Vijayendra Chelas attempt to defeat Sudhakar in Chikkaballapur; Yatnal

ಸಂಸದ ಡಾ.ಸುಧಾಕರ್ ಬೆಂಬಲಕ್ಕೆ ನಿಂತ ಯತ್ನಾಳ್.. ವಿಜಯೇಂದ್ರ, ಪ್ರೀತಂ ಗೌಡ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು: ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟೈಮ್ ಸರಿ ಇದ್ದಂತೆ ಕಾಣುತ್ತಿಲ್ಲ, ಕಳೆದ ಕೆಲ ದಿನಗಳಿಂದ ದಿನಕ್ಕೊಬ್ಬರು ಬೆನ್ನಿಗೆ ಬಿದ್ದಂತೆ ವಾಚಮಾಗೋಚರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷನ ನೇಮಕ ಕುರಿತು ನಿನ್ನೆ ಸಂಸದ ಡಾ ಕೆ ಸುಧಾಕರ್‌ (Dr K Sudhakar) ಅವರು ವಿಜಯೇಂದ್ರ ವಿರುದ್ಧ ವಾಗ್ದಾಳಿ ಬೆನ್ನಲ್ಲೇ, ಇಂದು ವಿಜಯೇಂದ್ರ ಬೆಂಬಲಿಗ ಪ್ರೀತಂ ಗೌಡ (Preetham Gowda), ಯಲಹಂಕ ಶಾಸಕ ಎಸ್‌ಆರ್ ವಿಶ್ವನಾಥ್ (SR Vishwanath) ತಿರುಗೇಟು ನೀಡಿದ್ದರು‌

ಇದಾದ ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ (Basana Gouda Patila Yatnal), ವಿಜಯೇಂದ್ರ (Vijayendra) ಅವರ ವಿರುದ್ಧ ವಾಗ್ದಾಳಿ ಮುಂದುವರಿಸಿದರೆ, ಪ್ರೀತಂ ಗೌಡ ಯಾವ ಮಹಾನಾಯಕ ಎಂಬಂತೆ ಲೇವಡಿ ಮಾಡಿದರು.

ಮೊದಲಿಗೆ ಡಾ ಕೆ ಸುಧಾಕರ್‌ (Dr K Sudhakar) ವಿರುದ್ಧ ಚಿಕ್ಕಬಳ್ಳಾಪುರ ಬರೆದುಕೊಟ್ಟಿಲ್ಲ, ದುರಂಕಾರದ ಮಾತಾಡಬಾರದು ಎಂದು ಪ್ರೀತಂ ಗೌಡ (Preetham Gowda) ಎಚ್ಚರಿಕೆ ಕುರಿತು ಪ್ರತಿಕ್ರಿಯೆ ನೀಡಿ, ಎಂಥವನ ಹೆಸರು ತೆಗಿತೀರಾ.. ಸುಮ್ಮ ಆರಾಮಾಗಿರೋ ಟೈಮಲ್ಲಿ.. ಹೋಗ್ಲಿ ಕಾಂಗ್ರೆಸ್ ನಲ್ಲಿ ರಿಸರ್ವೇಷನ್ ಯಾವುದು ಆಗೈತೆ ಕೇಳಿಕೊಂಡು ಬರ್ಲಿ ಎಂದು ಪ್ರೀತಂ ಗೌಡ ಕಾಂಗ್ರೆಸ್ ಸೇರ್ಪಡೆ ಮಾತಿನ ಕುರಿತು ಯತ್ನಾಳ್ ಲೇವಡಿ ಮಾಡಿದರು.

ಈ ವೇಳೆ ಪ್ರೀತಂ ಗೌಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಲ್ವಾ ಸರ್ ಎಂದು ಸುದ್ದಿಗಾರರು ಕೇಳಿದಾಗ.. ಯಾವುದು, ಯಾರಿಗೆ… ವಿಜಯೇಂದ್ರಗೆ ನಮಗಲ್ಲ ಎಂದರು.

ಸಿದ್ದರಾಮಯ್ಯ ಅವರು ಕಾಂಗ್ರೆಸ್ ಬಿಡಬೇಡ ಅಂತ ಹೇಳಿದ್ದರು, ಅವರ ಮಾತು ಕೇಳದೆ ಬಿಜೆಪಿ ಸೇರಿ ತಪ್ಪು ಮಾಡಿದೆ ಅಂತ ಸುಧಾಕರ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್ ಮನಸ್ಸಿಗೆ ನೋವಾದಾಗ ಅಂಥ ಮಾತುಗಳು ನೆನಪಾಗುತ್ತವೆ ಎಂದು ಸಮರ್ಥಿಸಿದರು.

ಡಾ.ಕೆ ಸುಧಾಕರ್‌ ಸೇರಿದಂತೆ 17 ಜನ ಬಿಜೆಪಿ ಸೇರ್ಪಡೆ ಆಗ್ದೆ ಇದ್ದಿದ್ದರೆ ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾ ಇದ್ರಾ..? ನಂಬರ್ ಒನ್, ಇವತ್ತು ವಿಜಯೇಂದ್ರಗೆ ಇಷ್ಟು ದುಡ್ಡಿನ ದುರಂಕಾರ ಬಂದಿದೆಯಲ್ಲ ಅ ದುರಂಕಾರ ಇರ್ತಿತ್ತಾ..? ಇಲ್ಲ.

ಯಾಕೆಂದರೆ ಇಷ್ಟು ದುಡ್ಡು ಆಗಿಬಿಟ್ಟಿದೆಯಲ್ಲ ಬಹುಶಃ ಯಾವ ಮುಖ್ಯಮಂತ್ರಿ ಮಾಡಿರಲಿಕ್ಕಿಲ್ಲ ಅಷ್ಟು ದುಡ್ಡು ಮಾಡಿ ಪಾಪಾ ಮತ್ತೆ ಪಾದಯಾತ್ರೆ ಮಾಡ್ತಾನಂತೆ ಮೂಡ ಸಲುವಾಗಿ, ಸಿದ್ದರಾಮಯ್ಯ ವಿರುದ್ಧ. ಇವರ ಹಗಣರವೇ ಒದ್ದಾಡಿ ನಾರಲಕತೈತಿ, ಇವ ಹೋಗಿ ಸಿದ್ದರಾಮಯ್ಯನವರು ತಕ್ಷಣ ರಾಜೀನಾಮೆ ಕೊಡಬೇಕು, ಮೈಸೂರು ಮುಟ್ಟೋದ್ರೊಳಗೆ ರಾಜೀನಾಮೆ ಕೊಡಬೇಕು ಅಂತಾನೆ..

ಏನ್ರೀ ಮಾನ ಮರ್ಯಾದೆ ಇದೆಯೇ…? ಆ ಸಿದ್ದರಾಮಯ್ಯಗೂ ಬುದ್ದಿ ಇಲ್ಲ.. ಇವ (ವಿಜಯೇಂದ್ರ) ಮಾಡಿರೋ ಅವರಪ್ಪನ ನಕಲಿ ಸಹಿ ತನಿಖೆಗೆ ಕೊಟ್ಟಿದ್ರೆ.. ಮುಗ್ದೋಗಿರೋದ್ ಇವನ ಹೋರಾಟ ಎಂದು ವ್ಯಂಗ್ಯವಾಡಿದರು.

ಅಲ್ಲದೆ ದೂರು ಕೊಟ್ಟರೆ ಕ್ರಮ ಎಂದ ಪ್ರಿಯಾಂಕ್ ಖರ್ಗೆ ವಿರುದ್ಧ ಹರಿಹಾಯ್ದು, ನಾನಾಗಿದ್ರೆ ಸ್ವಯಂ ಪ್ರೇರಿತ ದೂರು ದಾಖಲಿಸುತ್ತಿದ್ದೆ ಎಂದರು.

ವಿಜಯೇಂದ್ರ ಚಡ್ಡಿ ಹಾಕೋಕ್ಕಿಂತ ಮುಂಚೆ ನಾನು ಜಿಲ್ಲಾಧ್ಯಕ್ಷನಾಗಿದ್ದೆ. ಯಡಿಯೂರಪ್ಪ ಒಬ್ಬರೇ ಪಕ್ಷ ಕಟ್ಟಿಲ್ಲ. ನಮ್ಮೆಲ್ಲರ ದುಡಿಮೆ ಇದೆ. ಅಲ್ಲದೆ, ವಿಜಯೇಂದ್ರನಿಂದ ನಾವು ಏನೂ ಕಲಿಯಬೇಕಾಗಿಲ್ಲ ಎಂದು ಗುಡುಗಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!