೇಲಿನ ಕಾಳಜಿ ಹೆಚ್ಚಾಗುತ್ತದೆ.

ಈ ಕಾರಣ ಶಿಕ್ಷಣದ ಭಾಗವಾಗಿ ಮಕ್ಕಳಿಗೆ ಪರಿಸರ ಶಿಕ್ಷಣ. ಕಲಿಸುವ ಉದ್ದೇಶದಿಂದ ಸಸ್ಯ ವಿಜ್ಞಾನಿಗಳೊಂದಿಗೆ, ಪರಿಸರವಾದಿಗಳೊಂದಿಗೆ ಮಕ್ಕಳನ್ನು ತೊಡಗಿಸಿ ಸಸ್ಯಗಳು, ಪರಿಸರ ಸಂರಕ್ಷಣೆ ಬಗ್ಗೆ ತಿಳಿಸುವ ಪ್ರಯತ್ನ ಇದಾಗಿದೆ ಎಂದರು.

‘ಚಾರಣದೊಂದಿಗೆ ಪರಿಸರ ಮಾಹಿತಿ’ಯಲ್ಲಿ ಏಟ್ರಿಯ ಸಂಸ್ಥೆಯ ಸಸ್ಯ ವಿಜ್ಞಾನಿಗಳಾದ ಆರ್.ಗಣೇಶನ್‌, ವೈಷ್ಣವಿ, ಟಿ.ಡಿ.ಯುನಿವರ್ಸಿಟಿ ಅಮಿತ, ಅರುಣ್, ಸುದೇಶ್ನಾ ಪ್ರಧಾನ್, ಯುವ ಸಂಚಲನ ಚಾರಿಟೆಬಲ್ ಟ್ರಸ್ಟ್‌ನ ಮುರುಳಿ, ದಿವಾಕರ್ ನಾಗ್, ನವೀನ್.

ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ನರಸೀಯಪ್ಪ, ಮುಖ್ಯ ಶಿಕ್ಷಕ ಎಂ.ಸಿದ್ದರಾಮಪ್ಪ, ಸಹಶಿಕ್ಷಕರಾದ ಪುಟ್ಟಸಿದ್ದೇಗೌಡ, ಹನುಮಂತರಾಯಪ್ಪ, ನರಸಿಂಹಮೂರ್ತಿ, ಮನು, ನಾಗಮಣಿ, ಶ್ರೀನಿವಾಸ್, ಕಾವ್ಯ, ಮಾಲಾಶ್ರೀ ಇದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!