Center covered up Kumbh Mela death toll like Covid: Santosh Lad

ಕೋವಿಡ್ ರೀತಿ ಕುಂಭಮೇಳದ ಸಾವಿನ ಸಂಖ್ಯೆಯನ್ನು ಕೇಂದ್ರ ಮುಚ್ಚಿಟ್ಟಿದೆ: ಸಂತೋಷ್ ಲಾಡ್ ಆತಂಕ

ನವದೆಹಲಿ; ಉತ್ತರ ಪ್ರದೇಶದ ಪ್ರಯೋಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ (Maha Kumbhamela) ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿದ ದುರಂತದಲ್ಲಿ ಮಡಿದವರ ಸಂಖ್ಯೆಯನ್ನು ಕೇಂದ್ರ ಸರ್ಕಾರ ಮುಚ್ಚಿಟ್ಟಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ (Santosh lad) ಗಂಭೀರ ಆರೋಪ ಮಾಡಿದ್ದಾರೆ.

ನವದೆಹಲಿಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಕುಂಭ ಮೇಳದ ಅವ್ಯವಸ್ಥೆ ಬಗ್ಗೆ ಮಾತಾಡಿದರೆ ರಾಜಕೀಯ ಅಂತಾರೆ. ಹಿಂದೂ ಭಾವನಾತ್ಮಕ ವಿಚಾರವಾದ ಕುಂಭಮೇಳವನ್ನು ಗೌರವಿಸಬೇಕಿದೆ. ಆದರೆ ಈ ರೀತಿ ಅವ್ಯವಸ್ಥೆಗೆ ಕಾರಣ ಯಾರು..?

ಕುಂಭಮೇಳದಲ್ಲಿ ಎಲ್ಲರೂ ಸಾಮಾನ್ಯ. ಆದರೆ ಪ್ರಮೋಟ್ ಮಾಡಲೆಂದು ವಿಐಪಿಗಳಿಗೆ ಆದ್ಯತೆ ಕೊಡುತ್ತಿದ್ದಾರೆಂಬ ಆರೋಪಗಳಿವೆ. ಪ್ರಚಾರಕ್ಕೋಸ್ಕರ ಹೆಚ್ಚು ವಿವಿಐಪಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಅವರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗ್ತಾ ಇದೆ. ಎಲ್ಲರಿಗೂ ಸಮವಾಗಿರಬೇಕು ಎಂದರು.

ಕೋವಿಡ್ ಸಂದರ್ಭದಲ್ಲಿ ಸಂಭವಿಸಿದ್ದ ಸಾವಿನ ಸಂಖ್ಯೆಗಳ ಅಂಕಿ-ಅಂಶ ಮುಚ್ಚಿಟಿದಂತೆಯೇ ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಆಗಿರುವ ಮೃತರ ಸಂಖ್ಯೆಯನ್ನು ಮುಚ್ಚಿಡುವ ಕೆಲಸ ಸರ್ಕಾರ ಮಾಡಿದೆ.

ಮಾಧ್ಯಮಗಳಲ್ಲಿ 30 ಎನ್ನಲಾಗುತ್ತಿದೆ. ಆದರೆ ಮತ್ತೊಂದು ವರದಿ 200ಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದಾರೆ ಎನ್ನಲಾಗುತಿದೆ. ವಿಪರ್ಯಾಸ ಅವರು ಯಾವತ್ತು ವಾಸ್ತವಾಂಶವನ್ನು ಹೇಳುವುದಿಲ್ಲ.

ಬಿಜೆಪಿ ಸರ್ಕಾರ ಇದೊಂದೆ ಅಲ್ಲ, ಅಪರಾಧ ಪ್ರಕರಣ, ಸಾವಿನ ಪ್ರಕರಣವಾಗಿರಲಿ, ಶಿಕ್ಷಣ ವರದಿ, ಜಿಡಿಪಿ ವರದಿ, ದೇಶದ ಬೆಳವಣಿಗೆ ಸೇರಿದಂತೆ ಜನರಿಂದ ಮುಚ್ಚಿಡಲಾಗುತ್ತದೆ. ಇದ್ಯಾವುದು ಸಾರ್ವಜನಿಕವಾಗಿ ಚರ್ಚೆ ಆಗುವುದಿಲ್ಲ.

ಕೋವಿಡ್ ಡೆತ್ ಕೇಸ್ ಚರ್ಚೆ ಆಗ್ಲಿಲ್ಲ ಇದನ್ನು ಮಾಡಲು ಅವರು ಬಿಡಲ್ಲ, ಮಾಧ್ಯಮಗಳ ಮೂಲಕ ತಡೆಯುವುದು, ಉಸಿರು ಕಟ್ಟಿಸುವ ವಾತಾವರಣ ಸೃಷ್ಟಿಸುವುದು ಮಾಡ್ತಾರೆ. ಆದರೆ ನಾ ರಾಜಕೀಯವಾಗಿ ಈ ಪ್ರಕರಣವನ್ನು ಮಾತಾಡಲ್ಲ. ಆದಾಗ್ಯೂ ಇದು ಎಷ್ಟು ಸರಿ..? ಎಂಬುದು ಸಾರ್ವಜನಿಕರು ಅರ್ಥಮಾಡಿಕೊಳ್ಳಬೇಕು ಎಂದರು.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!