ಹರಿತಲೇಖನಿ ದಿನಕ್ಕೊಂದು ಕಥೆ: ಅನಿಶ್ಚಿತತೆ.. ಹತಾಶೆಯ ನಡುವೆ

Daily story Work without happiness

Daily story: ಗೋಪಾಲಣ್ಣ ವೃತ್ತಿಯಲ್ಲಿ ಮೇಷ್ಟ್ರು. ಅವರು ಹೇಳುತ್ತಿದ್ದರು, ‘ನಮ್ಮದೂ ಒಂದು ಕೆಲಸ ಏನ್ರೀ? ಹಾಡಿದ್ದೇ ಹಾಡು ಕಿಸಿಬಾಯಿದಾಸ ಎಂದ ಹಾಗೆ ಹೇಳಿದ್ದನ್ನೇ ಹೇಳುವುದು. ನನಗೆ ತಲೆ ಕೆಟ್ಟು­ಹೋಗಿದೆ’.

ರಾಜಪ್ಪ ವೃತ್ತಿಯಲ್ಲಿ ವೈದ್ಯರು. ಅವರಿಗೂ ತಮ್ಮ ಕೆಲಸದ ಬಗ್ಗೆ ಬೇಜಾರು. ‘ನಾವೆಲ್ಲ ಜೀತದಾಳುಗಳು ಸರ್. ನಮ್ಮದು ಎನ್ನುವ ಸಮಯ­ವೇನಾದರೂ ಇದೆಯೇ? ಭಾನುವಾರ, ರಜಾದಿನ ಯಾವುದೂ ನಮಗಿಲ್ಲ. ದಿನ ಬೆಳಗಾದರೆ ರೋಗಿಗಳ, ಅಳುಮು­ಖದವರ ಜೊತೆಗೆ ಏಗಿ, ಮಾತು ನನಗೆ ನಗೋದೇ ಮರೆತು ಹೋಗಿದೆ’.

ಮಾಜಿ ಮಂತ್ರಿ ಹಾಗೂ ಸದಾ ಚಟುವಟಿಕೆ­ಯಲ್ಲಿ ಇರುವ ರಾಜಕಾರಣಿ ಗುಂಡಣ್ಣ ಹೇಳುತ್ತಾರೆ, ‘ನಮ್ಮ ವೃತ್ತಿಯಲ್ಲಿ ಯಾವುದೂ ಗ್ಯಾರಂಟಿ ಇಲ್ಲ.

ನಮ್ಮದೇ­ನಿದ್ದರೂ ಸೀಜನಲ್ ಕೆಲಸ. ಐದು ವರ್ಷ ಅಧಿಕಾರದ ಪಲ್ಲಕ್ಕಿ ದೊರೆತರೆ ಮುಂದೆ ಅದೆಷ್ಟು ವರ್ಷ ಅಧಿಕಾರಕ್ಕೆ ಕಾಯ­ಬೇಕೋ? ಅದು ಮುಂದೆ ದೊರೆಯ­ದೆಯೇ ಹೋಗಬಹುದು. ಆದರೆ ನಮ್ಮ ಹಿಂಬಾಲಕರು ಒಂದೇ ಸಮನೆ ಪ್ರಾಣ ತೆಗೆ­ಯುತ್ತಾರೆ.

ನನಗೆ ಇದು ಸಾಕಾಗಿ ಹೋಗಿದೆ. ಎಲ್ಲವನ್ನೂ ಬಿಟ್ಟು ಸುಮ್ಮನೆ ಮನೆ­ಯಲ್ಲಿ ಕೂಡ್ರುವುದು ವಾಸಿ’. ಅದರೆ, ಮನೆಯಲ್ಲಿಯೇ ಕುಳಿತು ಮಕ್ಕಳನ್ನು ಬೆಳೆ­ಸುವ ಸೌಭಾಗ್ಯಮ್ಮನವರ ಅಭಿಪ್ರಾಯವೇ ಬೇರೆ.

‘ಛೇ, ಇದೊಂದು ಜೈಲು. ಹೊರ­ಗಿನ ಪ್ರಪಂಚದಲ್ಲಿ ಏನಾ­ಗುತ್ತದೆ ಎಂಬುದೇ ತಿಳಿಯದೆ ಮನೆ ಆಯ್ತು, ಕೆಲಸ ಆಯ್ತು ಎಂದುಕೊಂಡು ಜೀವನವಿಡೀ ಬಾವಿಯಲ್ಲಿಯ ಕಪ್ಪೆ­ಯಂತೆ ಕಳೆಯುವುದು ಯಾವ ಸುಖ?‘ ಎನ್ನುತ್ತಾರೆ ಅವರು.

ಹಾಗಾದರೆ ನಮ್ಮಲ್ಲಿ ಬಹಳಷ್ಟು ಜನ ತಮಗೆ ಇಷ್ಟ­ವಿಲ್ಲದ ಕೆಲಸವನ್ನೇ ಮಾಡುತ್ತ ಜನ್ಮ ಸವೆಸುತ್ತಾ­ರೆಯೇ? ಹೀಗೆ ಮನಸ್ಸಿಲ್ಲದೇ ಮಾಡಿದ ಕೆಲಸ ಪ್ರಯೋಜನವಾದೀತೇ? ಇದೇ ತರಹದ ಚಿಂತನೆ ಇಂಗ್ಲೆಂಡಿನ ಒಬ್ಬ ತರುಣನನ್ನು ಬಹುವಾಗಿ ಕಾಡಿತ್ತು.

ಆತ ಒಂದು ದಿನ ಮನೆಯಲ್ಲಿ ಏಕಾಂಗಿಯಾಗಿ ಕುಳಿತು ಚಿಂತಿಸಿದ. ಮನೆ ಶಾಂತ­ವಾಗಿತ್ತು. ಗಡಿಯಾರದ ಮುಳ್ಳಿನ ಸದ್ದು ಕೇಳುವಷ್ಟು ಶಾಂತ. ಆತನ ತಲೆಯಲ್ಲಿ ಒಂದೇ ಕೊರೆತ. ನನ್ನ ಕೆಲಸ ನನಗೆ ತೃಪ್ತಿ, ಸಂತೋಷ ತರದಿದ್ದರೆ ಅದನ್ನು ಮಾಡು­ವುದು ಏಕೆ?.

ಅನಿಶ್ಚಿತತೆ ಹಾಗೂ ಹತಾಶೆಗಳ ನಡುವೆ

ಆತ ಕಣ್ಣು ಮುಚ್ಚಿ ಕುರ್ಚಿಗೆ ತಲೆಯಾನಿಸಿ ತನ್ನ ಆಗಿ ಹೋದ ಬದುಕನ್ನೇ ಗಮನಿಸಿದ. ಇದುವರೆಗೆ ಏನು ಮಾಡಿದೆ ನಾನು? ನನ್ನ ಇಡೀ ಬದುಕೇ ಬಡತನ, ಅನಾರೋಗ್ಯ, ಅನಿಶ್ಚಿತತೆ ಹಾಗೂ ಹತಾಶೆಗಳ ನಡುವೆ ಹರಿದು ಹಂಚಿ ಹೋಗಿದೆ.

ತಾನು ಮೊದಲು ಪಾದ್ರಿಯಾಗಬೇಕೆಂದು ತರ­ಬೇತಿ ಪಡೆದು ಸೇರಿದ­ವನು. ಆದರೆ, ಅಲ್ಲಿ ಕಲಿಸಿದ ಧರ್ಮದ ಅತಿರೇಕದ ಹಾಗೂ ಅತ್ಯಂತ ಸಂಕುಚಿತ ಅರ್ಥವನ್ನು ಕಂಡು ರೋಸಿ ಅದನ್ನು ಬಿಟ್ಟು ಬಂದೆ. ನಂತರ ಶಿಕ್ಷಕ ವೃತ್ತಿಯನ್ನು ಸೇರಿದೆ.

ಆ ವೃತ್ತಿಗೆ ಬೇಕಾದ ತಾಳ್ಮೆ, ಪ್ರೀತಿಗಳ ಕೊರತೆ ನನ್ನಲ್ಲಿ ಇದ್ದಿದ್ದರಿಂದ ಅದನ್ನು ತೊರೆದು ನಿಂತೆ. ಆದಾದ ನಂತರ ಹತ್ತಾರು ಸಣ್ಣ ಪುಟ್ಟ ಕೆಲಸಗಳನ್ನು ಮಾಡಿದರೂ ಯಾವುದರಲ್ಲಿಯೂ ಸಂತೋಷ ದಕ್ಕಲಿಲ್ಲ.

ಕೊನೆಗೆ ನಾನು ಬಯಸಿ ಕೈ ಹಿಡಿದದ್ದು ಈ ಬರಹ. ತನ್ನ ಬರವಣಿಗೆ ಸಂತೋಷ ಕೊಡುವುದ­ರೊಂದಿಗೆ ಅದನ್ನು ಓದಿದ ಸಹಸ್ರಾರು ಜನರಿಗೆ ನೀಡುತ್ತಿದ್ದ ಸಂತೋಷ, ತನ್ನಲ್ಲಿ ತೃಪ್ತಿಯನ್ನು ಹೆಚ್ಚಿಸಿತ್ತು.

ಆ ತರುಣನ ಹೆಸರು ಥಾಮಸ್ ಕಾರ್ಲೈಲ್. ಇಂಗ್ಲೆಂಡಿನಲ್ಲಿ ಹತ್ತೊಂಬ­ತ್ತನೇ ಶತಮಾನದಲ್ಲಿ ಮಿಂಚಿಹೋದ ಅಸಾಮಾನ್ಯ ಪ್ರತಿಭೆ ಕಾರ್ಲೈಲ್. ಆತನ ಬರವಣಿಗೆ ಅದೆಷ್ಟು ಜನರನ್ನು ಲೇಖಕ­ರಾಗಲು ಪ್ರಚೋದಿಸಿತ್ತೋ? ರಾಬರ್ಟ್‌ ಬ್ರೌನಿಂಗ್, ಡಿಕೆನ್ಸ್, ಟೆನಿಸನ್, ಥ್ಯಾಕರೆ ಇವರೆಲ್ಲ ಕಾರ್ಲೈಲ್‌ನಿಂದ ಪ್ರಭಾವಿತ­ರಾದವರು.

ರಸ್ಕಿನ್ ಮತ್ತು ಡಾರ್ವಿನ್‌ ಅವರಂತೂ ಈತನ ಶಿಷ್ಯರೇ ಆಗಿದ್ದರು. ಎಮರ್ಸನ್ ಮತ್ತು ಸರ್ ವಿಲಿಯಂ ಆಸ್ಲರ್ ಕೂಡ ಕಾರ್ಲೈಲ್ ತಮ್ಮ ಸಾಹಿತ್ಯ ನಿರ್ಮಾಣದ ಶಿಲ್ಪಿ ಎಂದು ಭಾವಿಸುತ್ತಿದ್ದರು.

ಕಾರ್ಲೈಲ್ ಬಹಳಷ್ಟು ಬರೆದಿ­ದ್ದರೂ ಪ್ರತಿಯೊಬ್ಬರೂ ಮೆಚ್ಚು­ವುದು ಅವನ ಎಂಟು ಪದಗಳ ಒಂದು ಸಾಲನ್ನು. ಆ ಸಾಲು ತುಂಬ ಸುಲಭ ಹಾಗೂ ಅತ್ಯಂತ ಮಾರ್ಮಿಕ. ‘ಬ್ಲೆಸೆಡ್ ಈಸ್ ಹೀ ಹೂ ಹ್ಯಾಸ್ ಪೌಂಡ್ ಹಿಸ್ ವರ್ಕ’. ಅಂದರೆ, ‘ತನಗೊಪ್ಪಿದ ಕೆಲಸವನ್ನು ಪಡೆದವನೇ ಧನ್ಯ’. ಇದರ ಅರ್ಥ ಬಹು ಆಳಕ್ಕೆ ಹೋಗುವಂಥದ್ದು.

ನಮ್ಮ ಬದುಕಿ­ನಲ್ಲಿ ನನಗೊಪ್ಪಿತವಾದ, ಮನಸ್ಸಿಗೆ ಹಿಡಿಸುವ ಕೆಲಸವನ್ನು ಹುಡುಕಿ­ಕೊಂಡು ಹೋಗಬೇಕು ಇಲ್ಲವೇ ದೊರೆತ ಕೆಲಸದಲ್ಲಿ ಸಂತೋಷವನ್ನು ಹುಡುಕ­ಬೇಕು.

ಸಂತೋಷವಿಲ್ಲದೆ ಮಾಡಿದ ಕೆಲಸದಿಂದ ಮಾಡಿದವನ ಸಮಯ ವ್ಯರ್ಥ ಹಾಗೂ ಉಳಿದವರಿಗೆ ಅಪ್ರಯೋಜಕ. ನಮ್ಮ ಕೆಲಸ ಸಣ್ಣದು, ಪ್ರಯೋಜನ­ವಿಲ್ಲದ್ದು ಎಂದು ಗೊಣ­ಗುವುದು ಬೇಡ. ಗೊಣಗಾಟ ಅಳು­ಬರು­ಕರ ಬದುಕು. ಮಾಡುವುದನ್ನೇ ಸೊಗಸಾಗಿ, ಉತ್ಸಾಹದಿಂದ, ಸಂತೋಷ­ದಿಂದ ಮಾಡೋಣ.

ಆ ಕೆಲಸ ಇನ್ನೊಂದು ಹತ್ತು ಜನರಿಗೆ ಸಂತೋಷ ಕೊಡಲಿ. ಅವರಿಗೆ ದೊರೆತ ಸಂತೋಷ ನಮ್ಮ ಹೃದಯದಲ್ಲಿ ತೃಪ್ತಿಯನ್ನು ಹತ್ತು ಪಟ್ಟು ಹೆಚ್ಚಿಸುತ್ತದೆ, ಬದುಕು ಧನ್ಯವಾ­ಗುತ್ತದೆ, ಎಲ್ಲರಿಗೂ ಪ್ರಿಯವಾಗುತ್ತದೆ ಆಲ್ಲವೇ? ಯೋಚಿಸಿ, ಚಿಂತಿಸಿ, ಆಲೋಚಿಸಿ.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಿಲ್ಲ)

AI ಚಿತ್ರ ಬಳಸಲಾಗಿದೆ..

ರಾಜಕೀಯ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ: ಕಾಂಗ್ರೆಸ್, ಡಿಎಂಕೆ ಮೇಲೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಲೋಕಸಭೆ ಮತ್ತು ವಿಧಾಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇರಿಸಿರುವ ಹೆಜ್ಜೆ ಐತಿಹಾಸಿಕ ಎಂದು ಬಣ್ಣಿಸಿದ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy); ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ

[ccc_my_favorite_select_button post_id="121061"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!