ನಕಲಿ ಪೋಟೋ.. ಪ್ರಶಾಂತ್ ಸಂಬರ್ಗಿ ವಿರುದ್ಧ FIR ದಾಖಲಿಸಿದ ಪ್ರಕಾಶ್ ರಾಜ್

Fake photo.. Prashant Sambargi filed FIR against Prakash Raj

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ತಮ್ಮ ತಿರುಚಿದ ನಕಲಿ ಪೋಟೋ ಬಳಸಿದ ಆರೋಪಡಿ ಬಿಜೆಪಿ ಬೆಂಬಲಿಗ ಪ್ರಶಾಂತ್ ಸಂಬರ್ಗಿ (Prashanth sambargi) ವಿರುದ್ಧ ನಟ ಪ್ರಕಾಶ್ ರಾಜ್ (Prakash raj) ದೂರು (FIR) ದಾಖಲಿಸಿದ್ದಾರೆ.

ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಪ್ರಕಾಶ್ ರಾಜ್ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕಾಶ್ ರಾಜ್ ಅವರು ಪ್ರಶಾಂತ ಸಂಬರ್ಗಿ ಪ್ರಖ್ಯಾತರೋ ಕುಖ್ಯಾತರೋ ಗೊತ್ತಿಲ್ಲ. ಜನರ ನಂಬಿಕೆಗೆ ಅಘಾತ ಉಂಟು ಮಾಡುತ್ತಿದ್ದಾರೆ.

ಮಹಾ ಕುಂಭಮೇಳ ಅಂತಹ ಪುಣ್ಯದ ಸ್ನಾನ ನಡೆಯಬೇಕಾದರೆ ಅದರಲ್ಲಿ ಇವರು ರಾಜಕಾರಣ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಎಐ ತಂತ್ರಜ್ಞಾನ ಬಳಸಿಕೊಂಡು ತಮ್ಮ ಮೇಲೆ ದ್ವೇಷ ಹೆಚ್ಚಿಸುವಂತೆ ಅಪಪ್ರಚಾರ ಮಾಡುತ್ತಿದ್ದಾರೆ.

ದೇಶದಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಅಭ್ಯಾಸವಾಗಿ ಬಿಟ್ಟಿದೆ. ಇದನ್ನು ಯಾರೂ ಪ್ರಶ್ನೆ ಮಾಡುತ್ತಿಲ್ಲ. ದ್ವೇಷವನ್ನು ಹರಡಿಸುತ್ತಿದ್ದಾರೆ. ಇವರು ನಿಜವಾದ ಧರ್ಮದವರಲ್ಲ ಫೇಕ್ ನ್ಯೂಸ್ ಸಮಾಜವನ್ನು ಹಾಳು ಮಾಡುತ್ತಿದೆ.

ಪದೇ ಪದೇ ಫೇಕ್ ನ್ಯೂಸ್ ನಿಂದಾಗಿ ಅನೇಕರ ಸಾವಿಗೆ ಕಾರಣವಾಗುತ್ತಿದ್ದಾರೆ.. ಈ ರೀತಿಯ ಫೇಕ್ ಸುದ್ದಿ ಹಬ್ಬಿಸುವವರಿಗೆ ಕಾನೂನಿದೆ, ಸುಳ್ಳು ಸುದ್ದಿ ಹಬ್ಬಿಸಿ ಮಾನಹರಣ ಮಾಡುತ್ತಿರುವ ಇಂತವರಿಗೆ ಕಠಿಣ ಕ್ರಮ ಆಗಬೇಕಿದೆ.

ಮೊದಲಿಂದ ಪ್ರಕಾಶ್ ರಾಜ್ ಹಿಂದು ವಿರೋಧಿ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಿಕೊಂಡು ಬಂದಿದ್ದಾರೆ. ಅದರಂತೆಯೇ ಎಐ ಬಳಸಿ ನಾನು ಕುಂಭಮೇಳದಲ್ಲಿ ಸ್ನಾನ ಮಾಡುವಂತೆ ನಕಲಿ ಪೋಟೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಇವನ್ಯಾಕ್ ಬಂದ, ಇವಿನಗೇನು ಎಂಬಂತೆ ದ್ವೇಷ ಹುಟ್ಟಿಸುವ ಕೆಲವನ್ನು ಮಾಡುತ್ತಿದ್ದಾರೆ.

ನನ್ನ ವಿರುದ್ಧ ಸಾಕಷ್ಟು ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅವರ ಮೇಲೆ ಕೇಸ್ ಹಾಕಿ ಗೆದ್ದಿದ್ದೇನೆ. ಈ ಮುಂಚೆ ಇದೇ ರೀತಿ ಸುಳ್ಳು ಹೇಳಿದ್ದ ಪ್ರತಾಪ್ ಸಿಂಹರ ಕೋರ್ಟ್ ಕಟಕಟೆಗೆ ತಂದು ಕ್ಷಮೆ ಕೇಳುವವರೆಗೆ ಬಿಟ್ಟಿರಲಿಲ್ಲ.

ಯಾರಾದ್ರೂ ಸುಳ್ಳುಸುದ್ದಿಯನ್ನು ಪ್ರಶ್ನೆ ಮಾಡಬೇಕಲ್ವಾ.. ಇಲ್ವಾದ್ರೆ ಇದು ಮಾರಕವಾಗುತ್ತೆ. ಹೀಗಾಗಿ ನಾನು ಪ್ರಶಾಂತ ಸಂಬರ್ಗಿ ವಿರುದ್ಧ ದೂರು ನೀಡಿ ಎಫ್ ಐ ಆರ್ ಮಾಡಿಸಿದ್ದೇನೆ. 15 ದಿನಗಳಲ್ಲಿ ಆ ವ್ಯಕ್ತಿ ಠಾಣೆಗೆ ಬಂದು ಉತ್ತರ ನೀಡಬೇಕು. ಸತ್ಯಾಸತ್ಯತೆ ಎಲ್ಲರಿಗೂ ತಿಳಿಯಬೇಕು ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಮಹಾಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ ಸ್ನಾನ ಮಾಡ್ತಿರುವ ಹೋಲಿಕೆಯುಳ್ಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಚಿತ್ರವನ್ನು ಮೊದಲು ಹರಿಬಿಟ್ಟವರು ಪ್ರಶಾಂತ್ ಸಂಬರ್ಗಿ ಎಂದು ಅವರ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐ ಆರ್ ದಾಖಲು ಮಾಡಲಾಗಿದೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]