Vijayendra Chelas attempt to defeat Sudhakar in Chikkaballapur; Yatnal

ಸಂಸದ ಡಾ.ಸುಧಾಕರ್ ಬೆಂಬಲಕ್ಕೆ ನಿಂತ ಯತ್ನಾಳ್.. ವಿಜಯೇಂದ್ರ, ಪ್ರೀತಂ ಗೌಡ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ

ಬೆಂಗಳೂರು: ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟೈಮ್ ಸರಿ ಇದ್ದಂತೆ ಕಾಣುತ್ತಿಲ್ಲ, ಕಳೆದ ಕೆಲ ದಿನಗಳಿಂದ ದಿನಕ್ಕೊಬ್ಬರು ಬೆನ್ನಿಗೆ ಬಿದ್ದಂತೆ ವಾಚಮಾಗೋಚರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷನ ನೇಮಕ ಕುರಿತು ನಿನ್ನೆ ಸಂಸದ ಡಾ ಕೆ ಸುಧಾಕರ್‌ (Dr K Sudhakar) ಅವರು ವಿಜಯೇಂದ್ರ ವಿರುದ್ಧ ವಾಗ್ದಾಳಿ ಬೆನ್ನಲ್ಲೇ, ಇಂದು ವಿಜಯೇಂದ್ರ ಬೆಂಬಲಿಗ ಪ್ರೀತಂ ಗೌಡ (Preetham Gowda), ಯಲಹಂಕ ಶಾಸಕ ಎಸ್‌ಆರ್ ವಿಶ್ವನಾಥ್ (SR Vishwanath) ತಿರುಗೇಟು ನೀಡಿದ್ದರು‌

ಇದಾದ ಕೆಲವೇ ಕ್ಷಣಗಳಲ್ಲಿ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ (Basana Gouda Patila Yatnal), ವಿಜಯೇಂದ್ರ (Vijayendra) ಅವರ ವಿರುದ್ಧ ವಾಗ್ದಾಳಿ ಮುಂದುವರಿಸಿದರೆ, ಪ್ರೀತಂ ಗೌಡ ಯಾವ ಮಹಾನಾಯಕ ಎಂಬಂತೆ ಲೇವಡಿ ಮಾಡಿದರು.

ಮೊದಲಿಗೆ ಡಾ ಕೆ ಸುಧಾಕರ್‌ (Dr K Sudhakar) ವಿರುದ್ಧ ಚಿಕ್ಕಬಳ್ಳಾಪುರ ಬರೆದುಕೊಟ್ಟಿಲ್ಲ, ದುರಂಕಾರದ ಮಾತಾಡಬಾರದು ಎಂದು ಪ್ರೀತಂ ಗೌಡ (Preetham Gowda) ಎಚ್ಚರಿಕೆ ಕುರಿತು ಪ್ರತಿಕ್ರಿಯೆ ನೀಡಿ, ಎಂಥವನ ಹೆಸರು ತೆಗಿತೀರಾ.. ಸುಮ್ಮ ಆರಾಮಾಗಿರೋ ಟೈಮಲ್ಲಿ.. ಹೋಗ್ಲಿ ಕಾಂಗ್ರೆಸ್ ನಲ್ಲಿ ರಿಸರ್ವೇಷನ್ ಯಾವುದು ಆಗೈತೆ ಕೇಳಿಕೊಂಡು ಬರ್ಲಿ ಎಂದು ಪ್ರೀತಂ ಗೌಡ ಕಾಂಗ್ರೆಸ್ ಸೇರ್ಪಡೆ ಮಾತಿನ ಕುರಿತು ಯತ್ನಾಳ್ ಲೇವಡಿ ಮಾಡಿದರು.

ಈ ವೇಳೆ ಪ್ರೀತಂ ಗೌಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಲ್ವಾ ಸರ್ ಎಂದು ಸುದ್ದಿಗಾರರು ಕೇಳಿದಾಗ.. ಯಾವುದು, ಯಾರಿಗೆ… ವಿಜಯೇಂದ್ರಗೆ ನಮಗಲ್ಲ ಎಂದರು.

ಸಿದ್ದರಾಮಯ್ಯ ಅವರು ಕಾಂಗ್ರೆಸ್ ಬಿಡಬೇಡ ಅಂತ ಹೇಳಿದ್ದರು, ಅವರ ಮಾತು ಕೇಳದೆ ಬಿಜೆಪಿ ಸೇರಿ ತಪ್ಪು ಮಾಡಿದೆ ಅಂತ ಸುಧಾಕರ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್ ಮನಸ್ಸಿಗೆ ನೋವಾದಾಗ ಅಂಥ ಮಾತುಗಳು ನೆನಪಾಗುತ್ತವೆ ಎಂದು ಸಮರ್ಥಿಸಿದರು.

ಡಾ.ಕೆ ಸುಧಾಕರ್‌ ಸೇರಿದಂತೆ 17 ಜನ ಬಿಜೆಪಿ ಸೇರ್ಪಡೆ ಆಗ್ದೆ ಇದ್ದಿದ್ದರೆ ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾ ಇದ್ರಾ..? ನಂಬರ್ ಒನ್, ಇವತ್ತು ವಿಜಯೇಂದ್ರಗೆ ಇಷ್ಟು ದುಡ್ಡಿನ ದುರಂಕಾರ ಬಂದಿದೆಯಲ್ಲ ಅ ದುರಂಕಾರ ಇರ್ತಿತ್ತಾ..? ಇಲ್ಲ.

ಯಾಕೆಂದರೆ ಇಷ್ಟು ದುಡ್ಡು ಆಗಿಬಿಟ್ಟಿದೆಯಲ್ಲ ಬಹುಶಃ ಯಾವ ಮುಖ್ಯಮಂತ್ರಿ ಮಾಡಿರಲಿಕ್ಕಿಲ್ಲ ಅಷ್ಟು ದುಡ್ಡು ಮಾಡಿ ಪಾಪಾ ಮತ್ತೆ ಪಾದಯಾತ್ರೆ ಮಾಡ್ತಾನಂತೆ ಮೂಡ ಸಲುವಾಗಿ, ಸಿದ್ದರಾಮಯ್ಯ ವಿರುದ್ಧ. ಇವರ ಹಗಣರವೇ ಒದ್ದಾಡಿ ನಾರಲಕತೈತಿ, ಇವ ಹೋಗಿ ಸಿದ್ದರಾಮಯ್ಯನವರು ತಕ್ಷಣ ರಾಜೀನಾಮೆ ಕೊಡಬೇಕು, ಮೈಸೂರು ಮುಟ್ಟೋದ್ರೊಳಗೆ ರಾಜೀನಾಮೆ ಕೊಡಬೇಕು ಅಂತಾನೆ..

ಏನ್ರೀ ಮಾನ ಮರ್ಯಾದೆ ಇದೆಯೇ…? ಆ ಸಿದ್ದರಾಮಯ್ಯಗೂ ಬುದ್ದಿ ಇಲ್ಲ.. ಇವ (ವಿಜಯೇಂದ್ರ) ಮಾಡಿರೋ ಅವರಪ್ಪನ ನಕಲಿ ಸಹಿ ತನಿಖೆಗೆ ಕೊಟ್ಟಿದ್ರೆ.. ಮುಗ್ದೋಗಿರೋದ್ ಇವನ ಹೋರಾಟ ಎಂದು ವ್ಯಂಗ್ಯವಾಡಿದರು.

ಅಲ್ಲದೆ ದೂರು ಕೊಟ್ಟರೆ ಕ್ರಮ ಎಂದ ಪ್ರಿಯಾಂಕ್ ಖರ್ಗೆ ವಿರುದ್ಧ ಹರಿಹಾಯ್ದು, ನಾನಾಗಿದ್ರೆ ಸ್ವಯಂ ಪ್ರೇರಿತ ದೂರು ದಾಖಲಿಸುತ್ತಿದ್ದೆ ಎಂದರು.

ವಿಜಯೇಂದ್ರ ಚಡ್ಡಿ ಹಾಕೋಕ್ಕಿಂತ ಮುಂಚೆ ನಾನು ಜಿಲ್ಲಾಧ್ಯಕ್ಷನಾಗಿದ್ದೆ. ಯಡಿಯೂರಪ್ಪ ಒಬ್ಬರೇ ಪಕ್ಷ ಕಟ್ಟಿಲ್ಲ. ನಮ್ಮೆಲ್ಲರ ದುಡಿಮೆ ಇದೆ. ಅಲ್ಲದೆ, ವಿಜಯೇಂದ್ರನಿಂದ ನಾವು ಏನೂ ಕಲಿಯಬೇಕಾಗಿಲ್ಲ ಎಂದು ಗುಡುಗಿದರು.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!