Fake photo.. Prashant Sambargi filed FIR against Prakash Raj

ನಕಲಿ ಪೋಟೋ.. ಪ್ರಶಾಂತ್ ಸಂಬರ್ಗಿ ವಿರುದ್ಧ FIR ದಾಖಲಿಸಿದ ಪ್ರಕಾಶ್ ರಾಜ್

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ತಮ್ಮ ತಿರುಚಿದ ನಕಲಿ ಪೋಟೋ ಬಳಸಿದ ಆರೋಪಡಿ ಬಿಜೆಪಿ ಬೆಂಬಲಿಗ ಪ್ರಶಾಂತ್ ಸಂಬರ್ಗಿ (Prashanth sambargi) ವಿರುದ್ಧ ನಟ ಪ್ರಕಾಶ್ ರಾಜ್ (Prakash raj) ದೂರು (FIR) ದಾಖಲಿಸಿದ್ದಾರೆ.

ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಪ್ರಕಾಶ್ ರಾಜ್ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕಾಶ್ ರಾಜ್ ಅವರು ಪ್ರಶಾಂತ ಸಂಬರ್ಗಿ ಪ್ರಖ್ಯಾತರೋ ಕುಖ್ಯಾತರೋ ಗೊತ್ತಿಲ್ಲ. ಜನರ ನಂಬಿಕೆಗೆ ಅಘಾತ ಉಂಟು ಮಾಡುತ್ತಿದ್ದಾರೆ.

ಮಹಾ ಕುಂಭಮೇಳ ಅಂತಹ ಪುಣ್ಯದ ಸ್ನಾನ ನಡೆಯಬೇಕಾದರೆ ಅದರಲ್ಲಿ ಇವರು ರಾಜಕಾರಣ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಎಐ ತಂತ್ರಜ್ಞಾನ ಬಳಸಿಕೊಂಡು ತಮ್ಮ ಮೇಲೆ ದ್ವೇಷ ಹೆಚ್ಚಿಸುವಂತೆ ಅಪಪ್ರಚಾರ ಮಾಡುತ್ತಿದ್ದಾರೆ.

ದೇಶದಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಅಭ್ಯಾಸವಾಗಿ ಬಿಟ್ಟಿದೆ. ಇದನ್ನು ಯಾರೂ ಪ್ರಶ್ನೆ ಮಾಡುತ್ತಿಲ್ಲ. ದ್ವೇಷವನ್ನು ಹರಡಿಸುತ್ತಿದ್ದಾರೆ. ಇವರು ನಿಜವಾದ ಧರ್ಮದವರಲ್ಲ ಫೇಕ್ ನ್ಯೂಸ್ ಸಮಾಜವನ್ನು ಹಾಳು ಮಾಡುತ್ತಿದೆ.

ಪದೇ ಪದೇ ಫೇಕ್ ನ್ಯೂಸ್ ನಿಂದಾಗಿ ಅನೇಕರ ಸಾವಿಗೆ ಕಾರಣವಾಗುತ್ತಿದ್ದಾರೆ.. ಈ ರೀತಿಯ ಫೇಕ್ ಸುದ್ದಿ ಹಬ್ಬಿಸುವವರಿಗೆ ಕಾನೂನಿದೆ, ಸುಳ್ಳು ಸುದ್ದಿ ಹಬ್ಬಿಸಿ ಮಾನಹರಣ ಮಾಡುತ್ತಿರುವ ಇಂತವರಿಗೆ ಕಠಿಣ ಕ್ರಮ ಆಗಬೇಕಿದೆ.

ಮೊದಲಿಂದ ಪ್ರಕಾಶ್ ರಾಜ್ ಹಿಂದು ವಿರೋಧಿ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಿಕೊಂಡು ಬಂದಿದ್ದಾರೆ. ಅದರಂತೆಯೇ ಎಐ ಬಳಸಿ ನಾನು ಕುಂಭಮೇಳದಲ್ಲಿ ಸ್ನಾನ ಮಾಡುವಂತೆ ನಕಲಿ ಪೋಟೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಇವನ್ಯಾಕ್ ಬಂದ, ಇವಿನಗೇನು ಎಂಬಂತೆ ದ್ವೇಷ ಹುಟ್ಟಿಸುವ ಕೆಲವನ್ನು ಮಾಡುತ್ತಿದ್ದಾರೆ.

ನನ್ನ ವಿರುದ್ಧ ಸಾಕಷ್ಟು ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅವರ ಮೇಲೆ ಕೇಸ್ ಹಾಕಿ ಗೆದ್ದಿದ್ದೇನೆ. ಈ ಮುಂಚೆ ಇದೇ ರೀತಿ ಸುಳ್ಳು ಹೇಳಿದ್ದ ಪ್ರತಾಪ್ ಸಿಂಹರ ಕೋರ್ಟ್ ಕಟಕಟೆಗೆ ತಂದು ಕ್ಷಮೆ ಕೇಳುವವರೆಗೆ ಬಿಟ್ಟಿರಲಿಲ್ಲ.

ಯಾರಾದ್ರೂ ಸುಳ್ಳುಸುದ್ದಿಯನ್ನು ಪ್ರಶ್ನೆ ಮಾಡಬೇಕಲ್ವಾ.. ಇಲ್ವಾದ್ರೆ ಇದು ಮಾರಕವಾಗುತ್ತೆ. ಹೀಗಾಗಿ ನಾನು ಪ್ರಶಾಂತ ಸಂಬರ್ಗಿ ವಿರುದ್ಧ ದೂರು ನೀಡಿ ಎಫ್ ಐ ಆರ್ ಮಾಡಿಸಿದ್ದೇನೆ. 15 ದಿನಗಳಲ್ಲಿ ಆ ವ್ಯಕ್ತಿ ಠಾಣೆಗೆ ಬಂದು ಉತ್ತರ ನೀಡಬೇಕು. ಸತ್ಯಾಸತ್ಯತೆ ಎಲ್ಲರಿಗೂ ತಿಳಿಯಬೇಕು ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಮಹಾಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ ಸ್ನಾನ ಮಾಡ್ತಿರುವ ಹೋಲಿಕೆಯುಳ್ಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಚಿತ್ರವನ್ನು ಮೊದಲು ಹರಿಬಿಟ್ಟವರು ಪ್ರಶಾಂತ್ ಸಂಬರ್ಗಿ ಎಂದು ಅವರ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐ ಆರ್ ದಾಖಲು ಮಾಡಲಾಗಿದೆ.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!